Homeಮುಖಪುಟಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

ಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

- Advertisement -
- Advertisement -

ತ್ರಿಪುರಾ ವ್ಲಾಗರ್ (ಯೂಟ್ಯೂಬರ್‌) ಬಾಪನ್ ನಂದಿ ಅವರ ಮೇಲೆ ಸ್ಥಳೀಯ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡರು ಏಪ್ರಿಲ್ 22ರಂದು ಹಲ್ಲೆ ಮಾಡಿದ್ದಾರೆ.

“ಬಿಜೆಪಿ ನಾಯಕರೊಬ್ಬರು ಅವರ ಮೇಲಿನ ಹಲ್ಲೆಯನ್ನು ಚಿತ್ರೀಕರಿಸಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ, ವಿಡಿಯೊ ನಂತರ ವೈರಲ್ ಆಗಿದೆ”.

ಜನಪ್ರಿಯ ವ್ಲಾಗರ್ ಆಗಿರುವ ನಂದಿಯವರು ಉದಯಪುರ ಮೂಲದವರು. ತ್ರಿಪುರಾದ ಖುಪಿಲಾಂಗ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರೊಬ್ಬರು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ನಂದಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ‘ನ್ಯೂಸ್‌ಕ್ಲಿಕ್’ ವರದಿ ಮಾಡಿದೆ. ಇದರ ಬೆನ್ನಲ್ಲೇ ಪೊಲೀಸರು ವ್ಲಾಗರ್‌ನನ್ನು ವಿಚಾರಣೆಗೆ ಕರೆದಿದ್ದಾರೆ.

ಈ ಘಟನೆಯ ಬಳಿಕ ತ್ರಿಪುರಾದ ಅನೇಕ ನಾಗರಿಕರು ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ನಂದಿಯವರು ಈದ್‌ನಲ್ಲಿ ವೀಡಿಯೊವನ್ನು ಮಾಡಿದ್ದಾರೆ, ಹಾಡನ್ನು ಸಹ ನಿರ್ಮಿಸಿದ್ದಾರೆ ಎಂದು ವರದಿಯಾಗಿದೆ. ಕೋಮುವಾದದ ಆಧಾರದ ಮೇಲೆ ಜನರು ವಿಭಜನೆಯಾಗದಂತೆ ಮತ್ತು ಸಾಮರಸ್ಯದಿಂದ ಈದ್ ಹಬ್ಬವನ್ನು ಆಚರಿಸುವಂತೆ ವೀಡಿಯೊ ಕರೆ ನೀಡಿದೆ.

ನ್ಯೂಸ್‌ಕ್ಲಿಕ್ ಜಾಲತಾಣವು ವಿಡಿಯೊ ಕುರಿತು ವರದಿ ಮಾಡಿತು. ಬಿಜೆಪಿ ನಾಯಕರು ನಂದಿಯವರನ್ನು ಬರಮಾಡಿಕೊಂಡಿದ್ದರು. ಬಿಜೆಪಿಯ ಮಹಿಳಾ ನಾಯಕಿಯೊಬ್ಬರು ನಂದಿಯವರ ಕೊರಳಪಟ್ಟಿ ಹಿಡಿದು ಥಳಿಸಿದ್ದಾರೆ. ಈದ್ ವಿಡಿಯೋದಲ್ಲಿ ಮುಸ್ಲಿಂ ಯುವಕನಂತೆ ನಟಿಸುವ ಮೂಲಕ ನಂದಿ ತನ್ನ ಹಿಂದೂ ಮೂಲವನ್ನು ಏಕೆ ಕೀಳಾಗಿ ಕಂಡಿದ್ದಾರೆ ಎಂದು ಆಕೆ ಪ್ರಶ್ನಿಸಿದ್ದಾರೆ. ಅವರ ಹಲ್ಲೆಯ ವಿಡಿಯೋ ಕೂಡ ಇದೀಗ ವೈರಲ್ ಆಗಿದೆ. ತಮ್ಮನ್ನು ಇತರರು ಸುತ್ತುವರೆದಿದ್ದಾಗ ತಮ್ಮನ್ನು ಬಿಟ್ಟುಬಿಡುವಂತೆ ನಂದಿ ಕೋರುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಈಸ್ಟ್‌ಮೋಜೋ ಜಾಲತಾಣ ನಂದಿಯವರ ಹೇಳಿಕೆಯನ್ನು ಉಲ್ಲೇಖಿಸಿದೆ. “ಪೂರ್ವ ಗೋಕುಲ್ ನಗರ ಪಂಚಾಯತ್‌ನ ಚುನಾಯಿತ ಉಪಮುಖ್ಯಸ್ಥರು ಕೆಲವು ಕೆಲಸದ ನಿಮಿತ್ತ ತಮ್ಮ ಸ್ಥಳಕ್ಕೆ ಭೇಟಿ ನೀಡಲು ನನ್ನನ್ನು ಕರೆದರು. ನಾವು ಒಬ್ಬರಿಗೊಬ್ಬರು ಗೊತ್ತಿದ್ದೆವು. ಸುಮಾರು 30 ರಿಂದ 40 ಯುವಕರು ನನಗಾಗಿ ಕಾಯುತ್ತಿದ್ದಾರೆ ಎಂದು ನಾನು ಅಲ್ಲಿಗೆ ಹೋದೆ” ಎಂದಿದ್ದಾರೆ.

“ಪಂಚಾಯತ್ ನಾಯಕ ನನಗೆ ಕಪಾಳಮೋಕ್ಷ ಮಾಡಿದನು, ಅಲ್ಲಿದ್ದ ಎಲ್ಲರ ಮುಂದೆ ಥಳಿಸಿದನು. ನನ್ನ ತಪ್ಪೇನು ಎಂದು ನಾನು ಕೇಳುತ್ತಲೇ ಇದ್ದೆ. ಆದರೆ ಯಾರೂ ನನ್ನ ಮಾತುಗಳನ್ನು ಆಲಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

ಈದ್ ವಿಡಿಯೋದ ನಿರ್ಮಾಪಕ ನಾನಲ್ಲ ಎಂದೂ ನಂದಿ ಹೇಳಿದ್ದಾರೆ. ಇತರರಂತೆ ನಾನು ಅದರಲ್ಲಿ ಕೇವಲ ನಟಿಸಿದ್ದೇನೆ. ನನ್ನ ಕೆಲಸಕ್ಕಾಗಿ ಹಣ ನೀಡಿದ್ದಾರೆ. ತಮ್ಮ ವಿರುದ್ಧ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

“ವಿಶ್ವ ಹಿಂದೂ ಪರಿಷತ್‌ನ ಆದೇಶದ ಮೇರೆಗೆ ವ್ಲಾಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಈಸ್ಟ್‌ಮೋಜೋ ವರದಿ ಮಾಡಿದೆ.

ಈದ್ ವೀಡಿಯೋದಲ್ಲಿ ನಟಿಸಿದ ಇತರ ಇಬ್ಬರಾದ ಉಮಾ ದೇಬನಾಥ್ ಮತ್ತು ಸ್ನೇಹಾ ಭೌಮಿಕ್ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ವೃತ್ತಿಯ ಭಾಗವಾಗಿ ಆ ವೀಡಿಯೊದಲ್ಲಿ ನಟಿಸುವುದು ಸಮಸ್ಯಾತ್ಮಕ ಎಂದು ನಾವು ಯಾವತ್ತೂ ಭಾವಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಇತರ ನೆಟಿಜನ್‌ಗಳಂತೆ ನಂದಿಯವರಿಗೆ ಬೆಂಬಲವನ್ನು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...