Homeದಲಿತ್ ಫೈಲ್ಸ್ಪೂರಣ್ ಕುಮಾರ್ ಡೆತ್‌ನೋಟ್ ಬಹಿರಂಗ; ಹಿರಿಯ ಅಧಿಕಾರಿಗಳಿಂದ ಜಾತಿ ಆಧಾರಿತ ತಾರತಮ್ಯ- ಮಾನಸಿಕ ಕಿರುಕುಳ ಆರೋಪ

ಪೂರಣ್ ಕುಮಾರ್ ಡೆತ್‌ನೋಟ್ ಬಹಿರಂಗ; ಹಿರಿಯ ಅಧಿಕಾರಿಗಳಿಂದ ಜಾತಿ ಆಧಾರಿತ ತಾರತಮ್ಯ- ಮಾನಸಿಕ ಕಿರುಕುಳ ಆರೋಪ

- Advertisement -
- Advertisement -

ಜಾತಿ ಆಧಾರಿತ ತಾರತಮ್ಯವು ತನ್ನನ್ನು ಹೇಗೆ ಆತ್ಮಹತ್ಯೆಗೆ ಪ್ರಚೋದಿಸಿತು ಎಂಬುದರ ಕುರಿತು ಉನ್ನತ ಹರಿಯಾಣದ ಪೊಲೀಸ್ ಅಧಿಕಾರಿಯ ವೈ.ಪೂರಣ್‌ ಕುಮಾರ್ ತಮ್ಮ ಎಂಟು ಪುಟಗಳ ಡೆತ್‌ನೋಟ್‌ನಲ್ಲಿ ವಿವರವಾಗಿ ಬಹಿರಂಗಪಡಿಸಿದ್ದಾರೆ.

ಮಂಗಳವಾರ ಚಂಡೀಗಢದ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ಹರಿಯಾಣದ ಪೊಲೀಸ್ ಮಹಾನಿರ್ದೇಶಕ ಮತ್ತು ಐಪಿಎಸ್ ಅಧಿಕಾರಿ ವೈ ಪುರಣ್ ಕುಮಾರ್, ಎಂಟು ಪುಟಗಳ ಡೆಎತ್‌ ನೋಟ್ ಬರೆದಿದ್ದು, 10 ಹಿರಿಯ ಮತ್ತು ನಿವೃತ್ತ ಪೊಲೀಸ್ ಅಧಿಕಾರಿಗಳ ಮೇಲೆ ‘ಸ್ಪಷ್ಟ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಮತ್ತು ದೌರ್ಜನ್ಯ’ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಅಧಿಕಾರಿಗಳಲ್ಲಿ ಹರಿಯಾಣದ ಉನ್ನತ ಪೊಲೀಸ್ ಮಹಾನಿರ್ದೇಶಕ ಶತ್ರುಜೀತ್ ಸಿಂಗ್ ಕಪೂರ್ ಮತ್ತು ರೋಹ್ಟಕ್ ಪೊಲೀಸ್ ಮುಖ್ಯಸ್ಥ ನರೇಂದ್ರ ಬಿಜಾರ್ನಿಯಾ ಸೇರಿದ್ದಾರೆ. ಪೂರಣ್‌ ಕುಮಾರ್ ಅವರ ಪತ್ನಿ ಐಎಎಸ್ ಅಧಿಕಾರಿ ಅಮ್ನೀತ್ ಪಿ ಕುಮಾರ್ ಈ ಹಿರಿಯ ಪೊಲೀಸರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ.

“ಇದು ಸಾಮಾನ್ಯ ಆತ್ಮಹತ್ಯೆ ಪ್ರಕರಣವಲ್ಲ. ಆದರೆ, ನನ್ನ ಪತಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಅಧಿಕಾರಿಯಾಗಿದ್ದಾರೆ, ಅವರ ಆತ್ಮಹತ್ಯೆಗೆ ಪ್ರಭಾವಿ ಮತ್ತು ಉನ್ನತ ಹುದ್ದೆಯ ಅಧಿಕಾರಿಗಳಿಂದ ವ್ಯವಸ್ಥಿತ ಕಿರುಕುಳದ ನೇರ ಪರಿಣಾಮವಾಗಿದೆ. ಮೇಲಧಿಕಾರಿಗಳು ತಮ್ಮ ಹುದ್ದೆಗಳನ್ನು ಬಳಸಿಕೊಂಡು ಪತಿಯನ್ನು ಮಾನಸಿಕವಾಗಿ ಹಿಂಸಿಸಿದ್ದಾರೆ, ಅಂತಿಮವಾಗಿ ಅವರಿಗೆ ತಮ್ಮ ಪ್ರಾಣ ತೆಗೆದುಕೊಳ್ಳುವುದು ಬಿಟ್ಟು ಬೇರೆ ದಾರಿಯಿಲ್ಲ” ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ 1.30 ರ ಸುಮಾರಿಗೆ, ಐಪಿಎಸ್ ಅಧಿಕಾರಿ ಕುಮಾರ್ ಅವರು ಚಂಡೀಗಢದ ತಮ್ಮ ಮನೆಯ ನೆಲಮಾಳಿಗೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 2001 ರ ಬ್ಯಾಚ್ ಅಧಿಕಾರಿ ತಮ್ಮ ಸೇವಾ ರಿವಾಲ್ವರ್ ಬಳಸಿ ನೆಲಮಾಳಿಗೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂತರ, ಕೆಲವು ಉನ್ನತ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳ ವಿರುದ್ಧ ಖಂಡನೀಯ ಆರೋಪಗಳನ್ನು ಒಳಗೊಂಡ ಎಂಟು ಪುಟಗಳ ಟಿಪ್ಪಣಿ ಕಂಡುಬಂದಿದೆ.

ಈಗ ಹರಿಯಾಣ ಸರ್ಕಾರದ ವಿದೇಶಾಂಗ ಸಹಕಾರ ಇಲಾಖೆಯ ಆಯುಕ್ತ ಮತ್ತು ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅಮ್ನೀತ್, ಘಟನೆ ನಡೆದಾಗ ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ ನೇತೃತ್ವದ ನಿಯೋಗದ ಭಾಗವಾಗಿ ಜಪಾನ್‌ನಲ್ಲಿದ್ದರು.

ಕೊನೆಯ ಬಾರಿಗೆ ತಂದೆಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ

2020 ರಲ್ಲಿ ಅಂಬಾಲಾ ಪೊಲೀಸ್ ಠಾಣೆಯಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅವರ ವಿರುದ್ಧ ‘ಜಾತಿ ಆಧಾರಿತ ತಾರತಮ್ಯ, ಸಾರ್ವಜನಿಕ ಅವಮಾನ, ಉದ್ದೇಶಿತ ಮಾನಸಿಕ ಕಿರುಕುಳ ಮತ್ತು ದೌರ್ಜನ್ಯಗಳು ಪ್ರಾರಂಭವಾದವು ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.

“ಹರಿಯಾಣದ ಆಗಿನ ಡಿಜಿಪಿ ಮನೋಜ್ ಯಾದವ ಅವರು ಪ್ರಾರಂಭಿಸಿದ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಮತ್ತು ದೌರ್ಜನ್ಯಗಳು ಇಂದಿಗೂ ನನ್ನ ವಿರುದ್ಧ ಮುಂದುವರೆದಿದೆ. ಆಗಿನ ಎಸಿಎಸ್ ಹೋಂ ಆಗಿದ್ದ ರಾಜೀವ್ ಅರೋರಾ, ಐಎಎಸ್ (ನಿವೃತ್ತ) ಅವರು ನನಗೆ ಸಮಯಕ್ಕೆ ಸರಿಯಾಗಿ ಗಳಿಕೆ ರಜೆಯನ್ನು ಸಹ ಮಂಜೂರು ಮಾಡಲಿಲ್ಲ, ಇದರಿಂದಾಗಿ ಮರಣದ ಮೊದಲು ನಾನು ಕೊನೆಯ ಬಾರಿಗೆ ನನ್ನ ತಂದೆಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ಇದು ನನಗೆ ಅಪಾರ ನೋವು ಮತ್ತು ಮಾನಸಿಕ ಕಿರುಕುಳವನ್ನುಂಟುಮಾಡುತ್ತಿದೆ; ಇಲ್ಲಿಯವರೆಗೆ ಸರಿಪಡಿಸಲಾಗದ ನಷ್ಟವಾಗಿದೆ. ಇದನ್ನು ಅಂದಿನ ಹರಿಯಾಣದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ಲಿಖಿತವಾಗಿ ತಿಳಿಸಲಾಗಿದೆ. ಆದರೆ, ಅವರು ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಪೂರಣ್‌ ಕುಮಾರ್ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಹರಿಯಾಣ ಡಿಜಿಪಿ ಶತ್ರುಜೀತ್ ಕಪೂರ್, ಐಪಿಎಸ್ ಅಧಿಕಾರಿಗಳಾದ ಅಮಿತಾಭ್ ಧಿಲ್ಲೋನ್ ಮತ್ತು ಸಂಜಯ್ ಕುಮಾರ್ ಅವರೂ ತಮ್ಮ ವಿರುದ್ಧದ ಜಾತಿ ಆಧಾರಿತ ತಾರತಮ್ಯ, ಸಾರ್ವಜನಿಕ ಅವಮಾನ ಮತ್ತು ಮಾನಸಿಕ ಕಿರುಕುಳವನ್ನು ಮುಂದುವರಿಸಿದ್ದಾರೆ. ಈ ಕಿರುಕುಳವು ನನಗೆ ಅಧಿಕೃತ ವಾಹನ ಮತ್ತು ವಸತಿ ಹಂಚಿಕೆಗೆ ಸಂಬಂಧಿಸಿದೆ ಎಂದು ಅವರು ಹೇಳಿದ್ದಾರೆ.

ತಮ್ಮ ವಿರುದ್ಧ “ಹುಸಿ ಅನಾಮಧೇಯ ದೂರುಗಳು” ಬಂದಿವೆ ಎಂದು ಪೂರಣ್‌ ಕುಮಾರ್ ಆರೋಪಿಸಿದ್ದಾರೆ. “ನನ್ನಂತಹ ಪರಿಶಿಷ್ಟ ಜಾತಿ ಅಧಿಕಾರಿಗಳ ವಿರುದ್ಧ ಗುರಿಯಾಗಿಟ್ಟುಕೊಂಡು ಪ್ರತೀಕಾರ ಮತ್ತು ಸೇಡಿನ ಮಾನಸಿಕ ಕಿರುಕುಳ, ಅವಮಾನ ಮತ್ತು ದೌರ್ಜನ್ಯಗಳನ್ನು ನಡೆಸಲಾಗುತ್ತಿದೆ… ಇದರಿಂದಾಗಿ ಇಂದು ಈ ತೀವ್ರ ನಿರ್ಧಾರ ತೆಗೆದುಕೊಳ್ಳಲು ನನ್ನನ್ನು ಒತ್ತಾಯಿಸಲಾಗಿದೆ” ಎಂದು ಅವರು ಬರೆದಿದ್ದಾರೆ.

ಡಿಜಿಪಿ ಕಪೂರ್, ನನ್ನ ಜೊತೆಗೆ ತಾತ್ಕಾಲಿಕವಾಗಿ ನೇಮಿಸಿದ್ದ ಪೊಲೀಸ್ ಅಧಿಕಾರಿಯನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ ಎಂದು ತಮಗೆ ತಿಳಿಸಲಾಗಿದೆ ಎಂದು ಐಪಿಎಸ್ ಅಧಿಕಾರಿ ಬರೆದಿದ್ದಾರೆ. ಡಿಜಿಪಿ ಕಪೂರ್ ಮತ್ತು ಇತರ ಐಪಿಎಸ್ ಅಧಿಕಾರಿಗಳು ‘ನನಗೆ ಮತ್ತು ನನ್ನ ಕುಟುಂಬಕ್ಕೆ ಹಾನಿ ಮಾಡಲು ಸಂಪೂರ್ಣವಾಗಿ ಸಜ್ಜಾಗಿರುವುದರಿಂದ’ ಪೊಲೀಸ್ ಅಧಿಕಾರಿಯೊಬ್ಬರು ‘ಜಾಗರೂಕರಾಗಿರಿ’ ಎಂದು ಎಚ್ಚರಿಸಿದ್ದಾರೆ ಎಂದು ಅವರು ಹೇಳಿದರು.

ಎಲ್ಲವನ್ನೂ ಕೊನೆಗೊಳಿಸಲು ಅಂತಿಮ ನಿರ್ಧಾರ

ಟಿಪ್ಪಣಿಯಲ್ಲಿ ಉಲ್ಲೇಖಿಸಲಾದ ಉನ್ನತ ಅಧಿಕಾರಿಗಳು ತಮ್ಮ ಕೃತ್ಯಗಳಿಂದಾಗಿ ಈ ತೀವ್ರ ಹೆಜ್ಜೆ ಇಡಲು ನನ್ನನ್ನು ಒತ್ತಾಯಿಸಲು, ಪ್ರೋತ್ಸಾಹಿಸಲು ಜವಾಬ್ದಾರರು ಎಂದು ಐಪಿಎಸ್ ಅಧಿಕಾರಿ ಹೇಳಿದ್ದಾರೆ.

“ಮಧ್ಯಂತರ ಅವಧಿಯಲ್ಲಿಯೂ ಸಹ ನಾನು ಎಚ್ಚರಿಕೆಯಿಂದ ಯೋಚಿಸಿದೆ, ಜಾತಿ ಆಧಾರಿತ ತಾರತಮ್ಯ, ಸಾರ್ವಜನಿಕ ಅವಮಾನ, ಉದ್ದೇಶಿತ ಮಾನಸಿಕ ಕಿರುಕುಳ ಮತ್ತು ದೌರ್ಜನ್ಯಗಳನ್ನು ಇನ್ನು ಮುಂದೆ ಮುಂದುವರಿಸಲು ಸಂಬಂಧಪಟ್ಟವರ ಈ ನಿರಂತರ ಮತ್ತು ಸಂಘಟಿತ ಪಿತೂರಿಯನ್ನು ನಾನು ಸಹಿಸಲಾರೆ ಎಂದು ಮನವರಿಕೆಯಾಯಿತು. ಆದ್ದರಿಂದ, ಎಲ್ಲವನ್ನೂ ಕೊನೆಗೊಳಿಸಲು ಈ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ” ಎಂದು ಅವರು ಬರೆದಿದ್ದಾರೆ.

ಅಧಿಕಾರಿಗಳಿಗೆ ವಿವಿಧ ಪ್ರಾತಿನಿಧ್ಯಗಳನ್ನು ನೀಡಿದ್ದೇನೆ, ನಾನು ನಿರೀಕ್ಷಿಸಿದ್ದು ‘ಸಮಾನ ಗೌರವ ಎಂದು ಅವರು ಬರೆದಿದ್ದಾರೆ.

ಹರಿಯಾಣ: ಮೇಲಧಿಕಾರಿಗಳಿಂದ ಜಾತಿ ಕಿರುಕುಳ ಆರೋಪ ಮಾಡಿದ್ದ ಹಿರಿಯ ಐಪಿಎಸ್‌ ಅಧಿಕಾರಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...