Homeಮುಖಪುಟಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

ಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

- Advertisement -
- Advertisement -

ತ್ರಿಪುರಾ ವ್ಲಾಗರ್ (ಯೂಟ್ಯೂಬರ್‌) ಬಾಪನ್ ನಂದಿ ಅವರ ಮೇಲೆ ಸ್ಥಳೀಯ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡರು ಏಪ್ರಿಲ್ 22ರಂದು ಹಲ್ಲೆ ಮಾಡಿದ್ದಾರೆ.

“ಬಿಜೆಪಿ ನಾಯಕರೊಬ್ಬರು ಅವರ ಮೇಲಿನ ಹಲ್ಲೆಯನ್ನು ಚಿತ್ರೀಕರಿಸಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ, ವಿಡಿಯೊ ನಂತರ ವೈರಲ್ ಆಗಿದೆ”.

ಜನಪ್ರಿಯ ವ್ಲಾಗರ್ ಆಗಿರುವ ನಂದಿಯವರು ಉದಯಪುರ ಮೂಲದವರು. ತ್ರಿಪುರಾದ ಖುಪಿಲಾಂಗ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರೊಬ್ಬರು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ನಂದಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ‘ನ್ಯೂಸ್‌ಕ್ಲಿಕ್’ ವರದಿ ಮಾಡಿದೆ. ಇದರ ಬೆನ್ನಲ್ಲೇ ಪೊಲೀಸರು ವ್ಲಾಗರ್‌ನನ್ನು ವಿಚಾರಣೆಗೆ ಕರೆದಿದ್ದಾರೆ.

ಈ ಘಟನೆಯ ಬಳಿಕ ತ್ರಿಪುರಾದ ಅನೇಕ ನಾಗರಿಕರು ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ನಂದಿಯವರು ಈದ್‌ನಲ್ಲಿ ವೀಡಿಯೊವನ್ನು ಮಾಡಿದ್ದಾರೆ, ಹಾಡನ್ನು ಸಹ ನಿರ್ಮಿಸಿದ್ದಾರೆ ಎಂದು ವರದಿಯಾಗಿದೆ. ಕೋಮುವಾದದ ಆಧಾರದ ಮೇಲೆ ಜನರು ವಿಭಜನೆಯಾಗದಂತೆ ಮತ್ತು ಸಾಮರಸ್ಯದಿಂದ ಈದ್ ಹಬ್ಬವನ್ನು ಆಚರಿಸುವಂತೆ ವೀಡಿಯೊ ಕರೆ ನೀಡಿದೆ.

ನ್ಯೂಸ್‌ಕ್ಲಿಕ್ ಜಾಲತಾಣವು ವಿಡಿಯೊ ಕುರಿತು ವರದಿ ಮಾಡಿತು. ಬಿಜೆಪಿ ನಾಯಕರು ನಂದಿಯವರನ್ನು ಬರಮಾಡಿಕೊಂಡಿದ್ದರು. ಬಿಜೆಪಿಯ ಮಹಿಳಾ ನಾಯಕಿಯೊಬ್ಬರು ನಂದಿಯವರ ಕೊರಳಪಟ್ಟಿ ಹಿಡಿದು ಥಳಿಸಿದ್ದಾರೆ. ಈದ್ ವಿಡಿಯೋದಲ್ಲಿ ಮುಸ್ಲಿಂ ಯುವಕನಂತೆ ನಟಿಸುವ ಮೂಲಕ ನಂದಿ ತನ್ನ ಹಿಂದೂ ಮೂಲವನ್ನು ಏಕೆ ಕೀಳಾಗಿ ಕಂಡಿದ್ದಾರೆ ಎಂದು ಆಕೆ ಪ್ರಶ್ನಿಸಿದ್ದಾರೆ. ಅವರ ಹಲ್ಲೆಯ ವಿಡಿಯೋ ಕೂಡ ಇದೀಗ ವೈರಲ್ ಆಗಿದೆ. ತಮ್ಮನ್ನು ಇತರರು ಸುತ್ತುವರೆದಿದ್ದಾಗ ತಮ್ಮನ್ನು ಬಿಟ್ಟುಬಿಡುವಂತೆ ನಂದಿ ಕೋರುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಈಸ್ಟ್‌ಮೋಜೋ ಜಾಲತಾಣ ನಂದಿಯವರ ಹೇಳಿಕೆಯನ್ನು ಉಲ್ಲೇಖಿಸಿದೆ. “ಪೂರ್ವ ಗೋಕುಲ್ ನಗರ ಪಂಚಾಯತ್‌ನ ಚುನಾಯಿತ ಉಪಮುಖ್ಯಸ್ಥರು ಕೆಲವು ಕೆಲಸದ ನಿಮಿತ್ತ ತಮ್ಮ ಸ್ಥಳಕ್ಕೆ ಭೇಟಿ ನೀಡಲು ನನ್ನನ್ನು ಕರೆದರು. ನಾವು ಒಬ್ಬರಿಗೊಬ್ಬರು ಗೊತ್ತಿದ್ದೆವು. ಸುಮಾರು 30 ರಿಂದ 40 ಯುವಕರು ನನಗಾಗಿ ಕಾಯುತ್ತಿದ್ದಾರೆ ಎಂದು ನಾನು ಅಲ್ಲಿಗೆ ಹೋದೆ” ಎಂದಿದ್ದಾರೆ.

“ಪಂಚಾಯತ್ ನಾಯಕ ನನಗೆ ಕಪಾಳಮೋಕ್ಷ ಮಾಡಿದನು, ಅಲ್ಲಿದ್ದ ಎಲ್ಲರ ಮುಂದೆ ಥಳಿಸಿದನು. ನನ್ನ ತಪ್ಪೇನು ಎಂದು ನಾನು ಕೇಳುತ್ತಲೇ ಇದ್ದೆ. ಆದರೆ ಯಾರೂ ನನ್ನ ಮಾತುಗಳನ್ನು ಆಲಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

ಈದ್ ವಿಡಿಯೋದ ನಿರ್ಮಾಪಕ ನಾನಲ್ಲ ಎಂದೂ ನಂದಿ ಹೇಳಿದ್ದಾರೆ. ಇತರರಂತೆ ನಾನು ಅದರಲ್ಲಿ ಕೇವಲ ನಟಿಸಿದ್ದೇನೆ. ನನ್ನ ಕೆಲಸಕ್ಕಾಗಿ ಹಣ ನೀಡಿದ್ದಾರೆ. ತಮ್ಮ ವಿರುದ್ಧ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

“ವಿಶ್ವ ಹಿಂದೂ ಪರಿಷತ್‌ನ ಆದೇಶದ ಮೇರೆಗೆ ವ್ಲಾಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಈಸ್ಟ್‌ಮೋಜೋ ವರದಿ ಮಾಡಿದೆ.

ಈದ್ ವೀಡಿಯೋದಲ್ಲಿ ನಟಿಸಿದ ಇತರ ಇಬ್ಬರಾದ ಉಮಾ ದೇಬನಾಥ್ ಮತ್ತು ಸ್ನೇಹಾ ಭೌಮಿಕ್ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ವೃತ್ತಿಯ ಭಾಗವಾಗಿ ಆ ವೀಡಿಯೊದಲ್ಲಿ ನಟಿಸುವುದು ಸಮಸ್ಯಾತ್ಮಕ ಎಂದು ನಾವು ಯಾವತ್ತೂ ಭಾವಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಇತರ ನೆಟಿಜನ್‌ಗಳಂತೆ ನಂದಿಯವರಿಗೆ ಬೆಂಬಲವನ್ನು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...