Homeಮುಖಪುಟಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

ಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

- Advertisement -
- Advertisement -

ತ್ರಿಪುರಾ ವ್ಲಾಗರ್ (ಯೂಟ್ಯೂಬರ್‌) ಬಾಪನ್ ನಂದಿ ಅವರ ಮೇಲೆ ಸ್ಥಳೀಯ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡರು ಏಪ್ರಿಲ್ 22ರಂದು ಹಲ್ಲೆ ಮಾಡಿದ್ದಾರೆ.

“ಬಿಜೆಪಿ ನಾಯಕರೊಬ್ಬರು ಅವರ ಮೇಲಿನ ಹಲ್ಲೆಯನ್ನು ಚಿತ್ರೀಕರಿಸಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ, ವಿಡಿಯೊ ನಂತರ ವೈರಲ್ ಆಗಿದೆ”.

ಜನಪ್ರಿಯ ವ್ಲಾಗರ್ ಆಗಿರುವ ನಂದಿಯವರು ಉದಯಪುರ ಮೂಲದವರು. ತ್ರಿಪುರಾದ ಖುಪಿಲಾಂಗ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರೊಬ್ಬರು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ನಂದಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ‘ನ್ಯೂಸ್‌ಕ್ಲಿಕ್’ ವರದಿ ಮಾಡಿದೆ. ಇದರ ಬೆನ್ನಲ್ಲೇ ಪೊಲೀಸರು ವ್ಲಾಗರ್‌ನನ್ನು ವಿಚಾರಣೆಗೆ ಕರೆದಿದ್ದಾರೆ.

ಈ ಘಟನೆಯ ಬಳಿಕ ತ್ರಿಪುರಾದ ಅನೇಕ ನಾಗರಿಕರು ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ನಂದಿಯವರು ಈದ್‌ನಲ್ಲಿ ವೀಡಿಯೊವನ್ನು ಮಾಡಿದ್ದಾರೆ, ಹಾಡನ್ನು ಸಹ ನಿರ್ಮಿಸಿದ್ದಾರೆ ಎಂದು ವರದಿಯಾಗಿದೆ. ಕೋಮುವಾದದ ಆಧಾರದ ಮೇಲೆ ಜನರು ವಿಭಜನೆಯಾಗದಂತೆ ಮತ್ತು ಸಾಮರಸ್ಯದಿಂದ ಈದ್ ಹಬ್ಬವನ್ನು ಆಚರಿಸುವಂತೆ ವೀಡಿಯೊ ಕರೆ ನೀಡಿದೆ.

ನ್ಯೂಸ್‌ಕ್ಲಿಕ್ ಜಾಲತಾಣವು ವಿಡಿಯೊ ಕುರಿತು ವರದಿ ಮಾಡಿತು. ಬಿಜೆಪಿ ನಾಯಕರು ನಂದಿಯವರನ್ನು ಬರಮಾಡಿಕೊಂಡಿದ್ದರು. ಬಿಜೆಪಿಯ ಮಹಿಳಾ ನಾಯಕಿಯೊಬ್ಬರು ನಂದಿಯವರ ಕೊರಳಪಟ್ಟಿ ಹಿಡಿದು ಥಳಿಸಿದ್ದಾರೆ. ಈದ್ ವಿಡಿಯೋದಲ್ಲಿ ಮುಸ್ಲಿಂ ಯುವಕನಂತೆ ನಟಿಸುವ ಮೂಲಕ ನಂದಿ ತನ್ನ ಹಿಂದೂ ಮೂಲವನ್ನು ಏಕೆ ಕೀಳಾಗಿ ಕಂಡಿದ್ದಾರೆ ಎಂದು ಆಕೆ ಪ್ರಶ್ನಿಸಿದ್ದಾರೆ. ಅವರ ಹಲ್ಲೆಯ ವಿಡಿಯೋ ಕೂಡ ಇದೀಗ ವೈರಲ್ ಆಗಿದೆ. ತಮ್ಮನ್ನು ಇತರರು ಸುತ್ತುವರೆದಿದ್ದಾಗ ತಮ್ಮನ್ನು ಬಿಟ್ಟುಬಿಡುವಂತೆ ನಂದಿ ಕೋರುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಈಸ್ಟ್‌ಮೋಜೋ ಜಾಲತಾಣ ನಂದಿಯವರ ಹೇಳಿಕೆಯನ್ನು ಉಲ್ಲೇಖಿಸಿದೆ. “ಪೂರ್ವ ಗೋಕುಲ್ ನಗರ ಪಂಚಾಯತ್‌ನ ಚುನಾಯಿತ ಉಪಮುಖ್ಯಸ್ಥರು ಕೆಲವು ಕೆಲಸದ ನಿಮಿತ್ತ ತಮ್ಮ ಸ್ಥಳಕ್ಕೆ ಭೇಟಿ ನೀಡಲು ನನ್ನನ್ನು ಕರೆದರು. ನಾವು ಒಬ್ಬರಿಗೊಬ್ಬರು ಗೊತ್ತಿದ್ದೆವು. ಸುಮಾರು 30 ರಿಂದ 40 ಯುವಕರು ನನಗಾಗಿ ಕಾಯುತ್ತಿದ್ದಾರೆ ಎಂದು ನಾನು ಅಲ್ಲಿಗೆ ಹೋದೆ” ಎಂದಿದ್ದಾರೆ.

“ಪಂಚಾಯತ್ ನಾಯಕ ನನಗೆ ಕಪಾಳಮೋಕ್ಷ ಮಾಡಿದನು, ಅಲ್ಲಿದ್ದ ಎಲ್ಲರ ಮುಂದೆ ಥಳಿಸಿದನು. ನನ್ನ ತಪ್ಪೇನು ಎಂದು ನಾನು ಕೇಳುತ್ತಲೇ ಇದ್ದೆ. ಆದರೆ ಯಾರೂ ನನ್ನ ಮಾತುಗಳನ್ನು ಆಲಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

ಈದ್ ವಿಡಿಯೋದ ನಿರ್ಮಾಪಕ ನಾನಲ್ಲ ಎಂದೂ ನಂದಿ ಹೇಳಿದ್ದಾರೆ. ಇತರರಂತೆ ನಾನು ಅದರಲ್ಲಿ ಕೇವಲ ನಟಿಸಿದ್ದೇನೆ. ನನ್ನ ಕೆಲಸಕ್ಕಾಗಿ ಹಣ ನೀಡಿದ್ದಾರೆ. ತಮ್ಮ ವಿರುದ್ಧ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

“ವಿಶ್ವ ಹಿಂದೂ ಪರಿಷತ್‌ನ ಆದೇಶದ ಮೇರೆಗೆ ವ್ಲಾಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಈಸ್ಟ್‌ಮೋಜೋ ವರದಿ ಮಾಡಿದೆ.

ಈದ್ ವೀಡಿಯೋದಲ್ಲಿ ನಟಿಸಿದ ಇತರ ಇಬ್ಬರಾದ ಉಮಾ ದೇಬನಾಥ್ ಮತ್ತು ಸ್ನೇಹಾ ಭೌಮಿಕ್ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ವೃತ್ತಿಯ ಭಾಗವಾಗಿ ಆ ವೀಡಿಯೊದಲ್ಲಿ ನಟಿಸುವುದು ಸಮಸ್ಯಾತ್ಮಕ ಎಂದು ನಾವು ಯಾವತ್ತೂ ಭಾವಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಇತರ ನೆಟಿಜನ್‌ಗಳಂತೆ ನಂದಿಯವರಿಗೆ ಬೆಂಬಲವನ್ನು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...