Homeಎಕಾನಮಿ460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ 'ಆಕ್ಸ್‌ಫಾಮ್'...

460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ ‘ಆಕ್ಸ್‌ಫಾಮ್’ ವರದಿ

ಭಾರತದ ಕೇವಲ 63 ಮಂದಿ ಅತಿ ಶ್ರೀಮಂತರ ಒಟ್ಟು ಸಂಪತ್ತು 2018-19ರ ಹಣಕಾಸು ವರ್ಷದಲ್ಲಿ ಕೇಂದ್ರ ಬಜೆಟ್ ಮೊತ್ತವಾದ 24,42,200 ಕೋಟಿ ರೂ.ಗಳನ್ನು ಮೀರಿತ್ತು. ಇದರಿಂದಲೇ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬಹುದು

- Advertisement -
- Advertisement -

ಮೂಲ: ‘ಲೈವ್‌ಮಿಂಟ್’
ನಿರೂಪಣೆ: ನಿಖಿಲ್ ಕೋಲ್ಪೆ

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯೂಇಎಫ್)ಯ 50ನೇ ವಾರ್ಷಿಕ ಸಭೆಯ ಸಂದರ್ಭದಲ್ಲಿ ಮಾನವ ಹಕ್ಕು ಸಂಸ್ಥೆ ‘ಆಕ್ಸ್‌ಫಾಮ್’ ತನ್ನ ಅಧ್ಯಯನ ವರದಿ ‘ಟೈಮ್ ಟು ಕೇರ್” ಬಿಡುಗಡೆ ಮಾಡಿದ್ದು, ಅದು, ಭಾರತ ಮತ್ತು ಜಗತ್ತಿನಾದ್ಯಂತ ಅತಿ ಶ್ರೀಮಂತರು ಹಾಗೂ ಬಡವರ ನಡುವಿನ ಕಂದರ ಆತಂಕಕಾರಿಯಾಗಿ ಬೆಳೆದಿರುವುದು ಮತ್ತು ಜಗತ್ತಿನ ಸಂಪತ್ತು ಕೆಲವೇ ಶ್ರೀಮಂತರ ಕೈಯಲ್ಲಿರುವುದನ್ನು ತೋರಿಸಿಕೊಟ್ಟಿದೆ.

ಅದರ ಪ್ರಕಾರ, ಒಂದು ಶೇಕಡಾ ಸಿರಿವಂತ ಭಾರತೀಯರ ಸಂಪತ್ತು- 70 ಶೇಕಡಾ ಬಡ ಭಾರತೀಯರ, ಅಂದರೆ 95.3 ಕೋಟಿ ಜನರ ಒಟ್ಟು ಸಂಪತ್ತಿನ ನಾಲ್ಕು ಪಟ್ಟಿನಷ್ಟಿದೆ. ಜಗತ್ತಿನ ಕೇವಲ 2,153 ಮಂದಿ ಶತಕೋಟಿಪತಿಗಳು 460 ಕೋಟಿ, ಅಂದರೆ ಈ ಭೂಮಿಯ 60 ಶೇಕಡಾ ಜನರ ಒಟ್ಟು ಸಂಪತ್ತಿಗಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ. ಕಳೆದ ದಶಕದಲ್ಲಿ ಶತಕೋಟಿಪತಿಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಕಡು ಬಡವರ ಸಂಖ್ಯೆಯೂ ಅದೇ ರೀತಿಯಲ್ಲಿ ಬೆಳೆದಿದೆ.

“ಇಂತಹಾ ದಂಗುಬಡಿಸುವ ಕಂದರವನ್ನು ಕಡಿಮೆ ಮಾಡುವುದು, ಉದ್ದೇಶಪೂರ್ವಕವಾದ ಧೋರಣೆ ಮತ್ತು ಪ್ರಯತ್ನವಿಲ್ಲದೇ ಸಾಧ್ಯವಿಲ್ಲ. ಆದರೆ, ಕೆಲವೇ ಕೆಲವು ಸರಕಾರಗಳು ಇಂತಹಾ ಪ್ರಯತ್ನಗಳಿಗೆ ಬದ್ಧತೆ ಹೊಂದಿವೆ” ಎಂದು ‘ಆಕ್ಸ್‌ಫಾಮ್’ನ ಭಾರತ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಬ್ ಬೆಹರ್ ಹೇಳುತ್ತಾರೆ.

ಆದಾಯ ಮತ್ತು ಲಿಂಗ ಅಸಮಾನತೆಯ ಸಮಸ್ಯೆಗಳು ಐದು ದಿನಗಳ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಒಳಗಾಗುವ ನಿರೀಕ್ಷೆಯಿದೆ. ಡಬ್ಲ್ಯೂಇಎಫ್‌ನ ವಾರ್ಷಿಕ ಜಾಗತಿಕ ಅಪಾಯ ಕುರಿತ ಸ್ವಂತ ವರದಿ ಕೂಡಾ 2020ರಲ್ಲಿ ಜಾಗತಿಕ ಆರ್ಥಿಕತೆಯು ಕೆಳಮುಖ ಒತ್ತಡ ಎದುರಿಸುವ ಕುರಿತು ಎಚ್ಚರಿಕೆ ನೀಡಿದೆ. 2019ರಲ್ಲಿಯೂ ಅರ್ಥಿಕ ಅಸಮಾನತೆಯ ತೀವ್ರತೆ ಮುಂದುವರಿದಿತ್ತು.

ಲ್ಯಾಟಿನ್ ಮತ್ತು ಮಧ್ಯ ಅಮೆರಿಕ ದೇಶಗಳು ಸೇರಿದಂತೆ, ಜಗತ್ತಿನ ಪ್ರತಿಯೊಂದು ಖಂಡದಲ್ಲಿ ಸಾಮಾಜಿಕ ತಲ್ಲಣಗಳು ಸಂಭವಿಸುತ್ತಿದ್ದು, ಪ್ರಜಾಪ್ರಭುತ್ವಗಳು ಅಪಾಯದಲ್ಲಿರುವ ಈ ಸಂದರ್ಭದಲ್ಲಿ ಹೆಚ್ಚುತ್ತಿರುವ ಆರ್ಥಿಕ ಕಂದರ ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಿದ್ದು, ಪರಿಸ್ಥಿತಿಯ ಸ್ಫೋಟಕತೆಯನ್ನು ಸೂಚಿಸುತ್ತದೆ. ಏಕೆಂದರೆ, ಭಾರತವೂ ಸೇರಿದಂತೆ ಹಲವಾರು ದೇಶಗಳಲ್ಲಿ ಕಂಡುಬರುತ್ತಿದ್ದು, ತೀವ್ರಗೊಳ್ಳುತ್ತಿರುವ ಸಾಮಾಜಿಕ ಅಶಾಂತಿಗೆ ಹೆಚ್ಚುತ್ತಿರುವ ಭ್ರಷ್ಟಾಚಾರ, ಸಂವಿಧಾನದ ಉಲ್ಲಂಘನೆ, ಬಲಪಂಥೀಯ ಪ್ರಭಾವ, ಫ್ಯಾಸಿಸ್ಟ್ ಶಕ್ತಿಗಳ ದಬ್ಬಾಳಿಕೆ, ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯಲ್ಲಿ ತೀವ್ರ ಹೆಚ್ಚಳ, ನಿರುದ್ಯೋಗ, ಕುಸಿಯುತ್ತಿರುವ ಆದಾಯ ಇತ್ಯಾದಿಯಾಗಿ ಹಲವಾರು ಕಾರಣಗಳಿವೆ.

ದೇಶದೇಶಗಳ ನಡುವಿನ ಆರ್ಥಿಕ ಅಸಮಾನತೆ ಕಳೆದ ಮೂರು ದಶಕಗಳಲ್ಲಿ ಕಡಿಮೆಯಾಗಿದ್ದರೂ, ದೇಶಗಳೊಳಗೆ ಜನರ ಆದಾಯದಲ್ಲಿ ಅಸಮಾನತೆ ತೀವ್ರಗೊಂಡಿದೆ. ಇದು ಮುಖ್ಯವಾಗಿ ಮುಂದುವರಿದ ಆರ್ಥಿಕತೆಗಳನ್ನೂ ತಟ್ಟಿದ್ದು, ಕೆಲವು ದೇಶಗಳಲ್ಲಿ ಐತಿಹಾಸಿಕ ಮಟ್ಟವನ್ನು ತಲುಪಿದೆ. ಇದರ ಅರ್ಥ ಶ್ರೀಮಂತರು ಹೆಚ್ಚುಹೆಚ್ಚು ಶ್ರೀಮಂತರಾಗುತ್ತಿದ್ದು, ಬಡವರು ಹೆಚ್ಚುಹೆಚ್ಚು ಬಡವರಾಗುತ್ತಿದ್ದಾರೆ.

‘ಆಕ್ಸ್‌ಫಾಮ್’ ವರದಿ ಹೇಳುವ ಪ್ರಕಾರ ಕೆಲವು ದೊಡ್ಡ ರಾಷ್ಟ್ರಗಳು- ಸಾಮಾನ್ಯ ಜನರು, ಅದರಲ್ಲೂ ಮುಖ್ಯವಾಗಿ ಮಹಿಳೆಯರ ಹಿತಾಸಕ್ತಿಯನ್ನು ಬಲಿಗೊಟ್ಟು, ಕೆಲವೇ ಅತಿ ಶ್ರೀಮಂತರು ಹೆಚ್ಚು ಹೆಚ್ಚು ಹಣ ಸಂಗ್ರಹಿಸಲು ಅವಕಾಶ ಮಾಡಿಕೊಡುವುದರ ಮೂಲಕ ಅಸಮಾನತೆಯ ಬೆಂಕಿಗೆ ತುಪ್ಪ ಸುರಿಯುತ್ತಿವೆ.

ಭಾರತದಲ್ಲಿಯೂ ಸಾಮಾನ್ಯ ಜನರು ಮತ್ತು ಮಧ್ಯಮ ಕೈಗಾರಿಕೆಗಳು ಆರ್ಥಿಕ ಬಿಕ್ಕಟ್ಟಿನ ಬಿಸಿ ಅನುಭವಿಸುತ್ತಿರುವಾಗ, ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಳ್ಳುತ್ತಿರುವಾಗ, ನಿರುದ್ಯೋಗ ದಾಖಲೆ ಪ್ರಮಾಣಕ್ಕೆ ಏರುತ್ತಿರುವಾಗ, ಆರ್ಥಿಕ ಬೆಳವಣಿಗೆ 4.3 ಶೇಕಡಾದ ಆಸುಪಾಸಿಗೆ ಕುಸಿದಿರುವಾಗ ಅದಾನಿ, ಅಂಬಾನಿಗಳ ಹಾಗೂ ಬಿಜೆಪಿಯ ಆದಾಯ ಮತ್ತು ಸಂಪತ್ತು ಗಣನೀಯವಾಗಿ ಏರಿರುವುದನ್ನು ಉದಾಹರಣೆಯಾಗಿ ನೋಡಬಹುದು.

‘ಆಕ್ಸ್‌ಫಾಮ್’ ವರದಿಯ ಪ್ರಕಾರ ಭಾರತದ ಕೇವಲ 63 ಮಂದಿ ಅತಿ ಶ್ರೀಮಂತರ ಒಟ್ಟು ಸಂಪತ್ತು 2018-19ರ ಹಣಕಾಸು ವರ್ಷದಲ್ಲಿ ಕೇಂದ್ರ ಬಜೆಟ್ ಮೊತ್ತವಾದ 24,42,200 ಕೋಟಿ ರೂ.ಗಳನ್ನು ಮೀರಿತ್ತು. ಇದರಿಂದಲೇ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲಿಗೆ ಹೆಸರು ಮಾಡುವವರು ಬಡ ಸಾಮಾನ್ಯರನ್ನ ತಲೆ ಹೊಡೆಯುತ್ತಾರೆ ಎರಡನೆಯದಾಗಿ ಪೊಲಿಟಿಕಲ್ ಪವರ್ ಬಳಸಿಕೊಳ್ಳುವ ತಂತ್ರ ಹುಡುಕಿಕೊಳ್ಳುತ್ತಾರೆ
    ಅದಾದ ನಂತರ ಅವರದೇ ಆದ ಧಾಟಿಯಲ್ಲಿ ಸಮಾಜದ ನಾಗರಿಕರ ಮೇಲೆ ಒತ್ತಡ ಭಯ ಹೆಸರು ಗಳಿಸಿಕೊಳ್ಳುತ್ತಾರೆ
    ಇವಿಷ್ಟು ಆದನಂತರ ಒಬ್ಬ ನಿಷ್ಠಾವಂತ ವ್ಯಕ್ತಿಯನ್ನು ತಲೆ ಹೊಡೆದು ನನ್ನದೇನೂ ತಪ್ಪಿಲ್ಲ ಎಂದು ಕಾನೂನಿನ ಚೌಕಟ್ಟಿನಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿರುವ ನ್ಯಾಯಾಲಯದಲ್ಲಿ ನಾನು ಅಪರಾಧಿಯಲ್ಲ ಎಂದು ಪ್ರೊ ಮಾಡಿಕೊಳ್ಳುತ್ತಾರೆ ಇದಾದ ನಂತರ ಗಣ್ಯಾತಿಗಣ್ಯರು ಅವನ ಬಲಾಡ್ಯ ತನಕ್ಕೆ ಮಣಿದು ಪೊಲಿಟಿಕಲ್ ಸ್ಕೆಳೆ ತರುತ್ತಾರೆ ಅದಾದ ನಂತರ ಯಾವುದು 1 ದೊಡ್ಡ ಇಮೇಜ್ ಬಂದಂತಾಗುತ್ತದೆ
    ನ್ಯಾಯವಾಗಿ ಸಂಪಾದನೆ ಮಾಡಬಹುದಾದ ವ್ಯಕ್ತಿಗಳಿಗೆ ಸಮಾಜದಲ್ಲಿ ಬೆಲೆ ಇಲ್ಲ
    ಲೂಟಿಕೋರರ ಸಮಾಜದಲ್ಲಿ ಸಾಮಾನ್ಯ ವ್ಯಕ್ತಿತ್ವವುಳ್ಳವರು ಬದುಕುವಂತಹ ದುರ್ದೈವ ಭಾರತ ದೇಶಕ್ಕೆ ಬಂದೊದಗಿದೆ
    ಆಳುವವರಿಗೆ ನಾನು ಮೊದಲು ಅಖಂಡ ಚಕ್ರವರ್ತಿಯಾಗಬೇಕು ಎನ್ನುವ ಆಸೆ ಅಧಿಕವಾಗಿ ತುಂಬಿಕೊಂಡಿರುತ್ತವೆ
    ಬಡವರ ಬಂಧು ದೀನದಲಿತರ ಕಣ್ಮಣಿ ದಲಿತರ ಮನೆ ಊಟ ದಲಿತರ ಏಳಿಗೆಗೆ ನಾಯಕ ನಾನು ಎಂದು ಬಿಂಬಿಸಿಕೊಳ್ಳುತ್ತಾರೆ ಇವೆಲ್ಲಾ ಹೇಳುವುದಷ್ಟೇ ಸೀಮಿತವಾಗಿರುತ್ತದೆ ಬದಲಾವಣೆ ಮಾತ್ರ ಶೂನ್ಯ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...