Homeಮುಖಪುಟನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

- Advertisement -
- Advertisement -

ಬೆಂಗಳೂರು: ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಬಹುಭಾಷಾ ನಟಿ ಸಂಜನಾ ಗಲ್ರಾನಿಯವರು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಕೊಡಗಿನ ಆಡಂ ಬಿದ್ದಪ್ಪನನ್ನು ಬಂಧಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪೂರ್ವ ಪೊಲೀಸ್ ಉಪ ಆಯುಕ್ತ ಭೀಮಾಶಂಕರ್ ಎಸ್.ಗುಳೇದ್, ”ಆ್ಯಡಂನಿಂದ ಅಶ್ಲೀಲ ಸಂದೇಶಗಳು ಬರುತ್ತಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದರು. ಹೀಗಾಗಿ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದ್ದಾರೆ.

ಆಶ್ಲೀಲ ಮೆಸೇಜ್‌ಗಳು ಬರುತ್ತಿರುವ ಕುರಿತು ನಟಿ ಸಂಜನಾ ಗಲ್ರಾನಿಯವರು ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದರು.

 ಸಂಜನಾ ಅವರ ಪತ್ರಿಕಾ ಹೇಳಿಕೆ

ನಮಸ್ಕಾರ, ನನಗೆ ಸುಮಾರು ಜನ ಮಾಧ್ಯಮ ಮಿತ್ರರು ಕರೆ ಮಾಡುತ್ತಿದ್ದೀರಿ.. ಕ್ಷಮೆ ಇರಲಿ.. ನಾನು ಯಾವುದೇ ಅಗ್ಗದ ಪ್ರಚಾರ ಅಥವಾ ಬೇಡದ ವಿಚಾರಕ್ಕೆ ಸುದ್ದಿ ಆಗಲು ಬಯಸುವುದಿಲ್ಲ..”

“ನಾನು ನನ್ನ ಕುಟುಂಬ ಸದ್ಯ ಈ ಪ್ರಕರಣದಿಂದ ವಿಚಲಿತರಾಗಿದ್ದೇವೆ. ವಿವಿಐಪಿ ಒಬ್ಬರ ಪುತ್ರ ನನಗೆ ಕಳೆದ ಶುಕ್ರವಾರ ಮಾರ್ಚ್ 25ರ ರಾತ್ರಿ 11 ಗಂಟೆ ಸುಮಾರಿಗೆ ವಾಟ್ಸ್ ಆ್ಯಪ್ ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾನೆ.”

“ಆ ವ್ಯಕ್ತಿಯ ವಿರುದ್ಧ ನಾವು ಈಗಾಗಲೇ ಕಾನೂನು ರೀತಿಯ ಕ್ರಮಕ್ಕೆ ಮುಂದಾಗಿದ್ದೇವೆ. ನನಗೆ ಕಳಿಸಿದ್ದ ಸಂದೇಶವು ಅಸಹ್ಯ, ಅಶ್ಲೀಲಕರವಾಗಿತ್ತು. ಅದನ್ನು ನಾನು ಹೇಳಲು ಸಾಧ್ಯವಿಲ್ಲ. ಕಳೆದ ಒಂದು ವಾರದಿಂದ ಈ ರೀತಿಯ ಸಂದೇಶದಿಂದ ನಾನು ಭಾರೀ ನೊಂದಿದ್ದೇನೆ.‌ ಹಾಗೂ ನನಗೆ ಇಂತಹ ಪ್ರಕರಣಗಳಿಂದ ವ್ಯತಿರಿಕ್ತ ಪರಿಣಾಮವಾಗದಿರಲಿ ಎಂಬ ಕಾರಣಕ್ಕೆ ದೂರ ಉಳಿದಿದ್ದೇನೆ. ಜೀವನದಲ್ಲಿ ಅನೇಕ ಏರಿಳಿತಗಳನ್ನು ನೋಡಿದ್ದೇನೆ.”

“ಕಳೆದ ಎರಡು ವರ್ಷಗಳಿಂದ ನಾನು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇನೆ. ನನ್ನ ಪ್ರಾಮಾಣಿಕ, ಆಧ್ಯಾತ್ಮಿಕ ಪ್ರಯತ್ನದಿಂದ ನನ್ನ ಕುಟುಂಬದ ಸಹಕಾರದೊಂದಿಗೆ ಜೀವನ ಸಾಗುತ್ತಿದೆ.”

“ನನಗೆ ಅಶ್ಲೀಲ ಸಂದೇಶ ಕಳಿಸಿರುವ ವಿವಿಐಪಿ ಪುತ್ರನ ವಿರುದ್ಧ ನನಗೆ ಆಕ್ರೋಶವಿದೆ. ಅವರ ತಂದೆಯನ್ನು ನಾನು ಗೌರವಿಸುತ್ತೇನೆ. ನನಗೆ ಈ ಯುವಕನ ವರ್ತನೆಯಿಂದಾಗಿ ಬೇಸರವಾಗಿದೆ. ಅನಿವಾರ್ಯವಾಗಿ ಆತನ ವಿರುದ್ಧ ದೂರು ಕೊಡುತ್ತಿದ್ದೇನೆ.”

“ಯೂಟ್ಯೂಬ್, ಫೇಸ್ಬುಕ್, ಟ್ವಿಟ್ಟರ್, ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಮ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳಿಸುವುದು ಕಾನೂನಿನ ಪ್ರಕಾರ ಅಪರಾಧ. section 66 ಪ್ರಕಾರ ಇದಕ್ಕೆ 3 ವರ್ಷಗಳ ಕಾಲ ಜಾಮೀನು ರಹಿತ ಕಾರಾಗೃಹ ಶಿಕ್ಷೆಗೆ ಒಳಪಡಿಸಲಾಗುತ್ತದೆ. 354ರ ಪ್ರಕಾರ ಪ್ರಕರಣವನ್ನು ದಾಖಲಿಸಲಾಗಿದೆ.”

“ಇನ್ನೂ ನಾನು ಪೋಷಕರಲ್ಲಿ ಮನವಿ ಮಾಡುವುದು ಏನೆಂದರೆ ನಿಮ್ಮ ಮಕ್ಕಳ ಅಂತರ್ಜಾಲ ಬಳಕೆ ಕಡೆ ಗಮನವಿಡಿ. ಯಾಕೆಂದರೆ ನಮ್ಮ ಸೈಬರ್ ಕ್ರೈಂ ವಿಭಾಗದಲ್ಲಿ ಪೊಲೀಸರು ಕ್ಷಣಮಾತ್ರದಲ್ಲಿ ನಿಮ್ಮ ಹೆಡೆಮುರಿ ಕಟ್ಟುತ್ತಾರೆ. ಹೀಗಾಗಿ ಇಂತಹ ಅಶ್ಲೀಲಕರವಾದ ಚಟುವಟಿಕೆಗಳಿಂದ ದೂರು ಇರಿ.”

ಕರ್ನಾಟಕ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಈ ಪ್ರಕರಣದಲ್ಲಿ ಪೊಲೀಸರು ನಮಗೆ ನ್ಯಾಯ ಕೊಡಿಸಿದ್ದಾರೆ.

– ಸಂಜನಾ ಗಲ್ರಾನಿ, ಬಹುಭಾಷಾ ನಟಿ


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...