Homeಮುಖಪುಟಅಶ್ಲೀಲ ಚಿತ್ರ ಹಗರಣ: ಹೊಸ ಎಫ್ಐಆರ್‌ನಲ್ಲಿ ನಟಿ ಗೆಹನಾ ವಸಿಷ್ಠ ಹೆಸರು

ಅಶ್ಲೀಲ ಚಿತ್ರ ಹಗರಣ: ಹೊಸ ಎಫ್ಐಆರ್‌ನಲ್ಲಿ ನಟಿ ಗೆಹನಾ ವಸಿಷ್ಠ ಹೆಸರು

- Advertisement -
- Advertisement -

ಅಶ್ಲೀಲ ಚಿತ್ರ ನಿರ್ಮಾಣ ಹಗರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಅವರನ್ನು ಬಂಧಿಸಿರುವ ಮುಂಬೈ ಅಪರಾಧ ವಿಭಾಗವು, ಈಗ ಅವರ ಸಹಚರರು ಮತ್ತು ನಟಿ ಗೆಹನಾ ವಸಿಷ್ಠ ವಿರುದ್ಧ ಹೊಸ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದೆ.

ಇಬ್ಬರು ನಟಿಯರು ಸಲ್ಲಿಸಿದ ಪೊಲೀಸ್ ದೂರುಗಳ ಹಿನ್ನೆಲೆಯಲ್ಲಿ ಹೊಸ ಪ್ರಕರಣ ದಾಖಲಾಗಿದ್ದು, ಇದರಲ್ಲಿ ನಟಿ ಗೆಹನಾ ವಸಿಷ್ಠ, ರೋಮಾ ಖಾನ್ ಮತ್ತು ತನ್ವೀರ್ ಹಶ್ಮಿ ಅವರು ಅಶ್ಲೀಲ ಚಿತ್ರಗಳಲ್ಲಿ ನಟಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಅಶ್ಲೀಲ ಚಲನಚಿತ್ರಗಳು ಮತ್ತು ವೀಡಿಯೊಗಳನ್ನು ನಿರ್ಮಾಣ ಮಾಡಿದ ನಂತರ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅಥವಾ ಅವರ ಸಹವರ್ತಿಗಳ ಒಡೆತನದ ಅಪ್ಲಿಕೇಶನ್‌ಗಳಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಆರೋಪಿಗಳ ವಿರುದ್ಧ 420 (ಮೋಸ), 392 (ದರೋಡೆಗೆ ಶಿಕ್ಷೆ), 393 (ದರೋಡೆಗೆ ಯತ್ನ) ಸೇರಿದಂತೆ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಮಾಲ್ವಾನಿ ಪೊಲೀಸ್ ಠಾಣೆಯಲ್ಲಿರುವ ಅಪರಾಧ ವಿಭಾಗದ ವಿಶೇಷ ತಂಡದಿಂದ ಈ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

ಫೆಬ್ರವರಿ 2021 ರಲ್ಲಿ ಕೆಲವು ಸಂತ್ರಸ್ತರು ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಮುಂಬೈ ಅಪರಾಧ ವಿಭಾಗವು ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಈ ವರ್ಷದ ಫೆಬ್ರವರಿಯಲ್ಲಿ ನಟಿ ಗೆಹನಾ ವಸಿಷ್ಠ ಬಂಧನಕ್ಕೊಳಗಾಗಿ, ನಂತರ ಜಾಮೀನು ಪಡೆದಿದ್ದರು. ಇತ್ತೀಚೆಗೆ ಮುಂಬೈ ಕ್ರೈಂ ಬ್ರಾಂಚ್ ವಿಶೇಷ ತಂಡ ಮತ್ತೆ ಅವರನ್ನು ವಿಚಾರಣೆಗೆ ಕರೆಸಿತ್ತು.

ಇಬ್ಬರು ಮಹಿಳೆಯರಿಂದ ಬಂದ ದೂರುಗಳ ಆಧಾರದ ಮೇಲೆ ಮಾಲ್ವಾನಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರೆ, ಮತ್ತೊಬ್ಬ ಮಹಿಳೆ ಮುಂಬೈನಿಂದ 120 ಕಿ.ಮೀ ದೂರದಲ್ಲಿರುವ ಲೋನವ್ಲಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮುಂಬೈ ಅಪರಾಧ ವಿಭಾಗವು ಈ ಪ್ರಕರಣವನ್ನು ವಹಿಸಿಕೊಳ್ಳುವ ಮೊದಲು, ಅಶ್ಲೀಲ ಚಿತ್ರಗಳ ದಂಧೆಯ ಬಗ್ಗೆ ಇಬ್ಬರು ನಟಿಯರಿಂದ ಮಹಾರಾಷ್ಟ್ರ ಸೈಬರ್ ಇಲಾಖೆಗೆ ದೂರು ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಹಿಂದೆ ತಿಳಿಸಿದ್ದಾರೆ.

“ಕೆಲವು ಹೊಸಬರು ಮತ್ತು ಕಿರಿಯ ಕಲಾವಿದರಿಗೆ ಅವಕಾಶ ನೀಡುವುದಾಗಿ ವೆಬ್ ಸರಣಿಗಳು ಅಥವಾ ಸಣ್ಣ ಚಿತ್ರಗಳಲ್ಲಿ ನಟಿಸುವಂತೆ ಆಮಿಷ ಒಡ್ಡಲಾಗಿದೆ. ಈ ಕಲಾವಿದರನ್ನು ಆಡಿಷನ್‌ಗೆ ಕರೆದು ಬೋಲ್ಡ್ ದೃಶ್ಯಗಳಲ್ಲಿ ನಟಿಸುವಂತೆ ಹೇಳಲಾಗಿದೆ. ಬಳಿಕ ಅವುಗಳನ್ನು ಕಲಾವಿದರ ಇಚ್ಛೆಗೆ ವಿರುದ್ಧವಾಗಿ ಅರೆ ನಗ್ನ ಅಥವಾ ನಗ್ನ ದೃಶ್ಯಗಳಾಗಿ ಮಾರ್ಪಡು ಮಾಡಲಾಗಿದೆ ಎಂದು ತನಿಖೆಯ ಸಮಯದಲ್ಲಿ ಬೆಳಕಿಗೆ ಬಂದಿದೆ” ಎಂದು ಅಧಿಕಾರಿ ಹೇಳಿದ್ದಾರೆ.

ಜುಲೈ 27 ರಂದು ರಾಜ್ ಕುಂದ್ರಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದಲ್ಲಿ ಈವರೆಗೆ ಕನಿಷ್ಠ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...