Homeಮುಖಪುಟಕೇರಳದಲ್ಲಿ ಯಾರೂ ಧರ್ಮದೊಂದಿಗೆ ಆಹಾರವನ್ನು ಬೆರೆಸುವುದಿಲ್ಲ: ಭೀಫ್‌ ಖಾದ್ಯದ ಬಗ್ಗೆ ಸ್ಪಷ್ಟನೆ

ಕೇರಳದಲ್ಲಿ ಯಾರೂ ಧರ್ಮದೊಂದಿಗೆ ಆಹಾರವನ್ನು ಬೆರೆಸುವುದಿಲ್ಲ: ಭೀಫ್‌ ಖಾದ್ಯದ ಬಗ್ಗೆ ಸ್ಪಷ್ಟನೆ

- Advertisement -
- Advertisement -

ಭೀಫ್‌ ಖಾದ್ಯವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರವು “ಯಾವುದೇ ಗುಂಪಿನ ಧಾರ್ಮಿಕ ನಂಬಿಕೆಗಳನ್ನು ನೋಯಿಸುವ ಆಸಕ್ತಿಯನ್ನು ಹೊಂದಿಲ್ಲ” ಎಂದು ಪ್ರವಾಸೋದ್ಯಮ ಸಚಿವರ ಕಡಕಂಪಲ್ಲಿ ಸುರೇಂದ್ರನ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ, ಕೇರಳ ಪ್ರವಾಸೋದ್ಯಮ ಇಲಾಖೆಯು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಭೀಫ್‌ ಖಾದ್ಯದ ಚಿತ್ರವನ್ನು ಪ್ರಕಟಿಸಿದೆ. ಅದರಲ್ಲಿ “ಗೋಮಾಂಸದ ಕೋಮಲ ಭಾಗಗಳು, ಆರೊಮ್ಯಾಟಿಕ್ ಮಸಾಲೆಗಳು, ತೆಂಗಿನಕಾಯಿ ತುಂಡುಗಳು ಮತ್ತು ಕರಿಬೇವಿನ ಎಲೆಗಳಿಂದ ನಿಧಾನವಾಗಿ ಹುರಿದ ಅತ್ಯಂತ ಶ್ರೇಷ್ಠ ಖಾದ್ಯವಾದ ಬೀಫ್ ಉಲಾರ್ತಿಯಾಥು” ಎಂದು ಬರೆದುಕೊಂಡಿದೆ.

ಸರ್ಕಾರದ ಈ ನಡೆಗೆ ಹಲವಾರು ಜನ ಸ್ವಾಗತಿಸಿದ್ದರೆ ಕೆಲವು ವಿರೊಧ ವ್ಯಕ್ತಪಡಿಸಿದ್ದಾರೆ. ಆಶ್ಚರ್‍ಯಕರ ರೀತಿಯಲ್ಲಿ ಆ ಟ್ವೀಟನ್ನು 12 ಸಾವಿರಕ್ಕೂ ಹೆಚ್ಚು ಜನರು ಲೈಕ್‌ ಮಾಡಿದರೆ, 4 ಸಾವಿರಕ್ಕೂ ಹೆಚ್ಚು ಜನ ಷೇರ್ ಮಾಡಿದ್ದಾರೆ. ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅದನ್ನು ಷೇರ್ ಮಾಡಿ ವೆಲ್‌ಕಂ ಟು ಕರ್ನಾಟಕ ಎಂದು ಟ್ವೀಟ್‌ ಮಾಡಿದ್ದರು. ಅದು ಸಹ ಸಾಕಷ್ಟು ಗೊಂದಲ ಹುಟ್ಟಿಸಿತ್ತು.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಷೇರ್‌ ಮಾಡಿದ ಸಚಿವ ಸಿ.ಟಿ ರವಿ ; ನೆಟ್ಟಿಗರಿಂದ ಫುಲ್‌ ಟ್ರೋಲ್‌

ಕರ್ನಾಟಕದ ಉಡುಪಿಯ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ “ಕೇರಳ ಕಮ್ಯುನಿಸ್ಟ್ ಸರ್ಕಾರವು ರಾಜ್ಯದ ಹಿಂದೂಗಳ ವಿರುದ್ಧ ಯುದ್ಧ ಘೋಷಿಸಿದೆ! ಕೇರಳ ಸರ್ಕಾರ ಮಕರ ಸಂಕ್ರಾಂತಿ ದಿನದಂದು ಗೋಮಾಂಸವನ್ನು ವೈಭವೀಕರಿಸುವ ಮೂಲಕ ಹಿಂದೂ ಭಾವನೆಗಳ ಮೇಲೆ ಸವಾರಿ ಮಾಡುತ್ತಿದೆ.” ಎಂದು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿ “ಕೇರಳದಲ್ಲಿ ಯಾರೂ ಆಹಾರವನ್ನು ಧರ್ಮದೊಂದಿಗೆ ಜೋಡಿಸುತ್ತಿಲ್ಲ. ಯಾರ ಧಾರ್ಮಿಕ ನಂಬಿಕೆಗಳನ್ನು ನೋಯಿಸುವ ಸರ್ಕಾರಕ್ಕೆ ಯಾವುದೇ ಆಸಕ್ತಿ ಇಲ್ಲ. ಇದಕ್ಕೆ ಕೋಮು ಬಣ್ಣ ನೀಡುವುದು ಖಂಡನೀಯ ”ಎಂದು ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ಸುದ್ದಿಗಾರರಿಗೆ ತಿಳಿಸಿದರು.

“ಈ ಎಲ್ಲದರಲ್ಲೂ ಕೋಮುವಾದವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿರುವವರು ‘ಹಂದಿಮಾಂಸ ಚಿತ್ರಗಳನ್ನು ಹಾಕಿ’ ಎಂದು ಹೇಳುವ ಮೂಲಕ ವಿವಾದವನ್ನು ಸೃಷ್ಟಿಸುತ್ತಿದ್ದಾರೆ. ಹಂದಿಮಾಂಸದ ಚಿತ್ರಗಳು ಸೇರಿದಂತೆ ಅನೇಕ ಭಕ್ಷ್ಯಗಳು ಈಗಾಗಲೇ ವೆಬ್‌ಸೈಟ್‌ನಲ್ಲಿವೆ … ಗೋಮಾಂಸವು ಎಮ್ಮೆಯ ಮಾಂಸವನ್ನು ಸಹ ಒಳಗೊಂಡಿದೆ ಆದರೆ ಕೆಲವರು ಇದನ್ನು ಮರೆಮಾಚಲು, ಗೋಮಾಂಸವೆಂದರೆ ಕೇವಲ ಹಸುವಿನ ಮಾಂಸ ಎಂದು ಪ್ರಚಾರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.

“ಹಂದಿಮಾಂಸ, ಗೋಮಾಂಸ, ಮೀನು ಎಲ್ಲವೂ ಕೇರಳಕ್ಕೆ ಬರುವ ಪ್ರವಾಸಿಗರು ಇಷ್ಟಪಡುವ ಭಕ್ಷ್ಯಗಳು. ದೇಶದ ಯಾವುದೇ ರಾಜ್ಯವು ನಮಗಿಂತ ಹೆಚ್ಚು ಅನುಯಾಯಿಗಳನ್ನು ಹೊಂದಿಲ್ಲ. ಆಹಾರದಂತೆಯೇ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಎಲ್ಲಾ ಇತರ ವಸ್ತುಗಳು ಸಾಮಾಜಿಕ ಮಾಧ್ಯಮದಲ್ಲಿ ಸಹ ಮಾರಾಟವಾಗಿದೆ” ಎಂದು ಸುರೇಂದ್ರನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...