Homeಮುಖಪುಟಕೇರಳದಲ್ಲಿ ಯಾರೂ ಧರ್ಮದೊಂದಿಗೆ ಆಹಾರವನ್ನು ಬೆರೆಸುವುದಿಲ್ಲ: ಭೀಫ್‌ ಖಾದ್ಯದ ಬಗ್ಗೆ ಸ್ಪಷ್ಟನೆ

ಕೇರಳದಲ್ಲಿ ಯಾರೂ ಧರ್ಮದೊಂದಿಗೆ ಆಹಾರವನ್ನು ಬೆರೆಸುವುದಿಲ್ಲ: ಭೀಫ್‌ ಖಾದ್ಯದ ಬಗ್ಗೆ ಸ್ಪಷ್ಟನೆ

- Advertisement -
- Advertisement -

ಭೀಫ್‌ ಖಾದ್ಯವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರವು “ಯಾವುದೇ ಗುಂಪಿನ ಧಾರ್ಮಿಕ ನಂಬಿಕೆಗಳನ್ನು ನೋಯಿಸುವ ಆಸಕ್ತಿಯನ್ನು ಹೊಂದಿಲ್ಲ” ಎಂದು ಪ್ರವಾಸೋದ್ಯಮ ಸಚಿವರ ಕಡಕಂಪಲ್ಲಿ ಸುರೇಂದ್ರನ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ, ಕೇರಳ ಪ್ರವಾಸೋದ್ಯಮ ಇಲಾಖೆಯು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಭೀಫ್‌ ಖಾದ್ಯದ ಚಿತ್ರವನ್ನು ಪ್ರಕಟಿಸಿದೆ. ಅದರಲ್ಲಿ “ಗೋಮಾಂಸದ ಕೋಮಲ ಭಾಗಗಳು, ಆರೊಮ್ಯಾಟಿಕ್ ಮಸಾಲೆಗಳು, ತೆಂಗಿನಕಾಯಿ ತುಂಡುಗಳು ಮತ್ತು ಕರಿಬೇವಿನ ಎಲೆಗಳಿಂದ ನಿಧಾನವಾಗಿ ಹುರಿದ ಅತ್ಯಂತ ಶ್ರೇಷ್ಠ ಖಾದ್ಯವಾದ ಬೀಫ್ ಉಲಾರ್ತಿಯಾಥು” ಎಂದು ಬರೆದುಕೊಂಡಿದೆ.

ಸರ್ಕಾರದ ಈ ನಡೆಗೆ ಹಲವಾರು ಜನ ಸ್ವಾಗತಿಸಿದ್ದರೆ ಕೆಲವು ವಿರೊಧ ವ್ಯಕ್ತಪಡಿಸಿದ್ದಾರೆ. ಆಶ್ಚರ್‍ಯಕರ ರೀತಿಯಲ್ಲಿ ಆ ಟ್ವೀಟನ್ನು 12 ಸಾವಿರಕ್ಕೂ ಹೆಚ್ಚು ಜನರು ಲೈಕ್‌ ಮಾಡಿದರೆ, 4 ಸಾವಿರಕ್ಕೂ ಹೆಚ್ಚು ಜನ ಷೇರ್ ಮಾಡಿದ್ದಾರೆ. ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅದನ್ನು ಷೇರ್ ಮಾಡಿ ವೆಲ್‌ಕಂ ಟು ಕರ್ನಾಟಕ ಎಂದು ಟ್ವೀಟ್‌ ಮಾಡಿದ್ದರು. ಅದು ಸಹ ಸಾಕಷ್ಟು ಗೊಂದಲ ಹುಟ್ಟಿಸಿತ್ತು.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಷೇರ್‌ ಮಾಡಿದ ಸಚಿವ ಸಿ.ಟಿ ರವಿ ; ನೆಟ್ಟಿಗರಿಂದ ಫುಲ್‌ ಟ್ರೋಲ್‌

ಕರ್ನಾಟಕದ ಉಡುಪಿಯ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ “ಕೇರಳ ಕಮ್ಯುನಿಸ್ಟ್ ಸರ್ಕಾರವು ರಾಜ್ಯದ ಹಿಂದೂಗಳ ವಿರುದ್ಧ ಯುದ್ಧ ಘೋಷಿಸಿದೆ! ಕೇರಳ ಸರ್ಕಾರ ಮಕರ ಸಂಕ್ರಾಂತಿ ದಿನದಂದು ಗೋಮಾಂಸವನ್ನು ವೈಭವೀಕರಿಸುವ ಮೂಲಕ ಹಿಂದೂ ಭಾವನೆಗಳ ಮೇಲೆ ಸವಾರಿ ಮಾಡುತ್ತಿದೆ.” ಎಂದು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿ “ಕೇರಳದಲ್ಲಿ ಯಾರೂ ಆಹಾರವನ್ನು ಧರ್ಮದೊಂದಿಗೆ ಜೋಡಿಸುತ್ತಿಲ್ಲ. ಯಾರ ಧಾರ್ಮಿಕ ನಂಬಿಕೆಗಳನ್ನು ನೋಯಿಸುವ ಸರ್ಕಾರಕ್ಕೆ ಯಾವುದೇ ಆಸಕ್ತಿ ಇಲ್ಲ. ಇದಕ್ಕೆ ಕೋಮು ಬಣ್ಣ ನೀಡುವುದು ಖಂಡನೀಯ ”ಎಂದು ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ಸುದ್ದಿಗಾರರಿಗೆ ತಿಳಿಸಿದರು.

“ಈ ಎಲ್ಲದರಲ್ಲೂ ಕೋಮುವಾದವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿರುವವರು ‘ಹಂದಿಮಾಂಸ ಚಿತ್ರಗಳನ್ನು ಹಾಕಿ’ ಎಂದು ಹೇಳುವ ಮೂಲಕ ವಿವಾದವನ್ನು ಸೃಷ್ಟಿಸುತ್ತಿದ್ದಾರೆ. ಹಂದಿಮಾಂಸದ ಚಿತ್ರಗಳು ಸೇರಿದಂತೆ ಅನೇಕ ಭಕ್ಷ್ಯಗಳು ಈಗಾಗಲೇ ವೆಬ್‌ಸೈಟ್‌ನಲ್ಲಿವೆ … ಗೋಮಾಂಸವು ಎಮ್ಮೆಯ ಮಾಂಸವನ್ನು ಸಹ ಒಳಗೊಂಡಿದೆ ಆದರೆ ಕೆಲವರು ಇದನ್ನು ಮರೆಮಾಚಲು, ಗೋಮಾಂಸವೆಂದರೆ ಕೇವಲ ಹಸುವಿನ ಮಾಂಸ ಎಂದು ಪ್ರಚಾರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.

“ಹಂದಿಮಾಂಸ, ಗೋಮಾಂಸ, ಮೀನು ಎಲ್ಲವೂ ಕೇರಳಕ್ಕೆ ಬರುವ ಪ್ರವಾಸಿಗರು ಇಷ್ಟಪಡುವ ಭಕ್ಷ್ಯಗಳು. ದೇಶದ ಯಾವುದೇ ರಾಜ್ಯವು ನಮಗಿಂತ ಹೆಚ್ಚು ಅನುಯಾಯಿಗಳನ್ನು ಹೊಂದಿಲ್ಲ. ಆಹಾರದಂತೆಯೇ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಎಲ್ಲಾ ಇತರ ವಸ್ತುಗಳು ಸಾಮಾಜಿಕ ಮಾಧ್ಯಮದಲ್ಲಿ ಸಹ ಮಾರಾಟವಾಗಿದೆ” ಎಂದು ಸುರೇಂದ್ರನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...