Homeಮುಖಪುಟಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ...

ಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ ರೈತ

"ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳ ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ"-ಗ್ರಾಮಸ್ಥರು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತಗಳಿಗಾಗಿ ಹಿಂದೂ- ಮುಸ್ಲಿಂ ಸಮುದಾಯಗಳ ಮಧ್ಯೆ ದ್ವೇಷ ಹರಡಲು ಪ್ರಯತ್ನಿಸಲಾಗಿದ್ದ ಭೀಮಪುರ ಗ್ರಾಮ, ಇಂದು ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಿದೆ. ಗ್ರಾಮದ ಬಡ ಮುಸ್ಲಿಂ ರೈತರೊಬ್ಬರು ಹಿಂದೂಗಳಿಗಾಗಿ ಕಾಳಿ ಮಂದಿರ ನಿರ್ಮಾಣ ಮಾಡಲು ತನ್ನ ಜಮೀನಿನ ಭಾಗವನ್ನು ಬಿಟ್ಟಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಭೀಮಪುರ ಗ್ರಾಮವು 450 ಕುಟುಂಬಗಳನ್ನು ಹೊಂದಿದೆ. ಅದರಲ್ಲಿ 150 ಮುಸ್ಲಿಮ್ ಸಮುದಾಯದವರು. ಈ ಗ್ರಾಮವು ಭಾರತ-ಬಾಂಗ್ಲಾ ಗಡಿ ಪಕ್ಕದಲ್ಲಿದೆ. ಹಿಂದೂ ಗ್ರಾಮಸ್ಥರು ಹಿಂದಿನಿಂದಲೂ ಗಡಿ ರಸ್ತೆಯ ಪಕ್ಕದಲ್ಲಿನ ಖಾಲಿ ಜಾಗವನ್ನು ಕಾಳಿ ಪೂಜೆಗೆ ಬಳಸುತ್ತಾರೆ. ಇದಕ್ಕೆ ಪ್ರತಿ ವರ್ಷವೂ ಬಿಎಸ್ಎಫ್‌ನಿಂದ ಅನುಮತಿ ಪಡೆಯಬೇಕಾಗುತ್ತದೆ.

ಈ ವರ್ಷ BSF ಅನುಮತಿ ನೀಡುವುದಿಲ್ಲ ಎಂದಿದೆ. ಇದು ಮುಸ್ಲಿಂ ಸಮುದಾಯದ ಬಡ ರೈತ ಹನ್ನಾನ್ ಮೊಂಡಲ್ ಅವರಿಗೆ ತಿಳಿದಿದೆ. ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ನಿರ್ಧರಿಸಿದ ಅವರು, ತಮ್ಮ ಜಮೀನಿನ ಒಂದು ಭಾಗವನ್ನು ಶಾಶ್ವತವಾದ ಕಾಳಿ ದೇವಸ್ಥಾನವನ್ನು ನಿರ್ಮಿಸಲು ಗ್ರಾಮಸ್ಥರಿಗೆ ದಾನ ಮಾಡಿದ್ದಾರೆ.

ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ನಿರ್ಧರಿಸಿರುವ ಹನ್ನಾನ್ ಮೊಂಡಲ್ ಅವರ ನಿರ್ಧಾರವನ್ನು ಸ್ವಾಗತಿಸಿದ ಭೀಮಪುರದ ಹಿಂದೂ ಗ್ರಾಮಸ್ಥರು, ಈ ವರ್ಷದ ಆರಂಭದಲ್ಲಿ ಮತಗಳನ್ನು ಸೆಳೆಯಲು ಧಾರ್ಮಿಕ ಕಾರ್ಡ್‌ಗಳನ್ನು ಪ್ಲೇ ಮಾಡಿದ ರಾಜಕೀಯ ಪಕ್ಷಗಳು ಬಡವರ ಈ ನಿರ್ಧಾರಗಳಿಂದ ಪಾಠ ಕಲಿಯಬೇಕು ಎಂದಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ವಿಧಾನಸಭಾ ಚುನಾವಣೆಗೆ ಮುನ್ನ ಜಿಲ್ಲೆಯಲ್ಲಿ ಬಿಜೆಪಿ ಭಾರಿ ಪ್ರಚಾರ ನಡೆಸಿತ್ತು. ಬಾಂಗ್ಲಾದೇಶದಿಂದ ವಲಸೆ ಬಂದಿರುವ ಹಿಂದೂ ಧಾರ್ಮಿಕ ಪಂಗಡವಾದ ಮಟುವಾಸ್(Matuas) ಪ್ರಾಬಲ್ಯ ಹೊಂದಿರುವ ಇಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನಾ ಭಾಷಣಗಳನ್ನು ಬಿಜೆಪಿ ಮಾಡಿತ್ತು. ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ನಾಯಕರು ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ದೌರ್ಜನ್ಯಗಳು ನಡೆಯುತ್ತಿರುವರ ಬಗ್ಗೆ ಮಾತನಾಡುವ ಮೂಲಕ ಹಿಂದೂ ನಿರಾಶ್ರಿತ ಮತದಾರರನ್ನು ಓಲೈಸಲು ಪ್ರಯತ್ನಿಸಿದರು. ಜೊತೆಗೆ ದೇಶ ವಿಭಜನೆಯ ಸಮಯದಲ್ಲಿ ಮಟುವಾಗಳು ದೇಶದಿಂದ ಏಕೆ ವಲಸೆ ಹೋಗಬೇಕಾಯಿತು ಎಂಬುದನ್ನು ಒತ್ತಿ ಒತ್ತಿ ಹೇಳಿದ್ದರು.

“ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವ ಪ್ರಯತ್ನಗಳು ನಡೆದವು. ಇವು ನಾವು ಹಿಂದೆಂದೂ ನೋಡಿರದ ಪ್ರಯತ್ನಗಳಾಗಿದ್ದವು. ಆದರೆ ಹನ್ನಾನ್ ಅವರ ದಾನವು ಬಂಗಾಳದಲ್ಲಿ ಅಂತಹ ವಿಭಜನೆ ರಾಜಕೀಯವು ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ” ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

“ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳವು ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ. ಸಹೋದರತ್ವದ ಉದಾಹರಣೆಗಾಗಿ ಹನ್ನಾನ್‌ಗೆ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ” ಎಂದು ಕಾಳಿ ಪೂಜಾ ಸಮಿತಿ ಅಧ್ಯಕ್ಷ ಬಿಮಲ್ ಸರ್ಕಾರ್ ಹೇಳಿದ್ದಾರೆ.

“ಪ್ರತಿ ವರ್ಷವೂ ಬಿಎಸ್‌ಎಫ್‌ನಿಂದ ಪೂಜೆಗೆ ಹಸಿರು ನಿಶಾನೆ ಪಡೆಯುವ ಬಗ್ಗೆ ಗ್ರಾಮಸ್ಥರು ಚಿಂತಿಸುತ್ತಿದ್ದರು. ಜಮೀನು ಕಾರಣಕ್ಕಾಗಿ ಕಾಳಿ ಪೂಜೆ ನಿಲ್ಲುವುದು ನನಗೆ ಇಷ್ಟವಾಗಲಿಲ್ಲ. ಹಾಗಾಗಿ ಶಾಶ್ವತ ಕಾಳಿ ದೇವಸ್ಥಾನ ನಿರ್ಮಿಸಲು ನಾನು ಜಮೀನು ನೀಡಿದ್ದೇನೆ. ಅಲ್ಲಿ ಪ್ರತಿ ವರ್ಷ ಕಾಳಿ ಪೂಜೆಯನ್ನು ಆಯೋಜಿಸಲಾಗುತ್ತದೆ” ಎಂದು ಬಡ ರೈತ ಹನ್ನಾನ್ ಹೇಳಿದ್ದಾರೆ.


ಇದನ್ನೂ ಓದಿ: ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...