Homeಮುಖಪುಟಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

- Advertisement -
- Advertisement -

ಮೇ 19, 2024ರಂದು ಮಹಾರಾಷ್ಟ್ರದ ಪುಣೆಯ ಕಲ್ಯಾಣ ನಗರ ಜಂಕ್ಷನ್ ಬಳಿ ನಡೆದ ಐಷಾರಾಮಿ ಪೋರ್ಶೆ ಕಾರು ಅಪಘಾತ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿನಿಮೀಯ ಶೈಲಿಯಲ್ಲಿ ಪ್ರಕರಣ ತಿರುಚಲು ಯತ್ನ, ಕಾನೂನಿನ ಮೇಲೆ ಪ್ರಭಾವ ಬೀರುವ ಯತ್ನ ಸೇರಿದಂತೆ ಹಲವು ಮಹತ್ವದ ಬೆಳವಣಿಗೆಗಳು ಈ ಪ್ರಕರಣದಲ್ಲಿ ನಡೆದಿದೆ.

ಇತ್ತೀಚಿನ ಮಾಹಿತಿ ಪ್ರಕಾರ, ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಪುಣೆಯ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥರೂ ಸೇರಿದ್ದಾರೆ.

ಡಾ. ಅಜಯ್ ತಾವಡೆ ಮತ್ತು ಡಾ. ಹರಿ ಹಾರ್ನರ್ ಬಂಧಿತರು. ಇವರಿಂದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿದಾಗ, ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಅಜಯ್ ತಾವಡೆ ಅಪಘಾತ ನಡೆದ ದಿನ ರಾತ್ರಿ ಬಾಲಕನ ತಂದೆಗೆ ಕರೆ ಮಾಡಿರುವುದು ತಿಳಿದು ಬಂದಿದೆ.

ಇಬ್ಬರು ವೈದ್ಯರು ಬಾಲಕನ ರಕ್ತದ ಮಾದರಿ ಪರಿಶೀಲಿಸಿ, ಆತ ಮದ್ಯಪಾನ ಮಾಡಿರಲಿಲ್ಲ ಎಂದು ವರದಿ ನೀಡಿದ್ದರು. ಆದರೆ, ಪೊಲೀಸರು ರೆಸ್ಟೋರೆಂಟ್ ಸಿಸಿಟಿವಿ ಪರಿಶೀಲಿಸಿದಾಗ, ಅದರಲ್ಲಿ ಬಾಲಕ ಮದ್ಯಪಾನ ಮಾಡಿರುವುದು ರೆಕಾರ್ಡ್ ಆಗಿತ್ತು. ಈ ಮೂಲಕ ವೈದ್ಯರ ಕಳ್ಳಾಟ ಬಯಲಾಗಿದೆ.

ಪ್ರಕರಣದ ವಿವರಣೆ : ಮೇ 19ರಂದು ಬೆಳಗಿನ ಜಾವ 3:15ರ ಸುಮಾರಿಗೆ ಪುಣೆ ನಗರದಲ್ಲಿ ಪಾರ್ಟಿ ಮುಗಿಸಿದ ಸ್ನೇಹಿತರ ಗುಂಪೊಂದು ಬೈಕ್ ಏರಿ ತಮ್ಮ ಮನೆಗೆ ತೆರಳುತ್ತಿತ್ತು. ಈ ವೇಳೆ ಕಲ್ಯಾಣ ನಗರ ಜಂಕ್ಷನ್ ಬಳಿ ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಐಷರಾಮಿ ಪೋರ್ಶೆ ಕಾರು ವೇಗವಾಗಿ ಬಂದು ಬೈಕೊಂದಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಬೈಕ್‌ನಲ್ಲಿದ್ದ ಮಧ್ಯ ಪ್ರದೇಶ ಮೂಲಕ ಇಬ್ಬರು ಐಟಿ ಉದ್ಯೋಗಿಗಳಾದ ಅನಿಸ್ ಅವಧಿಯಾ ಮತ್ತು ಅಶ್ವಿನಿ ಕೋಸ್ಟಾ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ಬಾಲಕನನ್ನು ಕಾರಿನಿಂದ ಕೆಳಗಿಳಿಸಿ ಥಳಿಸಿದ್ದರು. ಬಳಿಕ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಬಾಲಕನನ್ನು ಬಾಲ ನ್ಯಾಯಮಂಡಳಿ ಮುಂದೆ ಹಾಜರುಪಡಿಸಿದ್ದರು. ಮಂಡಳಿ, ಬಾಲಕನಿಗೆ ಷರತ್ತುಬದ್ದ ಜಾಮೀನು ನೀಡಿತ್ತು. ಆದರೆ, ಜಾಮೀನಿಗೆ ವಿಧಿಸಿದ್ದ ಷರತ್ತು ಜನರನ್ನು ಅಶ್ಚರ್ಯಗೊಳಿಸಿತ್ತು. ಕಾರು ಅಪಘಾತದ ಬಗ್ಗೆ ಸುದೀರ್ಘ ಪ್ರಬಂಧ ಬರೆಯಬೇಕು, ಸಂಚಾರಿ ಪೊಲೀಸರ ಜೊತೆ 15 ದಿನಗಳ ಕಾಲ ಕೆಲಸ ಮಾಡಬೇಕು ಇತ್ಯಾದಿ ಷರತ್ತುಗಳನ್ನು ವಿಧಿಸಲಾಗಿತ್ತು.

ಆರೋಪಿ ಬಾಲಕ ಪುಣೆಯ ಬ್ರಹ್ಮ ರಿಲಿಯಾಲ್ಟಿ ಬಿಲ್ಡರ್ ಮಾಲೀಕ ವಿಶಾಲ್ ಅಗರ್ವಾಲ್ ಅವರ ಪುತ್ರನಾಗಿದ್ದಾನೆ. ಬಾಲಕನಿಗೆ ಶ್ರೀಮಂತ ಹಿನ್ನೆಲೆ ಇರುವುದರಿಂದ ಕ್ಷುಲ್ಲಕ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ. ಎರಡು ಜೀವಗಳಿಗೆ ಬೆಲೆ ಇಲ್ಲವೇ? ಎಂದು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕೂಡ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು. “ಮೋದಿಯ ಎರಡು ಭಾರತದಲ್ಲಿ ನ್ಯಾಯವು ಸಂಪತ್ತನ್ನು ಅವಲಂಭಿಸಿದೆ” ಎಂದಿದ್ದರು. ಪುಣೆ ಕಾಂಗ್ರೆಸ್ ಅಪಘಾತ ಸ್ಥಳದಲ್ಲಿ ಪ್ರಬಂಧ ಸ್ಪರ್ದೆ ಏರ್ಪಡಿಸಿ ವಿಭಿನ್ನವಾಗಿ ಪ್ರತಿಭಟಿಸಿತ್ತು.

“ಯರವಾಡ ಠಾಣೆಯ ಅಧಿಕಾರಿ ಬಾಲಕನಿಗೆ ಪಿಝ್ಝಾ ಬರ್ಗರ್ ತರಿಸಿಕೊಟ್ಟು, ಮೃತರ ಕುಟುಂಬಸ್ಥರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ” ಎಂದು ಪ್ರಕಾಶ್ ಅಂಬೇಡ್ಕರ್ ಆರೋಪಿಸಿದ್ದರು.

ಜನಾಕ್ರೋಶ ಹೆಚ್ಚಾಗುತ್ತಿದ್ದಂತೆ ಬಾಲ ನ್ಯಾಯಮಂಡಳಿ ಬಾಲಕನಿಗೆ ನೀಡಿದ್ದ ಜಾಮೀನು ರದ್ದುಪಡಿಸಿತ್ತು. ಈ ನಡುವೆ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದರು.

ಬಳಿಕ ಆರೋಪಿ ಬಾಲಕ ಮದ್ಯಪಾನ ಮಾಡಿ ವೇಗವಾಗಿ ಕಾರು ಚಲಾಯಿಸಿದ್ದ ಎಂಬ ವಿಷಯ ಬಯಲಾಗಿತ್ತು. ಅಪಘಾತ ನಡೆದ ದಿನ ರಾತ್ರಿ 9:30ರಿಂದ ಮಧ್ಯರಾತ್ರಿ 1 ತನಕ ಬಾಲಕ ತನ್ನ ಗೆಳೆಯರೊಂದಿಗೆ ರೆಸ್ಟೋರೆಂಟ್‌ಗೆ ತೆರಳಿ ಮದ್ಯಪಾನ ಮಾಡಿದ್ದ ಎಂದು ವರದಿಯಾಗಿತ್ತು. ಇದಕ್ಕೆ ಸಾಕ್ಷಿಯಾಗಿ ರೆಸ್ಟೋರೆಂಟ್ ಸಿಸಿಟಿವಿ ದೃಶ್ಯ ಹೊರಬಿದ್ದಿತ್ತು.

ಈ ಬೆನ್ನಲ್ಲೇ ಪುಣೆ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಅಪ್ರಾಪ್ತಗೆ ಮದ್ಯ ಪೂರೈಸಿದ ಪುಣೆಯ ಕೋಸಿ ರೆಸ್ಟೋರೆಂಟ್ ಮತ್ತು ಹೋಟೆಲ್ ಬ್ಲಾಕ್ ಕ್ಲಬ್‌ಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ಬೀಗ ಜಡಿದಿದ್ದರು.

ಬಾಲಕ ಕಾರು ಚಲಾಯಿಸುತ್ತಿರಲಿಲ್ಲ ಎಂದು ಬಿಂಬಿಸಲು ಯತ್ನ

ಬಾಲಕ ಉದ್ಯಮಿಯ ಮಗನಾಗಿರುವುದರಿಂದ ಆರೋಪವನ್ನು ಬೇರೊಬ್ಬನ ತಲೆಗೆ ಕಟ್ಟುವ ಪ್ರಯತ್ನ ನಡೆದಿತ್ತು. ಆದರೆ, ಅದು ವಿಫಲವಾಗಿದೆ. ಅಪಘಾತದ ವೇಳೆ ಬಾಲಕ ಕಾರು ಓಡಿಸುತ್ತಿರಲಿಲ್ಲ. ಆತನ ಕುಟುಂಬದ ಕಾರು ಚಾಲಕ ಚಾಲನೆ ಮಾಡುತ್ತಿದ್ದ ಎಂದು ಆರಂಭದಲ್ಲಿ ಹೇಳಲಾಗಿತ್ತು. ಬಳಿಕ ಬಾಲಕನ ತಂದೆಯೇ ಕಾರು ಓಡಿಸುತ್ತಿದ್ದರು ಎನ್ನಲಾಗಿತ್ತು. ಆದರೆ, ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ಇದನ್ನು ಅಲ್ಲಗಳೆದಿದ್ದರು. ಅಪಘಾತದ ವೇಳೆ ಬಾಲಕನೇ ಕಾರು ಓಡಿಸುತ್ತಿದ್ದ ಎಂದಿದ್ದರು.

ಬಾಲಕ ಕಾರು ಓಡಿಸುತ್ತಿರಲಿಲ್ಲ ಎಂದು ಬಿಂಬಿಸಲು ಯತ್ನಿಸಿರುವುದರಲ್ಲಿ ಪೊಲೀಸರ ಕೈವಾಡವೂ ಬಯಲಾಗಿತ್ತು. ಈ ಹಿನ್ನೆಲೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.

ಯರವಾಡ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದ ಪ್ರಕರಣವನ್ನು, ಪ್ರಸ್ತುತ ಪುಣೆ ಪೊಲೀಸರ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಬಾಲಕನ ಅಜ್ಜನ ಬಂಧನ

ಪ್ರಕರಣದ ಮಹತ್ವದ ಬೆಳವಣಿಗೆಯಲ್ಲಿ ಪೊಲೀಸರು ಬಾಲಕನ ಅಜ್ಜ ಸುರೇಂದ್ರ ಕುಮಾರ್ ಅಗರ್ವಾಲ್ ಎಂಬವರನ್ನು ಬಂಧಿಸಿದ್ದಾರೆ. ಈತ ಕುಟುಂಬದ ಚಾಲಕನನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡು, ಅಪಘಾತದ ಹೊಣೆ ಹೊತ್ತುಕೊಳ್ಳುವಂತೆ ಆತನಿಗೆ ಬೆದರಿಕೆ ಹಾಕಿದ ಆರೋಪವಿದೆ. ಸುರೇಂದ್ರ ಕುಮಾರ್ ವಿರುದ್ಧ ಪೊಲೀಸರು ಅಪಹರಣ ಮತ್ತು ಅಕ್ರಮ ಬಂಧನದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಐಷಾರಾಮಿ ಪೋರ್ಶೆ ಕಾರನ್ನು ಅಜ್ಜ ಸುರೇಂದ್ರ ಕುಮಾರ್ ಮೊಮ್ಮಗನಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ಕೊಟ್ಟಿದ್ದರು ಎಂದು ಹೇಳಲಾಗ್ತಿದೆ.

ಆರೋಪಿ ಬಾಲಕನನ್ನು ಜೂನ್ 5ರವರೆಗೆ ಬಾಲಕ ವೀಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಆತನ ತಂದೆ ಮತ್ತು ಅಜ್ಜ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ : ರಫಾ ನಿರಾಶ್ರಿತರ ಶಿಬಿರದ ಮೇಲೆ ದಾಳಿ ನಡೆಸಿದ ಇಸ್ರೇಲ್: 40 ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...