Homeದಲಿತ್ ಫೈಲ್ಸ್ಪೂರಣ್ ಕುಮಾರ್ ಡೆತ್‌ನೋಟ್ ಬಹಿರಂಗ; ಹಿರಿಯ ಅಧಿಕಾರಿಗಳಿಂದ ಜಾತಿ ಆಧಾರಿತ ತಾರತಮ್ಯ- ಮಾನಸಿಕ ಕಿರುಕುಳ ಆರೋಪ

ಪೂರಣ್ ಕುಮಾರ್ ಡೆತ್‌ನೋಟ್ ಬಹಿರಂಗ; ಹಿರಿಯ ಅಧಿಕಾರಿಗಳಿಂದ ಜಾತಿ ಆಧಾರಿತ ತಾರತಮ್ಯ- ಮಾನಸಿಕ ಕಿರುಕುಳ ಆರೋಪ

- Advertisement -
- Advertisement -

ಜಾತಿ ಆಧಾರಿತ ತಾರತಮ್ಯವು ತನ್ನನ್ನು ಹೇಗೆ ಆತ್ಮಹತ್ಯೆಗೆ ಪ್ರಚೋದಿಸಿತು ಎಂಬುದರ ಕುರಿತು ಉನ್ನತ ಹರಿಯಾಣದ ಪೊಲೀಸ್ ಅಧಿಕಾರಿಯ ವೈ.ಪೂರಣ್‌ ಕುಮಾರ್ ತಮ್ಮ ಎಂಟು ಪುಟಗಳ ಡೆತ್‌ನೋಟ್‌ನಲ್ಲಿ ವಿವರವಾಗಿ ಬಹಿರಂಗಪಡಿಸಿದ್ದಾರೆ.

ಮಂಗಳವಾರ ಚಂಡೀಗಢದ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ಹರಿಯಾಣದ ಪೊಲೀಸ್ ಮಹಾನಿರ್ದೇಶಕ ಮತ್ತು ಐಪಿಎಸ್ ಅಧಿಕಾರಿ ವೈ ಪುರಣ್ ಕುಮಾರ್, ಎಂಟು ಪುಟಗಳ ಡೆಎತ್‌ ನೋಟ್ ಬರೆದಿದ್ದು, 10 ಹಿರಿಯ ಮತ್ತು ನಿವೃತ್ತ ಪೊಲೀಸ್ ಅಧಿಕಾರಿಗಳ ಮೇಲೆ ‘ಸ್ಪಷ್ಟ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಮತ್ತು ದೌರ್ಜನ್ಯ’ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಅಧಿಕಾರಿಗಳಲ್ಲಿ ಹರಿಯಾಣದ ಉನ್ನತ ಪೊಲೀಸ್ ಮಹಾನಿರ್ದೇಶಕ ಶತ್ರುಜೀತ್ ಸಿಂಗ್ ಕಪೂರ್ ಮತ್ತು ರೋಹ್ಟಕ್ ಪೊಲೀಸ್ ಮುಖ್ಯಸ್ಥ ನರೇಂದ್ರ ಬಿಜಾರ್ನಿಯಾ ಸೇರಿದ್ದಾರೆ. ಪೂರಣ್‌ ಕುಮಾರ್ ಅವರ ಪತ್ನಿ ಐಎಎಸ್ ಅಧಿಕಾರಿ ಅಮ್ನೀತ್ ಪಿ ಕುಮಾರ್ ಈ ಹಿರಿಯ ಪೊಲೀಸರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ.

“ಇದು ಸಾಮಾನ್ಯ ಆತ್ಮಹತ್ಯೆ ಪ್ರಕರಣವಲ್ಲ. ಆದರೆ, ನನ್ನ ಪತಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಅಧಿಕಾರಿಯಾಗಿದ್ದಾರೆ, ಅವರ ಆತ್ಮಹತ್ಯೆಗೆ ಪ್ರಭಾವಿ ಮತ್ತು ಉನ್ನತ ಹುದ್ದೆಯ ಅಧಿಕಾರಿಗಳಿಂದ ವ್ಯವಸ್ಥಿತ ಕಿರುಕುಳದ ನೇರ ಪರಿಣಾಮವಾಗಿದೆ. ಮೇಲಧಿಕಾರಿಗಳು ತಮ್ಮ ಹುದ್ದೆಗಳನ್ನು ಬಳಸಿಕೊಂಡು ಪತಿಯನ್ನು ಮಾನಸಿಕವಾಗಿ ಹಿಂಸಿಸಿದ್ದಾರೆ, ಅಂತಿಮವಾಗಿ ಅವರಿಗೆ ತಮ್ಮ ಪ್ರಾಣ ತೆಗೆದುಕೊಳ್ಳುವುದು ಬಿಟ್ಟು ಬೇರೆ ದಾರಿಯಿಲ್ಲ” ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ 1.30 ರ ಸುಮಾರಿಗೆ, ಐಪಿಎಸ್ ಅಧಿಕಾರಿ ಕುಮಾರ್ ಅವರು ಚಂಡೀಗಢದ ತಮ್ಮ ಮನೆಯ ನೆಲಮಾಳಿಗೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 2001 ರ ಬ್ಯಾಚ್ ಅಧಿಕಾರಿ ತಮ್ಮ ಸೇವಾ ರಿವಾಲ್ವರ್ ಬಳಸಿ ನೆಲಮಾಳಿಗೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂತರ, ಕೆಲವು ಉನ್ನತ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳ ವಿರುದ್ಧ ಖಂಡನೀಯ ಆರೋಪಗಳನ್ನು ಒಳಗೊಂಡ ಎಂಟು ಪುಟಗಳ ಟಿಪ್ಪಣಿ ಕಂಡುಬಂದಿದೆ.

ಈಗ ಹರಿಯಾಣ ಸರ್ಕಾರದ ವಿದೇಶಾಂಗ ಸಹಕಾರ ಇಲಾಖೆಯ ಆಯುಕ್ತ ಮತ್ತು ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅಮ್ನೀತ್, ಘಟನೆ ನಡೆದಾಗ ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ ನೇತೃತ್ವದ ನಿಯೋಗದ ಭಾಗವಾಗಿ ಜಪಾನ್‌ನಲ್ಲಿದ್ದರು.

ಕೊನೆಯ ಬಾರಿಗೆ ತಂದೆಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ

2020 ರಲ್ಲಿ ಅಂಬಾಲಾ ಪೊಲೀಸ್ ಠಾಣೆಯಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅವರ ವಿರುದ್ಧ ‘ಜಾತಿ ಆಧಾರಿತ ತಾರತಮ್ಯ, ಸಾರ್ವಜನಿಕ ಅವಮಾನ, ಉದ್ದೇಶಿತ ಮಾನಸಿಕ ಕಿರುಕುಳ ಮತ್ತು ದೌರ್ಜನ್ಯಗಳು ಪ್ರಾರಂಭವಾದವು ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.

“ಹರಿಯಾಣದ ಆಗಿನ ಡಿಜಿಪಿ ಮನೋಜ್ ಯಾದವ ಅವರು ಪ್ರಾರಂಭಿಸಿದ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಮತ್ತು ದೌರ್ಜನ್ಯಗಳು ಇಂದಿಗೂ ನನ್ನ ವಿರುದ್ಧ ಮುಂದುವರೆದಿದೆ. ಆಗಿನ ಎಸಿಎಸ್ ಹೋಂ ಆಗಿದ್ದ ರಾಜೀವ್ ಅರೋರಾ, ಐಎಎಸ್ (ನಿವೃತ್ತ) ಅವರು ನನಗೆ ಸಮಯಕ್ಕೆ ಸರಿಯಾಗಿ ಗಳಿಕೆ ರಜೆಯನ್ನು ಸಹ ಮಂಜೂರು ಮಾಡಲಿಲ್ಲ, ಇದರಿಂದಾಗಿ ಮರಣದ ಮೊದಲು ನಾನು ಕೊನೆಯ ಬಾರಿಗೆ ನನ್ನ ತಂದೆಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ಇದು ನನಗೆ ಅಪಾರ ನೋವು ಮತ್ತು ಮಾನಸಿಕ ಕಿರುಕುಳವನ್ನುಂಟುಮಾಡುತ್ತಿದೆ; ಇಲ್ಲಿಯವರೆಗೆ ಸರಿಪಡಿಸಲಾಗದ ನಷ್ಟವಾಗಿದೆ. ಇದನ್ನು ಅಂದಿನ ಹರಿಯಾಣದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ಲಿಖಿತವಾಗಿ ತಿಳಿಸಲಾಗಿದೆ. ಆದರೆ, ಅವರು ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಪೂರಣ್‌ ಕುಮಾರ್ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಹರಿಯಾಣ ಡಿಜಿಪಿ ಶತ್ರುಜೀತ್ ಕಪೂರ್, ಐಪಿಎಸ್ ಅಧಿಕಾರಿಗಳಾದ ಅಮಿತಾಭ್ ಧಿಲ್ಲೋನ್ ಮತ್ತು ಸಂಜಯ್ ಕುಮಾರ್ ಅವರೂ ತಮ್ಮ ವಿರುದ್ಧದ ಜಾತಿ ಆಧಾರಿತ ತಾರತಮ್ಯ, ಸಾರ್ವಜನಿಕ ಅವಮಾನ ಮತ್ತು ಮಾನಸಿಕ ಕಿರುಕುಳವನ್ನು ಮುಂದುವರಿಸಿದ್ದಾರೆ. ಈ ಕಿರುಕುಳವು ನನಗೆ ಅಧಿಕೃತ ವಾಹನ ಮತ್ತು ವಸತಿ ಹಂಚಿಕೆಗೆ ಸಂಬಂಧಿಸಿದೆ ಎಂದು ಅವರು ಹೇಳಿದ್ದಾರೆ.

ತಮ್ಮ ವಿರುದ್ಧ “ಹುಸಿ ಅನಾಮಧೇಯ ದೂರುಗಳು” ಬಂದಿವೆ ಎಂದು ಪೂರಣ್‌ ಕುಮಾರ್ ಆರೋಪಿಸಿದ್ದಾರೆ. “ನನ್ನಂತಹ ಪರಿಶಿಷ್ಟ ಜಾತಿ ಅಧಿಕಾರಿಗಳ ವಿರುದ್ಧ ಗುರಿಯಾಗಿಟ್ಟುಕೊಂಡು ಪ್ರತೀಕಾರ ಮತ್ತು ಸೇಡಿನ ಮಾನಸಿಕ ಕಿರುಕುಳ, ಅವಮಾನ ಮತ್ತು ದೌರ್ಜನ್ಯಗಳನ್ನು ನಡೆಸಲಾಗುತ್ತಿದೆ… ಇದರಿಂದಾಗಿ ಇಂದು ಈ ತೀವ್ರ ನಿರ್ಧಾರ ತೆಗೆದುಕೊಳ್ಳಲು ನನ್ನನ್ನು ಒತ್ತಾಯಿಸಲಾಗಿದೆ” ಎಂದು ಅವರು ಬರೆದಿದ್ದಾರೆ.

ಡಿಜಿಪಿ ಕಪೂರ್, ನನ್ನ ಜೊತೆಗೆ ತಾತ್ಕಾಲಿಕವಾಗಿ ನೇಮಿಸಿದ್ದ ಪೊಲೀಸ್ ಅಧಿಕಾರಿಯನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ ಎಂದು ತಮಗೆ ತಿಳಿಸಲಾಗಿದೆ ಎಂದು ಐಪಿಎಸ್ ಅಧಿಕಾರಿ ಬರೆದಿದ್ದಾರೆ. ಡಿಜಿಪಿ ಕಪೂರ್ ಮತ್ತು ಇತರ ಐಪಿಎಸ್ ಅಧಿಕಾರಿಗಳು ‘ನನಗೆ ಮತ್ತು ನನ್ನ ಕುಟುಂಬಕ್ಕೆ ಹಾನಿ ಮಾಡಲು ಸಂಪೂರ್ಣವಾಗಿ ಸಜ್ಜಾಗಿರುವುದರಿಂದ’ ಪೊಲೀಸ್ ಅಧಿಕಾರಿಯೊಬ್ಬರು ‘ಜಾಗರೂಕರಾಗಿರಿ’ ಎಂದು ಎಚ್ಚರಿಸಿದ್ದಾರೆ ಎಂದು ಅವರು ಹೇಳಿದರು.

ಎಲ್ಲವನ್ನೂ ಕೊನೆಗೊಳಿಸಲು ಅಂತಿಮ ನಿರ್ಧಾರ

ಟಿಪ್ಪಣಿಯಲ್ಲಿ ಉಲ್ಲೇಖಿಸಲಾದ ಉನ್ನತ ಅಧಿಕಾರಿಗಳು ತಮ್ಮ ಕೃತ್ಯಗಳಿಂದಾಗಿ ಈ ತೀವ್ರ ಹೆಜ್ಜೆ ಇಡಲು ನನ್ನನ್ನು ಒತ್ತಾಯಿಸಲು, ಪ್ರೋತ್ಸಾಹಿಸಲು ಜವಾಬ್ದಾರರು ಎಂದು ಐಪಿಎಸ್ ಅಧಿಕಾರಿ ಹೇಳಿದ್ದಾರೆ.

“ಮಧ್ಯಂತರ ಅವಧಿಯಲ್ಲಿಯೂ ಸಹ ನಾನು ಎಚ್ಚರಿಕೆಯಿಂದ ಯೋಚಿಸಿದೆ, ಜಾತಿ ಆಧಾರಿತ ತಾರತಮ್ಯ, ಸಾರ್ವಜನಿಕ ಅವಮಾನ, ಉದ್ದೇಶಿತ ಮಾನಸಿಕ ಕಿರುಕುಳ ಮತ್ತು ದೌರ್ಜನ್ಯಗಳನ್ನು ಇನ್ನು ಮುಂದೆ ಮುಂದುವರಿಸಲು ಸಂಬಂಧಪಟ್ಟವರ ಈ ನಿರಂತರ ಮತ್ತು ಸಂಘಟಿತ ಪಿತೂರಿಯನ್ನು ನಾನು ಸಹಿಸಲಾರೆ ಎಂದು ಮನವರಿಕೆಯಾಯಿತು. ಆದ್ದರಿಂದ, ಎಲ್ಲವನ್ನೂ ಕೊನೆಗೊಳಿಸಲು ಈ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ” ಎಂದು ಅವರು ಬರೆದಿದ್ದಾರೆ.

ಅಧಿಕಾರಿಗಳಿಗೆ ವಿವಿಧ ಪ್ರಾತಿನಿಧ್ಯಗಳನ್ನು ನೀಡಿದ್ದೇನೆ, ನಾನು ನಿರೀಕ್ಷಿಸಿದ್ದು ‘ಸಮಾನ ಗೌರವ ಎಂದು ಅವರು ಬರೆದಿದ್ದಾರೆ.

ಹರಿಯಾಣ: ಮೇಲಧಿಕಾರಿಗಳಿಂದ ಜಾತಿ ಕಿರುಕುಳ ಆರೋಪ ಮಾಡಿದ್ದ ಹಿರಿಯ ಐಪಿಎಸ್‌ ಅಧಿಕಾರಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...