Homeಮುಖಪುಟಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

- Advertisement -
- Advertisement -

ಮೇ 19, 2024ರಂದು ಮಹಾರಾಷ್ಟ್ರದ ಪುಣೆಯ ಕಲ್ಯಾಣ ನಗರ ಜಂಕ್ಷನ್ ಬಳಿ ನಡೆದ ಐಷಾರಾಮಿ ಪೋರ್ಶೆ ಕಾರು ಅಪಘಾತ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿನಿಮೀಯ ಶೈಲಿಯಲ್ಲಿ ಪ್ರಕರಣ ತಿರುಚಲು ಯತ್ನ, ಕಾನೂನಿನ ಮೇಲೆ ಪ್ರಭಾವ ಬೀರುವ ಯತ್ನ ಸೇರಿದಂತೆ ಹಲವು ಮಹತ್ವದ ಬೆಳವಣಿಗೆಗಳು ಈ ಪ್ರಕರಣದಲ್ಲಿ ನಡೆದಿದೆ.

ಇತ್ತೀಚಿನ ಮಾಹಿತಿ ಪ್ರಕಾರ, ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಪುಣೆಯ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥರೂ ಸೇರಿದ್ದಾರೆ.

ಡಾ. ಅಜಯ್ ತಾವಡೆ ಮತ್ತು ಡಾ. ಹರಿ ಹಾರ್ನರ್ ಬಂಧಿತರು. ಇವರಿಂದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿದಾಗ, ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಅಜಯ್ ತಾವಡೆ ಅಪಘಾತ ನಡೆದ ದಿನ ರಾತ್ರಿ ಬಾಲಕನ ತಂದೆಗೆ ಕರೆ ಮಾಡಿರುವುದು ತಿಳಿದು ಬಂದಿದೆ.

ಇಬ್ಬರು ವೈದ್ಯರು ಬಾಲಕನ ರಕ್ತದ ಮಾದರಿ ಪರಿಶೀಲಿಸಿ, ಆತ ಮದ್ಯಪಾನ ಮಾಡಿರಲಿಲ್ಲ ಎಂದು ವರದಿ ನೀಡಿದ್ದರು. ಆದರೆ, ಪೊಲೀಸರು ರೆಸ್ಟೋರೆಂಟ್ ಸಿಸಿಟಿವಿ ಪರಿಶೀಲಿಸಿದಾಗ, ಅದರಲ್ಲಿ ಬಾಲಕ ಮದ್ಯಪಾನ ಮಾಡಿರುವುದು ರೆಕಾರ್ಡ್ ಆಗಿತ್ತು. ಈ ಮೂಲಕ ವೈದ್ಯರ ಕಳ್ಳಾಟ ಬಯಲಾಗಿದೆ.

ಪ್ರಕರಣದ ವಿವರಣೆ : ಮೇ 19ರಂದು ಬೆಳಗಿನ ಜಾವ 3:15ರ ಸುಮಾರಿಗೆ ಪುಣೆ ನಗರದಲ್ಲಿ ಪಾರ್ಟಿ ಮುಗಿಸಿದ ಸ್ನೇಹಿತರ ಗುಂಪೊಂದು ಬೈಕ್ ಏರಿ ತಮ್ಮ ಮನೆಗೆ ತೆರಳುತ್ತಿತ್ತು. ಈ ವೇಳೆ ಕಲ್ಯಾಣ ನಗರ ಜಂಕ್ಷನ್ ಬಳಿ ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಐಷರಾಮಿ ಪೋರ್ಶೆ ಕಾರು ವೇಗವಾಗಿ ಬಂದು ಬೈಕೊಂದಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಬೈಕ್‌ನಲ್ಲಿದ್ದ ಮಧ್ಯ ಪ್ರದೇಶ ಮೂಲಕ ಇಬ್ಬರು ಐಟಿ ಉದ್ಯೋಗಿಗಳಾದ ಅನಿಸ್ ಅವಧಿಯಾ ಮತ್ತು ಅಶ್ವಿನಿ ಕೋಸ್ಟಾ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ಬಾಲಕನನ್ನು ಕಾರಿನಿಂದ ಕೆಳಗಿಳಿಸಿ ಥಳಿಸಿದ್ದರು. ಬಳಿಕ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಬಾಲಕನನ್ನು ಬಾಲ ನ್ಯಾಯಮಂಡಳಿ ಮುಂದೆ ಹಾಜರುಪಡಿಸಿದ್ದರು. ಮಂಡಳಿ, ಬಾಲಕನಿಗೆ ಷರತ್ತುಬದ್ದ ಜಾಮೀನು ನೀಡಿತ್ತು. ಆದರೆ, ಜಾಮೀನಿಗೆ ವಿಧಿಸಿದ್ದ ಷರತ್ತು ಜನರನ್ನು ಅಶ್ಚರ್ಯಗೊಳಿಸಿತ್ತು. ಕಾರು ಅಪಘಾತದ ಬಗ್ಗೆ ಸುದೀರ್ಘ ಪ್ರಬಂಧ ಬರೆಯಬೇಕು, ಸಂಚಾರಿ ಪೊಲೀಸರ ಜೊತೆ 15 ದಿನಗಳ ಕಾಲ ಕೆಲಸ ಮಾಡಬೇಕು ಇತ್ಯಾದಿ ಷರತ್ತುಗಳನ್ನು ವಿಧಿಸಲಾಗಿತ್ತು.

ಆರೋಪಿ ಬಾಲಕ ಪುಣೆಯ ಬ್ರಹ್ಮ ರಿಲಿಯಾಲ್ಟಿ ಬಿಲ್ಡರ್ ಮಾಲೀಕ ವಿಶಾಲ್ ಅಗರ್ವಾಲ್ ಅವರ ಪುತ್ರನಾಗಿದ್ದಾನೆ. ಬಾಲಕನಿಗೆ ಶ್ರೀಮಂತ ಹಿನ್ನೆಲೆ ಇರುವುದರಿಂದ ಕ್ಷುಲ್ಲಕ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ. ಎರಡು ಜೀವಗಳಿಗೆ ಬೆಲೆ ಇಲ್ಲವೇ? ಎಂದು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕೂಡ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು. “ಮೋದಿಯ ಎರಡು ಭಾರತದಲ್ಲಿ ನ್ಯಾಯವು ಸಂಪತ್ತನ್ನು ಅವಲಂಭಿಸಿದೆ” ಎಂದಿದ್ದರು. ಪುಣೆ ಕಾಂಗ್ರೆಸ್ ಅಪಘಾತ ಸ್ಥಳದಲ್ಲಿ ಪ್ರಬಂಧ ಸ್ಪರ್ದೆ ಏರ್ಪಡಿಸಿ ವಿಭಿನ್ನವಾಗಿ ಪ್ರತಿಭಟಿಸಿತ್ತು.

“ಯರವಾಡ ಠಾಣೆಯ ಅಧಿಕಾರಿ ಬಾಲಕನಿಗೆ ಪಿಝ್ಝಾ ಬರ್ಗರ್ ತರಿಸಿಕೊಟ್ಟು, ಮೃತರ ಕುಟುಂಬಸ್ಥರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ” ಎಂದು ಪ್ರಕಾಶ್ ಅಂಬೇಡ್ಕರ್ ಆರೋಪಿಸಿದ್ದರು.

ಜನಾಕ್ರೋಶ ಹೆಚ್ಚಾಗುತ್ತಿದ್ದಂತೆ ಬಾಲ ನ್ಯಾಯಮಂಡಳಿ ಬಾಲಕನಿಗೆ ನೀಡಿದ್ದ ಜಾಮೀನು ರದ್ದುಪಡಿಸಿತ್ತು. ಈ ನಡುವೆ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದರು.

ಬಳಿಕ ಆರೋಪಿ ಬಾಲಕ ಮದ್ಯಪಾನ ಮಾಡಿ ವೇಗವಾಗಿ ಕಾರು ಚಲಾಯಿಸಿದ್ದ ಎಂಬ ವಿಷಯ ಬಯಲಾಗಿತ್ತು. ಅಪಘಾತ ನಡೆದ ದಿನ ರಾತ್ರಿ 9:30ರಿಂದ ಮಧ್ಯರಾತ್ರಿ 1 ತನಕ ಬಾಲಕ ತನ್ನ ಗೆಳೆಯರೊಂದಿಗೆ ರೆಸ್ಟೋರೆಂಟ್‌ಗೆ ತೆರಳಿ ಮದ್ಯಪಾನ ಮಾಡಿದ್ದ ಎಂದು ವರದಿಯಾಗಿತ್ತು. ಇದಕ್ಕೆ ಸಾಕ್ಷಿಯಾಗಿ ರೆಸ್ಟೋರೆಂಟ್ ಸಿಸಿಟಿವಿ ದೃಶ್ಯ ಹೊರಬಿದ್ದಿತ್ತು.

ಈ ಬೆನ್ನಲ್ಲೇ ಪುಣೆ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಅಪ್ರಾಪ್ತಗೆ ಮದ್ಯ ಪೂರೈಸಿದ ಪುಣೆಯ ಕೋಸಿ ರೆಸ್ಟೋರೆಂಟ್ ಮತ್ತು ಹೋಟೆಲ್ ಬ್ಲಾಕ್ ಕ್ಲಬ್‌ಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ಬೀಗ ಜಡಿದಿದ್ದರು.

ಬಾಲಕ ಕಾರು ಚಲಾಯಿಸುತ್ತಿರಲಿಲ್ಲ ಎಂದು ಬಿಂಬಿಸಲು ಯತ್ನ

ಬಾಲಕ ಉದ್ಯಮಿಯ ಮಗನಾಗಿರುವುದರಿಂದ ಆರೋಪವನ್ನು ಬೇರೊಬ್ಬನ ತಲೆಗೆ ಕಟ್ಟುವ ಪ್ರಯತ್ನ ನಡೆದಿತ್ತು. ಆದರೆ, ಅದು ವಿಫಲವಾಗಿದೆ. ಅಪಘಾತದ ವೇಳೆ ಬಾಲಕ ಕಾರು ಓಡಿಸುತ್ತಿರಲಿಲ್ಲ. ಆತನ ಕುಟುಂಬದ ಕಾರು ಚಾಲಕ ಚಾಲನೆ ಮಾಡುತ್ತಿದ್ದ ಎಂದು ಆರಂಭದಲ್ಲಿ ಹೇಳಲಾಗಿತ್ತು. ಬಳಿಕ ಬಾಲಕನ ತಂದೆಯೇ ಕಾರು ಓಡಿಸುತ್ತಿದ್ದರು ಎನ್ನಲಾಗಿತ್ತು. ಆದರೆ, ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ಇದನ್ನು ಅಲ್ಲಗಳೆದಿದ್ದರು. ಅಪಘಾತದ ವೇಳೆ ಬಾಲಕನೇ ಕಾರು ಓಡಿಸುತ್ತಿದ್ದ ಎಂದಿದ್ದರು.

ಬಾಲಕ ಕಾರು ಓಡಿಸುತ್ತಿರಲಿಲ್ಲ ಎಂದು ಬಿಂಬಿಸಲು ಯತ್ನಿಸಿರುವುದರಲ್ಲಿ ಪೊಲೀಸರ ಕೈವಾಡವೂ ಬಯಲಾಗಿತ್ತು. ಈ ಹಿನ್ನೆಲೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.

ಯರವಾಡ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದ ಪ್ರಕರಣವನ್ನು, ಪ್ರಸ್ತುತ ಪುಣೆ ಪೊಲೀಸರ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಬಾಲಕನ ಅಜ್ಜನ ಬಂಧನ

ಪ್ರಕರಣದ ಮಹತ್ವದ ಬೆಳವಣಿಗೆಯಲ್ಲಿ ಪೊಲೀಸರು ಬಾಲಕನ ಅಜ್ಜ ಸುರೇಂದ್ರ ಕುಮಾರ್ ಅಗರ್ವಾಲ್ ಎಂಬವರನ್ನು ಬಂಧಿಸಿದ್ದಾರೆ. ಈತ ಕುಟುಂಬದ ಚಾಲಕನನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡು, ಅಪಘಾತದ ಹೊಣೆ ಹೊತ್ತುಕೊಳ್ಳುವಂತೆ ಆತನಿಗೆ ಬೆದರಿಕೆ ಹಾಕಿದ ಆರೋಪವಿದೆ. ಸುರೇಂದ್ರ ಕುಮಾರ್ ವಿರುದ್ಧ ಪೊಲೀಸರು ಅಪಹರಣ ಮತ್ತು ಅಕ್ರಮ ಬಂಧನದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಐಷಾರಾಮಿ ಪೋರ್ಶೆ ಕಾರನ್ನು ಅಜ್ಜ ಸುರೇಂದ್ರ ಕುಮಾರ್ ಮೊಮ್ಮಗನಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ಕೊಟ್ಟಿದ್ದರು ಎಂದು ಹೇಳಲಾಗ್ತಿದೆ.

ಆರೋಪಿ ಬಾಲಕನನ್ನು ಜೂನ್ 5ರವರೆಗೆ ಬಾಲಕ ವೀಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಆತನ ತಂದೆ ಮತ್ತು ಅಜ್ಜ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ : ರಫಾ ನಿರಾಶ್ರಿತರ ಶಿಬಿರದ ಮೇಲೆ ದಾಳಿ ನಡೆಸಿದ ಇಸ್ರೇಲ್: 40 ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...