Homeಎಕಾನಮಿ460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ 'ಆಕ್ಸ್‌ಫಾಮ್'...

460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ ‘ಆಕ್ಸ್‌ಫಾಮ್’ ವರದಿ

ಭಾರತದ ಕೇವಲ 63 ಮಂದಿ ಅತಿ ಶ್ರೀಮಂತರ ಒಟ್ಟು ಸಂಪತ್ತು 2018-19ರ ಹಣಕಾಸು ವರ್ಷದಲ್ಲಿ ಕೇಂದ್ರ ಬಜೆಟ್ ಮೊತ್ತವಾದ 24,42,200 ಕೋಟಿ ರೂ.ಗಳನ್ನು ಮೀರಿತ್ತು. ಇದರಿಂದಲೇ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬಹುದು

- Advertisement -
- Advertisement -

ಮೂಲ: ‘ಲೈವ್‌ಮಿಂಟ್’
ನಿರೂಪಣೆ: ನಿಖಿಲ್ ಕೋಲ್ಪೆ

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯೂಇಎಫ್)ಯ 50ನೇ ವಾರ್ಷಿಕ ಸಭೆಯ ಸಂದರ್ಭದಲ್ಲಿ ಮಾನವ ಹಕ್ಕು ಸಂಸ್ಥೆ ‘ಆಕ್ಸ್‌ಫಾಮ್’ ತನ್ನ ಅಧ್ಯಯನ ವರದಿ ‘ಟೈಮ್ ಟು ಕೇರ್” ಬಿಡುಗಡೆ ಮಾಡಿದ್ದು, ಅದು, ಭಾರತ ಮತ್ತು ಜಗತ್ತಿನಾದ್ಯಂತ ಅತಿ ಶ್ರೀಮಂತರು ಹಾಗೂ ಬಡವರ ನಡುವಿನ ಕಂದರ ಆತಂಕಕಾರಿಯಾಗಿ ಬೆಳೆದಿರುವುದು ಮತ್ತು ಜಗತ್ತಿನ ಸಂಪತ್ತು ಕೆಲವೇ ಶ್ರೀಮಂತರ ಕೈಯಲ್ಲಿರುವುದನ್ನು ತೋರಿಸಿಕೊಟ್ಟಿದೆ.

ಅದರ ಪ್ರಕಾರ, ಒಂದು ಶೇಕಡಾ ಸಿರಿವಂತ ಭಾರತೀಯರ ಸಂಪತ್ತು- 70 ಶೇಕಡಾ ಬಡ ಭಾರತೀಯರ, ಅಂದರೆ 95.3 ಕೋಟಿ ಜನರ ಒಟ್ಟು ಸಂಪತ್ತಿನ ನಾಲ್ಕು ಪಟ್ಟಿನಷ್ಟಿದೆ. ಜಗತ್ತಿನ ಕೇವಲ 2,153 ಮಂದಿ ಶತಕೋಟಿಪತಿಗಳು 460 ಕೋಟಿ, ಅಂದರೆ ಈ ಭೂಮಿಯ 60 ಶೇಕಡಾ ಜನರ ಒಟ್ಟು ಸಂಪತ್ತಿಗಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ. ಕಳೆದ ದಶಕದಲ್ಲಿ ಶತಕೋಟಿಪತಿಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಕಡು ಬಡವರ ಸಂಖ್ಯೆಯೂ ಅದೇ ರೀತಿಯಲ್ಲಿ ಬೆಳೆದಿದೆ.

“ಇಂತಹಾ ದಂಗುಬಡಿಸುವ ಕಂದರವನ್ನು ಕಡಿಮೆ ಮಾಡುವುದು, ಉದ್ದೇಶಪೂರ್ವಕವಾದ ಧೋರಣೆ ಮತ್ತು ಪ್ರಯತ್ನವಿಲ್ಲದೇ ಸಾಧ್ಯವಿಲ್ಲ. ಆದರೆ, ಕೆಲವೇ ಕೆಲವು ಸರಕಾರಗಳು ಇಂತಹಾ ಪ್ರಯತ್ನಗಳಿಗೆ ಬದ್ಧತೆ ಹೊಂದಿವೆ” ಎಂದು ‘ಆಕ್ಸ್‌ಫಾಮ್’ನ ಭಾರತ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಬ್ ಬೆಹರ್ ಹೇಳುತ್ತಾರೆ.

ಆದಾಯ ಮತ್ತು ಲಿಂಗ ಅಸಮಾನತೆಯ ಸಮಸ್ಯೆಗಳು ಐದು ದಿನಗಳ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಒಳಗಾಗುವ ನಿರೀಕ್ಷೆಯಿದೆ. ಡಬ್ಲ್ಯೂಇಎಫ್‌ನ ವಾರ್ಷಿಕ ಜಾಗತಿಕ ಅಪಾಯ ಕುರಿತ ಸ್ವಂತ ವರದಿ ಕೂಡಾ 2020ರಲ್ಲಿ ಜಾಗತಿಕ ಆರ್ಥಿಕತೆಯು ಕೆಳಮುಖ ಒತ್ತಡ ಎದುರಿಸುವ ಕುರಿತು ಎಚ್ಚರಿಕೆ ನೀಡಿದೆ. 2019ರಲ್ಲಿಯೂ ಅರ್ಥಿಕ ಅಸಮಾನತೆಯ ತೀವ್ರತೆ ಮುಂದುವರಿದಿತ್ತು.

ಲ್ಯಾಟಿನ್ ಮತ್ತು ಮಧ್ಯ ಅಮೆರಿಕ ದೇಶಗಳು ಸೇರಿದಂತೆ, ಜಗತ್ತಿನ ಪ್ರತಿಯೊಂದು ಖಂಡದಲ್ಲಿ ಸಾಮಾಜಿಕ ತಲ್ಲಣಗಳು ಸಂಭವಿಸುತ್ತಿದ್ದು, ಪ್ರಜಾಪ್ರಭುತ್ವಗಳು ಅಪಾಯದಲ್ಲಿರುವ ಈ ಸಂದರ್ಭದಲ್ಲಿ ಹೆಚ್ಚುತ್ತಿರುವ ಆರ್ಥಿಕ ಕಂದರ ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಿದ್ದು, ಪರಿಸ್ಥಿತಿಯ ಸ್ಫೋಟಕತೆಯನ್ನು ಸೂಚಿಸುತ್ತದೆ. ಏಕೆಂದರೆ, ಭಾರತವೂ ಸೇರಿದಂತೆ ಹಲವಾರು ದೇಶಗಳಲ್ಲಿ ಕಂಡುಬರುತ್ತಿದ್ದು, ತೀವ್ರಗೊಳ್ಳುತ್ತಿರುವ ಸಾಮಾಜಿಕ ಅಶಾಂತಿಗೆ ಹೆಚ್ಚುತ್ತಿರುವ ಭ್ರಷ್ಟಾಚಾರ, ಸಂವಿಧಾನದ ಉಲ್ಲಂಘನೆ, ಬಲಪಂಥೀಯ ಪ್ರಭಾವ, ಫ್ಯಾಸಿಸ್ಟ್ ಶಕ್ತಿಗಳ ದಬ್ಬಾಳಿಕೆ, ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯಲ್ಲಿ ತೀವ್ರ ಹೆಚ್ಚಳ, ನಿರುದ್ಯೋಗ, ಕುಸಿಯುತ್ತಿರುವ ಆದಾಯ ಇತ್ಯಾದಿಯಾಗಿ ಹಲವಾರು ಕಾರಣಗಳಿವೆ.

ದೇಶದೇಶಗಳ ನಡುವಿನ ಆರ್ಥಿಕ ಅಸಮಾನತೆ ಕಳೆದ ಮೂರು ದಶಕಗಳಲ್ಲಿ ಕಡಿಮೆಯಾಗಿದ್ದರೂ, ದೇಶಗಳೊಳಗೆ ಜನರ ಆದಾಯದಲ್ಲಿ ಅಸಮಾನತೆ ತೀವ್ರಗೊಂಡಿದೆ. ಇದು ಮುಖ್ಯವಾಗಿ ಮುಂದುವರಿದ ಆರ್ಥಿಕತೆಗಳನ್ನೂ ತಟ್ಟಿದ್ದು, ಕೆಲವು ದೇಶಗಳಲ್ಲಿ ಐತಿಹಾಸಿಕ ಮಟ್ಟವನ್ನು ತಲುಪಿದೆ. ಇದರ ಅರ್ಥ ಶ್ರೀಮಂತರು ಹೆಚ್ಚುಹೆಚ್ಚು ಶ್ರೀಮಂತರಾಗುತ್ತಿದ್ದು, ಬಡವರು ಹೆಚ್ಚುಹೆಚ್ಚು ಬಡವರಾಗುತ್ತಿದ್ದಾರೆ.

‘ಆಕ್ಸ್‌ಫಾಮ್’ ವರದಿ ಹೇಳುವ ಪ್ರಕಾರ ಕೆಲವು ದೊಡ್ಡ ರಾಷ್ಟ್ರಗಳು- ಸಾಮಾನ್ಯ ಜನರು, ಅದರಲ್ಲೂ ಮುಖ್ಯವಾಗಿ ಮಹಿಳೆಯರ ಹಿತಾಸಕ್ತಿಯನ್ನು ಬಲಿಗೊಟ್ಟು, ಕೆಲವೇ ಅತಿ ಶ್ರೀಮಂತರು ಹೆಚ್ಚು ಹೆಚ್ಚು ಹಣ ಸಂಗ್ರಹಿಸಲು ಅವಕಾಶ ಮಾಡಿಕೊಡುವುದರ ಮೂಲಕ ಅಸಮಾನತೆಯ ಬೆಂಕಿಗೆ ತುಪ್ಪ ಸುರಿಯುತ್ತಿವೆ.

ಭಾರತದಲ್ಲಿಯೂ ಸಾಮಾನ್ಯ ಜನರು ಮತ್ತು ಮಧ್ಯಮ ಕೈಗಾರಿಕೆಗಳು ಆರ್ಥಿಕ ಬಿಕ್ಕಟ್ಟಿನ ಬಿಸಿ ಅನುಭವಿಸುತ್ತಿರುವಾಗ, ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಳ್ಳುತ್ತಿರುವಾಗ, ನಿರುದ್ಯೋಗ ದಾಖಲೆ ಪ್ರಮಾಣಕ್ಕೆ ಏರುತ್ತಿರುವಾಗ, ಆರ್ಥಿಕ ಬೆಳವಣಿಗೆ 4.3 ಶೇಕಡಾದ ಆಸುಪಾಸಿಗೆ ಕುಸಿದಿರುವಾಗ ಅದಾನಿ, ಅಂಬಾನಿಗಳ ಹಾಗೂ ಬಿಜೆಪಿಯ ಆದಾಯ ಮತ್ತು ಸಂಪತ್ತು ಗಣನೀಯವಾಗಿ ಏರಿರುವುದನ್ನು ಉದಾಹರಣೆಯಾಗಿ ನೋಡಬಹುದು.

‘ಆಕ್ಸ್‌ಫಾಮ್’ ವರದಿಯ ಪ್ರಕಾರ ಭಾರತದ ಕೇವಲ 63 ಮಂದಿ ಅತಿ ಶ್ರೀಮಂತರ ಒಟ್ಟು ಸಂಪತ್ತು 2018-19ರ ಹಣಕಾಸು ವರ್ಷದಲ್ಲಿ ಕೇಂದ್ರ ಬಜೆಟ್ ಮೊತ್ತವಾದ 24,42,200 ಕೋಟಿ ರೂ.ಗಳನ್ನು ಮೀರಿತ್ತು. ಇದರಿಂದಲೇ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲಿಗೆ ಹೆಸರು ಮಾಡುವವರು ಬಡ ಸಾಮಾನ್ಯರನ್ನ ತಲೆ ಹೊಡೆಯುತ್ತಾರೆ ಎರಡನೆಯದಾಗಿ ಪೊಲಿಟಿಕಲ್ ಪವರ್ ಬಳಸಿಕೊಳ್ಳುವ ತಂತ್ರ ಹುಡುಕಿಕೊಳ್ಳುತ್ತಾರೆ
    ಅದಾದ ನಂತರ ಅವರದೇ ಆದ ಧಾಟಿಯಲ್ಲಿ ಸಮಾಜದ ನಾಗರಿಕರ ಮೇಲೆ ಒತ್ತಡ ಭಯ ಹೆಸರು ಗಳಿಸಿಕೊಳ್ಳುತ್ತಾರೆ
    ಇವಿಷ್ಟು ಆದನಂತರ ಒಬ್ಬ ನಿಷ್ಠಾವಂತ ವ್ಯಕ್ತಿಯನ್ನು ತಲೆ ಹೊಡೆದು ನನ್ನದೇನೂ ತಪ್ಪಿಲ್ಲ ಎಂದು ಕಾನೂನಿನ ಚೌಕಟ್ಟಿನಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿರುವ ನ್ಯಾಯಾಲಯದಲ್ಲಿ ನಾನು ಅಪರಾಧಿಯಲ್ಲ ಎಂದು ಪ್ರೊ ಮಾಡಿಕೊಳ್ಳುತ್ತಾರೆ ಇದಾದ ನಂತರ ಗಣ್ಯಾತಿಗಣ್ಯರು ಅವನ ಬಲಾಡ್ಯ ತನಕ್ಕೆ ಮಣಿದು ಪೊಲಿಟಿಕಲ್ ಸ್ಕೆಳೆ ತರುತ್ತಾರೆ ಅದಾದ ನಂತರ ಯಾವುದು 1 ದೊಡ್ಡ ಇಮೇಜ್ ಬಂದಂತಾಗುತ್ತದೆ
    ನ್ಯಾಯವಾಗಿ ಸಂಪಾದನೆ ಮಾಡಬಹುದಾದ ವ್ಯಕ್ತಿಗಳಿಗೆ ಸಮಾಜದಲ್ಲಿ ಬೆಲೆ ಇಲ್ಲ
    ಲೂಟಿಕೋರರ ಸಮಾಜದಲ್ಲಿ ಸಾಮಾನ್ಯ ವ್ಯಕ್ತಿತ್ವವುಳ್ಳವರು ಬದುಕುವಂತಹ ದುರ್ದೈವ ಭಾರತ ದೇಶಕ್ಕೆ ಬಂದೊದಗಿದೆ
    ಆಳುವವರಿಗೆ ನಾನು ಮೊದಲು ಅಖಂಡ ಚಕ್ರವರ್ತಿಯಾಗಬೇಕು ಎನ್ನುವ ಆಸೆ ಅಧಿಕವಾಗಿ ತುಂಬಿಕೊಂಡಿರುತ್ತವೆ
    ಬಡವರ ಬಂಧು ದೀನದಲಿತರ ಕಣ್ಮಣಿ ದಲಿತರ ಮನೆ ಊಟ ದಲಿತರ ಏಳಿಗೆಗೆ ನಾಯಕ ನಾನು ಎಂದು ಬಿಂಬಿಸಿಕೊಳ್ಳುತ್ತಾರೆ ಇವೆಲ್ಲಾ ಹೇಳುವುದಷ್ಟೇ ಸೀಮಿತವಾಗಿರುತ್ತದೆ ಬದಲಾವಣೆ ಮಾತ್ರ ಶೂನ್ಯ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...