Homeಮುಖಪುಟಅಶ್ಲೀಲ ಚಿತ್ರ ಹಗರಣ: ಹೊಸ ಎಫ್ಐಆರ್‌ನಲ್ಲಿ ನಟಿ ಗೆಹನಾ ವಸಿಷ್ಠ ಹೆಸರು

ಅಶ್ಲೀಲ ಚಿತ್ರ ಹಗರಣ: ಹೊಸ ಎಫ್ಐಆರ್‌ನಲ್ಲಿ ನಟಿ ಗೆಹನಾ ವಸಿಷ್ಠ ಹೆಸರು

- Advertisement -
- Advertisement -

ಅಶ್ಲೀಲ ಚಿತ್ರ ನಿರ್ಮಾಣ ಹಗರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಅವರನ್ನು ಬಂಧಿಸಿರುವ ಮುಂಬೈ ಅಪರಾಧ ವಿಭಾಗವು, ಈಗ ಅವರ ಸಹಚರರು ಮತ್ತು ನಟಿ ಗೆಹನಾ ವಸಿಷ್ಠ ವಿರುದ್ಧ ಹೊಸ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದೆ.

ಇಬ್ಬರು ನಟಿಯರು ಸಲ್ಲಿಸಿದ ಪೊಲೀಸ್ ದೂರುಗಳ ಹಿನ್ನೆಲೆಯಲ್ಲಿ ಹೊಸ ಪ್ರಕರಣ ದಾಖಲಾಗಿದ್ದು, ಇದರಲ್ಲಿ ನಟಿ ಗೆಹನಾ ವಸಿಷ್ಠ, ರೋಮಾ ಖಾನ್ ಮತ್ತು ತನ್ವೀರ್ ಹಶ್ಮಿ ಅವರು ಅಶ್ಲೀಲ ಚಿತ್ರಗಳಲ್ಲಿ ನಟಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಅಶ್ಲೀಲ ಚಲನಚಿತ್ರಗಳು ಮತ್ತು ವೀಡಿಯೊಗಳನ್ನು ನಿರ್ಮಾಣ ಮಾಡಿದ ನಂತರ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅಥವಾ ಅವರ ಸಹವರ್ತಿಗಳ ಒಡೆತನದ ಅಪ್ಲಿಕೇಶನ್‌ಗಳಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಆರೋಪಿಗಳ ವಿರುದ್ಧ 420 (ಮೋಸ), 392 (ದರೋಡೆಗೆ ಶಿಕ್ಷೆ), 393 (ದರೋಡೆಗೆ ಯತ್ನ) ಸೇರಿದಂತೆ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಮಾಲ್ವಾನಿ ಪೊಲೀಸ್ ಠಾಣೆಯಲ್ಲಿರುವ ಅಪರಾಧ ವಿಭಾಗದ ವಿಶೇಷ ತಂಡದಿಂದ ಈ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

ಫೆಬ್ರವರಿ 2021 ರಲ್ಲಿ ಕೆಲವು ಸಂತ್ರಸ್ತರು ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಮುಂಬೈ ಅಪರಾಧ ವಿಭಾಗವು ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಈ ವರ್ಷದ ಫೆಬ್ರವರಿಯಲ್ಲಿ ನಟಿ ಗೆಹನಾ ವಸಿಷ್ಠ ಬಂಧನಕ್ಕೊಳಗಾಗಿ, ನಂತರ ಜಾಮೀನು ಪಡೆದಿದ್ದರು. ಇತ್ತೀಚೆಗೆ ಮುಂಬೈ ಕ್ರೈಂ ಬ್ರಾಂಚ್ ವಿಶೇಷ ತಂಡ ಮತ್ತೆ ಅವರನ್ನು ವಿಚಾರಣೆಗೆ ಕರೆಸಿತ್ತು.

ಇಬ್ಬರು ಮಹಿಳೆಯರಿಂದ ಬಂದ ದೂರುಗಳ ಆಧಾರದ ಮೇಲೆ ಮಾಲ್ವಾನಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರೆ, ಮತ್ತೊಬ್ಬ ಮಹಿಳೆ ಮುಂಬೈನಿಂದ 120 ಕಿ.ಮೀ ದೂರದಲ್ಲಿರುವ ಲೋನವ್ಲಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮುಂಬೈ ಅಪರಾಧ ವಿಭಾಗವು ಈ ಪ್ರಕರಣವನ್ನು ವಹಿಸಿಕೊಳ್ಳುವ ಮೊದಲು, ಅಶ್ಲೀಲ ಚಿತ್ರಗಳ ದಂಧೆಯ ಬಗ್ಗೆ ಇಬ್ಬರು ನಟಿಯರಿಂದ ಮಹಾರಾಷ್ಟ್ರ ಸೈಬರ್ ಇಲಾಖೆಗೆ ದೂರು ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಹಿಂದೆ ತಿಳಿಸಿದ್ದಾರೆ.

“ಕೆಲವು ಹೊಸಬರು ಮತ್ತು ಕಿರಿಯ ಕಲಾವಿದರಿಗೆ ಅವಕಾಶ ನೀಡುವುದಾಗಿ ವೆಬ್ ಸರಣಿಗಳು ಅಥವಾ ಸಣ್ಣ ಚಿತ್ರಗಳಲ್ಲಿ ನಟಿಸುವಂತೆ ಆಮಿಷ ಒಡ್ಡಲಾಗಿದೆ. ಈ ಕಲಾವಿದರನ್ನು ಆಡಿಷನ್‌ಗೆ ಕರೆದು ಬೋಲ್ಡ್ ದೃಶ್ಯಗಳಲ್ಲಿ ನಟಿಸುವಂತೆ ಹೇಳಲಾಗಿದೆ. ಬಳಿಕ ಅವುಗಳನ್ನು ಕಲಾವಿದರ ಇಚ್ಛೆಗೆ ವಿರುದ್ಧವಾಗಿ ಅರೆ ನಗ್ನ ಅಥವಾ ನಗ್ನ ದೃಶ್ಯಗಳಾಗಿ ಮಾರ್ಪಡು ಮಾಡಲಾಗಿದೆ ಎಂದು ತನಿಖೆಯ ಸಮಯದಲ್ಲಿ ಬೆಳಕಿಗೆ ಬಂದಿದೆ” ಎಂದು ಅಧಿಕಾರಿ ಹೇಳಿದ್ದಾರೆ.

ಜುಲೈ 27 ರಂದು ರಾಜ್ ಕುಂದ್ರಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದಲ್ಲಿ ಈವರೆಗೆ ಕನಿಷ್ಠ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...