Homeಎಕಾನಮಿ460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ 'ಆಕ್ಸ್‌ಫಾಮ್'...

460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ ‘ಆಕ್ಸ್‌ಫಾಮ್’ ವರದಿ

ಭಾರತದ ಕೇವಲ 63 ಮಂದಿ ಅತಿ ಶ್ರೀಮಂತರ ಒಟ್ಟು ಸಂಪತ್ತು 2018-19ರ ಹಣಕಾಸು ವರ್ಷದಲ್ಲಿ ಕೇಂದ್ರ ಬಜೆಟ್ ಮೊತ್ತವಾದ 24,42,200 ಕೋಟಿ ರೂ.ಗಳನ್ನು ಮೀರಿತ್ತು. ಇದರಿಂದಲೇ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬಹುದು

- Advertisement -
- Advertisement -

ಮೂಲ: ‘ಲೈವ್‌ಮಿಂಟ್’
ನಿರೂಪಣೆ: ನಿಖಿಲ್ ಕೋಲ್ಪೆ

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯೂಇಎಫ್)ಯ 50ನೇ ವಾರ್ಷಿಕ ಸಭೆಯ ಸಂದರ್ಭದಲ್ಲಿ ಮಾನವ ಹಕ್ಕು ಸಂಸ್ಥೆ ‘ಆಕ್ಸ್‌ಫಾಮ್’ ತನ್ನ ಅಧ್ಯಯನ ವರದಿ ‘ಟೈಮ್ ಟು ಕೇರ್” ಬಿಡುಗಡೆ ಮಾಡಿದ್ದು, ಅದು, ಭಾರತ ಮತ್ತು ಜಗತ್ತಿನಾದ್ಯಂತ ಅತಿ ಶ್ರೀಮಂತರು ಹಾಗೂ ಬಡವರ ನಡುವಿನ ಕಂದರ ಆತಂಕಕಾರಿಯಾಗಿ ಬೆಳೆದಿರುವುದು ಮತ್ತು ಜಗತ್ತಿನ ಸಂಪತ್ತು ಕೆಲವೇ ಶ್ರೀಮಂತರ ಕೈಯಲ್ಲಿರುವುದನ್ನು ತೋರಿಸಿಕೊಟ್ಟಿದೆ.

ಅದರ ಪ್ರಕಾರ, ಒಂದು ಶೇಕಡಾ ಸಿರಿವಂತ ಭಾರತೀಯರ ಸಂಪತ್ತು- 70 ಶೇಕಡಾ ಬಡ ಭಾರತೀಯರ, ಅಂದರೆ 95.3 ಕೋಟಿ ಜನರ ಒಟ್ಟು ಸಂಪತ್ತಿನ ನಾಲ್ಕು ಪಟ್ಟಿನಷ್ಟಿದೆ. ಜಗತ್ತಿನ ಕೇವಲ 2,153 ಮಂದಿ ಶತಕೋಟಿಪತಿಗಳು 460 ಕೋಟಿ, ಅಂದರೆ ಈ ಭೂಮಿಯ 60 ಶೇಕಡಾ ಜನರ ಒಟ್ಟು ಸಂಪತ್ತಿಗಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ. ಕಳೆದ ದಶಕದಲ್ಲಿ ಶತಕೋಟಿಪತಿಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಕಡು ಬಡವರ ಸಂಖ್ಯೆಯೂ ಅದೇ ರೀತಿಯಲ್ಲಿ ಬೆಳೆದಿದೆ.

“ಇಂತಹಾ ದಂಗುಬಡಿಸುವ ಕಂದರವನ್ನು ಕಡಿಮೆ ಮಾಡುವುದು, ಉದ್ದೇಶಪೂರ್ವಕವಾದ ಧೋರಣೆ ಮತ್ತು ಪ್ರಯತ್ನವಿಲ್ಲದೇ ಸಾಧ್ಯವಿಲ್ಲ. ಆದರೆ, ಕೆಲವೇ ಕೆಲವು ಸರಕಾರಗಳು ಇಂತಹಾ ಪ್ರಯತ್ನಗಳಿಗೆ ಬದ್ಧತೆ ಹೊಂದಿವೆ” ಎಂದು ‘ಆಕ್ಸ್‌ಫಾಮ್’ನ ಭಾರತ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಬ್ ಬೆಹರ್ ಹೇಳುತ್ತಾರೆ.

ಆದಾಯ ಮತ್ತು ಲಿಂಗ ಅಸಮಾನತೆಯ ಸಮಸ್ಯೆಗಳು ಐದು ದಿನಗಳ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಒಳಗಾಗುವ ನಿರೀಕ್ಷೆಯಿದೆ. ಡಬ್ಲ್ಯೂಇಎಫ್‌ನ ವಾರ್ಷಿಕ ಜಾಗತಿಕ ಅಪಾಯ ಕುರಿತ ಸ್ವಂತ ವರದಿ ಕೂಡಾ 2020ರಲ್ಲಿ ಜಾಗತಿಕ ಆರ್ಥಿಕತೆಯು ಕೆಳಮುಖ ಒತ್ತಡ ಎದುರಿಸುವ ಕುರಿತು ಎಚ್ಚರಿಕೆ ನೀಡಿದೆ. 2019ರಲ್ಲಿಯೂ ಅರ್ಥಿಕ ಅಸಮಾನತೆಯ ತೀವ್ರತೆ ಮುಂದುವರಿದಿತ್ತು.

ಲ್ಯಾಟಿನ್ ಮತ್ತು ಮಧ್ಯ ಅಮೆರಿಕ ದೇಶಗಳು ಸೇರಿದಂತೆ, ಜಗತ್ತಿನ ಪ್ರತಿಯೊಂದು ಖಂಡದಲ್ಲಿ ಸಾಮಾಜಿಕ ತಲ್ಲಣಗಳು ಸಂಭವಿಸುತ್ತಿದ್ದು, ಪ್ರಜಾಪ್ರಭುತ್ವಗಳು ಅಪಾಯದಲ್ಲಿರುವ ಈ ಸಂದರ್ಭದಲ್ಲಿ ಹೆಚ್ಚುತ್ತಿರುವ ಆರ್ಥಿಕ ಕಂದರ ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಿದ್ದು, ಪರಿಸ್ಥಿತಿಯ ಸ್ಫೋಟಕತೆಯನ್ನು ಸೂಚಿಸುತ್ತದೆ. ಏಕೆಂದರೆ, ಭಾರತವೂ ಸೇರಿದಂತೆ ಹಲವಾರು ದೇಶಗಳಲ್ಲಿ ಕಂಡುಬರುತ್ತಿದ್ದು, ತೀವ್ರಗೊಳ್ಳುತ್ತಿರುವ ಸಾಮಾಜಿಕ ಅಶಾಂತಿಗೆ ಹೆಚ್ಚುತ್ತಿರುವ ಭ್ರಷ್ಟಾಚಾರ, ಸಂವಿಧಾನದ ಉಲ್ಲಂಘನೆ, ಬಲಪಂಥೀಯ ಪ್ರಭಾವ, ಫ್ಯಾಸಿಸ್ಟ್ ಶಕ್ತಿಗಳ ದಬ್ಬಾಳಿಕೆ, ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯಲ್ಲಿ ತೀವ್ರ ಹೆಚ್ಚಳ, ನಿರುದ್ಯೋಗ, ಕುಸಿಯುತ್ತಿರುವ ಆದಾಯ ಇತ್ಯಾದಿಯಾಗಿ ಹಲವಾರು ಕಾರಣಗಳಿವೆ.

ದೇಶದೇಶಗಳ ನಡುವಿನ ಆರ್ಥಿಕ ಅಸಮಾನತೆ ಕಳೆದ ಮೂರು ದಶಕಗಳಲ್ಲಿ ಕಡಿಮೆಯಾಗಿದ್ದರೂ, ದೇಶಗಳೊಳಗೆ ಜನರ ಆದಾಯದಲ್ಲಿ ಅಸಮಾನತೆ ತೀವ್ರಗೊಂಡಿದೆ. ಇದು ಮುಖ್ಯವಾಗಿ ಮುಂದುವರಿದ ಆರ್ಥಿಕತೆಗಳನ್ನೂ ತಟ್ಟಿದ್ದು, ಕೆಲವು ದೇಶಗಳಲ್ಲಿ ಐತಿಹಾಸಿಕ ಮಟ್ಟವನ್ನು ತಲುಪಿದೆ. ಇದರ ಅರ್ಥ ಶ್ರೀಮಂತರು ಹೆಚ್ಚುಹೆಚ್ಚು ಶ್ರೀಮಂತರಾಗುತ್ತಿದ್ದು, ಬಡವರು ಹೆಚ್ಚುಹೆಚ್ಚು ಬಡವರಾಗುತ್ತಿದ್ದಾರೆ.

‘ಆಕ್ಸ್‌ಫಾಮ್’ ವರದಿ ಹೇಳುವ ಪ್ರಕಾರ ಕೆಲವು ದೊಡ್ಡ ರಾಷ್ಟ್ರಗಳು- ಸಾಮಾನ್ಯ ಜನರು, ಅದರಲ್ಲೂ ಮುಖ್ಯವಾಗಿ ಮಹಿಳೆಯರ ಹಿತಾಸಕ್ತಿಯನ್ನು ಬಲಿಗೊಟ್ಟು, ಕೆಲವೇ ಅತಿ ಶ್ರೀಮಂತರು ಹೆಚ್ಚು ಹೆಚ್ಚು ಹಣ ಸಂಗ್ರಹಿಸಲು ಅವಕಾಶ ಮಾಡಿಕೊಡುವುದರ ಮೂಲಕ ಅಸಮಾನತೆಯ ಬೆಂಕಿಗೆ ತುಪ್ಪ ಸುರಿಯುತ್ತಿವೆ.

ಭಾರತದಲ್ಲಿಯೂ ಸಾಮಾನ್ಯ ಜನರು ಮತ್ತು ಮಧ್ಯಮ ಕೈಗಾರಿಕೆಗಳು ಆರ್ಥಿಕ ಬಿಕ್ಕಟ್ಟಿನ ಬಿಸಿ ಅನುಭವಿಸುತ್ತಿರುವಾಗ, ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಳ್ಳುತ್ತಿರುವಾಗ, ನಿರುದ್ಯೋಗ ದಾಖಲೆ ಪ್ರಮಾಣಕ್ಕೆ ಏರುತ್ತಿರುವಾಗ, ಆರ್ಥಿಕ ಬೆಳವಣಿಗೆ 4.3 ಶೇಕಡಾದ ಆಸುಪಾಸಿಗೆ ಕುಸಿದಿರುವಾಗ ಅದಾನಿ, ಅಂಬಾನಿಗಳ ಹಾಗೂ ಬಿಜೆಪಿಯ ಆದಾಯ ಮತ್ತು ಸಂಪತ್ತು ಗಣನೀಯವಾಗಿ ಏರಿರುವುದನ್ನು ಉದಾಹರಣೆಯಾಗಿ ನೋಡಬಹುದು.

‘ಆಕ್ಸ್‌ಫಾಮ್’ ವರದಿಯ ಪ್ರಕಾರ ಭಾರತದ ಕೇವಲ 63 ಮಂದಿ ಅತಿ ಶ್ರೀಮಂತರ ಒಟ್ಟು ಸಂಪತ್ತು 2018-19ರ ಹಣಕಾಸು ವರ್ಷದಲ್ಲಿ ಕೇಂದ್ರ ಬಜೆಟ್ ಮೊತ್ತವಾದ 24,42,200 ಕೋಟಿ ರೂ.ಗಳನ್ನು ಮೀರಿತ್ತು. ಇದರಿಂದಲೇ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲಿಗೆ ಹೆಸರು ಮಾಡುವವರು ಬಡ ಸಾಮಾನ್ಯರನ್ನ ತಲೆ ಹೊಡೆಯುತ್ತಾರೆ ಎರಡನೆಯದಾಗಿ ಪೊಲಿಟಿಕಲ್ ಪವರ್ ಬಳಸಿಕೊಳ್ಳುವ ತಂತ್ರ ಹುಡುಕಿಕೊಳ್ಳುತ್ತಾರೆ
    ಅದಾದ ನಂತರ ಅವರದೇ ಆದ ಧಾಟಿಯಲ್ಲಿ ಸಮಾಜದ ನಾಗರಿಕರ ಮೇಲೆ ಒತ್ತಡ ಭಯ ಹೆಸರು ಗಳಿಸಿಕೊಳ್ಳುತ್ತಾರೆ
    ಇವಿಷ್ಟು ಆದನಂತರ ಒಬ್ಬ ನಿಷ್ಠಾವಂತ ವ್ಯಕ್ತಿಯನ್ನು ತಲೆ ಹೊಡೆದು ನನ್ನದೇನೂ ತಪ್ಪಿಲ್ಲ ಎಂದು ಕಾನೂನಿನ ಚೌಕಟ್ಟಿನಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿರುವ ನ್ಯಾಯಾಲಯದಲ್ಲಿ ನಾನು ಅಪರಾಧಿಯಲ್ಲ ಎಂದು ಪ್ರೊ ಮಾಡಿಕೊಳ್ಳುತ್ತಾರೆ ಇದಾದ ನಂತರ ಗಣ್ಯಾತಿಗಣ್ಯರು ಅವನ ಬಲಾಡ್ಯ ತನಕ್ಕೆ ಮಣಿದು ಪೊಲಿಟಿಕಲ್ ಸ್ಕೆಳೆ ತರುತ್ತಾರೆ ಅದಾದ ನಂತರ ಯಾವುದು 1 ದೊಡ್ಡ ಇಮೇಜ್ ಬಂದಂತಾಗುತ್ತದೆ
    ನ್ಯಾಯವಾಗಿ ಸಂಪಾದನೆ ಮಾಡಬಹುದಾದ ವ್ಯಕ್ತಿಗಳಿಗೆ ಸಮಾಜದಲ್ಲಿ ಬೆಲೆ ಇಲ್ಲ
    ಲೂಟಿಕೋರರ ಸಮಾಜದಲ್ಲಿ ಸಾಮಾನ್ಯ ವ್ಯಕ್ತಿತ್ವವುಳ್ಳವರು ಬದುಕುವಂತಹ ದುರ್ದೈವ ಭಾರತ ದೇಶಕ್ಕೆ ಬಂದೊದಗಿದೆ
    ಆಳುವವರಿಗೆ ನಾನು ಮೊದಲು ಅಖಂಡ ಚಕ್ರವರ್ತಿಯಾಗಬೇಕು ಎನ್ನುವ ಆಸೆ ಅಧಿಕವಾಗಿ ತುಂಬಿಕೊಂಡಿರುತ್ತವೆ
    ಬಡವರ ಬಂಧು ದೀನದಲಿತರ ಕಣ್ಮಣಿ ದಲಿತರ ಮನೆ ಊಟ ದಲಿತರ ಏಳಿಗೆಗೆ ನಾಯಕ ನಾನು ಎಂದು ಬಿಂಬಿಸಿಕೊಳ್ಳುತ್ತಾರೆ ಇವೆಲ್ಲಾ ಹೇಳುವುದಷ್ಟೇ ಸೀಮಿತವಾಗಿರುತ್ತದೆ ಬದಲಾವಣೆ ಮಾತ್ರ ಶೂನ್ಯ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...