Homeರಾಷ್ಟ್ರೀಯಆರ್ಯನ್ ಖಾನ್‌ ಪ್ರಕರಣದಲ್ಲಿ ‘ಕಳಪೆ’ ತನಿಖೆ: ಸಮೀರ್‌‌ ವಾಂಖೆಡೆ ವಿರುದ್ಧ ಕ್ರಮಕ್ಕೆ ಆದೇಶ

ಆರ್ಯನ್ ಖಾನ್‌ ಪ್ರಕರಣದಲ್ಲಿ ‘ಕಳಪೆ’ ತನಿಖೆ: ಸಮೀರ್‌‌ ವಾಂಖೆಡೆ ವಿರುದ್ಧ ಕ್ರಮಕ್ಕೆ ಆದೇಶ

- Advertisement -
- Advertisement -

ಮುಂಬೈ ಡ್ರಗ್ಸ್ ಆನ್ ಕ್ರೂಸ್‌‌ ಪ್ರಕರಣದ ಆರಂಭದಲ್ಲಿ ತನಿಖೆ ನಡೆಸಿದ್ದ ಮಾದಕ ದ್ರವ್ಯ ನಿಗ್ರಹ ಅಧಿಕಾರಿ ಸಮೀರ್ ವಾಂಖೆಡೆ ಅವರು ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ ಬಗ್ಗೆ ಮತ್ತು ಡ್ರಗ್ಸ್ ಪ್ರಕರಣದಲ್ಲಿ ‘ಕಳಪೆ ತನಿಖೆ’ ಆರೋಪದಲ್ಲಿ ಕ್ರಮ ಎದುರಿಸುತ್ತಿದ್ದಾರೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

“ಸಮೀರ್ ವಾಂಖೆಡೆ ಅವರ ವಿರುದ್ಧ ‘ಅಸಮರ್ಪಕ ತನಿಖೆ’ಗಾಗಿ ಕ್ರಮ ಕೈಗೊಳ್ಳುವಂತೆ ಸರ್ಕಾರದಿಂದ ಸಕ್ಷಮ ಪ್ರಾಧಿಕಾರವನ್ನು ಕೇಳಲಾಗಿದೆ. ಅವರ ನಕಲಿ ಜಾತಿ ಪ್ರಮಾಣಪತ್ರಕ್ಕಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರಿ ಉದ್ಯೋಗ ಗಿಟ್ಟಿಸಲು ಸಮೀರ್‌‌ ವಾಂಖೆಡೆ ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಆರೋಪಿಸಿದ್ದರು. ಇದರ ನಂತರ ಅವರು ಕಳೆದ ನವೆಂಬರ್‌ನಲ್ಲಿ ತಾನು ದಲಿತ ಎಂದು ಸಾಬೀತುಪಡಿಸಲು ತನ್ನ ಮೂಲ ಜಾತಿಯ ದಾಖಲೆಗಳನ್ನು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ನೀಡಿದ್ದರು.

ಇದನ್ನೂ ಓದಿ: ಆರ್ಯನ್ ಖಾನ್‌ರಂತೆ ಕ್ರೂಸ್ ಶಿಪ್ ಪಾರ್ಟಿಗೆ ನನ್ನನ್ನು ಆಹ್ವಾನಿಸಲಾಗಿತ್ತು: ಮಹಾರಾಷ್ಟ್ರ ಸಚಿವ ಅಸ್ಲಾಮ್ ಶೇಖ್

ಸಮೀರ್‌‌ ವಾಂಖೆಡೆ ಅವರು ಎನ್‌ಸಿಬಿ ಮುಂಬೈ ವಲಯದ ಮುಖ್ಯಸ್ಥರಾಗಿದ್ದರು. ಮುಂಬೈ ಕರಾವಳಿಯ ಹಡಗಿನಲ್ಲಿ ಡ್ರಗ್ಸ್‌ ವಿರೋಧಿ ದಾಳಿಯ ನಂತರ ಅವರು ಆರಂಭಿಕ ತನಿಖೆಯನ್ನು ನಿರ್ವಹಿಸಿದ್ದರು. ಈ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು.

ಬಳಿಕ ಆರ್ಯನ್‌ ಖಾನ್‌ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಪ್ರಕರಣದಲ್ಲಿ ಎನ್‌‌ಸಿಬಿ ಸಲ್ಲಿಸಿರುವ 6,000 ಪುಟಗಳ ಚಾರ್ಜ್‌ಶೀಟ್‌ನಲ್ಲಿ 14 ಆರೋಪಿಗಳನ್ನು ಹೆಸರಿಸಿದೆ. ಆದರೆ ಅದರಲ್ಲಿ ಆರ್ಯನ್‌ ಖಾನ್‌ ಹೆಸರನ್ನು ಉಲ್ಲೇಖಿಸಲಾಗಿಲ್ಲ. ಹೀಗಾಗಿ ಡ್ರಗ್ಸ್-ಆನ್-ಕ್ರೂಸ್ ಪ್ರಕರಣದಲ್ಲಿ ಅವರಿಗೆ ಕ್ಲೀನ್ ಚಿಟ್‌ ನೀಡಲಾಗಿದೆ.

“ಈಗ ಆರ್ಯನ್ ಖಾನ್ ಮತ್ತು ಇತರ 5 ಜನರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಎನ್‌ಸಿಬಿ ಸಮೀರ್ ವಾಂಖೆಡೆ ಅವರ ತಂಡ ಮತ್ತು ಖಾಸಗಿ ಸೇನೆಯ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ? ಅಥವಾ ಅಪರಾಧಿಗಳನ್ನು ರಕ್ಷಿಸುತ್ತದೆಯೇ?” ಎಂದು ಸಚಿವ ನವಾಬ್ ಮಲಿಕ್ ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು 

ಡ್ರಗ್ಸ್ ದಾಳಿಯ ನಂತರ ಸಮೀರ್‌‌ ವಾಂಖೆಡೆ ನಡೆಸಿದ ತನಿಖೆಯಲ್ಲಿ ಐದು ಅಕ್ರಮಗಳು ನಡೆಸಿದೆ ಎಂದು ಇಂದು ಗೃಹ ಸಚಿವಾಲಯದ ಮೂಲಗಳು ವಿವರಿಸಿವೆ ಎಂದು ಎನ್‌ಡಿಟಿವಿ ಹೇಳಿದೆ.

ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ವಿಡಿಯೋಗ್ರಫಿ ಮಾಡಲಾಗಿಲ್ಲ ಮತ್ತು ಆರ್ಯನ್ ಖಾನ್ ಅವರ ಫೋನ್‌ನ ವಿಷಯಗಳನ್ನು ವಿಶ್ಲೇಷಿಸುವಲ್ಲಿ ಲೋಪವಾಗಿದೆ. ಯಾಕೆಂದರೆ ಅವರ ಫೋನ್‌ ಚಾಟ್‌ಗಳು ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಆರ್ಯನ್‌ ಖಾನ್‌ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗಿಲ್ಲ. ಅಲ್ಲದೆ ಪ್ರಕರಣದಲ್ಲಿ ಒಬ್ಬ ಸಾಕ್ಷಿಯು ಪ್ರತಿಕೂಲವಾಗಿ ತಿರುಗಿ, ಖಾಲಿ ಪೇಪರ್‌ಗಳ ಮೇಲೆ ಸಹಿ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡಕ್ಕೆ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಇಬ್ಬರು ಸಾಕ್ಷಿಗಳು NCB ದಾಳಿಯ ಸಮಯ ಸ್ಥಳದಲ್ಲಿ ತಾವು ಇರಲಿಲ್ಲ ಎಂದು ತನಿಖಾ ತಂಡಕ್ಕೆ ಅವರು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಆರೋಪದಿಂದ ಆರ್ಯನ್ ಖಾನ್‌ ದೋಷಮುಕ್ತ: NCB ನ್ಯಾಯಾಲಯ ಘೋಷಣೆ

ಆರ್ಯನ್ ಖಾನ್ ಡ್ರಗ್ಸ್ ಇಲ್ಲದೆ ಪತ್ತೆಯಾದಾಗಲೂ ಎಲ್ಲಾ ಆರೋಪಿಗಳನ್ನು ಬಂಧಿಸಿ ಪ್ರತಿಯೊಬ್ಬರ ವಿರುದ್ಧ ಒಂದೇ ರೀತಿಯ ಆರೋಪಗಳನ್ನು ಮಾಡಿರುವುದು ಮತ್ತೊಂದು ಗಂಭೀರವಾದ ಲೋಪವಾಗಿದೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...