Homeಕರ್ನಾಟಕ‘ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಕಾಯ್ದೆ’ - ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ಏನು?

‘ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಕಾಯ್ದೆ’ – ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ಏನು?

- Advertisement -
- Advertisement -

ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು, ಕರ್ನಾಟಕದಲ್ಲೂ ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸರಿಯಾದ ಸಮಯ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ. ಆದರೆ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಜನಸಂಖ್ಯಾ ಸ್ಪೋಟ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳು ಜನಸಂಖ್ಯಾ ನಿಯಂತ್ರಣ ಕಾನೂನಗಳನ್ನು ತರಲು ಹೊರಟಿದೆ. ಅದರಲ್ಲೂ ಉತ್ತರ ಪ್ರದೇಶ ಈಗಾಗಲೆ ಕರಡು ಮಸೂದೆಯನ್ನು ಪ್ರಕಟಿಸಿದೆ. ಈ ಕರಡು ಮಸೂದೆಯಲ್ಲಿ, ಕಾನೂನು ಉಲ್ಲಂಘಿಸಿದವರಿಗೆ ಶಿಕ್ಷೆಯನ್ನು ಮತ್ತು ಪಾಲಿಸಿದವರಿಗೆ ಕೊಡುಗೆಯನ್ನೂ ಘೋಷಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ಉತ್ತರ ಪ್ರದೇಶ ತನ್ನ ಕರಡು ಮಸೂದೆಯಲ್ಲಿ, ಕಾನೂನನ್ನು ಪಾಲಿಸಿದವರಿಗೆ ನೀರು ಮತ್ತು ವಿದ್ಯುತ್ ಬಿಲ್‌ಗಳು, ಮನೆ ತೆರಿಗೆ, ಗೃಹ ಸಾಲಗಳ ಮೇಲೆ ರಿಯಾಯಿತಿ ನೀಡುವುದಾಗಿ ಹೇಳಿದೆ. ಕಾನೂನು ಉಲ್ಲಂಘಿಸಿದವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಥವಾ ಬಡ್ತಿ ಪಡೆಯುವ ಮತ್ತು ಯಾವುದೇ ರೀತಿಯ ಸರ್ಕಾರಿ ಸಬ್ಸಿಡಿ ಪಡೆಯುವುದನ್ನು ನಿರ್ಬಂಧಿಸುತ್ತದೆ.

ಗುರುವಾರ ಟ್ವೀಟ್ ಮಾಡಿದ್ದ ಸಿಟಿ ರವಿ, “ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸರಿಯಾದ ಸಮಯ. ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಜನಸಂಖ್ಯಾ ನಿತಂತ್ರಣ ಕಾನೂನಿನ ಚರ್ಚೆಗಳ ಬಗ್ಗೆ ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ಜನಸಂಖ್ಯೆ ನಿಯಂತ್ರಣೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಿರುವ ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಗೋವಾ ಮುಂತಾದೆಡೆ ಜನಸಂಖ್ಯೆ ನಿಯಂತ್ರಣಕ್ಕೆ ಬಂದಿದ್ದು ಶಿಕ್ಷೆಯಿಂದಲ್ಲ ಬದಲಾಗಿ ಶಿಕ್ಷಣದಿಂದ. ಈ ರಾಜ್ಯಗಳಲ್ಲಿ ಒಟ್ಟು ಫಲವಂತೆಕೆಯ ದರ (TFR) ದೇಶದ ರಿಪ್ಲೇಸ್‍ಮೆಂಟ್ ಲೆವೆಲ್ 2.1 ಕ್ಕಿಂತಾ ಕಡಿಮೆಯಿದೆ” ಎಂದು ಹೇಳಿದ್ದಾರೆ.

“ಕರ್ನಾಟಕ, ಅವಿಭಜಿತ ಆಂಧ್ರಪ್ರದೇಶದಲ್ಲಿ TFR 1.7 ಇದ್ದರೆ ಕೇರಳದಲ್ಲಿ 1.8 ಹಾಗೂ ಗೋವಾದಲ್ಲಿ 1.3 ಇದೆ. ಅದೇ ಈ TFR ಉತ್ತರ ಪ್ರದೇಶ, ಬಿಹಾರ, ಛತ್ತೀಸ್‍ಗಢ, ರಾಜಸ್ಥಾನ, ಮಧ್ಯಪ್ರದೇಶ, ಝಾರ್ಖಂಡ್‍ಗಳಲ್ಲಿ 2.1 ಕ್ಕಿಂತ ಜಾಸ್ತಿಯಿದೆ. ಭಾರತದ ಒಟ್ಟು ಜನಸಂಖ್ಯೆಯ 40% ಜನಸಂಖ್ಯೆ ಇರುವುದೇ ಈ ಆರು ರಾಜ್ಯಗಳಲ್ಲಿ.
ಹಾಗಾಗಿ ಯಾಕಾಗಿ ಈ ರಾಜ್ಯಗಳು ಜನಸಂಖ್ಯೆ ನಿಯಂತ್ರಣೆಯಲ್ಲಿ ದಕ್ಷಿಣದ ರಾಜ್ಯಗಳನ್ನು ಮಾದರಿಯಾಗಿ ಸ್ವೀಕರಿಸಬಾರದು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

“ದಕ್ಷಿಣದ ರಾಜ್ಯಗಳಲ್ಲಿ ಶಿಕ್ಷಣದ ಪ್ರಮಾಣ ಹೆಚ್ಚಿರುವುದು, ಜನಸಂಖ್ಯೆ ನಿಯಂತ್ರಣದಲ್ಲಿ ಬಲುದೊಡ್ಡ ಪಾತ್ರ ವಹಿಸಿದೆ. ಯಾವುದೇ ಕಠಿಣ ಕಾನೂನುಗಳಿಲ್ಲದೇ, ಶಿಕ್ಷೆಯಿಲ್ಲದೇ ಕೇವಲ ಉತ್ತಮ ಶಿಕ್ಷಣದಿಂದ ದಕ್ಷಿಣ ಭಾರತದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಬಂದಿರುವಾಗ, ಅದು ಉತ್ತರ ಭಾರತದಲ್ಲಿ ಯಾಕಾಗಬಾರದು? ಶಿಕ್ಷಣದಿಂದಾಗುವ ಕೆಲಸವನ್ನು ಶಿಕ್ಷೆಯಿಂದ ಯಾಕೆ ಮಾಡಬೇಕು?” ಎಂದು ಅವರು ಹೇಳಿದ್ದಾರೆ.

“ಉತ್ತರ ಪ್ರದೇಶದಲ್ಲೇ 1993 ರಲ್ಲಿ 4.82 ಇದ್ದ TFR 2016 ರಲ್ಲಿ 2.7 ಕ್ಕೆ ಬಂದಿಳಿದಿದೆ. ಅಲ್ಲಿನ ಸರಕಾರದ ವರದಿಗಳ ಪ್ರಕಾರ 2025 ರ ಹೊತ್ತಿಗೆ ಇದು ಇನ್ನೂ ಇಳಿದು 2.1 ಕ್ಕೆ ಬರಲಿದೆ. ಅಂದರೆ ಜನಸಂಖ್ಯೆ ಸ್ಪೋಟವಾಗುತ್ತಿಲ್ಲ ಬದಲಾಗಿ ಅದು ಇಳಿಯುತ್ತಿದೆ. ಅದನ್ನು ಇನ್ನೂ ಸರಿಯಾದ ಹಾಗೂ ವ್ಯವಸ್ಥಿತ ರೀತಿಯಲ್ಲಿ ಜಾರಿಗೆ ತರಲು ಯುವ ಸಮುದಾಯವನ್ನು ಶಿಕ್ಷಿತರನ್ನಾಗಿಸಿಬೇಕು. ಅವರಲ್ಲಿ ಜಾಗೃತಿ ಹೆಚ್ಚಾಗಬೇಕೇ ಹೊರತು ಭೀತಿಯಲ್ಲ” ಎಂದು ಅಲ್ಮೈಡಾ ಗ್ಲಾಡ್‌ಸನ್‌ ಅವರು ಹೇಳಿದ್ದಾರೆ.

ಚಿಂತಕ ಶ್ರೀನಿವಾಸ್ ಕಾರ್ಕಾಳ ಅವರು, “ಕರ್ನಾಟಕದಲ್ಲಿ ಒಟ್ಟು ಫಲವಂತಿಕೆ ದರ (TFR) 1.67 ಇದ್ದು ರಿಪ್ಲೇಸ್ಮೆಂಟ್ ದರವಾದ 2.1 ಕ್ಕಿಂತ ಕಡಿಮೆ ಇದೆ (ತಂದೆತಾಯಿಗೆ ಎರಡು ಮಕ್ಕಳಿದ್ದಾಗ ಅದು ರಿಪ್ಲೇಸ್ಮೆಂಟ್ ಆಗಿರುತ್ತದೆ). ಮಾಜಿ ಮಂತ್ರಿಗಳು ಚಿಂತಿತರಾಗಬೇಕಿರುವುದು ಇಲ್ಲಿ ಜನಸಂಖ್ಯಾ ದರ ಕಡಿಮೆಯಾಗುತ್ತಿರುವ ಬಗ್ಗೆ ಹೊರತು ಜನಸಂಖ್ಯಾ ಸ್ಫೋಟದ ಬಗ್ಗೆ ಅಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾವಾರು ಮೀಸಲಾತಿ ಈ ಕ್ಷಣದ ತುರ್ತು: ಸದಾನಂದ ಗಂಗನಬೀಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...