Homeಮುಖಪುಟಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

ಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

- Advertisement -
- Advertisement -

ತ್ರಿಪುರಾ ವ್ಲಾಗರ್ (ಯೂಟ್ಯೂಬರ್‌) ಬಾಪನ್ ನಂದಿ ಅವರ ಮೇಲೆ ಸ್ಥಳೀಯ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡರು ಏಪ್ರಿಲ್ 22ರಂದು ಹಲ್ಲೆ ಮಾಡಿದ್ದಾರೆ.

“ಬಿಜೆಪಿ ನಾಯಕರೊಬ್ಬರು ಅವರ ಮೇಲಿನ ಹಲ್ಲೆಯನ್ನು ಚಿತ್ರೀಕರಿಸಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ, ವಿಡಿಯೊ ನಂತರ ವೈರಲ್ ಆಗಿದೆ”.

ಜನಪ್ರಿಯ ವ್ಲಾಗರ್ ಆಗಿರುವ ನಂದಿಯವರು ಉದಯಪುರ ಮೂಲದವರು. ತ್ರಿಪುರಾದ ಖುಪಿಲಾಂಗ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರೊಬ್ಬರು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ನಂದಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ‘ನ್ಯೂಸ್‌ಕ್ಲಿಕ್’ ವರದಿ ಮಾಡಿದೆ. ಇದರ ಬೆನ್ನಲ್ಲೇ ಪೊಲೀಸರು ವ್ಲಾಗರ್‌ನನ್ನು ವಿಚಾರಣೆಗೆ ಕರೆದಿದ್ದಾರೆ.

ಈ ಘಟನೆಯ ಬಳಿಕ ತ್ರಿಪುರಾದ ಅನೇಕ ನಾಗರಿಕರು ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ನಂದಿಯವರು ಈದ್‌ನಲ್ಲಿ ವೀಡಿಯೊವನ್ನು ಮಾಡಿದ್ದಾರೆ, ಹಾಡನ್ನು ಸಹ ನಿರ್ಮಿಸಿದ್ದಾರೆ ಎಂದು ವರದಿಯಾಗಿದೆ. ಕೋಮುವಾದದ ಆಧಾರದ ಮೇಲೆ ಜನರು ವಿಭಜನೆಯಾಗದಂತೆ ಮತ್ತು ಸಾಮರಸ್ಯದಿಂದ ಈದ್ ಹಬ್ಬವನ್ನು ಆಚರಿಸುವಂತೆ ವೀಡಿಯೊ ಕರೆ ನೀಡಿದೆ.

ನ್ಯೂಸ್‌ಕ್ಲಿಕ್ ಜಾಲತಾಣವು ವಿಡಿಯೊ ಕುರಿತು ವರದಿ ಮಾಡಿತು. ಬಿಜೆಪಿ ನಾಯಕರು ನಂದಿಯವರನ್ನು ಬರಮಾಡಿಕೊಂಡಿದ್ದರು. ಬಿಜೆಪಿಯ ಮಹಿಳಾ ನಾಯಕಿಯೊಬ್ಬರು ನಂದಿಯವರ ಕೊರಳಪಟ್ಟಿ ಹಿಡಿದು ಥಳಿಸಿದ್ದಾರೆ. ಈದ್ ವಿಡಿಯೋದಲ್ಲಿ ಮುಸ್ಲಿಂ ಯುವಕನಂತೆ ನಟಿಸುವ ಮೂಲಕ ನಂದಿ ತನ್ನ ಹಿಂದೂ ಮೂಲವನ್ನು ಏಕೆ ಕೀಳಾಗಿ ಕಂಡಿದ್ದಾರೆ ಎಂದು ಆಕೆ ಪ್ರಶ್ನಿಸಿದ್ದಾರೆ. ಅವರ ಹಲ್ಲೆಯ ವಿಡಿಯೋ ಕೂಡ ಇದೀಗ ವೈರಲ್ ಆಗಿದೆ. ತಮ್ಮನ್ನು ಇತರರು ಸುತ್ತುವರೆದಿದ್ದಾಗ ತಮ್ಮನ್ನು ಬಿಟ್ಟುಬಿಡುವಂತೆ ನಂದಿ ಕೋರುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಈಸ್ಟ್‌ಮೋಜೋ ಜಾಲತಾಣ ನಂದಿಯವರ ಹೇಳಿಕೆಯನ್ನು ಉಲ್ಲೇಖಿಸಿದೆ. “ಪೂರ್ವ ಗೋಕುಲ್ ನಗರ ಪಂಚಾಯತ್‌ನ ಚುನಾಯಿತ ಉಪಮುಖ್ಯಸ್ಥರು ಕೆಲವು ಕೆಲಸದ ನಿಮಿತ್ತ ತಮ್ಮ ಸ್ಥಳಕ್ಕೆ ಭೇಟಿ ನೀಡಲು ನನ್ನನ್ನು ಕರೆದರು. ನಾವು ಒಬ್ಬರಿಗೊಬ್ಬರು ಗೊತ್ತಿದ್ದೆವು. ಸುಮಾರು 30 ರಿಂದ 40 ಯುವಕರು ನನಗಾಗಿ ಕಾಯುತ್ತಿದ್ದಾರೆ ಎಂದು ನಾನು ಅಲ್ಲಿಗೆ ಹೋದೆ” ಎಂದಿದ್ದಾರೆ.

“ಪಂಚಾಯತ್ ನಾಯಕ ನನಗೆ ಕಪಾಳಮೋಕ್ಷ ಮಾಡಿದನು, ಅಲ್ಲಿದ್ದ ಎಲ್ಲರ ಮುಂದೆ ಥಳಿಸಿದನು. ನನ್ನ ತಪ್ಪೇನು ಎಂದು ನಾನು ಕೇಳುತ್ತಲೇ ಇದ್ದೆ. ಆದರೆ ಯಾರೂ ನನ್ನ ಮಾತುಗಳನ್ನು ಆಲಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

ಈದ್ ವಿಡಿಯೋದ ನಿರ್ಮಾಪಕ ನಾನಲ್ಲ ಎಂದೂ ನಂದಿ ಹೇಳಿದ್ದಾರೆ. ಇತರರಂತೆ ನಾನು ಅದರಲ್ಲಿ ಕೇವಲ ನಟಿಸಿದ್ದೇನೆ. ನನ್ನ ಕೆಲಸಕ್ಕಾಗಿ ಹಣ ನೀಡಿದ್ದಾರೆ. ತಮ್ಮ ವಿರುದ್ಧ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

“ವಿಶ್ವ ಹಿಂದೂ ಪರಿಷತ್‌ನ ಆದೇಶದ ಮೇರೆಗೆ ವ್ಲಾಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಈಸ್ಟ್‌ಮೋಜೋ ವರದಿ ಮಾಡಿದೆ.

ಈದ್ ವೀಡಿಯೋದಲ್ಲಿ ನಟಿಸಿದ ಇತರ ಇಬ್ಬರಾದ ಉಮಾ ದೇಬನಾಥ್ ಮತ್ತು ಸ್ನೇಹಾ ಭೌಮಿಕ್ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ವೃತ್ತಿಯ ಭಾಗವಾಗಿ ಆ ವೀಡಿಯೊದಲ್ಲಿ ನಟಿಸುವುದು ಸಮಸ್ಯಾತ್ಮಕ ಎಂದು ನಾವು ಯಾವತ್ತೂ ಭಾವಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಇತರ ನೆಟಿಜನ್‌ಗಳಂತೆ ನಂದಿಯವರಿಗೆ ಬೆಂಬಲವನ್ನು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...