Homeಅಂತರಾಷ್ಟ್ರೀಯಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

- Advertisement -
- Advertisement -

ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಇರಾನ್‌ನೊಂದಿಗಿನ ಇಸ್ರೇಲ್‌ನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದರೂ, ಗಾಝಾದಲ್ಲಿ ಪ್ರತಿದಿನ ಇಸ್ರೇಲಿ ದಾಳಿಗಳಿಂದ ನೂರಾರು ಜನರು ಹತ್ಯೆಯಾಗುತ್ತಿದ್ದು ಮತ್ತು ಗಾಯಗೊಳ್ಳುತ್ತಿದ್ದಾರೆ. ಈ ನಡುವೆ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪರಮೋಚ್ಚ ನಾಯಕ ಪೋಪ್ ಲಿಯೋ, “ಗಾಜಾದಲ್ಲಿನ ನೋವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು” ಎಂದು ಜನತೆಗೆ ಕರೆ ನೀಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

“ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ಅನ್ನು ಒಳಗೊಂಡಿರುವ ಈ ನಾಟಕೀಯ ಸನ್ನಿವೇಶದಲ್ಲಿ, ವಿಶೇಷವಾಗಿ ಗಾಝಾ ಮತ್ತು ಇತರ ಪ್ರದೇಶಗಳಲ್ಲಿ ಜನರ ದೈನಂದಿನ ನೋವನ್ನು ಮರೆತುಬಿಡುವ ಅಪಾಯವಿದೆ. ಅಲ್ಲಿ ಸಾಕಷ್ಟು ಮಾನವೀಯ ಬೆಂಬಲದ ಅಗತ್ಯದ ತುರ್ತಿದೆ” ಎಂದು ಪೋಪ್ ಲಿಯೋ ಪವಿತ್ರ ಯಾತ್ರೆಗೆ ಬಂದವರೊಂದಿಗೆ ವಾರದ ಪ್ರಾರ್ಥನೆಯಲ್ಲಿ ಹೇಳಿದ್ದಾರೆ.

ರಾಜತಾಂತ್ರಿಕತೆಯು ಶಸ್ತ್ರಾಸ್ತ್ರಗಳನ್ನು ಮೌನಗೊಳಿಸಲಿ, ರಾಷ್ಟ್ರಗಳು ತಮ್ಮ ಭವಿಷ್ಯವನ್ನು ಹಿಂಸೆ ಮತ್ತು ರಕ್ತಸಿಕ್ತ ಸಂಘರ್ಷಗಳೊಂದಿಗೆ ರೂಪಿಸುವುದರ ಬದಲಾಗಿ, ಶಾಂತಿ ಪ್ರಯತ್ನಗಳೊಂದಿಗೆ ರೂಪಿಸಲಿ ಎಂದು ಲಿಯೋ ಹೇಳಿದ್ದಾರೆ. “ಯುದ್ಧದ ದುರಂತವು ಸರಿಪಡಿಸಲಾಗದ ಪ್ರಪಾತವಾಗುವ ಮೊದಲು ಅದನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಪ್ರತಿಯೊಬ್ಬ ಸದಸ್ಯರಿಗೂ ನೈತಿಕ ಜವಾಬ್ದಾರಿ ಇದೆ” ಎಂದು ಅವರು ಹೇಳಿದ್ದಾರೆ.

ಇರಾನ್ ಜೊತೆ ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿದ್ದರೂ, ಇಸ್ರೇಲ್ ಸೇನೆಯು ಗಾಝಾ ಮೇಲೆ ಮಾರಕ ದಾಳಿಗಳನ್ನು ಮುಂದುವರೆಸಿದೆ. ಕಳೆದ 24 ಗಂಟೆಗಳ ವರದಿ ಅವಧಿಯಲ್ಲಿ ಗಾಝಾದಲ್ಲಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 104 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ದಕ್ಷಿಣ ಖಾನ್ ಯೂನಿಸ್, ಮಧ್ಯ ಗಾಝಾ ಮತ್ತು ಉತ್ತರ ಗಾಝಾ ನಗರದಲ್ಲಿ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಲ್‌ ಜಝೀರಾ ಹೇಳಿದೆ. “ಇರಾನ್ ಜೊತೆಗಿನ ಹೆಚ್ಚುತ್ತಿರುವ ಘರ್ಷಣೆಯಿಂದ ಸೃಷ್ಟಿಯಾದ ಗೊಂದಲದ ಲಾಭವನ್ನು ಪಡೆದುಕೊಂಡು ಇಸ್ರೇಲ್ ಸೇನೆಯು [ಗಾಜಾದಲ್ಲಿ] ಹೆಚ್ಚು ಮಾರಕ ದಾಳಿಗಳನ್ನು ಮುಂದುವರಿಸುತ್ತಿದೆ” ಎಂದು ವರದಿ ಹೇಳಿದೆ.

ಗಾಝಾದಲ್ಲಿ ಇಸ್ರೇಲಿ ದಾಳಿಗಳು ತೀವ್ರಗೊಂಡಿದ್ದು, ದಕ್ಷಿಣ ಗಾಝಾದ ರಫಾ ಬಳಿ ಇಸ್ರೇಲಿ ಸೇನೆಯು ವೈಮಾನಿಕ ದಾಳಿಗಳನ್ನು ನಡೆಸಿದ್ದು, ಕನಿಷ್ಠ 11 ಫೆಲಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಗಾಝಾದ ಜಬಲಿಯಾ ನಿರಾಶ್ರಿತರ ಶಿಬಿರದಲ್ಲಿ ಸಹ ದಾಳಿಗಳು ನಡೆದಿದ್ದು, ಆದರೆ ನಿರ್ದಿಷ್ಟ ಸಾವು-ನೋವಿನ ವಿವರಗಳು ಸ್ಪಷ್ಟವಾಗಿ ದಾಖಲಾಗಿಲ್ಲ.

ಇಸ್ರೇಲಿ ಸೇನೆಯು ಗಾಝಾದ ವಿವಿಧ ಭಾಗಗಳಲ್ಲಿ “ಹಮಾಸ್‌ನ ಗುರಿಗಳನ್ನು” ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದೆ ಎಂದು ಹೇಳಿದೆ, ಆದರೆ ಈ ದಾಳಿಗಳಿಂದ ಸಾಮಾನ್ಯ ನಾಗರಿಕರಿಗೆ ತೀವ್ರ ಹಾನಿಯಾಗುತ್ತಿದೆ ಎಂದು ಫೆಲಸ್ತೀನಿಯ ಮೂಲಗಳು ಆರೋಪಿಸಿವೆ. ಇಂಟರ್ನೆಟ್ ಮತ್ತು ಸಂವಹನ ಸಂಪರ್ಕ ಕಡಿತಗೊಂಡಿರುವುದರಿಂದ ಗಾಝಾದಿಂದ ನಿಖರ ಮಾಹಿತಿ ಬರುವುದು ಕಷ್ಟವಾಗಿದೆ ಎಂದು ವರದಿ ಉಲ್ಲೇಖಿಸಿವೆ.

ಅಕ್ಟೋಬರ್ 2023 ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕನಿಷ್ಠ 55,959 ಕ್ಕೆ ಏರಿಕೆಯಾಗಿದ್ದು, 131,242 ಜನರು ಗಾಯಗೊಂಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರೀನ್ ಕೇವ್ ನಿಂದ ಪ್ರವಾಸಿಗರನ್ನು ದೂರವಿಡಿ: ಛತ್ತೀಸ್‌ಗಢ ಸರ್ಕಾರಕ್ಕೆ ಪರಿಸರವಾದಿಗಳ ಎಚ್ಚರಿಕೆ

ರಾಯ್‌ಪುರ: ಒಂದು ಕಾಲದಲ್ಲಿ ಮಾವೋವಾದಿ ಪೀಡಿತ ಬಸ್ತಾರ್ ಜಿಲ್ಲೆಯ ಕಾಂಗರ್ ಕಣಿವೆ ರಾಷ್ಟ್ರೀಯ ಉದ್ಯಾನವನದಲ್ಲಿರುವ ಅಪರೂಪದ ಮತ್ತು ಪರಿಸರ ಸೂಕ್ಷ್ಮ 'ಹಸಿರು ಗುಹೆ'ಯನ್ನು ಪ್ರವಾಸಿಗರಿಗೆ ತೆರೆಯಲು ಛತ್ತೀಸ್‌ಗಢ ಸರ್ಕಾರ ನಿರ್ಧರಿಸಿದ್ದು, ಈ ಕ್ರಮಕ್ಕೆ...

ಅಹಮದಾಬಾದ್: ಅಮೃತಸರದಿಂದ ಮುಂಬೈಗೆ ಚಲಿಸುತ್ತಿದ್ದ ರೈಲಿನಲ್ಲಿ ಭಾರೀ ಮೌಲ್ಯದ ಕೊಕೇನ್ ಜಾಲ ಪತ್ತೆ

ಅಹಮದಾಬಾದ್: ಅಮೃತಸರ-ಮುಂಬೈ ಗೋಲ್ಡನ್ ಟೆಂಪಲ್ ಮೇಲ್ ರೈಲಿನ ಮೇಲೆ ತಡರಾತ್ರಿ ನಡೆದ ದಾಳಿಯಲ್ಲಿ ಮಿಜೋರಾಂ ಯುವಕನೊಬ್ಬ 2.19 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಕೊಕೇನ್ ಮತ್ತು ಮೆಥಾಂಫೆಟಮೈನ್‌ನೊಂದಿಗೆ ಸಿಕ್ಕಿಬಿದ್ದ ನಂತರ ಬಹು ನಗರ,...

ನಿಲುವು ಬದಲಿಸಿದ ಸಿಪಿಐ(ಎಂ) : ವಿಎಸ್ ಅಚ್ಯುತಾನಂದನ್ ಅವರ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಲು ನಿರ್ಧಾರ

ತನ್ನ ದೀರ್ಘಕಾಲದ ಸೈದ್ಧಾಂತಿಕ ನಿಲುವಿಗಿಂತ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ಸಿಪಿಐ(ಎಂ), ಪಕ್ಷದ ದಂತಕಥೆ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಯುತಾನಂದನ್ ಅವರಿಗೆ ಮರಣೋತ್ತರವಾಗಿ ನೀಡಲಾಗುವ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನಿರ್ಧರಿಸಿದೆ. ಕಮ್ಯುನಿಸ್ಟರು ಆಡಳಿತ ಅಥವಾ...

2024ರ ಪ್ರತಿಭಟನೆ ದಮನ ಪ್ರಕರಣ: ಬಾಂಗ್ಲಾದೇಶದ ಮಾಜಿ ಪೊಲೀಸ್ ಮುಖ್ಯಸ್ಥ ಹಬೀಬುರ್ ರೆಹಮಾನ್‌ಗೆ ಮರಣದಂಡನೆ

ಢಾಕಾ: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಆಳ್ವಿಕೆಯಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಾಂಗ್ಲಾದೇಶ ನ್ಯಾಯಾಲಯವು ಸೋಮವಾರ ಢಾಕಾದ ಮಾಜಿ ಪೊಲೀಸ್ ಮುಖ್ಯಸ್ಥ ಮತ್ತು ಇಬ್ಬರು ಹಿರಿಯ ಸಹೋದ್ಯೋಗಿಗಳಿಗೆ ಮರಣದಂಡನೆ ವಿಧಿಸಲಾಗಿದೆ.  ರಾಜಧಾನಿಯ...

ಕೇರಳ, ತಮಿಳುನಾಡು, ಪ. ಬಂಗಾಳದ 32 ಮಂದಿಗೆ ‘ಪದ್ಮ’ ಪ್ರಶಸ್ತಿ : ವಿಧಾನಸಭೆ ಚುನಾವಣೆ ಮೇಲೆ ಬಿಜೆಪಿ ಕಣ್ಣು?

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾದ 131 'ಪದ್ಮ ಪ್ರಶಸ್ತಿ'ಗಳಲ್ಲಿ, 38 ಪ್ರಶಸ್ತಿಗಳು ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯ ಪಾಲಾಗಿವೆ. ದೇಶದ ಎರಡನೇ ಅತ್ಯುನ್ನತ...

‘ಏಕರೂಪ ಭಾರತವನ್ನಲ್ಲ, ಏಕೀಕೃತ ಭಾರತವನ್ನ ಸಂಭ್ರಮಿಸೋಣ’: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ 

ಚೆನ್ನೈ: ಗಣರಾಜ್ಯೋತ್ಸವವನ್ನು ಏಕರೂಪ ಭಾರತದಂತಲ್ಲದೇ ಏಕೀಕೃತ ಭಾರತವಾಗಿ ಆಚರಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.  ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸ್ಟಾಲಿನ್, "ಏಕರೂಪದ ಭಾರತವಲ್ಲ, ಏಕೀಕೃತ ಭಾರತವನ್ನು...

ಗಣರಾಜ್ಯೋತ್ಸವ ಪರೇಡ್ : ಸಿಆರ್‌ಪಿಎಫ್ ಪುರುಷರ ತುಕಡಿ ಮುನ್ನಡೆಸಿ ಗಮನಸೆಳೆದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಅರೆಸೈನಿಕ ಪಡೆಯ ಸಂಪೂರ್ಣ ಪುರುಷರ ತುಕಡಿಯನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸಿದರು. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯವರಾದ...

ಉತ್ತರಾಖಂಡ: ಸೂಫಿ ಕವಿ ಬಾಬಾ ಬುಲ್ಲೆ ಶಾ ಅವರ ಮಂದಿರವನ್ನು ಧ್ವಂಸಗೊಳಿಸಿದ ಹಿಂದೂ ರಕ್ಷಣಾ ದಳದ ದುಷ್ಕರ್ಮಿಗಳು

ಉತ್ತರಾಖಂಡದ ಮಸ್ಸೂರಿಯಲ್ಲಿರುವ 18 ನೇ ಶತಮಾನದ ಸೂಫಿ ಕವಿ ಬಾಬಾ ಬುಲ್ಲೆಹ್ ಷಾ ಅವರ ದೇವಾಲಯವನ್ನು ಶುಕ್ರವಾರ ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿರುವವರು ಧ್ವಂಸಗೊಳಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. "ಜೈ...

ಅಕ್ಷರಧಾಮ ದೇವಾಲಯ ದಾಳಿ ಪ್ರಕರಣ: 6 ವರ್ಷಗಳ ನಂತರ ಮೂವರ ಮುಸ್ಲಿಂ ವ್ಯಕ್ತಿಗಳನ್ನು ಖುಲಾಸೆಗೊಳಿಸಿದ ಅಹಮದಾಬಾದ್ ಪೋಟಾ ನ್ಯಾಯಾಲಯ

ಅಕ್ಷರಧಾಮ ದೇವಾಲಯದ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮೂವರು ಮುಸ್ಲಿಂ ಪುರುಷರನ್ನು ಕಳೆದ ವಾರ ಅಹಮದಾಬಾದ್‌ನ ವಿಶೇಷ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ) ನ್ಯಾಯಾಲಯವು ಖುಲಾಸೆಗೊಳಿಸಿದ್ದು, ವರ್ಷಗಳ ಕಾನೂನು ಪ್ರಕ್ರಿಯೆಗಳ ನಂತರ...

ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು...