Homeಅಂತರಾಷ್ಟ್ರೀಯಪಾಕಿಸ್ತಾನದ ಜನಪ್ರಿಯ ಲೇಖಕಿ ಬಾಪ್ಸಿ ಸಿಧ್ವಾ (86) ನಿಧನ

ಪಾಕಿಸ್ತಾನದ ಜನಪ್ರಿಯ ಲೇಖಕಿ ಬಾಪ್ಸಿ ಸಿಧ್ವಾ (86) ನಿಧನ

- Advertisement -
- Advertisement -

ಪಾಕಿಸ್ತಾನದ ಅತ್ಯಂತ ಜನಪ್ರಿಯ ಇಂಗ್ಲಿಷ್ ಭಾಷೆಯ ಕಾದಂಬರಿಕಾರರಲ್ಲಿ ಒಬ್ಬರಾದ ಬಾಪ್ಸಿ ಸಿಧ್ವಾ ಅವರು ಬುಧವಾರ ಅಮೆರಿಕದ ಟೆಕ್ಸಾಸ್‌ನ ಹೂಸ್ಟನ್‌ನಲ್ಲಿ ನಿಧನರಾದರು ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಪಾಕಿಸ್ತಾನದ ಜನಪ್ರಿಯ ಲೇಖಕಿ

ಸಿಧ್ವಾ ಅವರು 1938 ರಲ್ಲಿ ಕರಾಚಿಯ ಗುಜರಾತಿ ಪಾರ್ಸಿ ಕುಟುಂಬದಲ್ಲಿ ಜನಿಸಿದರು. ನಂತರ ಲಾಹೋರ್‌ನಲ್ಲಿ ಬೆಳೆದ ಅವರು, ಅಲ್ಲಿ 1947 ರ ವಿಭಜನೆಯ ಪರಿಣಾಮವನ್ನು ಪ್ರತ್ಯಕ್ಷವಾಗಿ ನೋಡಿದವರಾಗಿದ್ದಾರೆ. ಈ ಘಟನೆ ಅವರನ್ನು ಅವರ ಬರವಣಿಗೆಯನ್ನು ರೂಪಿಸಿತು. 1957 ರಲ್ಲಿ ಲಾಹೋರ್‌ನಲ್ಲಿರುವ ಕಿನ್ನೈರ್ಡ್ ಕಾಲೇಜ್ ಫಾರ್ ವುಮೆನ್‌ನಿಂದ ಬಿಎ ಪಡೆದ ಅವರು 1983 ರಲ್ಲಿ ಅಮೆರಿಕಾಕ್ಕೆ ವಲಸೆ ಹೋದರು.

ಸಿಧ್ವಾ ಅವರು ಪಾಕಿಸ್ತಾನದ ಅತ್ಯುತ್ತಮ ಕಾದಂಬರಿಕಾರರಲ್ಲಿ ಒಬ್ಬರಾಗಿ ವ್ಯಾಪಕವಾಗಿ ಹೆಸರುವಾಸಿದ್ದಾರೆ. ಅವರ ಕೃತಿಗಳಲ್ಲಿ ದಿ ಕ್ರೋ ಈಟರ್ಸ್, ಆನ್ ಅಮೇರಿಕನ್ ಬ್ರಾಟ್, ದಿ ಪಾಕಿಸ್ತಾನಿ ಬ್ರೈಡ್ ಮತ್ತು ಸಿಟಿ ಆಫ್ ಸಿನ್ ಅಂಡ್ ಸ್ಪ್ಲೆಂಡರ್: ರೈಟಿಂಗ್ಸ್ ಆನ್ ಲಾಹೋರ್ ಸೇರಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಅತ್ಯಂತ ಪ್ರಸಿದ್ಧ ಕಾದಂಬರಿಗಳಲ್ಲಿ ಒಂದಾದ ಐಸ್-ಕ್ಯಾಂಡಿ ಮ್ಯಾನ್ ಅನ್ನು 1988 ರಲ್ಲಿ ಬರೆಯಲಾಯಿತು ಮತ್ತು ನಾಲ್ಕು ವರ್ಷಗಳ ನಂತರ ಅಮೆರಿಕದಲ್ಲಿ ಕ್ರ್ಯಾಕಿಂಗ್ ಇಂಡಿಯಾ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಲಾಯಿತು. ಈ ಕಾದಂಬರಿಯು ವಿಭಜನೆಯ ಆಘಾತ ಮತ್ತು ಕ್ರಾಂತಿಯ ಬಗ್ಗೆ ಚರ್ಚಿಸುತ್ತದೆ.

1998 ರಲ್ಲಿ, ಈ ಕೃತಿಯನ್ನು ನಿರ್ದೇಶಕಿ ದೀಪಾ ಮೆಹ್ತಾ ಅವರು ಅರ್ಥ್ ಚಲನಚಿತ್ರಕ್ಕೆ ಅಳವಡಿಸಿಕೊಂಡರು. ಸಿಧ್ವಾ ಅವರ ಇನ್ನೊಂದು ಕೃತಿ, ವಾಟರ್: ಎ ನಾವೆಲ್, ಈ ಕಾದಂಬರಿಯ ಆಧಾರದಲ್ಲಿ ಮೆಹ್ತಾ ಅವರು 2005 ರ ಚಲನಚಿತ್ರ ವಾಟರ್‌ ಚಿತ್ರವನ್ನು ನಿರ್ದೇಶಿಸಿದರು.

ಸಿಧ್ವಾ ಅವರು ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ಹೂಸ್ಟನ್ ವಿಶ್ವವಿದ್ಯಾಲಯ ಸೇರಿದಂತೆ ಹಲವಾರು ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಪಾಕಿಸ್ತಾನದ ಜನಪ್ರಿಯ ಲೇಖಕಿ

ಅವರಿಗೆ, ಲೀಲಾ ವ್ಯಾಲೇಸ್ ರೀಡರ್ಸ್ ಡೈಜೆಸ್ಟ್ ರೈಟರ್ಸ್ ಪ್ರಶಸ್ತಿ, ಮೊಂಡೆಲೊ ಅವಾರ್ಡ್‌ ಫಾರ್ ಫಾರಿನ್ ಆಥರ್ ಮತ್ತು ಸಾಹಿತ್ಯದ ಶ್ರೇಷ್ಠ ಸೇವೆಗಾಗಿ ಸರ್ ಸೈಯದ್ ಡೇ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಪುರಸ್ಕಾರಗಳನ್ನು ಪಡೆದಿದ್ದಾರೆ.

ಸಿಧ್ವಾ ಅವರು 1991 ರಲ್ಲಿ ಸಿತಾರಾ-ಇ-ಇಮ್ತಿಯಾಜ್ ಗೌರವಕ್ಕೆ ಪಾತ್ರರಾಗಿದ್ದಾರೆ. ಪಾಕಿಸ್ತಾನ ಸರ್ಕಾರ ಕಲೆಗಾಗಿ ನೀಡುವ ಅತ್ಯುನ್ನತ ರಾಷ್ಟ್ರೀಯ ಗೌರವ ಇದಾಗಿದೆ. ಅವರನ್ನು ಜೊರಾಸ್ಟ್ರಿಯನ್ ಹಾಲ್ ಆಫ್ ಫೇಮ್‌ಗೆ ಸೇರಿಸಲಾಯಿತು.

ಇದನ್ನೂ ಓದಿ: ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು

ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...