Homeಕರ್ನಾಟಕಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

ಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

- Advertisement -
- Advertisement -

ಸಚಿವ ಜೆ.ಸಿ.ಮಾಧುಸ್ವಾಮಿ ಬಳಿಯಿದ್ದ ಬಲಿಷ್ಠ ಖಾತೆಗೆ ಕತ್ತರಿ ಬಿದ್ದಿದೆ. ರೈತರು ಮತ್ತು ಅಧಿಕಾರಿಗಳ ವಿರುದ್ಧ ಬೈಯ್ದು ವಿವಾದ ಮೇಲೆಳೆದುಕೊಂಡಿದ್ದ ಅವರ ಖಾತೆ ಬದಲಾವಣೆಯಾಗಿದೆ. “ರ್ಯಾಸ್ಕಲ್, ನಿನ್ನ ಹೆಂಡ್ತಿ ಸೀರೆ ಒಗೆಯೋಕೆ ಯಾವ್ ಸೋಪ್ ಬಳಸ್ತೀಯ, ಯಾವ ಬೋಸುಡಿಕೆ ಮಗ ನನ್ನ ಕೇಳಿದ್ದೀರಾ” ಎಂಬ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿ, ಸರ್ಕಾರಕ್ಕೆ ಮುಜುಗರ ತಂದೊಡ್ಡಿದ್ದ ಮಾಧುಸ್ವಾಮಿಯವರ ಈ ನಡವಳಿಕೆಗೆ, ಅಧಿಕಾರಿ ವರ್ಗ ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಸ್ಪಂದಿಸಿದಂತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಂಸದೀಯ ವ್ಯವಹಾರ ಸಚಿವರು ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಬೇಕೆಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕೋಲಾರ ಮತ್ತು ತುಮಕೂರು ನಗರದಲ್ಲಿ ಮಾಧುಸ್ವಾಮಿ ಅವರು ರೈತ ಮಹಿಳೆ, ರೈತ ಮುಖಂಡರು ಹಾಗೂ ಅಧಿಕಾರಿಯೊಬ್ಬರನ್ನು ಬೈಯ್ಯುವ ಮೂಲಕ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು. ಮಾಧ್ಯಮಗಳಲ್ಲಿ ಅವರ ಹೇಳಿಕೆಗಳು ಪ್ರಸಾರಗೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ತೀವ್ರ ಮುಜುಗರ ಎದುರಿಸಬೇಕಾಗಿ ಬಂತು. ಆ ಮುಜುಗರದಿಂದ ಯಾರೂ ಸಮರ್ಥಿಸಿಕೊಳ್ಳಲಾರದಂತಹ ಪರಿಸ್ಥಿತಿಯೂ ನಿರ್ಮಾಣವಾಯಿತು. ಹಾಗಾಗಿ ಮಾಧುಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡುವ ಮಾತುಗಳು ಹರಿದಾಡಿದವು. ಕೊನೆಗೂ ಸಂಪುಟ ವಿಸ್ತರಣೆ/ಪುನರ್ ರಚನೆಯೆಂಬ ಗಜಪ್ರಸವ ಆಗಿದೆ. ಮಾಧುಸ್ವಾಮಿ ಬಳಿ ಇದ್ದ ಕಾನೂನು ಸಚಿವ ಖಾತೆಯನ್ನು ಹಿಂಪಡೆಯಲಾಗಿದೆ. ಜೊತೆಗೆ ಮಾಧುಸ್ವಾಮಿಯವರನ್ನು ಯಡಿಯೂರಪ್ಪನವರ ಆಪ್ತ ವಲಯದಿಂದ ದೂರ ಇಟ್ಟು ಹಿಂಬಡ್ತಿ ನೀಡಲಾಗಿದೆ ಎನ್ನಲಾಗಿದೆ.

ಆರ್.ಎಸ್.ಎಸ್ ಹಿನ್ನೆಲೆ ಇಲ್ಲದ ಜೆ.ಸಿ. ಮಾಧುಸ್ವಾಮಿ ಯಡಿಯೂರಪ್ಪನವರ ಜಾತಿ ಕಾರಣಕ್ಕಾಗಿ ಜೆಡಿಯು ತೊರೆದು ಕೆಜೆಪಿ ಸೇರಿದರು. ಕೆಜೆಪಿ ಬಿಜೆಪಿ ಜೊತೆ ವಿಲೀನಗೊಂಡ ಮೇಲೆ ಅವರೂ ಬಿಜೆಪಿ ಸೇರಿದರು. ಬಿ.ಎಸ್.ಯಡಿಯೂರಪ್ಪ ಆಪ್ತ ವಲಯದಲ್ಲಿ ಕಾಣಿಸಿಕೊಂಡರು. ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾದ ವೇಳೆ ಹಲವು ಬಿಜೆಪಿ ನಾಯಕರ ವಿರೋಧದ ನಡುವೆಯೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸ್ಥಾನವೂ ದೊರೆಯಿತು. ಸದನದಲ್ಲಿ ಸರ್ಕಾರವನ್ನು ಬಲವಾಗಿ ಸಮರ್ಥಿಸಿ ಕೊಂಡರು. ಮೂಲ ಬಿಜೆಪಿ ಸಚಿವರು ಸರ್ಕಾರದ ಬೆಂಬಲಕ್ಕೆ ಬರಲೇ ಇಲ್ಲ. ನಂತರ ಸಚಿವ ಮಾಧುಸ್ವಾಮಿಯ ಸಾರ್ವಜನಿಕ ನಡವಳಿಕೆಗಳು ಟೀಕೆಗೆ ಗುರಿಯಾದವು. ಇದನ್ನೇ ಮೂಲ ಬಿಜೆಪಿಗರೂ ಕಾಯುತ್ತಿದ್ದರು. ಈಗ ಅವರ ಖಾತೆಯನ್ನು ಕಿತ್ತುಕೊಳ್ಳಲಾಗಿದೆ. ಇದು ಮೂಲ ಬಿಜೆಪಿಗರಿಗೆ ಖುಷಿಯನ್ನೇ ತಂದಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

ತನ್ನ ಬಳಿಯಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಕಿತ್ತುಕೊಂಡು ವೈದ್ಯಕೀಯ, ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ನೀಡಿರುವುದಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ ಬದಲಾವಣೆ ಸುಳಿವು ದೊರೆಯುತ್ತಿದ್ದಂತೆಯೇ ತುಮಕೂರು ಜಿಲ್ಲೆಗೆ ಆಗಮಿಸಿ ಮುಖ್ಯಮಂತ್ರಿಗಳಿಂದ ಅಂತರವನ್ನು ಕಾಯ್ದುಕೊಂಡಿದ್ದಾರೆ. ಜನವರಿ 21ರಂದು ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮವಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ ಸಚಿವ ಜೆ.ಸಿ.ಮಾಧುಸ್ವಾಮಿ ಸಿದ್ದಗಂಗಾ ಮಠಕ್ಕೆ ಬರಲೇ ಇಲ್ಲ. ಈ ಮೂಲಕ ಯಡಿಯೂರಪ್ಪ ಅವರಿಂದ ಅಂತರ ಕಾಯ್ದುಕೊಂಡರು. ಸಿಎಂಗೆ ಎಚ್ಚರಿಕೆ ಸಂದೇಶ ರವಾನಿಸುವ ಕೆಲಸ ಮಾಡಿದರು.

ಅಷ್ಟೇ ಅಲ್ಲ, ತುಮಕೂರಿನ ವಸಂತನರಸಾಪುರದಲ್ಲಿ ನಡೆದ ಉದ್ಯೋಗ ಭವನ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾನು ನಿಮ್ಮೊಂದಿಗೆ ಇಲ್ಲ ಎಂಬ ಸಂದೇಶವನ್ನು ಯಡಿಯೂರಪ್ಪನವರಿಗೆ ರವಾನಿಸಿದರು. ಜಗದೀಶ್ ಶೆಟ್ಟರ್ ಜೊತೆಯಲ್ಲಿ ಕಾಣಿಸಿಕೊಂಡ ಮಾಧುಸ್ವಾಮಿ ಭಿನ್ನಮತಕ್ಕೆ ಮತ್ತಷ್ಟು ಬಲ ತುಂಬುವಂತಹ ಕೆಲಸ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಿದ್ದಗಂಗಾ ಮಠದಲ್ಲಿ ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಇದ್ದು ಅವರನ್ನು ಉಪಚರಿಸುವಂತಹ ಕೆಲಸ ಮಾಡಬೇಕಿತ್ತು. ಅದು ಆಗಲಿಲ್ಲ.

ಇದನ್ನೂ ಓದಿ: ನಾನೂ ಬಿಜೆಪಿಗೆ ಹೋಗಿದ್ದರೆ ಮೈಸೂರಿನ ಉಸ್ತುವಾರಿ ಸಚಿವನಾಗಿರುತ್ತಿದ್ದೆ: ಜಿ.ಟಿ ದೇವೇಗೌಡ

ಜಗದೀಶ್ ಶೆಟ್ಟರ್ ಭಾಗವಹಿಸಿದ್ದ ಸಮಾರಂಭದಲ್ಲಿ ಸಂಸದ ಜಿ.ಎಸ್.ಬಸವರಾಜು, ನಿವೃತ್ತ ಐಎಎಸ್ ಅಧಿಕಾರಿ ಡಾ.ಸೋಮಶೇಖರ್ ಪಾಲ್ಗೊಂಡಿದ್ದರು. ಸೋಮಶೇಖರ್ ಅವರನ್ನು ಮುಖ್ಯಮಂತ್ರಿಗಳು ಸಂಧಾನಕ್ಕೆ ಕಳಿಸಿದ್ದರೇ ಎಂಬುದು ಖಚಿತವಾಗಿಲ್ಲ. ಡಾ.ಸೋಮಶೇಖರ್ ಮುಖ್ಯಮಂತ್ರಿಗಳ ಆಪ್ತವಲಯದಲ್ಲಿ ಇರುವವರು. ಹಾಗಾಗಿ ಜೆ.ಸಿ.ಮಾಧುಸ್ವಾಮಿ ಜೊತೆ ಮಾತುಕತೆ ನಡೆಸಿದರೆ ಅಥವಾ ಮುಖ್ಯಮಂತ್ರಿ ನೀಡಿರುವ ಮಾಹಿತಿಯನ್ನು ಮಾಧುಸ್ವಾಮಿ ಅವರಿಗೆ ತಲುಪಿಸಿದರೇ ಎಂಬುದು ತಿಳಿದುಬಂದಿಲ್ಲ. ಆದರೆ ರಾಯಭಾರಿ ಕೆಲಸ ಮಾಡಿರುವುದಂತೂ ಗುಟ್ಟಾಗಿ ಉಳಿದಿಲ್ಲ.

ಮೂಲ ಬಿಜೆಪಿಗರಲ್ಲಿ ಸಂತಸದ ವಾತಾವರಣ ಸೃಷ್ಟಿಯಾಗಿದ್ದರೆ, ವಲಸೆ ಬಿಜೆಪಿಗರು/ಬೇರೆ ಪಕ್ಷಗಳಿಂದ ಕೇಸರಿ ಪಾಳಯ ಸೇರಿದವರು ಸಂಕಟದ ದಿನಗಳನ್ನು ಎದುರಿಸಬೇಕಾಗಿ ಬಂದಿದೆ. ಯಾವುದೇ ವಿವಾದಕ್ಕೆ ಈಡಾಗದೇ ಮುಖ್ಯಮಂತ್ರಿಗಳ ಜೊತೆ ಗುರುತಿಸಿಕೊಂಡಿರುವ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಅವರಿಗೆ ಪ್ರಬಲ ಖಾತೆ ನೀಡಿ ಆಪ್ತ ವಲಯಕ್ಕೆ ಫೆವಿಕಲ್ ಹಾಕಿದ್ದಾರೆ. ಮಾಧುಸ್ವಾಮಿ ಅವರನ್ನು ಆಪ್ತ ವಲಯದಿಂದ ದೂರ ತಳ್ಳುವ ಕೆಲಸ ಮಾಡಿದ್ದಾರೆ ಎಂಬ ಮಾತುಗಳು ತುಮಕೂರು ಜಿಲ್ಲೆಯಲ್ಲಿ ಕೇಳಿಬರುತ್ತಿವೆ.


ಇದನ್ನೂ ಓದಿ: ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...