Homeಮುಖಪುಟಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

ಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

- Advertisement -
- Advertisement -

ತ್ರಿಪುರಾ ವ್ಲಾಗರ್ (ಯೂಟ್ಯೂಬರ್‌) ಬಾಪನ್ ನಂದಿ ಅವರ ಮೇಲೆ ಸ್ಥಳೀಯ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡರು ಏಪ್ರಿಲ್ 22ರಂದು ಹಲ್ಲೆ ಮಾಡಿದ್ದಾರೆ.

“ಬಿಜೆಪಿ ನಾಯಕರೊಬ್ಬರು ಅವರ ಮೇಲಿನ ಹಲ್ಲೆಯನ್ನು ಚಿತ್ರೀಕರಿಸಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ, ವಿಡಿಯೊ ನಂತರ ವೈರಲ್ ಆಗಿದೆ”.

ಜನಪ್ರಿಯ ವ್ಲಾಗರ್ ಆಗಿರುವ ನಂದಿಯವರು ಉದಯಪುರ ಮೂಲದವರು. ತ್ರಿಪುರಾದ ಖುಪಿಲಾಂಗ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರೊಬ್ಬರು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ನಂದಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ‘ನ್ಯೂಸ್‌ಕ್ಲಿಕ್’ ವರದಿ ಮಾಡಿದೆ. ಇದರ ಬೆನ್ನಲ್ಲೇ ಪೊಲೀಸರು ವ್ಲಾಗರ್‌ನನ್ನು ವಿಚಾರಣೆಗೆ ಕರೆದಿದ್ದಾರೆ.

ಈ ಘಟನೆಯ ಬಳಿಕ ತ್ರಿಪುರಾದ ಅನೇಕ ನಾಗರಿಕರು ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ನಂದಿಯವರು ಈದ್‌ನಲ್ಲಿ ವೀಡಿಯೊವನ್ನು ಮಾಡಿದ್ದಾರೆ, ಹಾಡನ್ನು ಸಹ ನಿರ್ಮಿಸಿದ್ದಾರೆ ಎಂದು ವರದಿಯಾಗಿದೆ. ಕೋಮುವಾದದ ಆಧಾರದ ಮೇಲೆ ಜನರು ವಿಭಜನೆಯಾಗದಂತೆ ಮತ್ತು ಸಾಮರಸ್ಯದಿಂದ ಈದ್ ಹಬ್ಬವನ್ನು ಆಚರಿಸುವಂತೆ ವೀಡಿಯೊ ಕರೆ ನೀಡಿದೆ.

ನ್ಯೂಸ್‌ಕ್ಲಿಕ್ ಜಾಲತಾಣವು ವಿಡಿಯೊ ಕುರಿತು ವರದಿ ಮಾಡಿತು. ಬಿಜೆಪಿ ನಾಯಕರು ನಂದಿಯವರನ್ನು ಬರಮಾಡಿಕೊಂಡಿದ್ದರು. ಬಿಜೆಪಿಯ ಮಹಿಳಾ ನಾಯಕಿಯೊಬ್ಬರು ನಂದಿಯವರ ಕೊರಳಪಟ್ಟಿ ಹಿಡಿದು ಥಳಿಸಿದ್ದಾರೆ. ಈದ್ ವಿಡಿಯೋದಲ್ಲಿ ಮುಸ್ಲಿಂ ಯುವಕನಂತೆ ನಟಿಸುವ ಮೂಲಕ ನಂದಿ ತನ್ನ ಹಿಂದೂ ಮೂಲವನ್ನು ಏಕೆ ಕೀಳಾಗಿ ಕಂಡಿದ್ದಾರೆ ಎಂದು ಆಕೆ ಪ್ರಶ್ನಿಸಿದ್ದಾರೆ. ಅವರ ಹಲ್ಲೆಯ ವಿಡಿಯೋ ಕೂಡ ಇದೀಗ ವೈರಲ್ ಆಗಿದೆ. ತಮ್ಮನ್ನು ಇತರರು ಸುತ್ತುವರೆದಿದ್ದಾಗ ತಮ್ಮನ್ನು ಬಿಟ್ಟುಬಿಡುವಂತೆ ನಂದಿ ಕೋರುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಈಸ್ಟ್‌ಮೋಜೋ ಜಾಲತಾಣ ನಂದಿಯವರ ಹೇಳಿಕೆಯನ್ನು ಉಲ್ಲೇಖಿಸಿದೆ. “ಪೂರ್ವ ಗೋಕುಲ್ ನಗರ ಪಂಚಾಯತ್‌ನ ಚುನಾಯಿತ ಉಪಮುಖ್ಯಸ್ಥರು ಕೆಲವು ಕೆಲಸದ ನಿಮಿತ್ತ ತಮ್ಮ ಸ್ಥಳಕ್ಕೆ ಭೇಟಿ ನೀಡಲು ನನ್ನನ್ನು ಕರೆದರು. ನಾವು ಒಬ್ಬರಿಗೊಬ್ಬರು ಗೊತ್ತಿದ್ದೆವು. ಸುಮಾರು 30 ರಿಂದ 40 ಯುವಕರು ನನಗಾಗಿ ಕಾಯುತ್ತಿದ್ದಾರೆ ಎಂದು ನಾನು ಅಲ್ಲಿಗೆ ಹೋದೆ” ಎಂದಿದ್ದಾರೆ.

“ಪಂಚಾಯತ್ ನಾಯಕ ನನಗೆ ಕಪಾಳಮೋಕ್ಷ ಮಾಡಿದನು, ಅಲ್ಲಿದ್ದ ಎಲ್ಲರ ಮುಂದೆ ಥಳಿಸಿದನು. ನನ್ನ ತಪ್ಪೇನು ಎಂದು ನಾನು ಕೇಳುತ್ತಲೇ ಇದ್ದೆ. ಆದರೆ ಯಾರೂ ನನ್ನ ಮಾತುಗಳನ್ನು ಆಲಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

ಈದ್ ವಿಡಿಯೋದ ನಿರ್ಮಾಪಕ ನಾನಲ್ಲ ಎಂದೂ ನಂದಿ ಹೇಳಿದ್ದಾರೆ. ಇತರರಂತೆ ನಾನು ಅದರಲ್ಲಿ ಕೇವಲ ನಟಿಸಿದ್ದೇನೆ. ನನ್ನ ಕೆಲಸಕ್ಕಾಗಿ ಹಣ ನೀಡಿದ್ದಾರೆ. ತಮ್ಮ ವಿರುದ್ಧ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

“ವಿಶ್ವ ಹಿಂದೂ ಪರಿಷತ್‌ನ ಆದೇಶದ ಮೇರೆಗೆ ವ್ಲಾಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಈಸ್ಟ್‌ಮೋಜೋ ವರದಿ ಮಾಡಿದೆ.

ಈದ್ ವೀಡಿಯೋದಲ್ಲಿ ನಟಿಸಿದ ಇತರ ಇಬ್ಬರಾದ ಉಮಾ ದೇಬನಾಥ್ ಮತ್ತು ಸ್ನೇಹಾ ಭೌಮಿಕ್ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ವೃತ್ತಿಯ ಭಾಗವಾಗಿ ಆ ವೀಡಿಯೊದಲ್ಲಿ ನಟಿಸುವುದು ಸಮಸ್ಯಾತ್ಮಕ ಎಂದು ನಾವು ಯಾವತ್ತೂ ಭಾವಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಇತರ ನೆಟಿಜನ್‌ಗಳಂತೆ ನಂದಿಯವರಿಗೆ ಬೆಂಬಲವನ್ನು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...