Homeಮುಖಪುಟಕೇರಳದಲ್ಲಿ ಯಾರೂ ಧರ್ಮದೊಂದಿಗೆ ಆಹಾರವನ್ನು ಬೆರೆಸುವುದಿಲ್ಲ: ಭೀಫ್‌ ಖಾದ್ಯದ ಬಗ್ಗೆ ಸ್ಪಷ್ಟನೆ

ಕೇರಳದಲ್ಲಿ ಯಾರೂ ಧರ್ಮದೊಂದಿಗೆ ಆಹಾರವನ್ನು ಬೆರೆಸುವುದಿಲ್ಲ: ಭೀಫ್‌ ಖಾದ್ಯದ ಬಗ್ಗೆ ಸ್ಪಷ್ಟನೆ

- Advertisement -
- Advertisement -

ಭೀಫ್‌ ಖಾದ್ಯವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರವು “ಯಾವುದೇ ಗುಂಪಿನ ಧಾರ್ಮಿಕ ನಂಬಿಕೆಗಳನ್ನು ನೋಯಿಸುವ ಆಸಕ್ತಿಯನ್ನು ಹೊಂದಿಲ್ಲ” ಎಂದು ಪ್ರವಾಸೋದ್ಯಮ ಸಚಿವರ ಕಡಕಂಪಲ್ಲಿ ಸುರೇಂದ್ರನ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ, ಕೇರಳ ಪ್ರವಾಸೋದ್ಯಮ ಇಲಾಖೆಯು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಭೀಫ್‌ ಖಾದ್ಯದ ಚಿತ್ರವನ್ನು ಪ್ರಕಟಿಸಿದೆ. ಅದರಲ್ಲಿ “ಗೋಮಾಂಸದ ಕೋಮಲ ಭಾಗಗಳು, ಆರೊಮ್ಯಾಟಿಕ್ ಮಸಾಲೆಗಳು, ತೆಂಗಿನಕಾಯಿ ತುಂಡುಗಳು ಮತ್ತು ಕರಿಬೇವಿನ ಎಲೆಗಳಿಂದ ನಿಧಾನವಾಗಿ ಹುರಿದ ಅತ್ಯಂತ ಶ್ರೇಷ್ಠ ಖಾದ್ಯವಾದ ಬೀಫ್ ಉಲಾರ್ತಿಯಾಥು” ಎಂದು ಬರೆದುಕೊಂಡಿದೆ.

ಸರ್ಕಾರದ ಈ ನಡೆಗೆ ಹಲವಾರು ಜನ ಸ್ವಾಗತಿಸಿದ್ದರೆ ಕೆಲವು ವಿರೊಧ ವ್ಯಕ್ತಪಡಿಸಿದ್ದಾರೆ. ಆಶ್ಚರ್‍ಯಕರ ರೀತಿಯಲ್ಲಿ ಆ ಟ್ವೀಟನ್ನು 12 ಸಾವಿರಕ್ಕೂ ಹೆಚ್ಚು ಜನರು ಲೈಕ್‌ ಮಾಡಿದರೆ, 4 ಸಾವಿರಕ್ಕೂ ಹೆಚ್ಚು ಜನ ಷೇರ್ ಮಾಡಿದ್ದಾರೆ. ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅದನ್ನು ಷೇರ್ ಮಾಡಿ ವೆಲ್‌ಕಂ ಟು ಕರ್ನಾಟಕ ಎಂದು ಟ್ವೀಟ್‌ ಮಾಡಿದ್ದರು. ಅದು ಸಹ ಸಾಕಷ್ಟು ಗೊಂದಲ ಹುಟ್ಟಿಸಿತ್ತು.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಷೇರ್‌ ಮಾಡಿದ ಸಚಿವ ಸಿ.ಟಿ ರವಿ ; ನೆಟ್ಟಿಗರಿಂದ ಫುಲ್‌ ಟ್ರೋಲ್‌

ಕರ್ನಾಟಕದ ಉಡುಪಿಯ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ “ಕೇರಳ ಕಮ್ಯುನಿಸ್ಟ್ ಸರ್ಕಾರವು ರಾಜ್ಯದ ಹಿಂದೂಗಳ ವಿರುದ್ಧ ಯುದ್ಧ ಘೋಷಿಸಿದೆ! ಕೇರಳ ಸರ್ಕಾರ ಮಕರ ಸಂಕ್ರಾಂತಿ ದಿನದಂದು ಗೋಮಾಂಸವನ್ನು ವೈಭವೀಕರಿಸುವ ಮೂಲಕ ಹಿಂದೂ ಭಾವನೆಗಳ ಮೇಲೆ ಸವಾರಿ ಮಾಡುತ್ತಿದೆ.” ಎಂದು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿ “ಕೇರಳದಲ್ಲಿ ಯಾರೂ ಆಹಾರವನ್ನು ಧರ್ಮದೊಂದಿಗೆ ಜೋಡಿಸುತ್ತಿಲ್ಲ. ಯಾರ ಧಾರ್ಮಿಕ ನಂಬಿಕೆಗಳನ್ನು ನೋಯಿಸುವ ಸರ್ಕಾರಕ್ಕೆ ಯಾವುದೇ ಆಸಕ್ತಿ ಇಲ್ಲ. ಇದಕ್ಕೆ ಕೋಮು ಬಣ್ಣ ನೀಡುವುದು ಖಂಡನೀಯ ”ಎಂದು ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ಸುದ್ದಿಗಾರರಿಗೆ ತಿಳಿಸಿದರು.

“ಈ ಎಲ್ಲದರಲ್ಲೂ ಕೋಮುವಾದವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿರುವವರು ‘ಹಂದಿಮಾಂಸ ಚಿತ್ರಗಳನ್ನು ಹಾಕಿ’ ಎಂದು ಹೇಳುವ ಮೂಲಕ ವಿವಾದವನ್ನು ಸೃಷ್ಟಿಸುತ್ತಿದ್ದಾರೆ. ಹಂದಿಮಾಂಸದ ಚಿತ್ರಗಳು ಸೇರಿದಂತೆ ಅನೇಕ ಭಕ್ಷ್ಯಗಳು ಈಗಾಗಲೇ ವೆಬ್‌ಸೈಟ್‌ನಲ್ಲಿವೆ … ಗೋಮಾಂಸವು ಎಮ್ಮೆಯ ಮಾಂಸವನ್ನು ಸಹ ಒಳಗೊಂಡಿದೆ ಆದರೆ ಕೆಲವರು ಇದನ್ನು ಮರೆಮಾಚಲು, ಗೋಮಾಂಸವೆಂದರೆ ಕೇವಲ ಹಸುವಿನ ಮಾಂಸ ಎಂದು ಪ್ರಚಾರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.

“ಹಂದಿಮಾಂಸ, ಗೋಮಾಂಸ, ಮೀನು ಎಲ್ಲವೂ ಕೇರಳಕ್ಕೆ ಬರುವ ಪ್ರವಾಸಿಗರು ಇಷ್ಟಪಡುವ ಭಕ್ಷ್ಯಗಳು. ದೇಶದ ಯಾವುದೇ ರಾಜ್ಯವು ನಮಗಿಂತ ಹೆಚ್ಚು ಅನುಯಾಯಿಗಳನ್ನು ಹೊಂದಿಲ್ಲ. ಆಹಾರದಂತೆಯೇ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಎಲ್ಲಾ ಇತರ ವಸ್ತುಗಳು ಸಾಮಾಜಿಕ ಮಾಧ್ಯಮದಲ್ಲಿ ಸಹ ಮಾರಾಟವಾಗಿದೆ” ಎಂದು ಸುರೇಂದ್ರನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...