Homeಅಂತರಾಷ್ಟ್ರೀಯಪಾಕಿಸ್ತಾನದ ಜನಪ್ರಿಯ ಲೇಖಕಿ ಬಾಪ್ಸಿ ಸಿಧ್ವಾ (86) ನಿಧನ

ಪಾಕಿಸ್ತಾನದ ಜನಪ್ರಿಯ ಲೇಖಕಿ ಬಾಪ್ಸಿ ಸಿಧ್ವಾ (86) ನಿಧನ

- Advertisement -
- Advertisement -

ಪಾಕಿಸ್ತಾನದ ಅತ್ಯಂತ ಜನಪ್ರಿಯ ಇಂಗ್ಲಿಷ್ ಭಾಷೆಯ ಕಾದಂಬರಿಕಾರರಲ್ಲಿ ಒಬ್ಬರಾದ ಬಾಪ್ಸಿ ಸಿಧ್ವಾ ಅವರು ಬುಧವಾರ ಅಮೆರಿಕದ ಟೆಕ್ಸಾಸ್‌ನ ಹೂಸ್ಟನ್‌ನಲ್ಲಿ ನಿಧನರಾದರು ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಪಾಕಿಸ್ತಾನದ ಜನಪ್ರಿಯ ಲೇಖಕಿ

ಸಿಧ್ವಾ ಅವರು 1938 ರಲ್ಲಿ ಕರಾಚಿಯ ಗುಜರಾತಿ ಪಾರ್ಸಿ ಕುಟುಂಬದಲ್ಲಿ ಜನಿಸಿದರು. ನಂತರ ಲಾಹೋರ್‌ನಲ್ಲಿ ಬೆಳೆದ ಅವರು, ಅಲ್ಲಿ 1947 ರ ವಿಭಜನೆಯ ಪರಿಣಾಮವನ್ನು ಪ್ರತ್ಯಕ್ಷವಾಗಿ ನೋಡಿದವರಾಗಿದ್ದಾರೆ. ಈ ಘಟನೆ ಅವರನ್ನು ಅವರ ಬರವಣಿಗೆಯನ್ನು ರೂಪಿಸಿತು. 1957 ರಲ್ಲಿ ಲಾಹೋರ್‌ನಲ್ಲಿರುವ ಕಿನ್ನೈರ್ಡ್ ಕಾಲೇಜ್ ಫಾರ್ ವುಮೆನ್‌ನಿಂದ ಬಿಎ ಪಡೆದ ಅವರು 1983 ರಲ್ಲಿ ಅಮೆರಿಕಾಕ್ಕೆ ವಲಸೆ ಹೋದರು.

ಸಿಧ್ವಾ ಅವರು ಪಾಕಿಸ್ತಾನದ ಅತ್ಯುತ್ತಮ ಕಾದಂಬರಿಕಾರರಲ್ಲಿ ಒಬ್ಬರಾಗಿ ವ್ಯಾಪಕವಾಗಿ ಹೆಸರುವಾಸಿದ್ದಾರೆ. ಅವರ ಕೃತಿಗಳಲ್ಲಿ ದಿ ಕ್ರೋ ಈಟರ್ಸ್, ಆನ್ ಅಮೇರಿಕನ್ ಬ್ರಾಟ್, ದಿ ಪಾಕಿಸ್ತಾನಿ ಬ್ರೈಡ್ ಮತ್ತು ಸಿಟಿ ಆಫ್ ಸಿನ್ ಅಂಡ್ ಸ್ಪ್ಲೆಂಡರ್: ರೈಟಿಂಗ್ಸ್ ಆನ್ ಲಾಹೋರ್ ಸೇರಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಅತ್ಯಂತ ಪ್ರಸಿದ್ಧ ಕಾದಂಬರಿಗಳಲ್ಲಿ ಒಂದಾದ ಐಸ್-ಕ್ಯಾಂಡಿ ಮ್ಯಾನ್ ಅನ್ನು 1988 ರಲ್ಲಿ ಬರೆಯಲಾಯಿತು ಮತ್ತು ನಾಲ್ಕು ವರ್ಷಗಳ ನಂತರ ಅಮೆರಿಕದಲ್ಲಿ ಕ್ರ್ಯಾಕಿಂಗ್ ಇಂಡಿಯಾ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಲಾಯಿತು. ಈ ಕಾದಂಬರಿಯು ವಿಭಜನೆಯ ಆಘಾತ ಮತ್ತು ಕ್ರಾಂತಿಯ ಬಗ್ಗೆ ಚರ್ಚಿಸುತ್ತದೆ.

1998 ರಲ್ಲಿ, ಈ ಕೃತಿಯನ್ನು ನಿರ್ದೇಶಕಿ ದೀಪಾ ಮೆಹ್ತಾ ಅವರು ಅರ್ಥ್ ಚಲನಚಿತ್ರಕ್ಕೆ ಅಳವಡಿಸಿಕೊಂಡರು. ಸಿಧ್ವಾ ಅವರ ಇನ್ನೊಂದು ಕೃತಿ, ವಾಟರ್: ಎ ನಾವೆಲ್, ಈ ಕಾದಂಬರಿಯ ಆಧಾರದಲ್ಲಿ ಮೆಹ್ತಾ ಅವರು 2005 ರ ಚಲನಚಿತ್ರ ವಾಟರ್‌ ಚಿತ್ರವನ್ನು ನಿರ್ದೇಶಿಸಿದರು.

ಸಿಧ್ವಾ ಅವರು ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ಹೂಸ್ಟನ್ ವಿಶ್ವವಿದ್ಯಾಲಯ ಸೇರಿದಂತೆ ಹಲವಾರು ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಪಾಕಿಸ್ತಾನದ ಜನಪ್ರಿಯ ಲೇಖಕಿ

ಅವರಿಗೆ, ಲೀಲಾ ವ್ಯಾಲೇಸ್ ರೀಡರ್ಸ್ ಡೈಜೆಸ್ಟ್ ರೈಟರ್ಸ್ ಪ್ರಶಸ್ತಿ, ಮೊಂಡೆಲೊ ಅವಾರ್ಡ್‌ ಫಾರ್ ಫಾರಿನ್ ಆಥರ್ ಮತ್ತು ಸಾಹಿತ್ಯದ ಶ್ರೇಷ್ಠ ಸೇವೆಗಾಗಿ ಸರ್ ಸೈಯದ್ ಡೇ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಪುರಸ್ಕಾರಗಳನ್ನು ಪಡೆದಿದ್ದಾರೆ.

ಸಿಧ್ವಾ ಅವರು 1991 ರಲ್ಲಿ ಸಿತಾರಾ-ಇ-ಇಮ್ತಿಯಾಜ್ ಗೌರವಕ್ಕೆ ಪಾತ್ರರಾಗಿದ್ದಾರೆ. ಪಾಕಿಸ್ತಾನ ಸರ್ಕಾರ ಕಲೆಗಾಗಿ ನೀಡುವ ಅತ್ಯುನ್ನತ ರಾಷ್ಟ್ರೀಯ ಗೌರವ ಇದಾಗಿದೆ. ಅವರನ್ನು ಜೊರಾಸ್ಟ್ರಿಯನ್ ಹಾಲ್ ಆಫ್ ಫೇಮ್‌ಗೆ ಸೇರಿಸಲಾಯಿತು.

ಇದನ್ನೂ ಓದಿ: ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು

ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...