HomeUncategorizedಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು.. ತನಿಖೆಗೆ ಹೆದರಿ ಓಡಿ ಹೋಗುವುದಿಲ್ಲ: ಎಚ್‌.ಡಿ. ರೇವಣ್ಣ

ಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು.. ತನಿಖೆಗೆ ಹೆದರಿ ಓಡಿ ಹೋಗುವುದಿಲ್ಲ: ಎಚ್‌.ಡಿ. ರೇವಣ್ಣ

- Advertisement -
- Advertisement -

ತಮ್ಮ ಪುತ್ರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ಹಗರಣದ ಕುರಿತು ಪ್ರತಿಕ್ರಿಯೆ ನೀಡಿರುವಜನತಾದಳ (ಜಾತ್ಯತೀತ) ಹಿರಿಯ ಶಾಸಕ ಎಚ್‌.ಡಿ. ರೇವಣ್ಣ, “ಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು; ಭಯಪಟ್ಟು ಓಡಿಹೋಗುವುದಿಲ್ಲ” ಎಂದು ಅವರು ಸೋಮವಾರ ಹೇಳಿದ್ದಾರೆ.

ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಎರಡು ದಿನಗಳ ಮೊದಲು, ಕಳೆದ ವಾರ ಪ್ರಜ್ವಲ್ ರೇವಣ್ಣ ಅವರ ಸಾವಿರಾರು ಲೈಂಗಿಕ ವೀಡಿಯೊಗಳು ಭಾರೀ ವಿವಾದಕ್ಕೆ ಕಾರಣವಾಗಿವೆ. ನಂತರ, ಭಾನುವಾರ ಮನೆಗೆಲಸದಾಕೆ ಹಾಗೂ ಆಕೆಯ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಅಪ್ಪ-ಮಗನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಪ್ರಕರಣ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ರೇವಣ್ಣ, “ಎಂತಹ ಷಡ್ಯಂತ್ರ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ, ಹೆದರಿ ಓಡಿ ಹೋಗುವವನಲ್ಲ, 4-5 ವರ್ಷಗಳ ಹಳೆ ವಿವಿಡಯೊಗಳನ್ನು ಬಿಡುಗಡೆ ಮಾಡಿದ್ದಾರೆ” ಎಂದು ಹೇಳಿದರು.

ವೀಡಿಯೋಗಳು ಭಾರೀ ಗದ್ದಲಕ್ಕೆ ಕಾರಣವಾದ ನಂತರ, ಕರ್ನಾಟಕ ಸರ್ಕಾರವು ವಿಶೇಷ ತನಿಖಾ ತಂಡದಿಂದ ತನಿಖೆಗೆ ವಹಿಸಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ದೇಶ ಬಿಟ್ಟು ಜರ್ಮನಿಯ ಫ್ರಾಂಕ್ ಫರ್ಟ್ ಗೆ ಪಲಾಯನ ಮಾಡಿದ್ದಾರೆ ಎನ್ನಲಾಗುತ್ತಿದ್ದು ಈವರೆಗೆ ಅವರು ಎಲ್ಲಿದ್ದಾರೆ ಎಂಬ ಬಗ್ಗೆ ಖಚಿತ ಸುದ್ದಿ ಲಭಿಸಿಲ್ಲ.

ಈ ಬಗ್ಗೆ ಮಾಧ್ಯಮಗಳಿಗೆ ಉತ್ತರಿಸಿರುವ ಅವರು, “ಪ್ರಜ್ವಲ್ ಹೇಗಿದ್ದರೂ ವಿದೇಶಕ್ಕೆ ಹೋಗುತ್ತಿದ್ದರು” ಎಂದರು. ಇನ್ನು, “ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರುವುದು ಗೊತ್ತಿರಲಿಲ್ಲ” ಎಂದು ಹೇಳಿದರು.

ಪ್ರಜ್ವಲ್ ವಿರುದ್ಧ ಪಕ್ಷದ ಕ್ರಮದ ಕುರಿತು ಮಾತನಾಡಿ, “ಅವರನ್ನು ಪಕ್ಷದಿಂದ ಉಚ್ಚಾಟಿಸುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ” ಎಂದರು.

ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ ಎಂದು ಪ್ರತಿಪಾದಿಸಿದ ಹೆಚ್.ಡಿ.ರೇವಣ್ಣ, ರಾಜ್ಯ ಸರ್ಕಾರ ತನಿಖೆ ನಡೆಸಲಿ ಎಂದರು. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಆಡಳಿತದಲ್ಲಿ ನಾವು ಸಿಐಡಿ ಅಥವಾ ಎಸ್‌ಐಟಿ ಆಗಿರಲಿ ಹಲವಾರು ತನಿಖೆಗಳನ್ನು ಎದುರಿಸಿದ್ದೇವೆ ಎಂದು ಹೇಳಿದರು.

ಇದು ರೇವಣ್ಣ ಕುಟುಂಬದ ಸಮಸ್ಯೆ; ನಮಗೂ ಇದಕ್ಕೂ ಸಂಬಂಧವಿಲ್ಲ: 

ತಮ್ಮ ಅಣ್ಣನ ಪುತ್ರ, ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ಅವರ ‘ಅಶ್ಲೀಲ ವಿಡಿಯೋ’ ಪ್ರಕರಣಕ್ಕೆ ಸಂಬಂಧಿಸಿದಂತೆ ಜನತಾ ದಳ (ಜಾತ್ಯತೀತ) ನಾಯಕ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, “ಇದು ರೇವಣ್ಣ ಕುಟುಂಬದ ಸಮಸ್ಯೆ, ಇದಕ್ಕೂ ನಮಗೂ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

“ಪ್ರಕರಣವು ಕುಟುಂಬದ ಸಮಸ್ಯೆಯಲ್ಲ, ನನ್ನ ಮತ್ತು ತಂದೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಹೆಸರನ್ನು ಏಕೆ ತಂದರು” ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ಯಾರಾದರೂ ಯಾವುದೇ ತಪ್ಪಿನಲ್ಲಿ ಭಾಗಿಯಾಗಿರುವುದು ಕಂಡುಬಂದರೆ, ಆ ವ್ಯಕ್ತಿಯನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕಾಗುತ್ತದೆ” ಎಂದ ಅವರು, ಅಶ್ಲೀಲ ವೀಡಿಯೊಗಳು ಬಿಡುಗಡೆಯಾಗಿರುವ ಸಮಯವನ್ನು ಪ್ರಶ್ನಿಸಿದರು.

“ಬಿಡುಗಡೆ ಮಾಡಿದ್ದು ಯಾರು, ಈ ಹಿಂದೆ ಯಾಕೆ ಬಿಡುಗಡೆ ಮಾಡಿಲ್ಲ, ಚುನಾವಣೆ ಸಂದರ್ಭದಲ್ಲಿ ಹಳೇ ವಿಚಾರವನ್ನು ಏಕೆ ಎತ್ತಲಾಗುತ್ತಿದೆ? ಎಸ್‌ಐಟಿ ರಚನೆಯಾಗಿದೆ, ತನಿಖೆಯ ಮೂಲಕ ಸತ್ಯಾಂಶ ಹೊರ ಬರಲಿ. ಯಾರೇ ಆಗಿರಲಿ, ದೇಶದ ಕಾನೂನಿನ ಪ್ರಕಾರ ತಪ್ಪು… ತಪ್ಪು ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಹಾಗಾಗಿ, ತನಿಖೆಯಿಂದ ಸತ್ಯಾಂಶ ಹೊರಬರಲಿ, ಆ ನಂತರ ನಾನು ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

“ಅದು ರೇವಣ್ಣ ಕುಟುಂಬದ ವಿಚಾರ, ನಮಗೆ ಸಂಬಂಧವಿಲ್ಲ, ನಾಲ್ವರು ಬೇರೆ ಬೇರೆಯಾಗಿ ವಾಸವಾಗಿದ್ದಾರೆ” ಎಂದ ಅವರು, ಆ ವ್ಯಕ್ತಿಯ ಬಗ್ಗೆ ಮಾತನಾಡುವಾಗ ಕುಟುಂಬದ ಹೆಸರು ತಂದಿರುವ ಬಗ್ಗೆ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಬೇಕೆಂದರು.

ಇದು ಕೌಟುಂಬಿಕ ಸಮಸ್ಯೆ ಅಲ್ಲ, ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರನ್ನು ಏಕೆ ತರುತ್ತೀರಿ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...