Homeಮುಖಪುಟಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ...

ಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ ರೈತ

"ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳ ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ"-ಗ್ರಾಮಸ್ಥರು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತಗಳಿಗಾಗಿ ಹಿಂದೂ- ಮುಸ್ಲಿಂ ಸಮುದಾಯಗಳ ಮಧ್ಯೆ ದ್ವೇಷ ಹರಡಲು ಪ್ರಯತ್ನಿಸಲಾಗಿದ್ದ ಭೀಮಪುರ ಗ್ರಾಮ, ಇಂದು ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಿದೆ. ಗ್ರಾಮದ ಬಡ ಮುಸ್ಲಿಂ ರೈತರೊಬ್ಬರು ಹಿಂದೂಗಳಿಗಾಗಿ ಕಾಳಿ ಮಂದಿರ ನಿರ್ಮಾಣ ಮಾಡಲು ತನ್ನ ಜಮೀನಿನ ಭಾಗವನ್ನು ಬಿಟ್ಟಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಭೀಮಪುರ ಗ್ರಾಮವು 450 ಕುಟುಂಬಗಳನ್ನು ಹೊಂದಿದೆ. ಅದರಲ್ಲಿ 150 ಮುಸ್ಲಿಮ್ ಸಮುದಾಯದವರು. ಈ ಗ್ರಾಮವು ಭಾರತ-ಬಾಂಗ್ಲಾ ಗಡಿ ಪಕ್ಕದಲ್ಲಿದೆ. ಹಿಂದೂ ಗ್ರಾಮಸ್ಥರು ಹಿಂದಿನಿಂದಲೂ ಗಡಿ ರಸ್ತೆಯ ಪಕ್ಕದಲ್ಲಿನ ಖಾಲಿ ಜಾಗವನ್ನು ಕಾಳಿ ಪೂಜೆಗೆ ಬಳಸುತ್ತಾರೆ. ಇದಕ್ಕೆ ಪ್ರತಿ ವರ್ಷವೂ ಬಿಎಸ್ಎಫ್‌ನಿಂದ ಅನುಮತಿ ಪಡೆಯಬೇಕಾಗುತ್ತದೆ.

ಈ ವರ್ಷ BSF ಅನುಮತಿ ನೀಡುವುದಿಲ್ಲ ಎಂದಿದೆ. ಇದು ಮುಸ್ಲಿಂ ಸಮುದಾಯದ ಬಡ ರೈತ ಹನ್ನಾನ್ ಮೊಂಡಲ್ ಅವರಿಗೆ ತಿಳಿದಿದೆ. ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ನಿರ್ಧರಿಸಿದ ಅವರು, ತಮ್ಮ ಜಮೀನಿನ ಒಂದು ಭಾಗವನ್ನು ಶಾಶ್ವತವಾದ ಕಾಳಿ ದೇವಸ್ಥಾನವನ್ನು ನಿರ್ಮಿಸಲು ಗ್ರಾಮಸ್ಥರಿಗೆ ದಾನ ಮಾಡಿದ್ದಾರೆ.

ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ನಿರ್ಧರಿಸಿರುವ ಹನ್ನಾನ್ ಮೊಂಡಲ್ ಅವರ ನಿರ್ಧಾರವನ್ನು ಸ್ವಾಗತಿಸಿದ ಭೀಮಪುರದ ಹಿಂದೂ ಗ್ರಾಮಸ್ಥರು, ಈ ವರ್ಷದ ಆರಂಭದಲ್ಲಿ ಮತಗಳನ್ನು ಸೆಳೆಯಲು ಧಾರ್ಮಿಕ ಕಾರ್ಡ್‌ಗಳನ್ನು ಪ್ಲೇ ಮಾಡಿದ ರಾಜಕೀಯ ಪಕ್ಷಗಳು ಬಡವರ ಈ ನಿರ್ಧಾರಗಳಿಂದ ಪಾಠ ಕಲಿಯಬೇಕು ಎಂದಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ವಿಧಾನಸಭಾ ಚುನಾವಣೆಗೆ ಮುನ್ನ ಜಿಲ್ಲೆಯಲ್ಲಿ ಬಿಜೆಪಿ ಭಾರಿ ಪ್ರಚಾರ ನಡೆಸಿತ್ತು. ಬಾಂಗ್ಲಾದೇಶದಿಂದ ವಲಸೆ ಬಂದಿರುವ ಹಿಂದೂ ಧಾರ್ಮಿಕ ಪಂಗಡವಾದ ಮಟುವಾಸ್(Matuas) ಪ್ರಾಬಲ್ಯ ಹೊಂದಿರುವ ಇಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನಾ ಭಾಷಣಗಳನ್ನು ಬಿಜೆಪಿ ಮಾಡಿತ್ತು. ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ನಾಯಕರು ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ದೌರ್ಜನ್ಯಗಳು ನಡೆಯುತ್ತಿರುವರ ಬಗ್ಗೆ ಮಾತನಾಡುವ ಮೂಲಕ ಹಿಂದೂ ನಿರಾಶ್ರಿತ ಮತದಾರರನ್ನು ಓಲೈಸಲು ಪ್ರಯತ್ನಿಸಿದರು. ಜೊತೆಗೆ ದೇಶ ವಿಭಜನೆಯ ಸಮಯದಲ್ಲಿ ಮಟುವಾಗಳು ದೇಶದಿಂದ ಏಕೆ ವಲಸೆ ಹೋಗಬೇಕಾಯಿತು ಎಂಬುದನ್ನು ಒತ್ತಿ ಒತ್ತಿ ಹೇಳಿದ್ದರು.

“ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವ ಪ್ರಯತ್ನಗಳು ನಡೆದವು. ಇವು ನಾವು ಹಿಂದೆಂದೂ ನೋಡಿರದ ಪ್ರಯತ್ನಗಳಾಗಿದ್ದವು. ಆದರೆ ಹನ್ನಾನ್ ಅವರ ದಾನವು ಬಂಗಾಳದಲ್ಲಿ ಅಂತಹ ವಿಭಜನೆ ರಾಜಕೀಯವು ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ” ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

“ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳವು ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ. ಸಹೋದರತ್ವದ ಉದಾಹರಣೆಗಾಗಿ ಹನ್ನಾನ್‌ಗೆ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ” ಎಂದು ಕಾಳಿ ಪೂಜಾ ಸಮಿತಿ ಅಧ್ಯಕ್ಷ ಬಿಮಲ್ ಸರ್ಕಾರ್ ಹೇಳಿದ್ದಾರೆ.

“ಪ್ರತಿ ವರ್ಷವೂ ಬಿಎಸ್‌ಎಫ್‌ನಿಂದ ಪೂಜೆಗೆ ಹಸಿರು ನಿಶಾನೆ ಪಡೆಯುವ ಬಗ್ಗೆ ಗ್ರಾಮಸ್ಥರು ಚಿಂತಿಸುತ್ತಿದ್ದರು. ಜಮೀನು ಕಾರಣಕ್ಕಾಗಿ ಕಾಳಿ ಪೂಜೆ ನಿಲ್ಲುವುದು ನನಗೆ ಇಷ್ಟವಾಗಲಿಲ್ಲ. ಹಾಗಾಗಿ ಶಾಶ್ವತ ಕಾಳಿ ದೇವಸ್ಥಾನ ನಿರ್ಮಿಸಲು ನಾನು ಜಮೀನು ನೀಡಿದ್ದೇನೆ. ಅಲ್ಲಿ ಪ್ರತಿ ವರ್ಷ ಕಾಳಿ ಪೂಜೆಯನ್ನು ಆಯೋಜಿಸಲಾಗುತ್ತದೆ” ಎಂದು ಬಡ ರೈತ ಹನ್ನಾನ್ ಹೇಳಿದ್ದಾರೆ.


ಇದನ್ನೂ ಓದಿ: ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಪ್ರತಿಭಟನಾಕಾರರಿಗೆ ಗುಂಡಿಕ್ಕುವ ಬೆದರಿಕೆ: ಬಿಜೆಪಿ ನಾಯಕನ ವಿರುದ್ಧ FIR

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...