Homeಮುಖಪುಟನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

- Advertisement -
- Advertisement -

ಬೆಂಗಳೂರು: ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಬಹುಭಾಷಾ ನಟಿ ಸಂಜನಾ ಗಲ್ರಾನಿಯವರು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಕೊಡಗಿನ ಆಡಂ ಬಿದ್ದಪ್ಪನನ್ನು ಬಂಧಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪೂರ್ವ ಪೊಲೀಸ್ ಉಪ ಆಯುಕ್ತ ಭೀಮಾಶಂಕರ್ ಎಸ್.ಗುಳೇದ್, ”ಆ್ಯಡಂನಿಂದ ಅಶ್ಲೀಲ ಸಂದೇಶಗಳು ಬರುತ್ತಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದರು. ಹೀಗಾಗಿ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದ್ದಾರೆ.

ಆಶ್ಲೀಲ ಮೆಸೇಜ್‌ಗಳು ಬರುತ್ತಿರುವ ಕುರಿತು ನಟಿ ಸಂಜನಾ ಗಲ್ರಾನಿಯವರು ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದರು.

 ಸಂಜನಾ ಅವರ ಪತ್ರಿಕಾ ಹೇಳಿಕೆ

ನಮಸ್ಕಾರ, ನನಗೆ ಸುಮಾರು ಜನ ಮಾಧ್ಯಮ ಮಿತ್ರರು ಕರೆ ಮಾಡುತ್ತಿದ್ದೀರಿ.. ಕ್ಷಮೆ ಇರಲಿ.. ನಾನು ಯಾವುದೇ ಅಗ್ಗದ ಪ್ರಚಾರ ಅಥವಾ ಬೇಡದ ವಿಚಾರಕ್ಕೆ ಸುದ್ದಿ ಆಗಲು ಬಯಸುವುದಿಲ್ಲ..”

“ನಾನು ನನ್ನ ಕುಟುಂಬ ಸದ್ಯ ಈ ಪ್ರಕರಣದಿಂದ ವಿಚಲಿತರಾಗಿದ್ದೇವೆ. ವಿವಿಐಪಿ ಒಬ್ಬರ ಪುತ್ರ ನನಗೆ ಕಳೆದ ಶುಕ್ರವಾರ ಮಾರ್ಚ್ 25ರ ರಾತ್ರಿ 11 ಗಂಟೆ ಸುಮಾರಿಗೆ ವಾಟ್ಸ್ ಆ್ಯಪ್ ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾನೆ.”

“ಆ ವ್ಯಕ್ತಿಯ ವಿರುದ್ಧ ನಾವು ಈಗಾಗಲೇ ಕಾನೂನು ರೀತಿಯ ಕ್ರಮಕ್ಕೆ ಮುಂದಾಗಿದ್ದೇವೆ. ನನಗೆ ಕಳಿಸಿದ್ದ ಸಂದೇಶವು ಅಸಹ್ಯ, ಅಶ್ಲೀಲಕರವಾಗಿತ್ತು. ಅದನ್ನು ನಾನು ಹೇಳಲು ಸಾಧ್ಯವಿಲ್ಲ. ಕಳೆದ ಒಂದು ವಾರದಿಂದ ಈ ರೀತಿಯ ಸಂದೇಶದಿಂದ ನಾನು ಭಾರೀ ನೊಂದಿದ್ದೇನೆ.‌ ಹಾಗೂ ನನಗೆ ಇಂತಹ ಪ್ರಕರಣಗಳಿಂದ ವ್ಯತಿರಿಕ್ತ ಪರಿಣಾಮವಾಗದಿರಲಿ ಎಂಬ ಕಾರಣಕ್ಕೆ ದೂರ ಉಳಿದಿದ್ದೇನೆ. ಜೀವನದಲ್ಲಿ ಅನೇಕ ಏರಿಳಿತಗಳನ್ನು ನೋಡಿದ್ದೇನೆ.”

“ಕಳೆದ ಎರಡು ವರ್ಷಗಳಿಂದ ನಾನು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇನೆ. ನನ್ನ ಪ್ರಾಮಾಣಿಕ, ಆಧ್ಯಾತ್ಮಿಕ ಪ್ರಯತ್ನದಿಂದ ನನ್ನ ಕುಟುಂಬದ ಸಹಕಾರದೊಂದಿಗೆ ಜೀವನ ಸಾಗುತ್ತಿದೆ.”

“ನನಗೆ ಅಶ್ಲೀಲ ಸಂದೇಶ ಕಳಿಸಿರುವ ವಿವಿಐಪಿ ಪುತ್ರನ ವಿರುದ್ಧ ನನಗೆ ಆಕ್ರೋಶವಿದೆ. ಅವರ ತಂದೆಯನ್ನು ನಾನು ಗೌರವಿಸುತ್ತೇನೆ. ನನಗೆ ಈ ಯುವಕನ ವರ್ತನೆಯಿಂದಾಗಿ ಬೇಸರವಾಗಿದೆ. ಅನಿವಾರ್ಯವಾಗಿ ಆತನ ವಿರುದ್ಧ ದೂರು ಕೊಡುತ್ತಿದ್ದೇನೆ.”

“ಯೂಟ್ಯೂಬ್, ಫೇಸ್ಬುಕ್, ಟ್ವಿಟ್ಟರ್, ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಮ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳಿಸುವುದು ಕಾನೂನಿನ ಪ್ರಕಾರ ಅಪರಾಧ. section 66 ಪ್ರಕಾರ ಇದಕ್ಕೆ 3 ವರ್ಷಗಳ ಕಾಲ ಜಾಮೀನು ರಹಿತ ಕಾರಾಗೃಹ ಶಿಕ್ಷೆಗೆ ಒಳಪಡಿಸಲಾಗುತ್ತದೆ. 354ರ ಪ್ರಕಾರ ಪ್ರಕರಣವನ್ನು ದಾಖಲಿಸಲಾಗಿದೆ.”

“ಇನ್ನೂ ನಾನು ಪೋಷಕರಲ್ಲಿ ಮನವಿ ಮಾಡುವುದು ಏನೆಂದರೆ ನಿಮ್ಮ ಮಕ್ಕಳ ಅಂತರ್ಜಾಲ ಬಳಕೆ ಕಡೆ ಗಮನವಿಡಿ. ಯಾಕೆಂದರೆ ನಮ್ಮ ಸೈಬರ್ ಕ್ರೈಂ ವಿಭಾಗದಲ್ಲಿ ಪೊಲೀಸರು ಕ್ಷಣಮಾತ್ರದಲ್ಲಿ ನಿಮ್ಮ ಹೆಡೆಮುರಿ ಕಟ್ಟುತ್ತಾರೆ. ಹೀಗಾಗಿ ಇಂತಹ ಅಶ್ಲೀಲಕರವಾದ ಚಟುವಟಿಕೆಗಳಿಂದ ದೂರು ಇರಿ.”

ಕರ್ನಾಟಕ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಈ ಪ್ರಕರಣದಲ್ಲಿ ಪೊಲೀಸರು ನಮಗೆ ನ್ಯಾಯ ಕೊಡಿಸಿದ್ದಾರೆ.

– ಸಂಜನಾ ಗಲ್ರಾನಿ, ಬಹುಭಾಷಾ ನಟಿ


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...