Homeಅಂತರಾಷ್ಟ್ರೀಯಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

- Advertisement -
- Advertisement -

ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಇರಾನ್‌ನೊಂದಿಗಿನ ಇಸ್ರೇಲ್‌ನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದರೂ, ಗಾಝಾದಲ್ಲಿ ಪ್ರತಿದಿನ ಇಸ್ರೇಲಿ ದಾಳಿಗಳಿಂದ ನೂರಾರು ಜನರು ಹತ್ಯೆಯಾಗುತ್ತಿದ್ದು ಮತ್ತು ಗಾಯಗೊಳ್ಳುತ್ತಿದ್ದಾರೆ. ಈ ನಡುವೆ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪರಮೋಚ್ಚ ನಾಯಕ ಪೋಪ್ ಲಿಯೋ, “ಗಾಜಾದಲ್ಲಿನ ನೋವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು” ಎಂದು ಜನತೆಗೆ ಕರೆ ನೀಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

“ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ಅನ್ನು ಒಳಗೊಂಡಿರುವ ಈ ನಾಟಕೀಯ ಸನ್ನಿವೇಶದಲ್ಲಿ, ವಿಶೇಷವಾಗಿ ಗಾಝಾ ಮತ್ತು ಇತರ ಪ್ರದೇಶಗಳಲ್ಲಿ ಜನರ ದೈನಂದಿನ ನೋವನ್ನು ಮರೆತುಬಿಡುವ ಅಪಾಯವಿದೆ. ಅಲ್ಲಿ ಸಾಕಷ್ಟು ಮಾನವೀಯ ಬೆಂಬಲದ ಅಗತ್ಯದ ತುರ್ತಿದೆ” ಎಂದು ಪೋಪ್ ಲಿಯೋ ಪವಿತ್ರ ಯಾತ್ರೆಗೆ ಬಂದವರೊಂದಿಗೆ ವಾರದ ಪ್ರಾರ್ಥನೆಯಲ್ಲಿ ಹೇಳಿದ್ದಾರೆ.

ರಾಜತಾಂತ್ರಿಕತೆಯು ಶಸ್ತ್ರಾಸ್ತ್ರಗಳನ್ನು ಮೌನಗೊಳಿಸಲಿ, ರಾಷ್ಟ್ರಗಳು ತಮ್ಮ ಭವಿಷ್ಯವನ್ನು ಹಿಂಸೆ ಮತ್ತು ರಕ್ತಸಿಕ್ತ ಸಂಘರ್ಷಗಳೊಂದಿಗೆ ರೂಪಿಸುವುದರ ಬದಲಾಗಿ, ಶಾಂತಿ ಪ್ರಯತ್ನಗಳೊಂದಿಗೆ ರೂಪಿಸಲಿ ಎಂದು ಲಿಯೋ ಹೇಳಿದ್ದಾರೆ. “ಯುದ್ಧದ ದುರಂತವು ಸರಿಪಡಿಸಲಾಗದ ಪ್ರಪಾತವಾಗುವ ಮೊದಲು ಅದನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಪ್ರತಿಯೊಬ್ಬ ಸದಸ್ಯರಿಗೂ ನೈತಿಕ ಜವಾಬ್ದಾರಿ ಇದೆ” ಎಂದು ಅವರು ಹೇಳಿದ್ದಾರೆ.

ಇರಾನ್ ಜೊತೆ ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿದ್ದರೂ, ಇಸ್ರೇಲ್ ಸೇನೆಯು ಗಾಝಾ ಮೇಲೆ ಮಾರಕ ದಾಳಿಗಳನ್ನು ಮುಂದುವರೆಸಿದೆ. ಕಳೆದ 24 ಗಂಟೆಗಳ ವರದಿ ಅವಧಿಯಲ್ಲಿ ಗಾಝಾದಲ್ಲಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 104 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ದಕ್ಷಿಣ ಖಾನ್ ಯೂನಿಸ್, ಮಧ್ಯ ಗಾಝಾ ಮತ್ತು ಉತ್ತರ ಗಾಝಾ ನಗರದಲ್ಲಿ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಲ್‌ ಜಝೀರಾ ಹೇಳಿದೆ. “ಇರಾನ್ ಜೊತೆಗಿನ ಹೆಚ್ಚುತ್ತಿರುವ ಘರ್ಷಣೆಯಿಂದ ಸೃಷ್ಟಿಯಾದ ಗೊಂದಲದ ಲಾಭವನ್ನು ಪಡೆದುಕೊಂಡು ಇಸ್ರೇಲ್ ಸೇನೆಯು [ಗಾಜಾದಲ್ಲಿ] ಹೆಚ್ಚು ಮಾರಕ ದಾಳಿಗಳನ್ನು ಮುಂದುವರಿಸುತ್ತಿದೆ” ಎಂದು ವರದಿ ಹೇಳಿದೆ.

ಗಾಝಾದಲ್ಲಿ ಇಸ್ರೇಲಿ ದಾಳಿಗಳು ತೀವ್ರಗೊಂಡಿದ್ದು, ದಕ್ಷಿಣ ಗಾಝಾದ ರಫಾ ಬಳಿ ಇಸ್ರೇಲಿ ಸೇನೆಯು ವೈಮಾನಿಕ ದಾಳಿಗಳನ್ನು ನಡೆಸಿದ್ದು, ಕನಿಷ್ಠ 11 ಫೆಲಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಗಾಝಾದ ಜಬಲಿಯಾ ನಿರಾಶ್ರಿತರ ಶಿಬಿರದಲ್ಲಿ ಸಹ ದಾಳಿಗಳು ನಡೆದಿದ್ದು, ಆದರೆ ನಿರ್ದಿಷ್ಟ ಸಾವು-ನೋವಿನ ವಿವರಗಳು ಸ್ಪಷ್ಟವಾಗಿ ದಾಖಲಾಗಿಲ್ಲ.

ಇಸ್ರೇಲಿ ಸೇನೆಯು ಗಾಝಾದ ವಿವಿಧ ಭಾಗಗಳಲ್ಲಿ “ಹಮಾಸ್‌ನ ಗುರಿಗಳನ್ನು” ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದೆ ಎಂದು ಹೇಳಿದೆ, ಆದರೆ ಈ ದಾಳಿಗಳಿಂದ ಸಾಮಾನ್ಯ ನಾಗರಿಕರಿಗೆ ತೀವ್ರ ಹಾನಿಯಾಗುತ್ತಿದೆ ಎಂದು ಫೆಲಸ್ತೀನಿಯ ಮೂಲಗಳು ಆರೋಪಿಸಿವೆ. ಇಂಟರ್ನೆಟ್ ಮತ್ತು ಸಂವಹನ ಸಂಪರ್ಕ ಕಡಿತಗೊಂಡಿರುವುದರಿಂದ ಗಾಝಾದಿಂದ ನಿಖರ ಮಾಹಿತಿ ಬರುವುದು ಕಷ್ಟವಾಗಿದೆ ಎಂದು ವರದಿ ಉಲ್ಲೇಖಿಸಿವೆ.

ಅಕ್ಟೋಬರ್ 2023 ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕನಿಷ್ಠ 55,959 ಕ್ಕೆ ಏರಿಕೆಯಾಗಿದ್ದು, 131,242 ಜನರು ಗಾಯಗೊಂಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...