Homeಮುಖಪುಟಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

- Advertisement -
- Advertisement -

ಮೇ 19, 2024ರಂದು ಮಹಾರಾಷ್ಟ್ರದ ಪುಣೆಯ ಕಲ್ಯಾಣ ನಗರ ಜಂಕ್ಷನ್ ಬಳಿ ನಡೆದ ಐಷಾರಾಮಿ ಪೋರ್ಶೆ ಕಾರು ಅಪಘಾತ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿನಿಮೀಯ ಶೈಲಿಯಲ್ಲಿ ಪ್ರಕರಣ ತಿರುಚಲು ಯತ್ನ, ಕಾನೂನಿನ ಮೇಲೆ ಪ್ರಭಾವ ಬೀರುವ ಯತ್ನ ಸೇರಿದಂತೆ ಹಲವು ಮಹತ್ವದ ಬೆಳವಣಿಗೆಗಳು ಈ ಪ್ರಕರಣದಲ್ಲಿ ನಡೆದಿದೆ.

ಇತ್ತೀಚಿನ ಮಾಹಿತಿ ಪ್ರಕಾರ, ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಪುಣೆಯ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥರೂ ಸೇರಿದ್ದಾರೆ.

ಡಾ. ಅಜಯ್ ತಾವಡೆ ಮತ್ತು ಡಾ. ಹರಿ ಹಾರ್ನರ್ ಬಂಧಿತರು. ಇವರಿಂದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿದಾಗ, ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಅಜಯ್ ತಾವಡೆ ಅಪಘಾತ ನಡೆದ ದಿನ ರಾತ್ರಿ ಬಾಲಕನ ತಂದೆಗೆ ಕರೆ ಮಾಡಿರುವುದು ತಿಳಿದು ಬಂದಿದೆ.

ಇಬ್ಬರು ವೈದ್ಯರು ಬಾಲಕನ ರಕ್ತದ ಮಾದರಿ ಪರಿಶೀಲಿಸಿ, ಆತ ಮದ್ಯಪಾನ ಮಾಡಿರಲಿಲ್ಲ ಎಂದು ವರದಿ ನೀಡಿದ್ದರು. ಆದರೆ, ಪೊಲೀಸರು ರೆಸ್ಟೋರೆಂಟ್ ಸಿಸಿಟಿವಿ ಪರಿಶೀಲಿಸಿದಾಗ, ಅದರಲ್ಲಿ ಬಾಲಕ ಮದ್ಯಪಾನ ಮಾಡಿರುವುದು ರೆಕಾರ್ಡ್ ಆಗಿತ್ತು. ಈ ಮೂಲಕ ವೈದ್ಯರ ಕಳ್ಳಾಟ ಬಯಲಾಗಿದೆ.

ಪ್ರಕರಣದ ವಿವರಣೆ : ಮೇ 19ರಂದು ಬೆಳಗಿನ ಜಾವ 3:15ರ ಸುಮಾರಿಗೆ ಪುಣೆ ನಗರದಲ್ಲಿ ಪಾರ್ಟಿ ಮುಗಿಸಿದ ಸ್ನೇಹಿತರ ಗುಂಪೊಂದು ಬೈಕ್ ಏರಿ ತಮ್ಮ ಮನೆಗೆ ತೆರಳುತ್ತಿತ್ತು. ಈ ವೇಳೆ ಕಲ್ಯಾಣ ನಗರ ಜಂಕ್ಷನ್ ಬಳಿ ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಐಷರಾಮಿ ಪೋರ್ಶೆ ಕಾರು ವೇಗವಾಗಿ ಬಂದು ಬೈಕೊಂದಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಬೈಕ್‌ನಲ್ಲಿದ್ದ ಮಧ್ಯ ಪ್ರದೇಶ ಮೂಲಕ ಇಬ್ಬರು ಐಟಿ ಉದ್ಯೋಗಿಗಳಾದ ಅನಿಸ್ ಅವಧಿಯಾ ಮತ್ತು ಅಶ್ವಿನಿ ಕೋಸ್ಟಾ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ಬಾಲಕನನ್ನು ಕಾರಿನಿಂದ ಕೆಳಗಿಳಿಸಿ ಥಳಿಸಿದ್ದರು. ಬಳಿಕ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಬಾಲಕನನ್ನು ಬಾಲ ನ್ಯಾಯಮಂಡಳಿ ಮುಂದೆ ಹಾಜರುಪಡಿಸಿದ್ದರು. ಮಂಡಳಿ, ಬಾಲಕನಿಗೆ ಷರತ್ತುಬದ್ದ ಜಾಮೀನು ನೀಡಿತ್ತು. ಆದರೆ, ಜಾಮೀನಿಗೆ ವಿಧಿಸಿದ್ದ ಷರತ್ತು ಜನರನ್ನು ಅಶ್ಚರ್ಯಗೊಳಿಸಿತ್ತು. ಕಾರು ಅಪಘಾತದ ಬಗ್ಗೆ ಸುದೀರ್ಘ ಪ್ರಬಂಧ ಬರೆಯಬೇಕು, ಸಂಚಾರಿ ಪೊಲೀಸರ ಜೊತೆ 15 ದಿನಗಳ ಕಾಲ ಕೆಲಸ ಮಾಡಬೇಕು ಇತ್ಯಾದಿ ಷರತ್ತುಗಳನ್ನು ವಿಧಿಸಲಾಗಿತ್ತು.

ಆರೋಪಿ ಬಾಲಕ ಪುಣೆಯ ಬ್ರಹ್ಮ ರಿಲಿಯಾಲ್ಟಿ ಬಿಲ್ಡರ್ ಮಾಲೀಕ ವಿಶಾಲ್ ಅಗರ್ವಾಲ್ ಅವರ ಪುತ್ರನಾಗಿದ್ದಾನೆ. ಬಾಲಕನಿಗೆ ಶ್ರೀಮಂತ ಹಿನ್ನೆಲೆ ಇರುವುದರಿಂದ ಕ್ಷುಲ್ಲಕ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ. ಎರಡು ಜೀವಗಳಿಗೆ ಬೆಲೆ ಇಲ್ಲವೇ? ಎಂದು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕೂಡ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು. “ಮೋದಿಯ ಎರಡು ಭಾರತದಲ್ಲಿ ನ್ಯಾಯವು ಸಂಪತ್ತನ್ನು ಅವಲಂಭಿಸಿದೆ” ಎಂದಿದ್ದರು. ಪುಣೆ ಕಾಂಗ್ರೆಸ್ ಅಪಘಾತ ಸ್ಥಳದಲ್ಲಿ ಪ್ರಬಂಧ ಸ್ಪರ್ದೆ ಏರ್ಪಡಿಸಿ ವಿಭಿನ್ನವಾಗಿ ಪ್ರತಿಭಟಿಸಿತ್ತು.

“ಯರವಾಡ ಠಾಣೆಯ ಅಧಿಕಾರಿ ಬಾಲಕನಿಗೆ ಪಿಝ್ಝಾ ಬರ್ಗರ್ ತರಿಸಿಕೊಟ್ಟು, ಮೃತರ ಕುಟುಂಬಸ್ಥರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ” ಎಂದು ಪ್ರಕಾಶ್ ಅಂಬೇಡ್ಕರ್ ಆರೋಪಿಸಿದ್ದರು.

ಜನಾಕ್ರೋಶ ಹೆಚ್ಚಾಗುತ್ತಿದ್ದಂತೆ ಬಾಲ ನ್ಯಾಯಮಂಡಳಿ ಬಾಲಕನಿಗೆ ನೀಡಿದ್ದ ಜಾಮೀನು ರದ್ದುಪಡಿಸಿತ್ತು. ಈ ನಡುವೆ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದರು.

ಬಳಿಕ ಆರೋಪಿ ಬಾಲಕ ಮದ್ಯಪಾನ ಮಾಡಿ ವೇಗವಾಗಿ ಕಾರು ಚಲಾಯಿಸಿದ್ದ ಎಂಬ ವಿಷಯ ಬಯಲಾಗಿತ್ತು. ಅಪಘಾತ ನಡೆದ ದಿನ ರಾತ್ರಿ 9:30ರಿಂದ ಮಧ್ಯರಾತ್ರಿ 1 ತನಕ ಬಾಲಕ ತನ್ನ ಗೆಳೆಯರೊಂದಿಗೆ ರೆಸ್ಟೋರೆಂಟ್‌ಗೆ ತೆರಳಿ ಮದ್ಯಪಾನ ಮಾಡಿದ್ದ ಎಂದು ವರದಿಯಾಗಿತ್ತು. ಇದಕ್ಕೆ ಸಾಕ್ಷಿಯಾಗಿ ರೆಸ್ಟೋರೆಂಟ್ ಸಿಸಿಟಿವಿ ದೃಶ್ಯ ಹೊರಬಿದ್ದಿತ್ತು.

ಈ ಬೆನ್ನಲ್ಲೇ ಪುಣೆ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಅಪ್ರಾಪ್ತಗೆ ಮದ್ಯ ಪೂರೈಸಿದ ಪುಣೆಯ ಕೋಸಿ ರೆಸ್ಟೋರೆಂಟ್ ಮತ್ತು ಹೋಟೆಲ್ ಬ್ಲಾಕ್ ಕ್ಲಬ್‌ಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ಬೀಗ ಜಡಿದಿದ್ದರು.

ಬಾಲಕ ಕಾರು ಚಲಾಯಿಸುತ್ತಿರಲಿಲ್ಲ ಎಂದು ಬಿಂಬಿಸಲು ಯತ್ನ

ಬಾಲಕ ಉದ್ಯಮಿಯ ಮಗನಾಗಿರುವುದರಿಂದ ಆರೋಪವನ್ನು ಬೇರೊಬ್ಬನ ತಲೆಗೆ ಕಟ್ಟುವ ಪ್ರಯತ್ನ ನಡೆದಿತ್ತು. ಆದರೆ, ಅದು ವಿಫಲವಾಗಿದೆ. ಅಪಘಾತದ ವೇಳೆ ಬಾಲಕ ಕಾರು ಓಡಿಸುತ್ತಿರಲಿಲ್ಲ. ಆತನ ಕುಟುಂಬದ ಕಾರು ಚಾಲಕ ಚಾಲನೆ ಮಾಡುತ್ತಿದ್ದ ಎಂದು ಆರಂಭದಲ್ಲಿ ಹೇಳಲಾಗಿತ್ತು. ಬಳಿಕ ಬಾಲಕನ ತಂದೆಯೇ ಕಾರು ಓಡಿಸುತ್ತಿದ್ದರು ಎನ್ನಲಾಗಿತ್ತು. ಆದರೆ, ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ಇದನ್ನು ಅಲ್ಲಗಳೆದಿದ್ದರು. ಅಪಘಾತದ ವೇಳೆ ಬಾಲಕನೇ ಕಾರು ಓಡಿಸುತ್ತಿದ್ದ ಎಂದಿದ್ದರು.

ಬಾಲಕ ಕಾರು ಓಡಿಸುತ್ತಿರಲಿಲ್ಲ ಎಂದು ಬಿಂಬಿಸಲು ಯತ್ನಿಸಿರುವುದರಲ್ಲಿ ಪೊಲೀಸರ ಕೈವಾಡವೂ ಬಯಲಾಗಿತ್ತು. ಈ ಹಿನ್ನೆಲೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.

ಯರವಾಡ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದ ಪ್ರಕರಣವನ್ನು, ಪ್ರಸ್ತುತ ಪುಣೆ ಪೊಲೀಸರ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಬಾಲಕನ ಅಜ್ಜನ ಬಂಧನ

ಪ್ರಕರಣದ ಮಹತ್ವದ ಬೆಳವಣಿಗೆಯಲ್ಲಿ ಪೊಲೀಸರು ಬಾಲಕನ ಅಜ್ಜ ಸುರೇಂದ್ರ ಕುಮಾರ್ ಅಗರ್ವಾಲ್ ಎಂಬವರನ್ನು ಬಂಧಿಸಿದ್ದಾರೆ. ಈತ ಕುಟುಂಬದ ಚಾಲಕನನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡು, ಅಪಘಾತದ ಹೊಣೆ ಹೊತ್ತುಕೊಳ್ಳುವಂತೆ ಆತನಿಗೆ ಬೆದರಿಕೆ ಹಾಕಿದ ಆರೋಪವಿದೆ. ಸುರೇಂದ್ರ ಕುಮಾರ್ ವಿರುದ್ಧ ಪೊಲೀಸರು ಅಪಹರಣ ಮತ್ತು ಅಕ್ರಮ ಬಂಧನದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಐಷಾರಾಮಿ ಪೋರ್ಶೆ ಕಾರನ್ನು ಅಜ್ಜ ಸುರೇಂದ್ರ ಕುಮಾರ್ ಮೊಮ್ಮಗನಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ಕೊಟ್ಟಿದ್ದರು ಎಂದು ಹೇಳಲಾಗ್ತಿದೆ.

ಆರೋಪಿ ಬಾಲಕನನ್ನು ಜೂನ್ 5ರವರೆಗೆ ಬಾಲಕ ವೀಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಆತನ ತಂದೆ ಮತ್ತು ಅಜ್ಜ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ : ರಫಾ ನಿರಾಶ್ರಿತರ ಶಿಬಿರದ ಮೇಲೆ ದಾಳಿ ನಡೆಸಿದ ಇಸ್ರೇಲ್: 40 ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...