Homeಮುಖಪುಟನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

- Advertisement -
- Advertisement -

ಬೆಂಗಳೂರು: ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಬಹುಭಾಷಾ ನಟಿ ಸಂಜನಾ ಗಲ್ರಾನಿಯವರು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಕೊಡಗಿನ ಆಡಂ ಬಿದ್ದಪ್ಪನನ್ನು ಬಂಧಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪೂರ್ವ ಪೊಲೀಸ್ ಉಪ ಆಯುಕ್ತ ಭೀಮಾಶಂಕರ್ ಎಸ್.ಗುಳೇದ್, ”ಆ್ಯಡಂನಿಂದ ಅಶ್ಲೀಲ ಸಂದೇಶಗಳು ಬರುತ್ತಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದರು. ಹೀಗಾಗಿ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದ್ದಾರೆ.

ಆಶ್ಲೀಲ ಮೆಸೇಜ್‌ಗಳು ಬರುತ್ತಿರುವ ಕುರಿತು ನಟಿ ಸಂಜನಾ ಗಲ್ರಾನಿಯವರು ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದರು.

 ಸಂಜನಾ ಅವರ ಪತ್ರಿಕಾ ಹೇಳಿಕೆ

ನಮಸ್ಕಾರ, ನನಗೆ ಸುಮಾರು ಜನ ಮಾಧ್ಯಮ ಮಿತ್ರರು ಕರೆ ಮಾಡುತ್ತಿದ್ದೀರಿ.. ಕ್ಷಮೆ ಇರಲಿ.. ನಾನು ಯಾವುದೇ ಅಗ್ಗದ ಪ್ರಚಾರ ಅಥವಾ ಬೇಡದ ವಿಚಾರಕ್ಕೆ ಸುದ್ದಿ ಆಗಲು ಬಯಸುವುದಿಲ್ಲ..”

“ನಾನು ನನ್ನ ಕುಟುಂಬ ಸದ್ಯ ಈ ಪ್ರಕರಣದಿಂದ ವಿಚಲಿತರಾಗಿದ್ದೇವೆ. ವಿವಿಐಪಿ ಒಬ್ಬರ ಪುತ್ರ ನನಗೆ ಕಳೆದ ಶುಕ್ರವಾರ ಮಾರ್ಚ್ 25ರ ರಾತ್ರಿ 11 ಗಂಟೆ ಸುಮಾರಿಗೆ ವಾಟ್ಸ್ ಆ್ಯಪ್ ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾನೆ.”

“ಆ ವ್ಯಕ್ತಿಯ ವಿರುದ್ಧ ನಾವು ಈಗಾಗಲೇ ಕಾನೂನು ರೀತಿಯ ಕ್ರಮಕ್ಕೆ ಮುಂದಾಗಿದ್ದೇವೆ. ನನಗೆ ಕಳಿಸಿದ್ದ ಸಂದೇಶವು ಅಸಹ್ಯ, ಅಶ್ಲೀಲಕರವಾಗಿತ್ತು. ಅದನ್ನು ನಾನು ಹೇಳಲು ಸಾಧ್ಯವಿಲ್ಲ. ಕಳೆದ ಒಂದು ವಾರದಿಂದ ಈ ರೀತಿಯ ಸಂದೇಶದಿಂದ ನಾನು ಭಾರೀ ನೊಂದಿದ್ದೇನೆ.‌ ಹಾಗೂ ನನಗೆ ಇಂತಹ ಪ್ರಕರಣಗಳಿಂದ ವ್ಯತಿರಿಕ್ತ ಪರಿಣಾಮವಾಗದಿರಲಿ ಎಂಬ ಕಾರಣಕ್ಕೆ ದೂರ ಉಳಿದಿದ್ದೇನೆ. ಜೀವನದಲ್ಲಿ ಅನೇಕ ಏರಿಳಿತಗಳನ್ನು ನೋಡಿದ್ದೇನೆ.”

“ಕಳೆದ ಎರಡು ವರ್ಷಗಳಿಂದ ನಾನು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇನೆ. ನನ್ನ ಪ್ರಾಮಾಣಿಕ, ಆಧ್ಯಾತ್ಮಿಕ ಪ್ರಯತ್ನದಿಂದ ನನ್ನ ಕುಟುಂಬದ ಸಹಕಾರದೊಂದಿಗೆ ಜೀವನ ಸಾಗುತ್ತಿದೆ.”

“ನನಗೆ ಅಶ್ಲೀಲ ಸಂದೇಶ ಕಳಿಸಿರುವ ವಿವಿಐಪಿ ಪುತ್ರನ ವಿರುದ್ಧ ನನಗೆ ಆಕ್ರೋಶವಿದೆ. ಅವರ ತಂದೆಯನ್ನು ನಾನು ಗೌರವಿಸುತ್ತೇನೆ. ನನಗೆ ಈ ಯುವಕನ ವರ್ತನೆಯಿಂದಾಗಿ ಬೇಸರವಾಗಿದೆ. ಅನಿವಾರ್ಯವಾಗಿ ಆತನ ವಿರುದ್ಧ ದೂರು ಕೊಡುತ್ತಿದ್ದೇನೆ.”

“ಯೂಟ್ಯೂಬ್, ಫೇಸ್ಬುಕ್, ಟ್ವಿಟ್ಟರ್, ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಮ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳಿಸುವುದು ಕಾನೂನಿನ ಪ್ರಕಾರ ಅಪರಾಧ. section 66 ಪ್ರಕಾರ ಇದಕ್ಕೆ 3 ವರ್ಷಗಳ ಕಾಲ ಜಾಮೀನು ರಹಿತ ಕಾರಾಗೃಹ ಶಿಕ್ಷೆಗೆ ಒಳಪಡಿಸಲಾಗುತ್ತದೆ. 354ರ ಪ್ರಕಾರ ಪ್ರಕರಣವನ್ನು ದಾಖಲಿಸಲಾಗಿದೆ.”

“ಇನ್ನೂ ನಾನು ಪೋಷಕರಲ್ಲಿ ಮನವಿ ಮಾಡುವುದು ಏನೆಂದರೆ ನಿಮ್ಮ ಮಕ್ಕಳ ಅಂತರ್ಜಾಲ ಬಳಕೆ ಕಡೆ ಗಮನವಿಡಿ. ಯಾಕೆಂದರೆ ನಮ್ಮ ಸೈಬರ್ ಕ್ರೈಂ ವಿಭಾಗದಲ್ಲಿ ಪೊಲೀಸರು ಕ್ಷಣಮಾತ್ರದಲ್ಲಿ ನಿಮ್ಮ ಹೆಡೆಮುರಿ ಕಟ್ಟುತ್ತಾರೆ. ಹೀಗಾಗಿ ಇಂತಹ ಅಶ್ಲೀಲಕರವಾದ ಚಟುವಟಿಕೆಗಳಿಂದ ದೂರು ಇರಿ.”

ಕರ್ನಾಟಕ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಈ ಪ್ರಕರಣದಲ್ಲಿ ಪೊಲೀಸರು ನಮಗೆ ನ್ಯಾಯ ಕೊಡಿಸಿದ್ದಾರೆ.

– ಸಂಜನಾ ಗಲ್ರಾನಿ, ಬಹುಭಾಷಾ ನಟಿ


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...