Homeಕರ್ನಾಟಕ‘ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಕಾಯ್ದೆ’ - ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ಏನು?

‘ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಕಾಯ್ದೆ’ – ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ಏನು?

- Advertisement -
- Advertisement -

ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು, ಕರ್ನಾಟಕದಲ್ಲೂ ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸರಿಯಾದ ಸಮಯ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ. ಆದರೆ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಜನಸಂಖ್ಯಾ ಸ್ಪೋಟ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳು ಜನಸಂಖ್ಯಾ ನಿಯಂತ್ರಣ ಕಾನೂನಗಳನ್ನು ತರಲು ಹೊರಟಿದೆ. ಅದರಲ್ಲೂ ಉತ್ತರ ಪ್ರದೇಶ ಈಗಾಗಲೆ ಕರಡು ಮಸೂದೆಯನ್ನು ಪ್ರಕಟಿಸಿದೆ. ಈ ಕರಡು ಮಸೂದೆಯಲ್ಲಿ, ಕಾನೂನು ಉಲ್ಲಂಘಿಸಿದವರಿಗೆ ಶಿಕ್ಷೆಯನ್ನು ಮತ್ತು ಪಾಲಿಸಿದವರಿಗೆ ಕೊಡುಗೆಯನ್ನೂ ಘೋಷಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ಉತ್ತರ ಪ್ರದೇಶ ತನ್ನ ಕರಡು ಮಸೂದೆಯಲ್ಲಿ, ಕಾನೂನನ್ನು ಪಾಲಿಸಿದವರಿಗೆ ನೀರು ಮತ್ತು ವಿದ್ಯುತ್ ಬಿಲ್‌ಗಳು, ಮನೆ ತೆರಿಗೆ, ಗೃಹ ಸಾಲಗಳ ಮೇಲೆ ರಿಯಾಯಿತಿ ನೀಡುವುದಾಗಿ ಹೇಳಿದೆ. ಕಾನೂನು ಉಲ್ಲಂಘಿಸಿದವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಥವಾ ಬಡ್ತಿ ಪಡೆಯುವ ಮತ್ತು ಯಾವುದೇ ರೀತಿಯ ಸರ್ಕಾರಿ ಸಬ್ಸಿಡಿ ಪಡೆಯುವುದನ್ನು ನಿರ್ಬಂಧಿಸುತ್ತದೆ.

ಗುರುವಾರ ಟ್ವೀಟ್ ಮಾಡಿದ್ದ ಸಿಟಿ ರವಿ, “ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸರಿಯಾದ ಸಮಯ. ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಜನಸಂಖ್ಯಾ ನಿತಂತ್ರಣ ಕಾನೂನಿನ ಚರ್ಚೆಗಳ ಬಗ್ಗೆ ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ಜನಸಂಖ್ಯೆ ನಿಯಂತ್ರಣೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಿರುವ ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಗೋವಾ ಮುಂತಾದೆಡೆ ಜನಸಂಖ್ಯೆ ನಿಯಂತ್ರಣಕ್ಕೆ ಬಂದಿದ್ದು ಶಿಕ್ಷೆಯಿಂದಲ್ಲ ಬದಲಾಗಿ ಶಿಕ್ಷಣದಿಂದ. ಈ ರಾಜ್ಯಗಳಲ್ಲಿ ಒಟ್ಟು ಫಲವಂತೆಕೆಯ ದರ (TFR) ದೇಶದ ರಿಪ್ಲೇಸ್‍ಮೆಂಟ್ ಲೆವೆಲ್ 2.1 ಕ್ಕಿಂತಾ ಕಡಿಮೆಯಿದೆ” ಎಂದು ಹೇಳಿದ್ದಾರೆ.

“ಕರ್ನಾಟಕ, ಅವಿಭಜಿತ ಆಂಧ್ರಪ್ರದೇಶದಲ್ಲಿ TFR 1.7 ಇದ್ದರೆ ಕೇರಳದಲ್ಲಿ 1.8 ಹಾಗೂ ಗೋವಾದಲ್ಲಿ 1.3 ಇದೆ. ಅದೇ ಈ TFR ಉತ್ತರ ಪ್ರದೇಶ, ಬಿಹಾರ, ಛತ್ತೀಸ್‍ಗಢ, ರಾಜಸ್ಥಾನ, ಮಧ್ಯಪ್ರದೇಶ, ಝಾರ್ಖಂಡ್‍ಗಳಲ್ಲಿ 2.1 ಕ್ಕಿಂತ ಜಾಸ್ತಿಯಿದೆ. ಭಾರತದ ಒಟ್ಟು ಜನಸಂಖ್ಯೆಯ 40% ಜನಸಂಖ್ಯೆ ಇರುವುದೇ ಈ ಆರು ರಾಜ್ಯಗಳಲ್ಲಿ.
ಹಾಗಾಗಿ ಯಾಕಾಗಿ ಈ ರಾಜ್ಯಗಳು ಜನಸಂಖ್ಯೆ ನಿಯಂತ್ರಣೆಯಲ್ಲಿ ದಕ್ಷಿಣದ ರಾಜ್ಯಗಳನ್ನು ಮಾದರಿಯಾಗಿ ಸ್ವೀಕರಿಸಬಾರದು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

“ದಕ್ಷಿಣದ ರಾಜ್ಯಗಳಲ್ಲಿ ಶಿಕ್ಷಣದ ಪ್ರಮಾಣ ಹೆಚ್ಚಿರುವುದು, ಜನಸಂಖ್ಯೆ ನಿಯಂತ್ರಣದಲ್ಲಿ ಬಲುದೊಡ್ಡ ಪಾತ್ರ ವಹಿಸಿದೆ. ಯಾವುದೇ ಕಠಿಣ ಕಾನೂನುಗಳಿಲ್ಲದೇ, ಶಿಕ್ಷೆಯಿಲ್ಲದೇ ಕೇವಲ ಉತ್ತಮ ಶಿಕ್ಷಣದಿಂದ ದಕ್ಷಿಣ ಭಾರತದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಬಂದಿರುವಾಗ, ಅದು ಉತ್ತರ ಭಾರತದಲ್ಲಿ ಯಾಕಾಗಬಾರದು? ಶಿಕ್ಷಣದಿಂದಾಗುವ ಕೆಲಸವನ್ನು ಶಿಕ್ಷೆಯಿಂದ ಯಾಕೆ ಮಾಡಬೇಕು?” ಎಂದು ಅವರು ಹೇಳಿದ್ದಾರೆ.

“ಉತ್ತರ ಪ್ರದೇಶದಲ್ಲೇ 1993 ರಲ್ಲಿ 4.82 ಇದ್ದ TFR 2016 ರಲ್ಲಿ 2.7 ಕ್ಕೆ ಬಂದಿಳಿದಿದೆ. ಅಲ್ಲಿನ ಸರಕಾರದ ವರದಿಗಳ ಪ್ರಕಾರ 2025 ರ ಹೊತ್ತಿಗೆ ಇದು ಇನ್ನೂ ಇಳಿದು 2.1 ಕ್ಕೆ ಬರಲಿದೆ. ಅಂದರೆ ಜನಸಂಖ್ಯೆ ಸ್ಪೋಟವಾಗುತ್ತಿಲ್ಲ ಬದಲಾಗಿ ಅದು ಇಳಿಯುತ್ತಿದೆ. ಅದನ್ನು ಇನ್ನೂ ಸರಿಯಾದ ಹಾಗೂ ವ್ಯವಸ್ಥಿತ ರೀತಿಯಲ್ಲಿ ಜಾರಿಗೆ ತರಲು ಯುವ ಸಮುದಾಯವನ್ನು ಶಿಕ್ಷಿತರನ್ನಾಗಿಸಿಬೇಕು. ಅವರಲ್ಲಿ ಜಾಗೃತಿ ಹೆಚ್ಚಾಗಬೇಕೇ ಹೊರತು ಭೀತಿಯಲ್ಲ” ಎಂದು ಅಲ್ಮೈಡಾ ಗ್ಲಾಡ್‌ಸನ್‌ ಅವರು ಹೇಳಿದ್ದಾರೆ.

ಚಿಂತಕ ಶ್ರೀನಿವಾಸ್ ಕಾರ್ಕಾಳ ಅವರು, “ಕರ್ನಾಟಕದಲ್ಲಿ ಒಟ್ಟು ಫಲವಂತಿಕೆ ದರ (TFR) 1.67 ಇದ್ದು ರಿಪ್ಲೇಸ್ಮೆಂಟ್ ದರವಾದ 2.1 ಕ್ಕಿಂತ ಕಡಿಮೆ ಇದೆ (ತಂದೆತಾಯಿಗೆ ಎರಡು ಮಕ್ಕಳಿದ್ದಾಗ ಅದು ರಿಪ್ಲೇಸ್ಮೆಂಟ್ ಆಗಿರುತ್ತದೆ). ಮಾಜಿ ಮಂತ್ರಿಗಳು ಚಿಂತಿತರಾಗಬೇಕಿರುವುದು ಇಲ್ಲಿ ಜನಸಂಖ್ಯಾ ದರ ಕಡಿಮೆಯಾಗುತ್ತಿರುವ ಬಗ್ಗೆ ಹೊರತು ಜನಸಂಖ್ಯಾ ಸ್ಫೋಟದ ಬಗ್ಗೆ ಅಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾವಾರು ಮೀಸಲಾತಿ ಈ ಕ್ಷಣದ ತುರ್ತು: ಸದಾನಂದ ಗಂಗನಬೀಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...