Homeಮುಖಪುಟನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

- Advertisement -
- Advertisement -

ಬೆಂಗಳೂರು: ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಬಹುಭಾಷಾ ನಟಿ ಸಂಜನಾ ಗಲ್ರಾನಿಯವರು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಕೊಡಗಿನ ಆಡಂ ಬಿದ್ದಪ್ಪನನ್ನು ಬಂಧಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪೂರ್ವ ಪೊಲೀಸ್ ಉಪ ಆಯುಕ್ತ ಭೀಮಾಶಂಕರ್ ಎಸ್.ಗುಳೇದ್, ”ಆ್ಯಡಂನಿಂದ ಅಶ್ಲೀಲ ಸಂದೇಶಗಳು ಬರುತ್ತಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದರು. ಹೀಗಾಗಿ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದ್ದಾರೆ.

ಆಶ್ಲೀಲ ಮೆಸೇಜ್‌ಗಳು ಬರುತ್ತಿರುವ ಕುರಿತು ನಟಿ ಸಂಜನಾ ಗಲ್ರಾನಿಯವರು ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದರು.

 ಸಂಜನಾ ಅವರ ಪತ್ರಿಕಾ ಹೇಳಿಕೆ

ನಮಸ್ಕಾರ, ನನಗೆ ಸುಮಾರು ಜನ ಮಾಧ್ಯಮ ಮಿತ್ರರು ಕರೆ ಮಾಡುತ್ತಿದ್ದೀರಿ.. ಕ್ಷಮೆ ಇರಲಿ.. ನಾನು ಯಾವುದೇ ಅಗ್ಗದ ಪ್ರಚಾರ ಅಥವಾ ಬೇಡದ ವಿಚಾರಕ್ಕೆ ಸುದ್ದಿ ಆಗಲು ಬಯಸುವುದಿಲ್ಲ..”

“ನಾನು ನನ್ನ ಕುಟುಂಬ ಸದ್ಯ ಈ ಪ್ರಕರಣದಿಂದ ವಿಚಲಿತರಾಗಿದ್ದೇವೆ. ವಿವಿಐಪಿ ಒಬ್ಬರ ಪುತ್ರ ನನಗೆ ಕಳೆದ ಶುಕ್ರವಾರ ಮಾರ್ಚ್ 25ರ ರಾತ್ರಿ 11 ಗಂಟೆ ಸುಮಾರಿಗೆ ವಾಟ್ಸ್ ಆ್ಯಪ್ ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾನೆ.”

“ಆ ವ್ಯಕ್ತಿಯ ವಿರುದ್ಧ ನಾವು ಈಗಾಗಲೇ ಕಾನೂನು ರೀತಿಯ ಕ್ರಮಕ್ಕೆ ಮುಂದಾಗಿದ್ದೇವೆ. ನನಗೆ ಕಳಿಸಿದ್ದ ಸಂದೇಶವು ಅಸಹ್ಯ, ಅಶ್ಲೀಲಕರವಾಗಿತ್ತು. ಅದನ್ನು ನಾನು ಹೇಳಲು ಸಾಧ್ಯವಿಲ್ಲ. ಕಳೆದ ಒಂದು ವಾರದಿಂದ ಈ ರೀತಿಯ ಸಂದೇಶದಿಂದ ನಾನು ಭಾರೀ ನೊಂದಿದ್ದೇನೆ.‌ ಹಾಗೂ ನನಗೆ ಇಂತಹ ಪ್ರಕರಣಗಳಿಂದ ವ್ಯತಿರಿಕ್ತ ಪರಿಣಾಮವಾಗದಿರಲಿ ಎಂಬ ಕಾರಣಕ್ಕೆ ದೂರ ಉಳಿದಿದ್ದೇನೆ. ಜೀವನದಲ್ಲಿ ಅನೇಕ ಏರಿಳಿತಗಳನ್ನು ನೋಡಿದ್ದೇನೆ.”

“ಕಳೆದ ಎರಡು ವರ್ಷಗಳಿಂದ ನಾನು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇನೆ. ನನ್ನ ಪ್ರಾಮಾಣಿಕ, ಆಧ್ಯಾತ್ಮಿಕ ಪ್ರಯತ್ನದಿಂದ ನನ್ನ ಕುಟುಂಬದ ಸಹಕಾರದೊಂದಿಗೆ ಜೀವನ ಸಾಗುತ್ತಿದೆ.”

“ನನಗೆ ಅಶ್ಲೀಲ ಸಂದೇಶ ಕಳಿಸಿರುವ ವಿವಿಐಪಿ ಪುತ್ರನ ವಿರುದ್ಧ ನನಗೆ ಆಕ್ರೋಶವಿದೆ. ಅವರ ತಂದೆಯನ್ನು ನಾನು ಗೌರವಿಸುತ್ತೇನೆ. ನನಗೆ ಈ ಯುವಕನ ವರ್ತನೆಯಿಂದಾಗಿ ಬೇಸರವಾಗಿದೆ. ಅನಿವಾರ್ಯವಾಗಿ ಆತನ ವಿರುದ್ಧ ದೂರು ಕೊಡುತ್ತಿದ್ದೇನೆ.”

“ಯೂಟ್ಯೂಬ್, ಫೇಸ್ಬುಕ್, ಟ್ವಿಟ್ಟರ್, ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಮ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳಿಸುವುದು ಕಾನೂನಿನ ಪ್ರಕಾರ ಅಪರಾಧ. section 66 ಪ್ರಕಾರ ಇದಕ್ಕೆ 3 ವರ್ಷಗಳ ಕಾಲ ಜಾಮೀನು ರಹಿತ ಕಾರಾಗೃಹ ಶಿಕ್ಷೆಗೆ ಒಳಪಡಿಸಲಾಗುತ್ತದೆ. 354ರ ಪ್ರಕಾರ ಪ್ರಕರಣವನ್ನು ದಾಖಲಿಸಲಾಗಿದೆ.”

“ಇನ್ನೂ ನಾನು ಪೋಷಕರಲ್ಲಿ ಮನವಿ ಮಾಡುವುದು ಏನೆಂದರೆ ನಿಮ್ಮ ಮಕ್ಕಳ ಅಂತರ್ಜಾಲ ಬಳಕೆ ಕಡೆ ಗಮನವಿಡಿ. ಯಾಕೆಂದರೆ ನಮ್ಮ ಸೈಬರ್ ಕ್ರೈಂ ವಿಭಾಗದಲ್ಲಿ ಪೊಲೀಸರು ಕ್ಷಣಮಾತ್ರದಲ್ಲಿ ನಿಮ್ಮ ಹೆಡೆಮುರಿ ಕಟ್ಟುತ್ತಾರೆ. ಹೀಗಾಗಿ ಇಂತಹ ಅಶ್ಲೀಲಕರವಾದ ಚಟುವಟಿಕೆಗಳಿಂದ ದೂರು ಇರಿ.”

ಕರ್ನಾಟಕ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಈ ಪ್ರಕರಣದಲ್ಲಿ ಪೊಲೀಸರು ನಮಗೆ ನ್ಯಾಯ ಕೊಡಿಸಿದ್ದಾರೆ.

– ಸಂಜನಾ ಗಲ್ರಾನಿ, ಬಹುಭಾಷಾ ನಟಿ


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...