Homeಮುಖಪುಟಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ...

ಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ ರೈತ

"ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳ ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ"-ಗ್ರಾಮಸ್ಥರು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತಗಳಿಗಾಗಿ ಹಿಂದೂ- ಮುಸ್ಲಿಂ ಸಮುದಾಯಗಳ ಮಧ್ಯೆ ದ್ವೇಷ ಹರಡಲು ಪ್ರಯತ್ನಿಸಲಾಗಿದ್ದ ಭೀಮಪುರ ಗ್ರಾಮ, ಇಂದು ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಿದೆ. ಗ್ರಾಮದ ಬಡ ಮುಸ್ಲಿಂ ರೈತರೊಬ್ಬರು ಹಿಂದೂಗಳಿಗಾಗಿ ಕಾಳಿ ಮಂದಿರ ನಿರ್ಮಾಣ ಮಾಡಲು ತನ್ನ ಜಮೀನಿನ ಭಾಗವನ್ನು ಬಿಟ್ಟಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಭೀಮಪುರ ಗ್ರಾಮವು 450 ಕುಟುಂಬಗಳನ್ನು ಹೊಂದಿದೆ. ಅದರಲ್ಲಿ 150 ಮುಸ್ಲಿಮ್ ಸಮುದಾಯದವರು. ಈ ಗ್ರಾಮವು ಭಾರತ-ಬಾಂಗ್ಲಾ ಗಡಿ ಪಕ್ಕದಲ್ಲಿದೆ. ಹಿಂದೂ ಗ್ರಾಮಸ್ಥರು ಹಿಂದಿನಿಂದಲೂ ಗಡಿ ರಸ್ತೆಯ ಪಕ್ಕದಲ್ಲಿನ ಖಾಲಿ ಜಾಗವನ್ನು ಕಾಳಿ ಪೂಜೆಗೆ ಬಳಸುತ್ತಾರೆ. ಇದಕ್ಕೆ ಪ್ರತಿ ವರ್ಷವೂ ಬಿಎಸ್ಎಫ್‌ನಿಂದ ಅನುಮತಿ ಪಡೆಯಬೇಕಾಗುತ್ತದೆ.

ಈ ವರ್ಷ BSF ಅನುಮತಿ ನೀಡುವುದಿಲ್ಲ ಎಂದಿದೆ. ಇದು ಮುಸ್ಲಿಂ ಸಮುದಾಯದ ಬಡ ರೈತ ಹನ್ನಾನ್ ಮೊಂಡಲ್ ಅವರಿಗೆ ತಿಳಿದಿದೆ. ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ನಿರ್ಧರಿಸಿದ ಅವರು, ತಮ್ಮ ಜಮೀನಿನ ಒಂದು ಭಾಗವನ್ನು ಶಾಶ್ವತವಾದ ಕಾಳಿ ದೇವಸ್ಥಾನವನ್ನು ನಿರ್ಮಿಸಲು ಗ್ರಾಮಸ್ಥರಿಗೆ ದಾನ ಮಾಡಿದ್ದಾರೆ.

ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ನಿರ್ಧರಿಸಿರುವ ಹನ್ನಾನ್ ಮೊಂಡಲ್ ಅವರ ನಿರ್ಧಾರವನ್ನು ಸ್ವಾಗತಿಸಿದ ಭೀಮಪುರದ ಹಿಂದೂ ಗ್ರಾಮಸ್ಥರು, ಈ ವರ್ಷದ ಆರಂಭದಲ್ಲಿ ಮತಗಳನ್ನು ಸೆಳೆಯಲು ಧಾರ್ಮಿಕ ಕಾರ್ಡ್‌ಗಳನ್ನು ಪ್ಲೇ ಮಾಡಿದ ರಾಜಕೀಯ ಪಕ್ಷಗಳು ಬಡವರ ಈ ನಿರ್ಧಾರಗಳಿಂದ ಪಾಠ ಕಲಿಯಬೇಕು ಎಂದಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ವಿಧಾನಸಭಾ ಚುನಾವಣೆಗೆ ಮುನ್ನ ಜಿಲ್ಲೆಯಲ್ಲಿ ಬಿಜೆಪಿ ಭಾರಿ ಪ್ರಚಾರ ನಡೆಸಿತ್ತು. ಬಾಂಗ್ಲಾದೇಶದಿಂದ ವಲಸೆ ಬಂದಿರುವ ಹಿಂದೂ ಧಾರ್ಮಿಕ ಪಂಗಡವಾದ ಮಟುವಾಸ್(Matuas) ಪ್ರಾಬಲ್ಯ ಹೊಂದಿರುವ ಇಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನಾ ಭಾಷಣಗಳನ್ನು ಬಿಜೆಪಿ ಮಾಡಿತ್ತು. ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ನಾಯಕರು ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ದೌರ್ಜನ್ಯಗಳು ನಡೆಯುತ್ತಿರುವರ ಬಗ್ಗೆ ಮಾತನಾಡುವ ಮೂಲಕ ಹಿಂದೂ ನಿರಾಶ್ರಿತ ಮತದಾರರನ್ನು ಓಲೈಸಲು ಪ್ರಯತ್ನಿಸಿದರು. ಜೊತೆಗೆ ದೇಶ ವಿಭಜನೆಯ ಸಮಯದಲ್ಲಿ ಮಟುವಾಗಳು ದೇಶದಿಂದ ಏಕೆ ವಲಸೆ ಹೋಗಬೇಕಾಯಿತು ಎಂಬುದನ್ನು ಒತ್ತಿ ಒತ್ತಿ ಹೇಳಿದ್ದರು.

“ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವ ಪ್ರಯತ್ನಗಳು ನಡೆದವು. ಇವು ನಾವು ಹಿಂದೆಂದೂ ನೋಡಿರದ ಪ್ರಯತ್ನಗಳಾಗಿದ್ದವು. ಆದರೆ ಹನ್ನಾನ್ ಅವರ ದಾನವು ಬಂಗಾಳದಲ್ಲಿ ಅಂತಹ ವಿಭಜನೆ ರಾಜಕೀಯವು ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ” ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

“ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳವು ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ. ಸಹೋದರತ್ವದ ಉದಾಹರಣೆಗಾಗಿ ಹನ್ನಾನ್‌ಗೆ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ” ಎಂದು ಕಾಳಿ ಪೂಜಾ ಸಮಿತಿ ಅಧ್ಯಕ್ಷ ಬಿಮಲ್ ಸರ್ಕಾರ್ ಹೇಳಿದ್ದಾರೆ.

“ಪ್ರತಿ ವರ್ಷವೂ ಬಿಎಸ್‌ಎಫ್‌ನಿಂದ ಪೂಜೆಗೆ ಹಸಿರು ನಿಶಾನೆ ಪಡೆಯುವ ಬಗ್ಗೆ ಗ್ರಾಮಸ್ಥರು ಚಿಂತಿಸುತ್ತಿದ್ದರು. ಜಮೀನು ಕಾರಣಕ್ಕಾಗಿ ಕಾಳಿ ಪೂಜೆ ನಿಲ್ಲುವುದು ನನಗೆ ಇಷ್ಟವಾಗಲಿಲ್ಲ. ಹಾಗಾಗಿ ಶಾಶ್ವತ ಕಾಳಿ ದೇವಸ್ಥಾನ ನಿರ್ಮಿಸಲು ನಾನು ಜಮೀನು ನೀಡಿದ್ದೇನೆ. ಅಲ್ಲಿ ಪ್ರತಿ ವರ್ಷ ಕಾಳಿ ಪೂಜೆಯನ್ನು ಆಯೋಜಿಸಲಾಗುತ್ತದೆ” ಎಂದು ಬಡ ರೈತ ಹನ್ನಾನ್ ಹೇಳಿದ್ದಾರೆ.


ಇದನ್ನೂ ಓದಿ: ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...