Homeಅಂತರಾಷ್ಟ್ರೀಯಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

- Advertisement -
- Advertisement -

ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಇರಾನ್‌ನೊಂದಿಗಿನ ಇಸ್ರೇಲ್‌ನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದರೂ, ಗಾಝಾದಲ್ಲಿ ಪ್ರತಿದಿನ ಇಸ್ರೇಲಿ ದಾಳಿಗಳಿಂದ ನೂರಾರು ಜನರು ಹತ್ಯೆಯಾಗುತ್ತಿದ್ದು ಮತ್ತು ಗಾಯಗೊಳ್ಳುತ್ತಿದ್ದಾರೆ. ಈ ನಡುವೆ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪರಮೋಚ್ಚ ನಾಯಕ ಪೋಪ್ ಲಿಯೋ, “ಗಾಜಾದಲ್ಲಿನ ನೋವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು” ಎಂದು ಜನತೆಗೆ ಕರೆ ನೀಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

“ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ಅನ್ನು ಒಳಗೊಂಡಿರುವ ಈ ನಾಟಕೀಯ ಸನ್ನಿವೇಶದಲ್ಲಿ, ವಿಶೇಷವಾಗಿ ಗಾಝಾ ಮತ್ತು ಇತರ ಪ್ರದೇಶಗಳಲ್ಲಿ ಜನರ ದೈನಂದಿನ ನೋವನ್ನು ಮರೆತುಬಿಡುವ ಅಪಾಯವಿದೆ. ಅಲ್ಲಿ ಸಾಕಷ್ಟು ಮಾನವೀಯ ಬೆಂಬಲದ ಅಗತ್ಯದ ತುರ್ತಿದೆ” ಎಂದು ಪೋಪ್ ಲಿಯೋ ಪವಿತ್ರ ಯಾತ್ರೆಗೆ ಬಂದವರೊಂದಿಗೆ ವಾರದ ಪ್ರಾರ್ಥನೆಯಲ್ಲಿ ಹೇಳಿದ್ದಾರೆ.

ರಾಜತಾಂತ್ರಿಕತೆಯು ಶಸ್ತ್ರಾಸ್ತ್ರಗಳನ್ನು ಮೌನಗೊಳಿಸಲಿ, ರಾಷ್ಟ್ರಗಳು ತಮ್ಮ ಭವಿಷ್ಯವನ್ನು ಹಿಂಸೆ ಮತ್ತು ರಕ್ತಸಿಕ್ತ ಸಂಘರ್ಷಗಳೊಂದಿಗೆ ರೂಪಿಸುವುದರ ಬದಲಾಗಿ, ಶಾಂತಿ ಪ್ರಯತ್ನಗಳೊಂದಿಗೆ ರೂಪಿಸಲಿ ಎಂದು ಲಿಯೋ ಹೇಳಿದ್ದಾರೆ. “ಯುದ್ಧದ ದುರಂತವು ಸರಿಪಡಿಸಲಾಗದ ಪ್ರಪಾತವಾಗುವ ಮೊದಲು ಅದನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಪ್ರತಿಯೊಬ್ಬ ಸದಸ್ಯರಿಗೂ ನೈತಿಕ ಜವಾಬ್ದಾರಿ ಇದೆ” ಎಂದು ಅವರು ಹೇಳಿದ್ದಾರೆ.

ಇರಾನ್ ಜೊತೆ ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿದ್ದರೂ, ಇಸ್ರೇಲ್ ಸೇನೆಯು ಗಾಝಾ ಮೇಲೆ ಮಾರಕ ದಾಳಿಗಳನ್ನು ಮುಂದುವರೆಸಿದೆ. ಕಳೆದ 24 ಗಂಟೆಗಳ ವರದಿ ಅವಧಿಯಲ್ಲಿ ಗಾಝಾದಲ್ಲಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 104 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ದಕ್ಷಿಣ ಖಾನ್ ಯೂನಿಸ್, ಮಧ್ಯ ಗಾಝಾ ಮತ್ತು ಉತ್ತರ ಗಾಝಾ ನಗರದಲ್ಲಿ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಲ್‌ ಜಝೀರಾ ಹೇಳಿದೆ. “ಇರಾನ್ ಜೊತೆಗಿನ ಹೆಚ್ಚುತ್ತಿರುವ ಘರ್ಷಣೆಯಿಂದ ಸೃಷ್ಟಿಯಾದ ಗೊಂದಲದ ಲಾಭವನ್ನು ಪಡೆದುಕೊಂಡು ಇಸ್ರೇಲ್ ಸೇನೆಯು [ಗಾಜಾದಲ್ಲಿ] ಹೆಚ್ಚು ಮಾರಕ ದಾಳಿಗಳನ್ನು ಮುಂದುವರಿಸುತ್ತಿದೆ” ಎಂದು ವರದಿ ಹೇಳಿದೆ.

ಗಾಝಾದಲ್ಲಿ ಇಸ್ರೇಲಿ ದಾಳಿಗಳು ತೀವ್ರಗೊಂಡಿದ್ದು, ದಕ್ಷಿಣ ಗಾಝಾದ ರಫಾ ಬಳಿ ಇಸ್ರೇಲಿ ಸೇನೆಯು ವೈಮಾನಿಕ ದಾಳಿಗಳನ್ನು ನಡೆಸಿದ್ದು, ಕನಿಷ್ಠ 11 ಫೆಲಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಗಾಝಾದ ಜಬಲಿಯಾ ನಿರಾಶ್ರಿತರ ಶಿಬಿರದಲ್ಲಿ ಸಹ ದಾಳಿಗಳು ನಡೆದಿದ್ದು, ಆದರೆ ನಿರ್ದಿಷ್ಟ ಸಾವು-ನೋವಿನ ವಿವರಗಳು ಸ್ಪಷ್ಟವಾಗಿ ದಾಖಲಾಗಿಲ್ಲ.

ಇಸ್ರೇಲಿ ಸೇನೆಯು ಗಾಝಾದ ವಿವಿಧ ಭಾಗಗಳಲ್ಲಿ “ಹಮಾಸ್‌ನ ಗುರಿಗಳನ್ನು” ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದೆ ಎಂದು ಹೇಳಿದೆ, ಆದರೆ ಈ ದಾಳಿಗಳಿಂದ ಸಾಮಾನ್ಯ ನಾಗರಿಕರಿಗೆ ತೀವ್ರ ಹಾನಿಯಾಗುತ್ತಿದೆ ಎಂದು ಫೆಲಸ್ತೀನಿಯ ಮೂಲಗಳು ಆರೋಪಿಸಿವೆ. ಇಂಟರ್ನೆಟ್ ಮತ್ತು ಸಂವಹನ ಸಂಪರ್ಕ ಕಡಿತಗೊಂಡಿರುವುದರಿಂದ ಗಾಝಾದಿಂದ ನಿಖರ ಮಾಹಿತಿ ಬರುವುದು ಕಷ್ಟವಾಗಿದೆ ಎಂದು ವರದಿ ಉಲ್ಲೇಖಿಸಿವೆ.

ಅಕ್ಟೋಬರ್ 2023 ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕನಿಷ್ಠ 55,959 ಕ್ಕೆ ಏರಿಕೆಯಾಗಿದ್ದು, 131,242 ಜನರು ಗಾಯಗೊಂಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...