Homeಅಂತರಾಷ್ಟ್ರೀಯಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

- Advertisement -
- Advertisement -

ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಇರಾನ್‌ನೊಂದಿಗಿನ ಇಸ್ರೇಲ್‌ನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದರೂ, ಗಾಝಾದಲ್ಲಿ ಪ್ರತಿದಿನ ಇಸ್ರೇಲಿ ದಾಳಿಗಳಿಂದ ನೂರಾರು ಜನರು ಹತ್ಯೆಯಾಗುತ್ತಿದ್ದು ಮತ್ತು ಗಾಯಗೊಳ್ಳುತ್ತಿದ್ದಾರೆ. ಈ ನಡುವೆ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪರಮೋಚ್ಚ ನಾಯಕ ಪೋಪ್ ಲಿಯೋ, “ಗಾಜಾದಲ್ಲಿನ ನೋವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು” ಎಂದು ಜನತೆಗೆ ಕರೆ ನೀಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

“ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ಅನ್ನು ಒಳಗೊಂಡಿರುವ ಈ ನಾಟಕೀಯ ಸನ್ನಿವೇಶದಲ್ಲಿ, ವಿಶೇಷವಾಗಿ ಗಾಝಾ ಮತ್ತು ಇತರ ಪ್ರದೇಶಗಳಲ್ಲಿ ಜನರ ದೈನಂದಿನ ನೋವನ್ನು ಮರೆತುಬಿಡುವ ಅಪಾಯವಿದೆ. ಅಲ್ಲಿ ಸಾಕಷ್ಟು ಮಾನವೀಯ ಬೆಂಬಲದ ಅಗತ್ಯದ ತುರ್ತಿದೆ” ಎಂದು ಪೋಪ್ ಲಿಯೋ ಪವಿತ್ರ ಯಾತ್ರೆಗೆ ಬಂದವರೊಂದಿಗೆ ವಾರದ ಪ್ರಾರ್ಥನೆಯಲ್ಲಿ ಹೇಳಿದ್ದಾರೆ.

ರಾಜತಾಂತ್ರಿಕತೆಯು ಶಸ್ತ್ರಾಸ್ತ್ರಗಳನ್ನು ಮೌನಗೊಳಿಸಲಿ, ರಾಷ್ಟ್ರಗಳು ತಮ್ಮ ಭವಿಷ್ಯವನ್ನು ಹಿಂಸೆ ಮತ್ತು ರಕ್ತಸಿಕ್ತ ಸಂಘರ್ಷಗಳೊಂದಿಗೆ ರೂಪಿಸುವುದರ ಬದಲಾಗಿ, ಶಾಂತಿ ಪ್ರಯತ್ನಗಳೊಂದಿಗೆ ರೂಪಿಸಲಿ ಎಂದು ಲಿಯೋ ಹೇಳಿದ್ದಾರೆ. “ಯುದ್ಧದ ದುರಂತವು ಸರಿಪಡಿಸಲಾಗದ ಪ್ರಪಾತವಾಗುವ ಮೊದಲು ಅದನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಪ್ರತಿಯೊಬ್ಬ ಸದಸ್ಯರಿಗೂ ನೈತಿಕ ಜವಾಬ್ದಾರಿ ಇದೆ” ಎಂದು ಅವರು ಹೇಳಿದ್ದಾರೆ.

ಇರಾನ್ ಜೊತೆ ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿದ್ದರೂ, ಇಸ್ರೇಲ್ ಸೇನೆಯು ಗಾಝಾ ಮೇಲೆ ಮಾರಕ ದಾಳಿಗಳನ್ನು ಮುಂದುವರೆಸಿದೆ. ಕಳೆದ 24 ಗಂಟೆಗಳ ವರದಿ ಅವಧಿಯಲ್ಲಿ ಗಾಝಾದಲ್ಲಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 104 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ದಕ್ಷಿಣ ಖಾನ್ ಯೂನಿಸ್, ಮಧ್ಯ ಗಾಝಾ ಮತ್ತು ಉತ್ತರ ಗಾಝಾ ನಗರದಲ್ಲಿ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಲ್‌ ಜಝೀರಾ ಹೇಳಿದೆ. “ಇರಾನ್ ಜೊತೆಗಿನ ಹೆಚ್ಚುತ್ತಿರುವ ಘರ್ಷಣೆಯಿಂದ ಸೃಷ್ಟಿಯಾದ ಗೊಂದಲದ ಲಾಭವನ್ನು ಪಡೆದುಕೊಂಡು ಇಸ್ರೇಲ್ ಸೇನೆಯು [ಗಾಜಾದಲ್ಲಿ] ಹೆಚ್ಚು ಮಾರಕ ದಾಳಿಗಳನ್ನು ಮುಂದುವರಿಸುತ್ತಿದೆ” ಎಂದು ವರದಿ ಹೇಳಿದೆ.

ಗಾಝಾದಲ್ಲಿ ಇಸ್ರೇಲಿ ದಾಳಿಗಳು ತೀವ್ರಗೊಂಡಿದ್ದು, ದಕ್ಷಿಣ ಗಾಝಾದ ರಫಾ ಬಳಿ ಇಸ್ರೇಲಿ ಸೇನೆಯು ವೈಮಾನಿಕ ದಾಳಿಗಳನ್ನು ನಡೆಸಿದ್ದು, ಕನಿಷ್ಠ 11 ಫೆಲಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಗಾಝಾದ ಜಬಲಿಯಾ ನಿರಾಶ್ರಿತರ ಶಿಬಿರದಲ್ಲಿ ಸಹ ದಾಳಿಗಳು ನಡೆದಿದ್ದು, ಆದರೆ ನಿರ್ದಿಷ್ಟ ಸಾವು-ನೋವಿನ ವಿವರಗಳು ಸ್ಪಷ್ಟವಾಗಿ ದಾಖಲಾಗಿಲ್ಲ.

ಇಸ್ರೇಲಿ ಸೇನೆಯು ಗಾಝಾದ ವಿವಿಧ ಭಾಗಗಳಲ್ಲಿ “ಹಮಾಸ್‌ನ ಗುರಿಗಳನ್ನು” ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದೆ ಎಂದು ಹೇಳಿದೆ, ಆದರೆ ಈ ದಾಳಿಗಳಿಂದ ಸಾಮಾನ್ಯ ನಾಗರಿಕರಿಗೆ ತೀವ್ರ ಹಾನಿಯಾಗುತ್ತಿದೆ ಎಂದು ಫೆಲಸ್ತೀನಿಯ ಮೂಲಗಳು ಆರೋಪಿಸಿವೆ. ಇಂಟರ್ನೆಟ್ ಮತ್ತು ಸಂವಹನ ಸಂಪರ್ಕ ಕಡಿತಗೊಂಡಿರುವುದರಿಂದ ಗಾಝಾದಿಂದ ನಿಖರ ಮಾಹಿತಿ ಬರುವುದು ಕಷ್ಟವಾಗಿದೆ ಎಂದು ವರದಿ ಉಲ್ಲೇಖಿಸಿವೆ.

ಅಕ್ಟೋಬರ್ 2023 ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕನಿಷ್ಠ 55,959 ಕ್ಕೆ ಏರಿಕೆಯಾಗಿದ್ದು, 131,242 ಜನರು ಗಾಯಗೊಂಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...