Homeರಾಷ್ಟ್ರೀಯಆರ್ಯನ್ ಖಾನ್‌ ಪ್ರಕರಣದಲ್ಲಿ ‘ಕಳಪೆ’ ತನಿಖೆ: ಸಮೀರ್‌‌ ವಾಂಖೆಡೆ ವಿರುದ್ಧ ಕ್ರಮಕ್ಕೆ ಆದೇಶ

ಆರ್ಯನ್ ಖಾನ್‌ ಪ್ರಕರಣದಲ್ಲಿ ‘ಕಳಪೆ’ ತನಿಖೆ: ಸಮೀರ್‌‌ ವಾಂಖೆಡೆ ವಿರುದ್ಧ ಕ್ರಮಕ್ಕೆ ಆದೇಶ

- Advertisement -
- Advertisement -

ಮುಂಬೈ ಡ್ರಗ್ಸ್ ಆನ್ ಕ್ರೂಸ್‌‌ ಪ್ರಕರಣದ ಆರಂಭದಲ್ಲಿ ತನಿಖೆ ನಡೆಸಿದ್ದ ಮಾದಕ ದ್ರವ್ಯ ನಿಗ್ರಹ ಅಧಿಕಾರಿ ಸಮೀರ್ ವಾಂಖೆಡೆ ಅವರು ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ ಬಗ್ಗೆ ಮತ್ತು ಡ್ರಗ್ಸ್ ಪ್ರಕರಣದಲ್ಲಿ ‘ಕಳಪೆ ತನಿಖೆ’ ಆರೋಪದಲ್ಲಿ ಕ್ರಮ ಎದುರಿಸುತ್ತಿದ್ದಾರೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

“ಸಮೀರ್ ವಾಂಖೆಡೆ ಅವರ ವಿರುದ್ಧ ‘ಅಸಮರ್ಪಕ ತನಿಖೆ’ಗಾಗಿ ಕ್ರಮ ಕೈಗೊಳ್ಳುವಂತೆ ಸರ್ಕಾರದಿಂದ ಸಕ್ಷಮ ಪ್ರಾಧಿಕಾರವನ್ನು ಕೇಳಲಾಗಿದೆ. ಅವರ ನಕಲಿ ಜಾತಿ ಪ್ರಮಾಣಪತ್ರಕ್ಕಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರಿ ಉದ್ಯೋಗ ಗಿಟ್ಟಿಸಲು ಸಮೀರ್‌‌ ವಾಂಖೆಡೆ ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಆರೋಪಿಸಿದ್ದರು. ಇದರ ನಂತರ ಅವರು ಕಳೆದ ನವೆಂಬರ್‌ನಲ್ಲಿ ತಾನು ದಲಿತ ಎಂದು ಸಾಬೀತುಪಡಿಸಲು ತನ್ನ ಮೂಲ ಜಾತಿಯ ದಾಖಲೆಗಳನ್ನು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ನೀಡಿದ್ದರು.

ಇದನ್ನೂ ಓದಿ: ಆರ್ಯನ್ ಖಾನ್‌ರಂತೆ ಕ್ರೂಸ್ ಶಿಪ್ ಪಾರ್ಟಿಗೆ ನನ್ನನ್ನು ಆಹ್ವಾನಿಸಲಾಗಿತ್ತು: ಮಹಾರಾಷ್ಟ್ರ ಸಚಿವ ಅಸ್ಲಾಮ್ ಶೇಖ್

ಸಮೀರ್‌‌ ವಾಂಖೆಡೆ ಅವರು ಎನ್‌ಸಿಬಿ ಮುಂಬೈ ವಲಯದ ಮುಖ್ಯಸ್ಥರಾಗಿದ್ದರು. ಮುಂಬೈ ಕರಾವಳಿಯ ಹಡಗಿನಲ್ಲಿ ಡ್ರಗ್ಸ್‌ ವಿರೋಧಿ ದಾಳಿಯ ನಂತರ ಅವರು ಆರಂಭಿಕ ತನಿಖೆಯನ್ನು ನಿರ್ವಹಿಸಿದ್ದರು. ಈ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು.

ಬಳಿಕ ಆರ್ಯನ್‌ ಖಾನ್‌ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಪ್ರಕರಣದಲ್ಲಿ ಎನ್‌‌ಸಿಬಿ ಸಲ್ಲಿಸಿರುವ 6,000 ಪುಟಗಳ ಚಾರ್ಜ್‌ಶೀಟ್‌ನಲ್ಲಿ 14 ಆರೋಪಿಗಳನ್ನು ಹೆಸರಿಸಿದೆ. ಆದರೆ ಅದರಲ್ಲಿ ಆರ್ಯನ್‌ ಖಾನ್‌ ಹೆಸರನ್ನು ಉಲ್ಲೇಖಿಸಲಾಗಿಲ್ಲ. ಹೀಗಾಗಿ ಡ್ರಗ್ಸ್-ಆನ್-ಕ್ರೂಸ್ ಪ್ರಕರಣದಲ್ಲಿ ಅವರಿಗೆ ಕ್ಲೀನ್ ಚಿಟ್‌ ನೀಡಲಾಗಿದೆ.

“ಈಗ ಆರ್ಯನ್ ಖಾನ್ ಮತ್ತು ಇತರ 5 ಜನರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಎನ್‌ಸಿಬಿ ಸಮೀರ್ ವಾಂಖೆಡೆ ಅವರ ತಂಡ ಮತ್ತು ಖಾಸಗಿ ಸೇನೆಯ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ? ಅಥವಾ ಅಪರಾಧಿಗಳನ್ನು ರಕ್ಷಿಸುತ್ತದೆಯೇ?” ಎಂದು ಸಚಿವ ನವಾಬ್ ಮಲಿಕ್ ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು 

ಡ್ರಗ್ಸ್ ದಾಳಿಯ ನಂತರ ಸಮೀರ್‌‌ ವಾಂಖೆಡೆ ನಡೆಸಿದ ತನಿಖೆಯಲ್ಲಿ ಐದು ಅಕ್ರಮಗಳು ನಡೆಸಿದೆ ಎಂದು ಇಂದು ಗೃಹ ಸಚಿವಾಲಯದ ಮೂಲಗಳು ವಿವರಿಸಿವೆ ಎಂದು ಎನ್‌ಡಿಟಿವಿ ಹೇಳಿದೆ.

ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ವಿಡಿಯೋಗ್ರಫಿ ಮಾಡಲಾಗಿಲ್ಲ ಮತ್ತು ಆರ್ಯನ್ ಖಾನ್ ಅವರ ಫೋನ್‌ನ ವಿಷಯಗಳನ್ನು ವಿಶ್ಲೇಷಿಸುವಲ್ಲಿ ಲೋಪವಾಗಿದೆ. ಯಾಕೆಂದರೆ ಅವರ ಫೋನ್‌ ಚಾಟ್‌ಗಳು ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಆರ್ಯನ್‌ ಖಾನ್‌ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗಿಲ್ಲ. ಅಲ್ಲದೆ ಪ್ರಕರಣದಲ್ಲಿ ಒಬ್ಬ ಸಾಕ್ಷಿಯು ಪ್ರತಿಕೂಲವಾಗಿ ತಿರುಗಿ, ಖಾಲಿ ಪೇಪರ್‌ಗಳ ಮೇಲೆ ಸಹಿ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡಕ್ಕೆ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಇಬ್ಬರು ಸಾಕ್ಷಿಗಳು NCB ದಾಳಿಯ ಸಮಯ ಸ್ಥಳದಲ್ಲಿ ತಾವು ಇರಲಿಲ್ಲ ಎಂದು ತನಿಖಾ ತಂಡಕ್ಕೆ ಅವರು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಆರೋಪದಿಂದ ಆರ್ಯನ್ ಖಾನ್‌ ದೋಷಮುಕ್ತ: NCB ನ್ಯಾಯಾಲಯ ಘೋಷಣೆ

ಆರ್ಯನ್ ಖಾನ್ ಡ್ರಗ್ಸ್ ಇಲ್ಲದೆ ಪತ್ತೆಯಾದಾಗಲೂ ಎಲ್ಲಾ ಆರೋಪಿಗಳನ್ನು ಬಂಧಿಸಿ ಪ್ರತಿಯೊಬ್ಬರ ವಿರುದ್ಧ ಒಂದೇ ರೀತಿಯ ಆರೋಪಗಳನ್ನು ಮಾಡಿರುವುದು ಮತ್ತೊಂದು ಗಂಭೀರವಾದ ಲೋಪವಾಗಿದೆ ಎಂದು ಮೂಲಗಳು ತಿಳಿಸಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...