HomeUncategorizedಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು.. ತನಿಖೆಗೆ ಹೆದರಿ ಓಡಿ ಹೋಗುವುದಿಲ್ಲ: ಎಚ್‌.ಡಿ. ರೇವಣ್ಣ

ಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು.. ತನಿಖೆಗೆ ಹೆದರಿ ಓಡಿ ಹೋಗುವುದಿಲ್ಲ: ಎಚ್‌.ಡಿ. ರೇವಣ್ಣ

- Advertisement -
- Advertisement -

ತಮ್ಮ ಪುತ್ರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ಹಗರಣದ ಕುರಿತು ಪ್ರತಿಕ್ರಿಯೆ ನೀಡಿರುವಜನತಾದಳ (ಜಾತ್ಯತೀತ) ಹಿರಿಯ ಶಾಸಕ ಎಚ್‌.ಡಿ. ರೇವಣ್ಣ, “ಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು; ಭಯಪಟ್ಟು ಓಡಿಹೋಗುವುದಿಲ್ಲ” ಎಂದು ಅವರು ಸೋಮವಾರ ಹೇಳಿದ್ದಾರೆ.

ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಎರಡು ದಿನಗಳ ಮೊದಲು, ಕಳೆದ ವಾರ ಪ್ರಜ್ವಲ್ ರೇವಣ್ಣ ಅವರ ಸಾವಿರಾರು ಲೈಂಗಿಕ ವೀಡಿಯೊಗಳು ಭಾರೀ ವಿವಾದಕ್ಕೆ ಕಾರಣವಾಗಿವೆ. ನಂತರ, ಭಾನುವಾರ ಮನೆಗೆಲಸದಾಕೆ ಹಾಗೂ ಆಕೆಯ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಅಪ್ಪ-ಮಗನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಪ್ರಕರಣ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ರೇವಣ್ಣ, “ಎಂತಹ ಷಡ್ಯಂತ್ರ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ, ಹೆದರಿ ಓಡಿ ಹೋಗುವವನಲ್ಲ, 4-5 ವರ್ಷಗಳ ಹಳೆ ವಿವಿಡಯೊಗಳನ್ನು ಬಿಡುಗಡೆ ಮಾಡಿದ್ದಾರೆ” ಎಂದು ಹೇಳಿದರು.

ವೀಡಿಯೋಗಳು ಭಾರೀ ಗದ್ದಲಕ್ಕೆ ಕಾರಣವಾದ ನಂತರ, ಕರ್ನಾಟಕ ಸರ್ಕಾರವು ವಿಶೇಷ ತನಿಖಾ ತಂಡದಿಂದ ತನಿಖೆಗೆ ವಹಿಸಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ದೇಶ ಬಿಟ್ಟು ಜರ್ಮನಿಯ ಫ್ರಾಂಕ್ ಫರ್ಟ್ ಗೆ ಪಲಾಯನ ಮಾಡಿದ್ದಾರೆ ಎನ್ನಲಾಗುತ್ತಿದ್ದು ಈವರೆಗೆ ಅವರು ಎಲ್ಲಿದ್ದಾರೆ ಎಂಬ ಬಗ್ಗೆ ಖಚಿತ ಸುದ್ದಿ ಲಭಿಸಿಲ್ಲ.

ಈ ಬಗ್ಗೆ ಮಾಧ್ಯಮಗಳಿಗೆ ಉತ್ತರಿಸಿರುವ ಅವರು, “ಪ್ರಜ್ವಲ್ ಹೇಗಿದ್ದರೂ ವಿದೇಶಕ್ಕೆ ಹೋಗುತ್ತಿದ್ದರು” ಎಂದರು. ಇನ್ನು, “ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರುವುದು ಗೊತ್ತಿರಲಿಲ್ಲ” ಎಂದು ಹೇಳಿದರು.

ಪ್ರಜ್ವಲ್ ವಿರುದ್ಧ ಪಕ್ಷದ ಕ್ರಮದ ಕುರಿತು ಮಾತನಾಡಿ, “ಅವರನ್ನು ಪಕ್ಷದಿಂದ ಉಚ್ಚಾಟಿಸುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ” ಎಂದರು.

ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ ಎಂದು ಪ್ರತಿಪಾದಿಸಿದ ಹೆಚ್.ಡಿ.ರೇವಣ್ಣ, ರಾಜ್ಯ ಸರ್ಕಾರ ತನಿಖೆ ನಡೆಸಲಿ ಎಂದರು. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಆಡಳಿತದಲ್ಲಿ ನಾವು ಸಿಐಡಿ ಅಥವಾ ಎಸ್‌ಐಟಿ ಆಗಿರಲಿ ಹಲವಾರು ತನಿಖೆಗಳನ್ನು ಎದುರಿಸಿದ್ದೇವೆ ಎಂದು ಹೇಳಿದರು.

ಇದು ರೇವಣ್ಣ ಕುಟುಂಬದ ಸಮಸ್ಯೆ; ನಮಗೂ ಇದಕ್ಕೂ ಸಂಬಂಧವಿಲ್ಲ: 

ತಮ್ಮ ಅಣ್ಣನ ಪುತ್ರ, ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ಅವರ ‘ಅಶ್ಲೀಲ ವಿಡಿಯೋ’ ಪ್ರಕರಣಕ್ಕೆ ಸಂಬಂಧಿಸಿದಂತೆ ಜನತಾ ದಳ (ಜಾತ್ಯತೀತ) ನಾಯಕ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, “ಇದು ರೇವಣ್ಣ ಕುಟುಂಬದ ಸಮಸ್ಯೆ, ಇದಕ್ಕೂ ನಮಗೂ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

“ಪ್ರಕರಣವು ಕುಟುಂಬದ ಸಮಸ್ಯೆಯಲ್ಲ, ನನ್ನ ಮತ್ತು ತಂದೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಹೆಸರನ್ನು ಏಕೆ ತಂದರು” ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ಯಾರಾದರೂ ಯಾವುದೇ ತಪ್ಪಿನಲ್ಲಿ ಭಾಗಿಯಾಗಿರುವುದು ಕಂಡುಬಂದರೆ, ಆ ವ್ಯಕ್ತಿಯನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕಾಗುತ್ತದೆ” ಎಂದ ಅವರು, ಅಶ್ಲೀಲ ವೀಡಿಯೊಗಳು ಬಿಡುಗಡೆಯಾಗಿರುವ ಸಮಯವನ್ನು ಪ್ರಶ್ನಿಸಿದರು.

“ಬಿಡುಗಡೆ ಮಾಡಿದ್ದು ಯಾರು, ಈ ಹಿಂದೆ ಯಾಕೆ ಬಿಡುಗಡೆ ಮಾಡಿಲ್ಲ, ಚುನಾವಣೆ ಸಂದರ್ಭದಲ್ಲಿ ಹಳೇ ವಿಚಾರವನ್ನು ಏಕೆ ಎತ್ತಲಾಗುತ್ತಿದೆ? ಎಸ್‌ಐಟಿ ರಚನೆಯಾಗಿದೆ, ತನಿಖೆಯ ಮೂಲಕ ಸತ್ಯಾಂಶ ಹೊರ ಬರಲಿ. ಯಾರೇ ಆಗಿರಲಿ, ದೇಶದ ಕಾನೂನಿನ ಪ್ರಕಾರ ತಪ್ಪು… ತಪ್ಪು ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಹಾಗಾಗಿ, ತನಿಖೆಯಿಂದ ಸತ್ಯಾಂಶ ಹೊರಬರಲಿ, ಆ ನಂತರ ನಾನು ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

“ಅದು ರೇವಣ್ಣ ಕುಟುಂಬದ ವಿಚಾರ, ನಮಗೆ ಸಂಬಂಧವಿಲ್ಲ, ನಾಲ್ವರು ಬೇರೆ ಬೇರೆಯಾಗಿ ವಾಸವಾಗಿದ್ದಾರೆ” ಎಂದ ಅವರು, ಆ ವ್ಯಕ್ತಿಯ ಬಗ್ಗೆ ಮಾತನಾಡುವಾಗ ಕುಟುಂಬದ ಹೆಸರು ತಂದಿರುವ ಬಗ್ಗೆ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಬೇಕೆಂದರು.

ಇದು ಕೌಟುಂಬಿಕ ಸಮಸ್ಯೆ ಅಲ್ಲ, ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರನ್ನು ಏಕೆ ತರುತ್ತೀರಿ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...