HomeUncategorizedಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು.. ತನಿಖೆಗೆ ಹೆದರಿ ಓಡಿ ಹೋಗುವುದಿಲ್ಲ: ಎಚ್‌.ಡಿ. ರೇವಣ್ಣ

ಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು.. ತನಿಖೆಗೆ ಹೆದರಿ ಓಡಿ ಹೋಗುವುದಿಲ್ಲ: ಎಚ್‌.ಡಿ. ರೇವಣ್ಣ

- Advertisement -
- Advertisement -

ತಮ್ಮ ಪುತ್ರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ಹಗರಣದ ಕುರಿತು ಪ್ರತಿಕ್ರಿಯೆ ನೀಡಿರುವಜನತಾದಳ (ಜಾತ್ಯತೀತ) ಹಿರಿಯ ಶಾಸಕ ಎಚ್‌.ಡಿ. ರೇವಣ್ಣ, “ಅಶ್ಲೀಲ ವೀಡಿಯೊಗಳು 4-5 ವರ್ಷಗಳಷ್ಟು ಹಳೆಯವು; ಭಯಪಟ್ಟು ಓಡಿಹೋಗುವುದಿಲ್ಲ” ಎಂದು ಅವರು ಸೋಮವಾರ ಹೇಳಿದ್ದಾರೆ.

ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಎರಡು ದಿನಗಳ ಮೊದಲು, ಕಳೆದ ವಾರ ಪ್ರಜ್ವಲ್ ರೇವಣ್ಣ ಅವರ ಸಾವಿರಾರು ಲೈಂಗಿಕ ವೀಡಿಯೊಗಳು ಭಾರೀ ವಿವಾದಕ್ಕೆ ಕಾರಣವಾಗಿವೆ. ನಂತರ, ಭಾನುವಾರ ಮನೆಗೆಲಸದಾಕೆ ಹಾಗೂ ಆಕೆಯ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಅಪ್ಪ-ಮಗನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಪ್ರಕರಣ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ರೇವಣ್ಣ, “ಎಂತಹ ಷಡ್ಯಂತ್ರ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ, ಹೆದರಿ ಓಡಿ ಹೋಗುವವನಲ್ಲ, 4-5 ವರ್ಷಗಳ ಹಳೆ ವಿವಿಡಯೊಗಳನ್ನು ಬಿಡುಗಡೆ ಮಾಡಿದ್ದಾರೆ” ಎಂದು ಹೇಳಿದರು.

ವೀಡಿಯೋಗಳು ಭಾರೀ ಗದ್ದಲಕ್ಕೆ ಕಾರಣವಾದ ನಂತರ, ಕರ್ನಾಟಕ ಸರ್ಕಾರವು ವಿಶೇಷ ತನಿಖಾ ತಂಡದಿಂದ ತನಿಖೆಗೆ ವಹಿಸಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ದೇಶ ಬಿಟ್ಟು ಜರ್ಮನಿಯ ಫ್ರಾಂಕ್ ಫರ್ಟ್ ಗೆ ಪಲಾಯನ ಮಾಡಿದ್ದಾರೆ ಎನ್ನಲಾಗುತ್ತಿದ್ದು ಈವರೆಗೆ ಅವರು ಎಲ್ಲಿದ್ದಾರೆ ಎಂಬ ಬಗ್ಗೆ ಖಚಿತ ಸುದ್ದಿ ಲಭಿಸಿಲ್ಲ.

ಈ ಬಗ್ಗೆ ಮಾಧ್ಯಮಗಳಿಗೆ ಉತ್ತರಿಸಿರುವ ಅವರು, “ಪ್ರಜ್ವಲ್ ಹೇಗಿದ್ದರೂ ವಿದೇಶಕ್ಕೆ ಹೋಗುತ್ತಿದ್ದರು” ಎಂದರು. ಇನ್ನು, “ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರುವುದು ಗೊತ್ತಿರಲಿಲ್ಲ” ಎಂದು ಹೇಳಿದರು.

ಪ್ರಜ್ವಲ್ ವಿರುದ್ಧ ಪಕ್ಷದ ಕ್ರಮದ ಕುರಿತು ಮಾತನಾಡಿ, “ಅವರನ್ನು ಪಕ್ಷದಿಂದ ಉಚ್ಚಾಟಿಸುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ” ಎಂದರು.

ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ ಎಂದು ಪ್ರತಿಪಾದಿಸಿದ ಹೆಚ್.ಡಿ.ರೇವಣ್ಣ, ರಾಜ್ಯ ಸರ್ಕಾರ ತನಿಖೆ ನಡೆಸಲಿ ಎಂದರು. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಆಡಳಿತದಲ್ಲಿ ನಾವು ಸಿಐಡಿ ಅಥವಾ ಎಸ್‌ಐಟಿ ಆಗಿರಲಿ ಹಲವಾರು ತನಿಖೆಗಳನ್ನು ಎದುರಿಸಿದ್ದೇವೆ ಎಂದು ಹೇಳಿದರು.

ಇದು ರೇವಣ್ಣ ಕುಟುಂಬದ ಸಮಸ್ಯೆ; ನಮಗೂ ಇದಕ್ಕೂ ಸಂಬಂಧವಿಲ್ಲ: 

ತಮ್ಮ ಅಣ್ಣನ ಪುತ್ರ, ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ಅವರ ‘ಅಶ್ಲೀಲ ವಿಡಿಯೋ’ ಪ್ರಕರಣಕ್ಕೆ ಸಂಬಂಧಿಸಿದಂತೆ ಜನತಾ ದಳ (ಜಾತ್ಯತೀತ) ನಾಯಕ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, “ಇದು ರೇವಣ್ಣ ಕುಟುಂಬದ ಸಮಸ್ಯೆ, ಇದಕ್ಕೂ ನಮಗೂ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

“ಪ್ರಕರಣವು ಕುಟುಂಬದ ಸಮಸ್ಯೆಯಲ್ಲ, ನನ್ನ ಮತ್ತು ತಂದೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಹೆಸರನ್ನು ಏಕೆ ತಂದರು” ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ಯಾರಾದರೂ ಯಾವುದೇ ತಪ್ಪಿನಲ್ಲಿ ಭಾಗಿಯಾಗಿರುವುದು ಕಂಡುಬಂದರೆ, ಆ ವ್ಯಕ್ತಿಯನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕಾಗುತ್ತದೆ” ಎಂದ ಅವರು, ಅಶ್ಲೀಲ ವೀಡಿಯೊಗಳು ಬಿಡುಗಡೆಯಾಗಿರುವ ಸಮಯವನ್ನು ಪ್ರಶ್ನಿಸಿದರು.

“ಬಿಡುಗಡೆ ಮಾಡಿದ್ದು ಯಾರು, ಈ ಹಿಂದೆ ಯಾಕೆ ಬಿಡುಗಡೆ ಮಾಡಿಲ್ಲ, ಚುನಾವಣೆ ಸಂದರ್ಭದಲ್ಲಿ ಹಳೇ ವಿಚಾರವನ್ನು ಏಕೆ ಎತ್ತಲಾಗುತ್ತಿದೆ? ಎಸ್‌ಐಟಿ ರಚನೆಯಾಗಿದೆ, ತನಿಖೆಯ ಮೂಲಕ ಸತ್ಯಾಂಶ ಹೊರ ಬರಲಿ. ಯಾರೇ ಆಗಿರಲಿ, ದೇಶದ ಕಾನೂನಿನ ಪ್ರಕಾರ ತಪ್ಪು… ತಪ್ಪು ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಹಾಗಾಗಿ, ತನಿಖೆಯಿಂದ ಸತ್ಯಾಂಶ ಹೊರಬರಲಿ, ಆ ನಂತರ ನಾನು ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

“ಅದು ರೇವಣ್ಣ ಕುಟುಂಬದ ವಿಚಾರ, ನಮಗೆ ಸಂಬಂಧವಿಲ್ಲ, ನಾಲ್ವರು ಬೇರೆ ಬೇರೆಯಾಗಿ ವಾಸವಾಗಿದ್ದಾರೆ” ಎಂದ ಅವರು, ಆ ವ್ಯಕ್ತಿಯ ಬಗ್ಗೆ ಮಾತನಾಡುವಾಗ ಕುಟುಂಬದ ಹೆಸರು ತಂದಿರುವ ಬಗ್ಗೆ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಬೇಕೆಂದರು.

ಇದು ಕೌಟುಂಬಿಕ ಸಮಸ್ಯೆ ಅಲ್ಲ, ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರನ್ನು ಏಕೆ ತರುತ್ತೀರಿ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...