Homeಮುಖಪುಟಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

ಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

- Advertisement -
- Advertisement -

ತ್ರಿಪುರಾ ವ್ಲಾಗರ್ (ಯೂಟ್ಯೂಬರ್‌) ಬಾಪನ್ ನಂದಿ ಅವರ ಮೇಲೆ ಸ್ಥಳೀಯ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡರು ಏಪ್ರಿಲ್ 22ರಂದು ಹಲ್ಲೆ ಮಾಡಿದ್ದಾರೆ.

“ಬಿಜೆಪಿ ನಾಯಕರೊಬ್ಬರು ಅವರ ಮೇಲಿನ ಹಲ್ಲೆಯನ್ನು ಚಿತ್ರೀಕರಿಸಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ, ವಿಡಿಯೊ ನಂತರ ವೈರಲ್ ಆಗಿದೆ”.

ಜನಪ್ರಿಯ ವ್ಲಾಗರ್ ಆಗಿರುವ ನಂದಿಯವರು ಉದಯಪುರ ಮೂಲದವರು. ತ್ರಿಪುರಾದ ಖುಪಿಲಾಂಗ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರೊಬ್ಬರು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ನಂದಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ‘ನ್ಯೂಸ್‌ಕ್ಲಿಕ್’ ವರದಿ ಮಾಡಿದೆ. ಇದರ ಬೆನ್ನಲ್ಲೇ ಪೊಲೀಸರು ವ್ಲಾಗರ್‌ನನ್ನು ವಿಚಾರಣೆಗೆ ಕರೆದಿದ್ದಾರೆ.

ಈ ಘಟನೆಯ ಬಳಿಕ ತ್ರಿಪುರಾದ ಅನೇಕ ನಾಗರಿಕರು ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ನಂದಿಯವರು ಈದ್‌ನಲ್ಲಿ ವೀಡಿಯೊವನ್ನು ಮಾಡಿದ್ದಾರೆ, ಹಾಡನ್ನು ಸಹ ನಿರ್ಮಿಸಿದ್ದಾರೆ ಎಂದು ವರದಿಯಾಗಿದೆ. ಕೋಮುವಾದದ ಆಧಾರದ ಮೇಲೆ ಜನರು ವಿಭಜನೆಯಾಗದಂತೆ ಮತ್ತು ಸಾಮರಸ್ಯದಿಂದ ಈದ್ ಹಬ್ಬವನ್ನು ಆಚರಿಸುವಂತೆ ವೀಡಿಯೊ ಕರೆ ನೀಡಿದೆ.

ನ್ಯೂಸ್‌ಕ್ಲಿಕ್ ಜಾಲತಾಣವು ವಿಡಿಯೊ ಕುರಿತು ವರದಿ ಮಾಡಿತು. ಬಿಜೆಪಿ ನಾಯಕರು ನಂದಿಯವರನ್ನು ಬರಮಾಡಿಕೊಂಡಿದ್ದರು. ಬಿಜೆಪಿಯ ಮಹಿಳಾ ನಾಯಕಿಯೊಬ್ಬರು ನಂದಿಯವರ ಕೊರಳಪಟ್ಟಿ ಹಿಡಿದು ಥಳಿಸಿದ್ದಾರೆ. ಈದ್ ವಿಡಿಯೋದಲ್ಲಿ ಮುಸ್ಲಿಂ ಯುವಕನಂತೆ ನಟಿಸುವ ಮೂಲಕ ನಂದಿ ತನ್ನ ಹಿಂದೂ ಮೂಲವನ್ನು ಏಕೆ ಕೀಳಾಗಿ ಕಂಡಿದ್ದಾರೆ ಎಂದು ಆಕೆ ಪ್ರಶ್ನಿಸಿದ್ದಾರೆ. ಅವರ ಹಲ್ಲೆಯ ವಿಡಿಯೋ ಕೂಡ ಇದೀಗ ವೈರಲ್ ಆಗಿದೆ. ತಮ್ಮನ್ನು ಇತರರು ಸುತ್ತುವರೆದಿದ್ದಾಗ ತಮ್ಮನ್ನು ಬಿಟ್ಟುಬಿಡುವಂತೆ ನಂದಿ ಕೋರುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಈಸ್ಟ್‌ಮೋಜೋ ಜಾಲತಾಣ ನಂದಿಯವರ ಹೇಳಿಕೆಯನ್ನು ಉಲ್ಲೇಖಿಸಿದೆ. “ಪೂರ್ವ ಗೋಕುಲ್ ನಗರ ಪಂಚಾಯತ್‌ನ ಚುನಾಯಿತ ಉಪಮುಖ್ಯಸ್ಥರು ಕೆಲವು ಕೆಲಸದ ನಿಮಿತ್ತ ತಮ್ಮ ಸ್ಥಳಕ್ಕೆ ಭೇಟಿ ನೀಡಲು ನನ್ನನ್ನು ಕರೆದರು. ನಾವು ಒಬ್ಬರಿಗೊಬ್ಬರು ಗೊತ್ತಿದ್ದೆವು. ಸುಮಾರು 30 ರಿಂದ 40 ಯುವಕರು ನನಗಾಗಿ ಕಾಯುತ್ತಿದ್ದಾರೆ ಎಂದು ನಾನು ಅಲ್ಲಿಗೆ ಹೋದೆ” ಎಂದಿದ್ದಾರೆ.

“ಪಂಚಾಯತ್ ನಾಯಕ ನನಗೆ ಕಪಾಳಮೋಕ್ಷ ಮಾಡಿದನು, ಅಲ್ಲಿದ್ದ ಎಲ್ಲರ ಮುಂದೆ ಥಳಿಸಿದನು. ನನ್ನ ತಪ್ಪೇನು ಎಂದು ನಾನು ಕೇಳುತ್ತಲೇ ಇದ್ದೆ. ಆದರೆ ಯಾರೂ ನನ್ನ ಮಾತುಗಳನ್ನು ಆಲಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

ಈದ್ ವಿಡಿಯೋದ ನಿರ್ಮಾಪಕ ನಾನಲ್ಲ ಎಂದೂ ನಂದಿ ಹೇಳಿದ್ದಾರೆ. ಇತರರಂತೆ ನಾನು ಅದರಲ್ಲಿ ಕೇವಲ ನಟಿಸಿದ್ದೇನೆ. ನನ್ನ ಕೆಲಸಕ್ಕಾಗಿ ಹಣ ನೀಡಿದ್ದಾರೆ. ತಮ್ಮ ವಿರುದ್ಧ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

“ವಿಶ್ವ ಹಿಂದೂ ಪರಿಷತ್‌ನ ಆದೇಶದ ಮೇರೆಗೆ ವ್ಲಾಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಈಸ್ಟ್‌ಮೋಜೋ ವರದಿ ಮಾಡಿದೆ.

ಈದ್ ವೀಡಿಯೋದಲ್ಲಿ ನಟಿಸಿದ ಇತರ ಇಬ್ಬರಾದ ಉಮಾ ದೇಬನಾಥ್ ಮತ್ತು ಸ್ನೇಹಾ ಭೌಮಿಕ್ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ವೃತ್ತಿಯ ಭಾಗವಾಗಿ ಆ ವೀಡಿಯೊದಲ್ಲಿ ನಟಿಸುವುದು ಸಮಸ್ಯಾತ್ಮಕ ಎಂದು ನಾವು ಯಾವತ್ತೂ ಭಾವಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಇತರ ನೆಟಿಜನ್‌ಗಳಂತೆ ನಂದಿಯವರಿಗೆ ಬೆಂಬಲವನ್ನು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...