Homeಕರ್ನಾಟಕ‘ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಕಾಯ್ದೆ’ - ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ಏನು?

‘ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಕಾಯ್ದೆ’ – ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ಏನು?

- Advertisement -
- Advertisement -

ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು, ಕರ್ನಾಟಕದಲ್ಲೂ ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸರಿಯಾದ ಸಮಯ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ. ಆದರೆ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಜನಸಂಖ್ಯಾ ಸ್ಪೋಟ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳು ಜನಸಂಖ್ಯಾ ನಿಯಂತ್ರಣ ಕಾನೂನಗಳನ್ನು ತರಲು ಹೊರಟಿದೆ. ಅದರಲ್ಲೂ ಉತ್ತರ ಪ್ರದೇಶ ಈಗಾಗಲೆ ಕರಡು ಮಸೂದೆಯನ್ನು ಪ್ರಕಟಿಸಿದೆ. ಈ ಕರಡು ಮಸೂದೆಯಲ್ಲಿ, ಕಾನೂನು ಉಲ್ಲಂಘಿಸಿದವರಿಗೆ ಶಿಕ್ಷೆಯನ್ನು ಮತ್ತು ಪಾಲಿಸಿದವರಿಗೆ ಕೊಡುಗೆಯನ್ನೂ ಘೋಷಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ಉತ್ತರ ಪ್ರದೇಶ ತನ್ನ ಕರಡು ಮಸೂದೆಯಲ್ಲಿ, ಕಾನೂನನ್ನು ಪಾಲಿಸಿದವರಿಗೆ ನೀರು ಮತ್ತು ವಿದ್ಯುತ್ ಬಿಲ್‌ಗಳು, ಮನೆ ತೆರಿಗೆ, ಗೃಹ ಸಾಲಗಳ ಮೇಲೆ ರಿಯಾಯಿತಿ ನೀಡುವುದಾಗಿ ಹೇಳಿದೆ. ಕಾನೂನು ಉಲ್ಲಂಘಿಸಿದವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಥವಾ ಬಡ್ತಿ ಪಡೆಯುವ ಮತ್ತು ಯಾವುದೇ ರೀತಿಯ ಸರ್ಕಾರಿ ಸಬ್ಸಿಡಿ ಪಡೆಯುವುದನ್ನು ನಿರ್ಬಂಧಿಸುತ್ತದೆ.

ಗುರುವಾರ ಟ್ವೀಟ್ ಮಾಡಿದ್ದ ಸಿಟಿ ರವಿ, “ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸರಿಯಾದ ಸಮಯ. ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಜನಸಂಖ್ಯಾ ನಿತಂತ್ರಣ ಕಾನೂನಿನ ಚರ್ಚೆಗಳ ಬಗ್ಗೆ ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ಜನಸಂಖ್ಯೆ ನಿಯಂತ್ರಣೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಿರುವ ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಗೋವಾ ಮುಂತಾದೆಡೆ ಜನಸಂಖ್ಯೆ ನಿಯಂತ್ರಣಕ್ಕೆ ಬಂದಿದ್ದು ಶಿಕ್ಷೆಯಿಂದಲ್ಲ ಬದಲಾಗಿ ಶಿಕ್ಷಣದಿಂದ. ಈ ರಾಜ್ಯಗಳಲ್ಲಿ ಒಟ್ಟು ಫಲವಂತೆಕೆಯ ದರ (TFR) ದೇಶದ ರಿಪ್ಲೇಸ್‍ಮೆಂಟ್ ಲೆವೆಲ್ 2.1 ಕ್ಕಿಂತಾ ಕಡಿಮೆಯಿದೆ” ಎಂದು ಹೇಳಿದ್ದಾರೆ.

“ಕರ್ನಾಟಕ, ಅವಿಭಜಿತ ಆಂಧ್ರಪ್ರದೇಶದಲ್ಲಿ TFR 1.7 ಇದ್ದರೆ ಕೇರಳದಲ್ಲಿ 1.8 ಹಾಗೂ ಗೋವಾದಲ್ಲಿ 1.3 ಇದೆ. ಅದೇ ಈ TFR ಉತ್ತರ ಪ್ರದೇಶ, ಬಿಹಾರ, ಛತ್ತೀಸ್‍ಗಢ, ರಾಜಸ್ಥಾನ, ಮಧ್ಯಪ್ರದೇಶ, ಝಾರ್ಖಂಡ್‍ಗಳಲ್ಲಿ 2.1 ಕ್ಕಿಂತ ಜಾಸ್ತಿಯಿದೆ. ಭಾರತದ ಒಟ್ಟು ಜನಸಂಖ್ಯೆಯ 40% ಜನಸಂಖ್ಯೆ ಇರುವುದೇ ಈ ಆರು ರಾಜ್ಯಗಳಲ್ಲಿ.
ಹಾಗಾಗಿ ಯಾಕಾಗಿ ಈ ರಾಜ್ಯಗಳು ಜನಸಂಖ್ಯೆ ನಿಯಂತ್ರಣೆಯಲ್ಲಿ ದಕ್ಷಿಣದ ರಾಜ್ಯಗಳನ್ನು ಮಾದರಿಯಾಗಿ ಸ್ವೀಕರಿಸಬಾರದು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

“ದಕ್ಷಿಣದ ರಾಜ್ಯಗಳಲ್ಲಿ ಶಿಕ್ಷಣದ ಪ್ರಮಾಣ ಹೆಚ್ಚಿರುವುದು, ಜನಸಂಖ್ಯೆ ನಿಯಂತ್ರಣದಲ್ಲಿ ಬಲುದೊಡ್ಡ ಪಾತ್ರ ವಹಿಸಿದೆ. ಯಾವುದೇ ಕಠಿಣ ಕಾನೂನುಗಳಿಲ್ಲದೇ, ಶಿಕ್ಷೆಯಿಲ್ಲದೇ ಕೇವಲ ಉತ್ತಮ ಶಿಕ್ಷಣದಿಂದ ದಕ್ಷಿಣ ಭಾರತದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಬಂದಿರುವಾಗ, ಅದು ಉತ್ತರ ಭಾರತದಲ್ಲಿ ಯಾಕಾಗಬಾರದು? ಶಿಕ್ಷಣದಿಂದಾಗುವ ಕೆಲಸವನ್ನು ಶಿಕ್ಷೆಯಿಂದ ಯಾಕೆ ಮಾಡಬೇಕು?” ಎಂದು ಅವರು ಹೇಳಿದ್ದಾರೆ.

“ಉತ್ತರ ಪ್ರದೇಶದಲ್ಲೇ 1993 ರಲ್ಲಿ 4.82 ಇದ್ದ TFR 2016 ರಲ್ಲಿ 2.7 ಕ್ಕೆ ಬಂದಿಳಿದಿದೆ. ಅಲ್ಲಿನ ಸರಕಾರದ ವರದಿಗಳ ಪ್ರಕಾರ 2025 ರ ಹೊತ್ತಿಗೆ ಇದು ಇನ್ನೂ ಇಳಿದು 2.1 ಕ್ಕೆ ಬರಲಿದೆ. ಅಂದರೆ ಜನಸಂಖ್ಯೆ ಸ್ಪೋಟವಾಗುತ್ತಿಲ್ಲ ಬದಲಾಗಿ ಅದು ಇಳಿಯುತ್ತಿದೆ. ಅದನ್ನು ಇನ್ನೂ ಸರಿಯಾದ ಹಾಗೂ ವ್ಯವಸ್ಥಿತ ರೀತಿಯಲ್ಲಿ ಜಾರಿಗೆ ತರಲು ಯುವ ಸಮುದಾಯವನ್ನು ಶಿಕ್ಷಿತರನ್ನಾಗಿಸಿಬೇಕು. ಅವರಲ್ಲಿ ಜಾಗೃತಿ ಹೆಚ್ಚಾಗಬೇಕೇ ಹೊರತು ಭೀತಿಯಲ್ಲ” ಎಂದು ಅಲ್ಮೈಡಾ ಗ್ಲಾಡ್‌ಸನ್‌ ಅವರು ಹೇಳಿದ್ದಾರೆ.

ಚಿಂತಕ ಶ್ರೀನಿವಾಸ್ ಕಾರ್ಕಾಳ ಅವರು, “ಕರ್ನಾಟಕದಲ್ಲಿ ಒಟ್ಟು ಫಲವಂತಿಕೆ ದರ (TFR) 1.67 ಇದ್ದು ರಿಪ್ಲೇಸ್ಮೆಂಟ್ ದರವಾದ 2.1 ಕ್ಕಿಂತ ಕಡಿಮೆ ಇದೆ (ತಂದೆತಾಯಿಗೆ ಎರಡು ಮಕ್ಕಳಿದ್ದಾಗ ಅದು ರಿಪ್ಲೇಸ್ಮೆಂಟ್ ಆಗಿರುತ್ತದೆ). ಮಾಜಿ ಮಂತ್ರಿಗಳು ಚಿಂತಿತರಾಗಬೇಕಿರುವುದು ಇಲ್ಲಿ ಜನಸಂಖ್ಯಾ ದರ ಕಡಿಮೆಯಾಗುತ್ತಿರುವ ಬಗ್ಗೆ ಹೊರತು ಜನಸಂಖ್ಯಾ ಸ್ಫೋಟದ ಬಗ್ಗೆ ಅಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾವಾರು ಮೀಸಲಾತಿ ಈ ಕ್ಷಣದ ತುರ್ತು: ಸದಾನಂದ ಗಂಗನಬೀಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....