Homeಎಕಾನಮಿ460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ 'ಆಕ್ಸ್‌ಫಾಮ್'...

460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ ‘ಆಕ್ಸ್‌ಫಾಮ್’ ವರದಿ

ಭಾರತದ ಕೇವಲ 63 ಮಂದಿ ಅತಿ ಶ್ರೀಮಂತರ ಒಟ್ಟು ಸಂಪತ್ತು 2018-19ರ ಹಣಕಾಸು ವರ್ಷದಲ್ಲಿ ಕೇಂದ್ರ ಬಜೆಟ್ ಮೊತ್ತವಾದ 24,42,200 ಕೋಟಿ ರೂ.ಗಳನ್ನು ಮೀರಿತ್ತು. ಇದರಿಂದಲೇ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬಹುದು

- Advertisement -
- Advertisement -

ಮೂಲ: ‘ಲೈವ್‌ಮಿಂಟ್’
ನಿರೂಪಣೆ: ನಿಖಿಲ್ ಕೋಲ್ಪೆ

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯೂಇಎಫ್)ಯ 50ನೇ ವಾರ್ಷಿಕ ಸಭೆಯ ಸಂದರ್ಭದಲ್ಲಿ ಮಾನವ ಹಕ್ಕು ಸಂಸ್ಥೆ ‘ಆಕ್ಸ್‌ಫಾಮ್’ ತನ್ನ ಅಧ್ಯಯನ ವರದಿ ‘ಟೈಮ್ ಟು ಕೇರ್” ಬಿಡುಗಡೆ ಮಾಡಿದ್ದು, ಅದು, ಭಾರತ ಮತ್ತು ಜಗತ್ತಿನಾದ್ಯಂತ ಅತಿ ಶ್ರೀಮಂತರು ಹಾಗೂ ಬಡವರ ನಡುವಿನ ಕಂದರ ಆತಂಕಕಾರಿಯಾಗಿ ಬೆಳೆದಿರುವುದು ಮತ್ತು ಜಗತ್ತಿನ ಸಂಪತ್ತು ಕೆಲವೇ ಶ್ರೀಮಂತರ ಕೈಯಲ್ಲಿರುವುದನ್ನು ತೋರಿಸಿಕೊಟ್ಟಿದೆ.

ಅದರ ಪ್ರಕಾರ, ಒಂದು ಶೇಕಡಾ ಸಿರಿವಂತ ಭಾರತೀಯರ ಸಂಪತ್ತು- 70 ಶೇಕಡಾ ಬಡ ಭಾರತೀಯರ, ಅಂದರೆ 95.3 ಕೋಟಿ ಜನರ ಒಟ್ಟು ಸಂಪತ್ತಿನ ನಾಲ್ಕು ಪಟ್ಟಿನಷ್ಟಿದೆ. ಜಗತ್ತಿನ ಕೇವಲ 2,153 ಮಂದಿ ಶತಕೋಟಿಪತಿಗಳು 460 ಕೋಟಿ, ಅಂದರೆ ಈ ಭೂಮಿಯ 60 ಶೇಕಡಾ ಜನರ ಒಟ್ಟು ಸಂಪತ್ತಿಗಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ. ಕಳೆದ ದಶಕದಲ್ಲಿ ಶತಕೋಟಿಪತಿಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಕಡು ಬಡವರ ಸಂಖ್ಯೆಯೂ ಅದೇ ರೀತಿಯಲ್ಲಿ ಬೆಳೆದಿದೆ.

“ಇಂತಹಾ ದಂಗುಬಡಿಸುವ ಕಂದರವನ್ನು ಕಡಿಮೆ ಮಾಡುವುದು, ಉದ್ದೇಶಪೂರ್ವಕವಾದ ಧೋರಣೆ ಮತ್ತು ಪ್ರಯತ್ನವಿಲ್ಲದೇ ಸಾಧ್ಯವಿಲ್ಲ. ಆದರೆ, ಕೆಲವೇ ಕೆಲವು ಸರಕಾರಗಳು ಇಂತಹಾ ಪ್ರಯತ್ನಗಳಿಗೆ ಬದ್ಧತೆ ಹೊಂದಿವೆ” ಎಂದು ‘ಆಕ್ಸ್‌ಫಾಮ್’ನ ಭಾರತ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಬ್ ಬೆಹರ್ ಹೇಳುತ್ತಾರೆ.

ಆದಾಯ ಮತ್ತು ಲಿಂಗ ಅಸಮಾನತೆಯ ಸಮಸ್ಯೆಗಳು ಐದು ದಿನಗಳ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಒಳಗಾಗುವ ನಿರೀಕ್ಷೆಯಿದೆ. ಡಬ್ಲ್ಯೂಇಎಫ್‌ನ ವಾರ್ಷಿಕ ಜಾಗತಿಕ ಅಪಾಯ ಕುರಿತ ಸ್ವಂತ ವರದಿ ಕೂಡಾ 2020ರಲ್ಲಿ ಜಾಗತಿಕ ಆರ್ಥಿಕತೆಯು ಕೆಳಮುಖ ಒತ್ತಡ ಎದುರಿಸುವ ಕುರಿತು ಎಚ್ಚರಿಕೆ ನೀಡಿದೆ. 2019ರಲ್ಲಿಯೂ ಅರ್ಥಿಕ ಅಸಮಾನತೆಯ ತೀವ್ರತೆ ಮುಂದುವರಿದಿತ್ತು.

ಲ್ಯಾಟಿನ್ ಮತ್ತು ಮಧ್ಯ ಅಮೆರಿಕ ದೇಶಗಳು ಸೇರಿದಂತೆ, ಜಗತ್ತಿನ ಪ್ರತಿಯೊಂದು ಖಂಡದಲ್ಲಿ ಸಾಮಾಜಿಕ ತಲ್ಲಣಗಳು ಸಂಭವಿಸುತ್ತಿದ್ದು, ಪ್ರಜಾಪ್ರಭುತ್ವಗಳು ಅಪಾಯದಲ್ಲಿರುವ ಈ ಸಂದರ್ಭದಲ್ಲಿ ಹೆಚ್ಚುತ್ತಿರುವ ಆರ್ಥಿಕ ಕಂದರ ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಿದ್ದು, ಪರಿಸ್ಥಿತಿಯ ಸ್ಫೋಟಕತೆಯನ್ನು ಸೂಚಿಸುತ್ತದೆ. ಏಕೆಂದರೆ, ಭಾರತವೂ ಸೇರಿದಂತೆ ಹಲವಾರು ದೇಶಗಳಲ್ಲಿ ಕಂಡುಬರುತ್ತಿದ್ದು, ತೀವ್ರಗೊಳ್ಳುತ್ತಿರುವ ಸಾಮಾಜಿಕ ಅಶಾಂತಿಗೆ ಹೆಚ್ಚುತ್ತಿರುವ ಭ್ರಷ್ಟಾಚಾರ, ಸಂವಿಧಾನದ ಉಲ್ಲಂಘನೆ, ಬಲಪಂಥೀಯ ಪ್ರಭಾವ, ಫ್ಯಾಸಿಸ್ಟ್ ಶಕ್ತಿಗಳ ದಬ್ಬಾಳಿಕೆ, ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯಲ್ಲಿ ತೀವ್ರ ಹೆಚ್ಚಳ, ನಿರುದ್ಯೋಗ, ಕುಸಿಯುತ್ತಿರುವ ಆದಾಯ ಇತ್ಯಾದಿಯಾಗಿ ಹಲವಾರು ಕಾರಣಗಳಿವೆ.

ದೇಶದೇಶಗಳ ನಡುವಿನ ಆರ್ಥಿಕ ಅಸಮಾನತೆ ಕಳೆದ ಮೂರು ದಶಕಗಳಲ್ಲಿ ಕಡಿಮೆಯಾಗಿದ್ದರೂ, ದೇಶಗಳೊಳಗೆ ಜನರ ಆದಾಯದಲ್ಲಿ ಅಸಮಾನತೆ ತೀವ್ರಗೊಂಡಿದೆ. ಇದು ಮುಖ್ಯವಾಗಿ ಮುಂದುವರಿದ ಆರ್ಥಿಕತೆಗಳನ್ನೂ ತಟ್ಟಿದ್ದು, ಕೆಲವು ದೇಶಗಳಲ್ಲಿ ಐತಿಹಾಸಿಕ ಮಟ್ಟವನ್ನು ತಲುಪಿದೆ. ಇದರ ಅರ್ಥ ಶ್ರೀಮಂತರು ಹೆಚ್ಚುಹೆಚ್ಚು ಶ್ರೀಮಂತರಾಗುತ್ತಿದ್ದು, ಬಡವರು ಹೆಚ್ಚುಹೆಚ್ಚು ಬಡವರಾಗುತ್ತಿದ್ದಾರೆ.

‘ಆಕ್ಸ್‌ಫಾಮ್’ ವರದಿ ಹೇಳುವ ಪ್ರಕಾರ ಕೆಲವು ದೊಡ್ಡ ರಾಷ್ಟ್ರಗಳು- ಸಾಮಾನ್ಯ ಜನರು, ಅದರಲ್ಲೂ ಮುಖ್ಯವಾಗಿ ಮಹಿಳೆಯರ ಹಿತಾಸಕ್ತಿಯನ್ನು ಬಲಿಗೊಟ್ಟು, ಕೆಲವೇ ಅತಿ ಶ್ರೀಮಂತರು ಹೆಚ್ಚು ಹೆಚ್ಚು ಹಣ ಸಂಗ್ರಹಿಸಲು ಅವಕಾಶ ಮಾಡಿಕೊಡುವುದರ ಮೂಲಕ ಅಸಮಾನತೆಯ ಬೆಂಕಿಗೆ ತುಪ್ಪ ಸುರಿಯುತ್ತಿವೆ.

ಭಾರತದಲ್ಲಿಯೂ ಸಾಮಾನ್ಯ ಜನರು ಮತ್ತು ಮಧ್ಯಮ ಕೈಗಾರಿಕೆಗಳು ಆರ್ಥಿಕ ಬಿಕ್ಕಟ್ಟಿನ ಬಿಸಿ ಅನುಭವಿಸುತ್ತಿರುವಾಗ, ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಳ್ಳುತ್ತಿರುವಾಗ, ನಿರುದ್ಯೋಗ ದಾಖಲೆ ಪ್ರಮಾಣಕ್ಕೆ ಏರುತ್ತಿರುವಾಗ, ಆರ್ಥಿಕ ಬೆಳವಣಿಗೆ 4.3 ಶೇಕಡಾದ ಆಸುಪಾಸಿಗೆ ಕುಸಿದಿರುವಾಗ ಅದಾನಿ, ಅಂಬಾನಿಗಳ ಹಾಗೂ ಬಿಜೆಪಿಯ ಆದಾಯ ಮತ್ತು ಸಂಪತ್ತು ಗಣನೀಯವಾಗಿ ಏರಿರುವುದನ್ನು ಉದಾಹರಣೆಯಾಗಿ ನೋಡಬಹುದು.

‘ಆಕ್ಸ್‌ಫಾಮ್’ ವರದಿಯ ಪ್ರಕಾರ ಭಾರತದ ಕೇವಲ 63 ಮಂದಿ ಅತಿ ಶ್ರೀಮಂತರ ಒಟ್ಟು ಸಂಪತ್ತು 2018-19ರ ಹಣಕಾಸು ವರ್ಷದಲ್ಲಿ ಕೇಂದ್ರ ಬಜೆಟ್ ಮೊತ್ತವಾದ 24,42,200 ಕೋಟಿ ರೂ.ಗಳನ್ನು ಮೀರಿತ್ತು. ಇದರಿಂದಲೇ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲಿಗೆ ಹೆಸರು ಮಾಡುವವರು ಬಡ ಸಾಮಾನ್ಯರನ್ನ ತಲೆ ಹೊಡೆಯುತ್ತಾರೆ ಎರಡನೆಯದಾಗಿ ಪೊಲಿಟಿಕಲ್ ಪವರ್ ಬಳಸಿಕೊಳ್ಳುವ ತಂತ್ರ ಹುಡುಕಿಕೊಳ್ಳುತ್ತಾರೆ
    ಅದಾದ ನಂತರ ಅವರದೇ ಆದ ಧಾಟಿಯಲ್ಲಿ ಸಮಾಜದ ನಾಗರಿಕರ ಮೇಲೆ ಒತ್ತಡ ಭಯ ಹೆಸರು ಗಳಿಸಿಕೊಳ್ಳುತ್ತಾರೆ
    ಇವಿಷ್ಟು ಆದನಂತರ ಒಬ್ಬ ನಿಷ್ಠಾವಂತ ವ್ಯಕ್ತಿಯನ್ನು ತಲೆ ಹೊಡೆದು ನನ್ನದೇನೂ ತಪ್ಪಿಲ್ಲ ಎಂದು ಕಾನೂನಿನ ಚೌಕಟ್ಟಿನಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿರುವ ನ್ಯಾಯಾಲಯದಲ್ಲಿ ನಾನು ಅಪರಾಧಿಯಲ್ಲ ಎಂದು ಪ್ರೊ ಮಾಡಿಕೊಳ್ಳುತ್ತಾರೆ ಇದಾದ ನಂತರ ಗಣ್ಯಾತಿಗಣ್ಯರು ಅವನ ಬಲಾಡ್ಯ ತನಕ್ಕೆ ಮಣಿದು ಪೊಲಿಟಿಕಲ್ ಸ್ಕೆಳೆ ತರುತ್ತಾರೆ ಅದಾದ ನಂತರ ಯಾವುದು 1 ದೊಡ್ಡ ಇಮೇಜ್ ಬಂದಂತಾಗುತ್ತದೆ
    ನ್ಯಾಯವಾಗಿ ಸಂಪಾದನೆ ಮಾಡಬಹುದಾದ ವ್ಯಕ್ತಿಗಳಿಗೆ ಸಮಾಜದಲ್ಲಿ ಬೆಲೆ ಇಲ್ಲ
    ಲೂಟಿಕೋರರ ಸಮಾಜದಲ್ಲಿ ಸಾಮಾನ್ಯ ವ್ಯಕ್ತಿತ್ವವುಳ್ಳವರು ಬದುಕುವಂತಹ ದುರ್ದೈವ ಭಾರತ ದೇಶಕ್ಕೆ ಬಂದೊದಗಿದೆ
    ಆಳುವವರಿಗೆ ನಾನು ಮೊದಲು ಅಖಂಡ ಚಕ್ರವರ್ತಿಯಾಗಬೇಕು ಎನ್ನುವ ಆಸೆ ಅಧಿಕವಾಗಿ ತುಂಬಿಕೊಂಡಿರುತ್ತವೆ
    ಬಡವರ ಬಂಧು ದೀನದಲಿತರ ಕಣ್ಮಣಿ ದಲಿತರ ಮನೆ ಊಟ ದಲಿತರ ಏಳಿಗೆಗೆ ನಾಯಕ ನಾನು ಎಂದು ಬಿಂಬಿಸಿಕೊಳ್ಳುತ್ತಾರೆ ಇವೆಲ್ಲಾ ಹೇಳುವುದಷ್ಟೇ ಸೀಮಿತವಾಗಿರುತ್ತದೆ ಬದಲಾವಣೆ ಮಾತ್ರ ಶೂನ್ಯ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...