HomeUncategorizedಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು.. ತನಿಖೆಗೆ ಹೆದರಿ ಓಡಿ ಹೋಗುವುದಿಲ್ಲ: ಎಚ್‌.ಡಿ. ರೇವಣ್ಣ

ಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು.. ತನಿಖೆಗೆ ಹೆದರಿ ಓಡಿ ಹೋಗುವುದಿಲ್ಲ: ಎಚ್‌.ಡಿ. ರೇವಣ್ಣ

- Advertisement -
- Advertisement -

ತಮ್ಮ ಪುತ್ರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ಹಗರಣದ ಕುರಿತು ಪ್ರತಿಕ್ರಿಯೆ ನೀಡಿರುವಜನತಾದಳ (ಜಾತ್ಯತೀತ) ಹಿರಿಯ ಶಾಸಕ ಎಚ್‌.ಡಿ. ರೇವಣ್ಣ, “ಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು; ಭಯಪಟ್ಟು ಓಡಿಹೋಗುವುದಿಲ್ಲ” ಎಂದು ಅವರು ಸೋಮವಾರ ಹೇಳಿದ್ದಾರೆ.

ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಎರಡು ದಿನಗಳ ಮೊದಲು, ಕಳೆದ ವಾರ ಪ್ರಜ್ವಲ್ ರೇವಣ್ಣ ಅವರ ಸಾವಿರಾರು ಲೈಂಗಿಕ ವೀಡಿಯೊಗಳು ಭಾರೀ ವಿವಾದಕ್ಕೆ ಕಾರಣವಾಗಿವೆ. ನಂತರ, ಭಾನುವಾರ ಮನೆಗೆಲಸದಾಕೆ ಹಾಗೂ ಆಕೆಯ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಅಪ್ಪ-ಮಗನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಪ್ರಕರಣ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ರೇವಣ್ಣ, “ಎಂತಹ ಷಡ್ಯಂತ್ರ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ, ಹೆದರಿ ಓಡಿ ಹೋಗುವವನಲ್ಲ, 4-5 ವರ್ಷಗಳ ಹಳೆ ವಿವಿಡಯೊಗಳನ್ನು ಬಿಡುಗಡೆ ಮಾಡಿದ್ದಾರೆ” ಎಂದು ಹೇಳಿದರು.

ವೀಡಿಯೋಗಳು ಭಾರೀ ಗದ್ದಲಕ್ಕೆ ಕಾರಣವಾದ ನಂತರ, ಕರ್ನಾಟಕ ಸರ್ಕಾರವು ವಿಶೇಷ ತನಿಖಾ ತಂಡದಿಂದ ತನಿಖೆಗೆ ವಹಿಸಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ದೇಶ ಬಿಟ್ಟು ಜರ್ಮನಿಯ ಫ್ರಾಂಕ್ ಫರ್ಟ್ ಗೆ ಪಲಾಯನ ಮಾಡಿದ್ದಾರೆ ಎನ್ನಲಾಗುತ್ತಿದ್ದು ಈವರೆಗೆ ಅವರು ಎಲ್ಲಿದ್ದಾರೆ ಎಂಬ ಬಗ್ಗೆ ಖಚಿತ ಸುದ್ದಿ ಲಭಿಸಿಲ್ಲ.

ಈ ಬಗ್ಗೆ ಮಾಧ್ಯಮಗಳಿಗೆ ಉತ್ತರಿಸಿರುವ ಅವರು, “ಪ್ರಜ್ವಲ್ ಹೇಗಿದ್ದರೂ ವಿದೇಶಕ್ಕೆ ಹೋಗುತ್ತಿದ್ದರು” ಎಂದರು. ಇನ್ನು, “ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರುವುದು ಗೊತ್ತಿರಲಿಲ್ಲ” ಎಂದು ಹೇಳಿದರು.

ಪ್ರಜ್ವಲ್ ವಿರುದ್ಧ ಪಕ್ಷದ ಕ್ರಮದ ಕುರಿತು ಮಾತನಾಡಿ, “ಅವರನ್ನು ಪಕ್ಷದಿಂದ ಉಚ್ಚಾಟಿಸುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ” ಎಂದರು.

ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ ಎಂದು ಪ್ರತಿಪಾದಿಸಿದ ಹೆಚ್.ಡಿ.ರೇವಣ್ಣ, ರಾಜ್ಯ ಸರ್ಕಾರ ತನಿಖೆ ನಡೆಸಲಿ ಎಂದರು. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಆಡಳಿತದಲ್ಲಿ ನಾವು ಸಿಐಡಿ ಅಥವಾ ಎಸ್‌ಐಟಿ ಆಗಿರಲಿ ಹಲವಾರು ತನಿಖೆಗಳನ್ನು ಎದುರಿಸಿದ್ದೇವೆ ಎಂದು ಹೇಳಿದರು.

ಇದು ರೇವಣ್ಣ ಕುಟುಂಬದ ಸಮಸ್ಯೆ; ನಮಗೂ ಇದಕ್ಕೂ ಸಂಬಂಧವಿಲ್ಲ: 

ತಮ್ಮ ಅಣ್ಣನ ಪುತ್ರ, ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ಅವರ ‘ಅಶ್ಲೀಲ ವಿಡಿಯೋ’ ಪ್ರಕರಣಕ್ಕೆ ಸಂಬಂಧಿಸಿದಂತೆ ಜನತಾ ದಳ (ಜಾತ್ಯತೀತ) ನಾಯಕ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, “ಇದು ರೇವಣ್ಣ ಕುಟುಂಬದ ಸಮಸ್ಯೆ, ಇದಕ್ಕೂ ನಮಗೂ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

“ಪ್ರಕರಣವು ಕುಟುಂಬದ ಸಮಸ್ಯೆಯಲ್ಲ, ನನ್ನ ಮತ್ತು ತಂದೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಹೆಸರನ್ನು ಏಕೆ ತಂದರು” ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ಯಾರಾದರೂ ಯಾವುದೇ ತಪ್ಪಿನಲ್ಲಿ ಭಾಗಿಯಾಗಿರುವುದು ಕಂಡುಬಂದರೆ, ಆ ವ್ಯಕ್ತಿಯನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕಾಗುತ್ತದೆ” ಎಂದ ಅವರು, ಅಶ್ಲೀಲ ವೀಡಿಯೊಗಳು ಬಿಡುಗಡೆಯಾಗಿರುವ ಸಮಯವನ್ನು ಪ್ರಶ್ನಿಸಿದರು.

“ಬಿಡುಗಡೆ ಮಾಡಿದ್ದು ಯಾರು, ಈ ಹಿಂದೆ ಯಾಕೆ ಬಿಡುಗಡೆ ಮಾಡಿಲ್ಲ, ಚುನಾವಣೆ ಸಂದರ್ಭದಲ್ಲಿ ಹಳೇ ವಿಚಾರವನ್ನು ಏಕೆ ಎತ್ತಲಾಗುತ್ತಿದೆ? ಎಸ್‌ಐಟಿ ರಚನೆಯಾಗಿದೆ, ತನಿಖೆಯ ಮೂಲಕ ಸತ್ಯಾಂಶ ಹೊರ ಬರಲಿ. ಯಾರೇ ಆಗಿರಲಿ, ದೇಶದ ಕಾನೂನಿನ ಪ್ರಕಾರ ತಪ್ಪು… ತಪ್ಪು ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಹಾಗಾಗಿ, ತನಿಖೆಯಿಂದ ಸತ್ಯಾಂಶ ಹೊರಬರಲಿ, ಆ ನಂತರ ನಾನು ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

“ಅದು ರೇವಣ್ಣ ಕುಟುಂಬದ ವಿಚಾರ, ನಮಗೆ ಸಂಬಂಧವಿಲ್ಲ, ನಾಲ್ವರು ಬೇರೆ ಬೇರೆಯಾಗಿ ವಾಸವಾಗಿದ್ದಾರೆ” ಎಂದ ಅವರು, ಆ ವ್ಯಕ್ತಿಯ ಬಗ್ಗೆ ಮಾತನಾಡುವಾಗ ಕುಟುಂಬದ ಹೆಸರು ತಂದಿರುವ ಬಗ್ಗೆ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಬೇಕೆಂದರು.

ಇದು ಕೌಟುಂಬಿಕ ಸಮಸ್ಯೆ ಅಲ್ಲ, ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರನ್ನು ಏಕೆ ತರುತ್ತೀರಿ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...