Homeಮುಖಪುಟನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

- Advertisement -
- Advertisement -

ಬೆಂಗಳೂರು: ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಬಹುಭಾಷಾ ನಟಿ ಸಂಜನಾ ಗಲ್ರಾನಿಯವರು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಕೊಡಗಿನ ಆಡಂ ಬಿದ್ದಪ್ಪನನ್ನು ಬಂಧಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪೂರ್ವ ಪೊಲೀಸ್ ಉಪ ಆಯುಕ್ತ ಭೀಮಾಶಂಕರ್ ಎಸ್.ಗುಳೇದ್, ”ಆ್ಯಡಂನಿಂದ ಅಶ್ಲೀಲ ಸಂದೇಶಗಳು ಬರುತ್ತಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದರು. ಹೀಗಾಗಿ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದ್ದಾರೆ.

ಆಶ್ಲೀಲ ಮೆಸೇಜ್‌ಗಳು ಬರುತ್ತಿರುವ ಕುರಿತು ನಟಿ ಸಂಜನಾ ಗಲ್ರಾನಿಯವರು ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದರು.

 ಸಂಜನಾ ಅವರ ಪತ್ರಿಕಾ ಹೇಳಿಕೆ

ನಮಸ್ಕಾರ, ನನಗೆ ಸುಮಾರು ಜನ ಮಾಧ್ಯಮ ಮಿತ್ರರು ಕರೆ ಮಾಡುತ್ತಿದ್ದೀರಿ.. ಕ್ಷಮೆ ಇರಲಿ.. ನಾನು ಯಾವುದೇ ಅಗ್ಗದ ಪ್ರಚಾರ ಅಥವಾ ಬೇಡದ ವಿಚಾರಕ್ಕೆ ಸುದ್ದಿ ಆಗಲು ಬಯಸುವುದಿಲ್ಲ..”

“ನಾನು ನನ್ನ ಕುಟುಂಬ ಸದ್ಯ ಈ ಪ್ರಕರಣದಿಂದ ವಿಚಲಿತರಾಗಿದ್ದೇವೆ. ವಿವಿಐಪಿ ಒಬ್ಬರ ಪುತ್ರ ನನಗೆ ಕಳೆದ ಶುಕ್ರವಾರ ಮಾರ್ಚ್ 25ರ ರಾತ್ರಿ 11 ಗಂಟೆ ಸುಮಾರಿಗೆ ವಾಟ್ಸ್ ಆ್ಯಪ್ ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾನೆ.”

“ಆ ವ್ಯಕ್ತಿಯ ವಿರುದ್ಧ ನಾವು ಈಗಾಗಲೇ ಕಾನೂನು ರೀತಿಯ ಕ್ರಮಕ್ಕೆ ಮುಂದಾಗಿದ್ದೇವೆ. ನನಗೆ ಕಳಿಸಿದ್ದ ಸಂದೇಶವು ಅಸಹ್ಯ, ಅಶ್ಲೀಲಕರವಾಗಿತ್ತು. ಅದನ್ನು ನಾನು ಹೇಳಲು ಸಾಧ್ಯವಿಲ್ಲ. ಕಳೆದ ಒಂದು ವಾರದಿಂದ ಈ ರೀತಿಯ ಸಂದೇಶದಿಂದ ನಾನು ಭಾರೀ ನೊಂದಿದ್ದೇನೆ.‌ ಹಾಗೂ ನನಗೆ ಇಂತಹ ಪ್ರಕರಣಗಳಿಂದ ವ್ಯತಿರಿಕ್ತ ಪರಿಣಾಮವಾಗದಿರಲಿ ಎಂಬ ಕಾರಣಕ್ಕೆ ದೂರ ಉಳಿದಿದ್ದೇನೆ. ಜೀವನದಲ್ಲಿ ಅನೇಕ ಏರಿಳಿತಗಳನ್ನು ನೋಡಿದ್ದೇನೆ.”

“ಕಳೆದ ಎರಡು ವರ್ಷಗಳಿಂದ ನಾನು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇನೆ. ನನ್ನ ಪ್ರಾಮಾಣಿಕ, ಆಧ್ಯಾತ್ಮಿಕ ಪ್ರಯತ್ನದಿಂದ ನನ್ನ ಕುಟುಂಬದ ಸಹಕಾರದೊಂದಿಗೆ ಜೀವನ ಸಾಗುತ್ತಿದೆ.”

“ನನಗೆ ಅಶ್ಲೀಲ ಸಂದೇಶ ಕಳಿಸಿರುವ ವಿವಿಐಪಿ ಪುತ್ರನ ವಿರುದ್ಧ ನನಗೆ ಆಕ್ರೋಶವಿದೆ. ಅವರ ತಂದೆಯನ್ನು ನಾನು ಗೌರವಿಸುತ್ತೇನೆ. ನನಗೆ ಈ ಯುವಕನ ವರ್ತನೆಯಿಂದಾಗಿ ಬೇಸರವಾಗಿದೆ. ಅನಿವಾರ್ಯವಾಗಿ ಆತನ ವಿರುದ್ಧ ದೂರು ಕೊಡುತ್ತಿದ್ದೇನೆ.”

“ಯೂಟ್ಯೂಬ್, ಫೇಸ್ಬುಕ್, ಟ್ವಿಟ್ಟರ್, ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಮ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳಿಸುವುದು ಕಾನೂನಿನ ಪ್ರಕಾರ ಅಪರಾಧ. section 66 ಪ್ರಕಾರ ಇದಕ್ಕೆ 3 ವರ್ಷಗಳ ಕಾಲ ಜಾಮೀನು ರಹಿತ ಕಾರಾಗೃಹ ಶಿಕ್ಷೆಗೆ ಒಳಪಡಿಸಲಾಗುತ್ತದೆ. 354ರ ಪ್ರಕಾರ ಪ್ರಕರಣವನ್ನು ದಾಖಲಿಸಲಾಗಿದೆ.”

“ಇನ್ನೂ ನಾನು ಪೋಷಕರಲ್ಲಿ ಮನವಿ ಮಾಡುವುದು ಏನೆಂದರೆ ನಿಮ್ಮ ಮಕ್ಕಳ ಅಂತರ್ಜಾಲ ಬಳಕೆ ಕಡೆ ಗಮನವಿಡಿ. ಯಾಕೆಂದರೆ ನಮ್ಮ ಸೈಬರ್ ಕ್ರೈಂ ವಿಭಾಗದಲ್ಲಿ ಪೊಲೀಸರು ಕ್ಷಣಮಾತ್ರದಲ್ಲಿ ನಿಮ್ಮ ಹೆಡೆಮುರಿ ಕಟ್ಟುತ್ತಾರೆ. ಹೀಗಾಗಿ ಇಂತಹ ಅಶ್ಲೀಲಕರವಾದ ಚಟುವಟಿಕೆಗಳಿಂದ ದೂರು ಇರಿ.”

ಕರ್ನಾಟಕ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಈ ಪ್ರಕರಣದಲ್ಲಿ ಪೊಲೀಸರು ನಮಗೆ ನ್ಯಾಯ ಕೊಡಿಸಿದ್ದಾರೆ.

– ಸಂಜನಾ ಗಲ್ರಾನಿ, ಬಹುಭಾಷಾ ನಟಿ


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...