Homeಎಕಾನಮಿ460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ 'ಆಕ್ಸ್‌ಫಾಮ್'...

460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ ‘ಆಕ್ಸ್‌ಫಾಮ್’ ವರದಿ

ಭಾರತದ ಕೇವಲ 63 ಮಂದಿ ಅತಿ ಶ್ರೀಮಂತರ ಒಟ್ಟು ಸಂಪತ್ತು 2018-19ರ ಹಣಕಾಸು ವರ್ಷದಲ್ಲಿ ಕೇಂದ್ರ ಬಜೆಟ್ ಮೊತ್ತವಾದ 24,42,200 ಕೋಟಿ ರೂ.ಗಳನ್ನು ಮೀರಿತ್ತು. ಇದರಿಂದಲೇ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬಹುದು

- Advertisement -
- Advertisement -

ಮೂಲ: ‘ಲೈವ್‌ಮಿಂಟ್’
ನಿರೂಪಣೆ: ನಿಖಿಲ್ ಕೋಲ್ಪೆ

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯೂಇಎಫ್)ಯ 50ನೇ ವಾರ್ಷಿಕ ಸಭೆಯ ಸಂದರ್ಭದಲ್ಲಿ ಮಾನವ ಹಕ್ಕು ಸಂಸ್ಥೆ ‘ಆಕ್ಸ್‌ಫಾಮ್’ ತನ್ನ ಅಧ್ಯಯನ ವರದಿ ‘ಟೈಮ್ ಟು ಕೇರ್” ಬಿಡುಗಡೆ ಮಾಡಿದ್ದು, ಅದು, ಭಾರತ ಮತ್ತು ಜಗತ್ತಿನಾದ್ಯಂತ ಅತಿ ಶ್ರೀಮಂತರು ಹಾಗೂ ಬಡವರ ನಡುವಿನ ಕಂದರ ಆತಂಕಕಾರಿಯಾಗಿ ಬೆಳೆದಿರುವುದು ಮತ್ತು ಜಗತ್ತಿನ ಸಂಪತ್ತು ಕೆಲವೇ ಶ್ರೀಮಂತರ ಕೈಯಲ್ಲಿರುವುದನ್ನು ತೋರಿಸಿಕೊಟ್ಟಿದೆ.

ಅದರ ಪ್ರಕಾರ, ಒಂದು ಶೇಕಡಾ ಸಿರಿವಂತ ಭಾರತೀಯರ ಸಂಪತ್ತು- 70 ಶೇಕಡಾ ಬಡ ಭಾರತೀಯರ, ಅಂದರೆ 95.3 ಕೋಟಿ ಜನರ ಒಟ್ಟು ಸಂಪತ್ತಿನ ನಾಲ್ಕು ಪಟ್ಟಿನಷ್ಟಿದೆ. ಜಗತ್ತಿನ ಕೇವಲ 2,153 ಮಂದಿ ಶತಕೋಟಿಪತಿಗಳು 460 ಕೋಟಿ, ಅಂದರೆ ಈ ಭೂಮಿಯ 60 ಶೇಕಡಾ ಜನರ ಒಟ್ಟು ಸಂಪತ್ತಿಗಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ. ಕಳೆದ ದಶಕದಲ್ಲಿ ಶತಕೋಟಿಪತಿಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಕಡು ಬಡವರ ಸಂಖ್ಯೆಯೂ ಅದೇ ರೀತಿಯಲ್ಲಿ ಬೆಳೆದಿದೆ.

“ಇಂತಹಾ ದಂಗುಬಡಿಸುವ ಕಂದರವನ್ನು ಕಡಿಮೆ ಮಾಡುವುದು, ಉದ್ದೇಶಪೂರ್ವಕವಾದ ಧೋರಣೆ ಮತ್ತು ಪ್ರಯತ್ನವಿಲ್ಲದೇ ಸಾಧ್ಯವಿಲ್ಲ. ಆದರೆ, ಕೆಲವೇ ಕೆಲವು ಸರಕಾರಗಳು ಇಂತಹಾ ಪ್ರಯತ್ನಗಳಿಗೆ ಬದ್ಧತೆ ಹೊಂದಿವೆ” ಎಂದು ‘ಆಕ್ಸ್‌ಫಾಮ್’ನ ಭಾರತ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಬ್ ಬೆಹರ್ ಹೇಳುತ್ತಾರೆ.

ಆದಾಯ ಮತ್ತು ಲಿಂಗ ಅಸಮಾನತೆಯ ಸಮಸ್ಯೆಗಳು ಐದು ದಿನಗಳ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಒಳಗಾಗುವ ನಿರೀಕ್ಷೆಯಿದೆ. ಡಬ್ಲ್ಯೂಇಎಫ್‌ನ ವಾರ್ಷಿಕ ಜಾಗತಿಕ ಅಪಾಯ ಕುರಿತ ಸ್ವಂತ ವರದಿ ಕೂಡಾ 2020ರಲ್ಲಿ ಜಾಗತಿಕ ಆರ್ಥಿಕತೆಯು ಕೆಳಮುಖ ಒತ್ತಡ ಎದುರಿಸುವ ಕುರಿತು ಎಚ್ಚರಿಕೆ ನೀಡಿದೆ. 2019ರಲ್ಲಿಯೂ ಅರ್ಥಿಕ ಅಸಮಾನತೆಯ ತೀವ್ರತೆ ಮುಂದುವರಿದಿತ್ತು.

ಲ್ಯಾಟಿನ್ ಮತ್ತು ಮಧ್ಯ ಅಮೆರಿಕ ದೇಶಗಳು ಸೇರಿದಂತೆ, ಜಗತ್ತಿನ ಪ್ರತಿಯೊಂದು ಖಂಡದಲ್ಲಿ ಸಾಮಾಜಿಕ ತಲ್ಲಣಗಳು ಸಂಭವಿಸುತ್ತಿದ್ದು, ಪ್ರಜಾಪ್ರಭುತ್ವಗಳು ಅಪಾಯದಲ್ಲಿರುವ ಈ ಸಂದರ್ಭದಲ್ಲಿ ಹೆಚ್ಚುತ್ತಿರುವ ಆರ್ಥಿಕ ಕಂದರ ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಿದ್ದು, ಪರಿಸ್ಥಿತಿಯ ಸ್ಫೋಟಕತೆಯನ್ನು ಸೂಚಿಸುತ್ತದೆ. ಏಕೆಂದರೆ, ಭಾರತವೂ ಸೇರಿದಂತೆ ಹಲವಾರು ದೇಶಗಳಲ್ಲಿ ಕಂಡುಬರುತ್ತಿದ್ದು, ತೀವ್ರಗೊಳ್ಳುತ್ತಿರುವ ಸಾಮಾಜಿಕ ಅಶಾಂತಿಗೆ ಹೆಚ್ಚುತ್ತಿರುವ ಭ್ರಷ್ಟಾಚಾರ, ಸಂವಿಧಾನದ ಉಲ್ಲಂಘನೆ, ಬಲಪಂಥೀಯ ಪ್ರಭಾವ, ಫ್ಯಾಸಿಸ್ಟ್ ಶಕ್ತಿಗಳ ದಬ್ಬಾಳಿಕೆ, ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯಲ್ಲಿ ತೀವ್ರ ಹೆಚ್ಚಳ, ನಿರುದ್ಯೋಗ, ಕುಸಿಯುತ್ತಿರುವ ಆದಾಯ ಇತ್ಯಾದಿಯಾಗಿ ಹಲವಾರು ಕಾರಣಗಳಿವೆ.

ದೇಶದೇಶಗಳ ನಡುವಿನ ಆರ್ಥಿಕ ಅಸಮಾನತೆ ಕಳೆದ ಮೂರು ದಶಕಗಳಲ್ಲಿ ಕಡಿಮೆಯಾಗಿದ್ದರೂ, ದೇಶಗಳೊಳಗೆ ಜನರ ಆದಾಯದಲ್ಲಿ ಅಸಮಾನತೆ ತೀವ್ರಗೊಂಡಿದೆ. ಇದು ಮುಖ್ಯವಾಗಿ ಮುಂದುವರಿದ ಆರ್ಥಿಕತೆಗಳನ್ನೂ ತಟ್ಟಿದ್ದು, ಕೆಲವು ದೇಶಗಳಲ್ಲಿ ಐತಿಹಾಸಿಕ ಮಟ್ಟವನ್ನು ತಲುಪಿದೆ. ಇದರ ಅರ್ಥ ಶ್ರೀಮಂತರು ಹೆಚ್ಚುಹೆಚ್ಚು ಶ್ರೀಮಂತರಾಗುತ್ತಿದ್ದು, ಬಡವರು ಹೆಚ್ಚುಹೆಚ್ಚು ಬಡವರಾಗುತ್ತಿದ್ದಾರೆ.

‘ಆಕ್ಸ್‌ಫಾಮ್’ ವರದಿ ಹೇಳುವ ಪ್ರಕಾರ ಕೆಲವು ದೊಡ್ಡ ರಾಷ್ಟ್ರಗಳು- ಸಾಮಾನ್ಯ ಜನರು, ಅದರಲ್ಲೂ ಮುಖ್ಯವಾಗಿ ಮಹಿಳೆಯರ ಹಿತಾಸಕ್ತಿಯನ್ನು ಬಲಿಗೊಟ್ಟು, ಕೆಲವೇ ಅತಿ ಶ್ರೀಮಂತರು ಹೆಚ್ಚು ಹೆಚ್ಚು ಹಣ ಸಂಗ್ರಹಿಸಲು ಅವಕಾಶ ಮಾಡಿಕೊಡುವುದರ ಮೂಲಕ ಅಸಮಾನತೆಯ ಬೆಂಕಿಗೆ ತುಪ್ಪ ಸುರಿಯುತ್ತಿವೆ.

ಭಾರತದಲ್ಲಿಯೂ ಸಾಮಾನ್ಯ ಜನರು ಮತ್ತು ಮಧ್ಯಮ ಕೈಗಾರಿಕೆಗಳು ಆರ್ಥಿಕ ಬಿಕ್ಕಟ್ಟಿನ ಬಿಸಿ ಅನುಭವಿಸುತ್ತಿರುವಾಗ, ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಳ್ಳುತ್ತಿರುವಾಗ, ನಿರುದ್ಯೋಗ ದಾಖಲೆ ಪ್ರಮಾಣಕ್ಕೆ ಏರುತ್ತಿರುವಾಗ, ಆರ್ಥಿಕ ಬೆಳವಣಿಗೆ 4.3 ಶೇಕಡಾದ ಆಸುಪಾಸಿಗೆ ಕುಸಿದಿರುವಾಗ ಅದಾನಿ, ಅಂಬಾನಿಗಳ ಹಾಗೂ ಬಿಜೆಪಿಯ ಆದಾಯ ಮತ್ತು ಸಂಪತ್ತು ಗಣನೀಯವಾಗಿ ಏರಿರುವುದನ್ನು ಉದಾಹರಣೆಯಾಗಿ ನೋಡಬಹುದು.

‘ಆಕ್ಸ್‌ಫಾಮ್’ ವರದಿಯ ಪ್ರಕಾರ ಭಾರತದ ಕೇವಲ 63 ಮಂದಿ ಅತಿ ಶ್ರೀಮಂತರ ಒಟ್ಟು ಸಂಪತ್ತು 2018-19ರ ಹಣಕಾಸು ವರ್ಷದಲ್ಲಿ ಕೇಂದ್ರ ಬಜೆಟ್ ಮೊತ್ತವಾದ 24,42,200 ಕೋಟಿ ರೂ.ಗಳನ್ನು ಮೀರಿತ್ತು. ಇದರಿಂದಲೇ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲಿಗೆ ಹೆಸರು ಮಾಡುವವರು ಬಡ ಸಾಮಾನ್ಯರನ್ನ ತಲೆ ಹೊಡೆಯುತ್ತಾರೆ ಎರಡನೆಯದಾಗಿ ಪೊಲಿಟಿಕಲ್ ಪವರ್ ಬಳಸಿಕೊಳ್ಳುವ ತಂತ್ರ ಹುಡುಕಿಕೊಳ್ಳುತ್ತಾರೆ
    ಅದಾದ ನಂತರ ಅವರದೇ ಆದ ಧಾಟಿಯಲ್ಲಿ ಸಮಾಜದ ನಾಗರಿಕರ ಮೇಲೆ ಒತ್ತಡ ಭಯ ಹೆಸರು ಗಳಿಸಿಕೊಳ್ಳುತ್ತಾರೆ
    ಇವಿಷ್ಟು ಆದನಂತರ ಒಬ್ಬ ನಿಷ್ಠಾವಂತ ವ್ಯಕ್ತಿಯನ್ನು ತಲೆ ಹೊಡೆದು ನನ್ನದೇನೂ ತಪ್ಪಿಲ್ಲ ಎಂದು ಕಾನೂನಿನ ಚೌಕಟ್ಟಿನಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿರುವ ನ್ಯಾಯಾಲಯದಲ್ಲಿ ನಾನು ಅಪರಾಧಿಯಲ್ಲ ಎಂದು ಪ್ರೊ ಮಾಡಿಕೊಳ್ಳುತ್ತಾರೆ ಇದಾದ ನಂತರ ಗಣ್ಯಾತಿಗಣ್ಯರು ಅವನ ಬಲಾಡ್ಯ ತನಕ್ಕೆ ಮಣಿದು ಪೊಲಿಟಿಕಲ್ ಸ್ಕೆಳೆ ತರುತ್ತಾರೆ ಅದಾದ ನಂತರ ಯಾವುದು 1 ದೊಡ್ಡ ಇಮೇಜ್ ಬಂದಂತಾಗುತ್ತದೆ
    ನ್ಯಾಯವಾಗಿ ಸಂಪಾದನೆ ಮಾಡಬಹುದಾದ ವ್ಯಕ್ತಿಗಳಿಗೆ ಸಮಾಜದಲ್ಲಿ ಬೆಲೆ ಇಲ್ಲ
    ಲೂಟಿಕೋರರ ಸಮಾಜದಲ್ಲಿ ಸಾಮಾನ್ಯ ವ್ಯಕ್ತಿತ್ವವುಳ್ಳವರು ಬದುಕುವಂತಹ ದುರ್ದೈವ ಭಾರತ ದೇಶಕ್ಕೆ ಬಂದೊದಗಿದೆ
    ಆಳುವವರಿಗೆ ನಾನು ಮೊದಲು ಅಖಂಡ ಚಕ್ರವರ್ತಿಯಾಗಬೇಕು ಎನ್ನುವ ಆಸೆ ಅಧಿಕವಾಗಿ ತುಂಬಿಕೊಂಡಿರುತ್ತವೆ
    ಬಡವರ ಬಂಧು ದೀನದಲಿತರ ಕಣ್ಮಣಿ ದಲಿತರ ಮನೆ ಊಟ ದಲಿತರ ಏಳಿಗೆಗೆ ನಾಯಕ ನಾನು ಎಂದು ಬಿಂಬಿಸಿಕೊಳ್ಳುತ್ತಾರೆ ಇವೆಲ್ಲಾ ಹೇಳುವುದಷ್ಟೇ ಸೀಮಿತವಾಗಿರುತ್ತದೆ ಬದಲಾವಣೆ ಮಾತ್ರ ಶೂನ್ಯ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...