Homeಅಂತರಾಷ್ಟ್ರೀಯಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

- Advertisement -
- Advertisement -

ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಇರಾನ್‌ನೊಂದಿಗಿನ ಇಸ್ರೇಲ್‌ನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದರೂ, ಗಾಝಾದಲ್ಲಿ ಪ್ರತಿದಿನ ಇಸ್ರೇಲಿ ದಾಳಿಗಳಿಂದ ನೂರಾರು ಜನರು ಹತ್ಯೆಯಾಗುತ್ತಿದ್ದು ಮತ್ತು ಗಾಯಗೊಳ್ಳುತ್ತಿದ್ದಾರೆ. ಈ ನಡುವೆ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪರಮೋಚ್ಚ ನಾಯಕ ಪೋಪ್ ಲಿಯೋ, “ಗಾಜಾದಲ್ಲಿನ ನೋವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು” ಎಂದು ಜನತೆಗೆ ಕರೆ ನೀಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

“ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ಅನ್ನು ಒಳಗೊಂಡಿರುವ ಈ ನಾಟಕೀಯ ಸನ್ನಿವೇಶದಲ್ಲಿ, ವಿಶೇಷವಾಗಿ ಗಾಝಾ ಮತ್ತು ಇತರ ಪ್ರದೇಶಗಳಲ್ಲಿ ಜನರ ದೈನಂದಿನ ನೋವನ್ನು ಮರೆತುಬಿಡುವ ಅಪಾಯವಿದೆ. ಅಲ್ಲಿ ಸಾಕಷ್ಟು ಮಾನವೀಯ ಬೆಂಬಲದ ಅಗತ್ಯದ ತುರ್ತಿದೆ” ಎಂದು ಪೋಪ್ ಲಿಯೋ ಪವಿತ್ರ ಯಾತ್ರೆಗೆ ಬಂದವರೊಂದಿಗೆ ವಾರದ ಪ್ರಾರ್ಥನೆಯಲ್ಲಿ ಹೇಳಿದ್ದಾರೆ.

ರಾಜತಾಂತ್ರಿಕತೆಯು ಶಸ್ತ್ರಾಸ್ತ್ರಗಳನ್ನು ಮೌನಗೊಳಿಸಲಿ, ರಾಷ್ಟ್ರಗಳು ತಮ್ಮ ಭವಿಷ್ಯವನ್ನು ಹಿಂಸೆ ಮತ್ತು ರಕ್ತಸಿಕ್ತ ಸಂಘರ್ಷಗಳೊಂದಿಗೆ ರೂಪಿಸುವುದರ ಬದಲಾಗಿ, ಶಾಂತಿ ಪ್ರಯತ್ನಗಳೊಂದಿಗೆ ರೂಪಿಸಲಿ ಎಂದು ಲಿಯೋ ಹೇಳಿದ್ದಾರೆ. “ಯುದ್ಧದ ದುರಂತವು ಸರಿಪಡಿಸಲಾಗದ ಪ್ರಪಾತವಾಗುವ ಮೊದಲು ಅದನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಪ್ರತಿಯೊಬ್ಬ ಸದಸ್ಯರಿಗೂ ನೈತಿಕ ಜವಾಬ್ದಾರಿ ಇದೆ” ಎಂದು ಅವರು ಹೇಳಿದ್ದಾರೆ.

ಇರಾನ್ ಜೊತೆ ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿದ್ದರೂ, ಇಸ್ರೇಲ್ ಸೇನೆಯು ಗಾಝಾ ಮೇಲೆ ಮಾರಕ ದಾಳಿಗಳನ್ನು ಮುಂದುವರೆಸಿದೆ. ಕಳೆದ 24 ಗಂಟೆಗಳ ವರದಿ ಅವಧಿಯಲ್ಲಿ ಗಾಝಾದಲ್ಲಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 104 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ದಕ್ಷಿಣ ಖಾನ್ ಯೂನಿಸ್, ಮಧ್ಯ ಗಾಝಾ ಮತ್ತು ಉತ್ತರ ಗಾಝಾ ನಗರದಲ್ಲಿ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಲ್‌ ಜಝೀರಾ ಹೇಳಿದೆ. “ಇರಾನ್ ಜೊತೆಗಿನ ಹೆಚ್ಚುತ್ತಿರುವ ಘರ್ಷಣೆಯಿಂದ ಸೃಷ್ಟಿಯಾದ ಗೊಂದಲದ ಲಾಭವನ್ನು ಪಡೆದುಕೊಂಡು ಇಸ್ರೇಲ್ ಸೇನೆಯು [ಗಾಜಾದಲ್ಲಿ] ಹೆಚ್ಚು ಮಾರಕ ದಾಳಿಗಳನ್ನು ಮುಂದುವರಿಸುತ್ತಿದೆ” ಎಂದು ವರದಿ ಹೇಳಿದೆ.

ಗಾಝಾದಲ್ಲಿ ಇಸ್ರೇಲಿ ದಾಳಿಗಳು ತೀವ್ರಗೊಂಡಿದ್ದು, ದಕ್ಷಿಣ ಗಾಝಾದ ರಫಾ ಬಳಿ ಇಸ್ರೇಲಿ ಸೇನೆಯು ವೈಮಾನಿಕ ದಾಳಿಗಳನ್ನು ನಡೆಸಿದ್ದು, ಕನಿಷ್ಠ 11 ಫೆಲಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಗಾಝಾದ ಜಬಲಿಯಾ ನಿರಾಶ್ರಿತರ ಶಿಬಿರದಲ್ಲಿ ಸಹ ದಾಳಿಗಳು ನಡೆದಿದ್ದು, ಆದರೆ ನಿರ್ದಿಷ್ಟ ಸಾವು-ನೋವಿನ ವಿವರಗಳು ಸ್ಪಷ್ಟವಾಗಿ ದಾಖಲಾಗಿಲ್ಲ.

ಇಸ್ರೇಲಿ ಸೇನೆಯು ಗಾಝಾದ ವಿವಿಧ ಭಾಗಗಳಲ್ಲಿ “ಹಮಾಸ್‌ನ ಗುರಿಗಳನ್ನು” ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದೆ ಎಂದು ಹೇಳಿದೆ, ಆದರೆ ಈ ದಾಳಿಗಳಿಂದ ಸಾಮಾನ್ಯ ನಾಗರಿಕರಿಗೆ ತೀವ್ರ ಹಾನಿಯಾಗುತ್ತಿದೆ ಎಂದು ಫೆಲಸ್ತೀನಿಯ ಮೂಲಗಳು ಆರೋಪಿಸಿವೆ. ಇಂಟರ್ನೆಟ್ ಮತ್ತು ಸಂವಹನ ಸಂಪರ್ಕ ಕಡಿತಗೊಂಡಿರುವುದರಿಂದ ಗಾಝಾದಿಂದ ನಿಖರ ಮಾಹಿತಿ ಬರುವುದು ಕಷ್ಟವಾಗಿದೆ ಎಂದು ವರದಿ ಉಲ್ಲೇಖಿಸಿವೆ.

ಅಕ್ಟೋಬರ್ 2023 ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕನಿಷ್ಠ 55,959 ಕ್ಕೆ ಏರಿಕೆಯಾಗಿದ್ದು, 131,242 ಜನರು ಗಾಯಗೊಂಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ‘ಬಾಂಗ್ಲಾದೇಶಿ’ ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು

ಬಾಂಗ್ಲಾದೇಶಿ ಎಂದು ಸುಳ್ಳು ಆರೋಪ ಹೊರಿಸಿ ಮುಸ್ಲಿಂ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಬಲಿಪಶು ಖುರ್ಷಿದ್ ಆಲಂ, ಧಾರ್ಮಿಕ ಘೋಷಣೆಗಳನ್ನು ಪಠಿಸಲು ನಿರಾಕರಿಸಿದ ನಂತರ ಸುಮಾರು...

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ...

ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

ಅಸ್ಸಾಂ ಸರ್ಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಪಡೆದ ಮೊಬೈಲ್ ಫೋನ್‌ಗಳನ್ನು ಕನಿಷ್ಠ ಇಬ್ಬರು ಪತ್ರಕರ್ತರು ಗುರುವಾರ ಹಿಂದಿರುಗಿಸಿದ್ದಾರೆ ಎಂದು 'ಸ್ಕ್ರೋಲ್' ವರದಿ ಮಾಡಿದೆ. ಅಸ್ಸಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯದಲ್ಲಿ ನೋಂದಾಯಿಸಲಾದ 2,200...

ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ...

ರ‍್ಯಾಗಿಂಗ್ ದೈಹಿಕ ಹಿಂಸೆ; ಎರಡು ತಿಂಗಳ ಬಳಿಕ 19 ವರ್ಷದ ವಿದ್ಯಾರ್ಥಿನಿ ಸಾವು

ಹಿಮಾಚಲ ಪ್ರದೇಶದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಘಟನೆಯು ಇಡೀ ರಾಜ್ಯವನ್ನೇ ಆಘಾತಕ್ಕೆ ದೂಡಿದೆ. 19 ವರ್ಷದ ಬಾಲಕಿಯ ಸಾವಿನ ಗಂಭೀರ ಪ್ರಕರಣಗಳಲ್ಲಿ ಕಾಲೇಜಿನ ಅಧ್ಯಾಪಕರು ಮತ್ತು ಮೂವರು ವಿದ್ಯಾರ್ಥಿನಿಯರ ಹೆಸರಿದೆ....

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ 'ಜನ್ಮಭೂಮಿ', ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ 'ಚಂದ್ರಿಕಾ'ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ. 'ಜನ್ಮಭೂಮಿ' ಪತ್ರಿಕೆಯ...

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ...

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...