Homeಕರ್ನಾಟಕಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

ಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

- Advertisement -
- Advertisement -

ಸಚಿವ ಜೆ.ಸಿ.ಮಾಧುಸ್ವಾಮಿ ಬಳಿಯಿದ್ದ ಬಲಿಷ್ಠ ಖಾತೆಗೆ ಕತ್ತರಿ ಬಿದ್ದಿದೆ. ರೈತರು ಮತ್ತು ಅಧಿಕಾರಿಗಳ ವಿರುದ್ಧ ಬೈಯ್ದು ವಿವಾದ ಮೇಲೆಳೆದುಕೊಂಡಿದ್ದ ಅವರ ಖಾತೆ ಬದಲಾವಣೆಯಾಗಿದೆ. “ರ್ಯಾಸ್ಕಲ್, ನಿನ್ನ ಹೆಂಡ್ತಿ ಸೀರೆ ಒಗೆಯೋಕೆ ಯಾವ್ ಸೋಪ್ ಬಳಸ್ತೀಯ, ಯಾವ ಬೋಸುಡಿಕೆ ಮಗ ನನ್ನ ಕೇಳಿದ್ದೀರಾ” ಎಂಬ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿ, ಸರ್ಕಾರಕ್ಕೆ ಮುಜುಗರ ತಂದೊಡ್ಡಿದ್ದ ಮಾಧುಸ್ವಾಮಿಯವರ ಈ ನಡವಳಿಕೆಗೆ, ಅಧಿಕಾರಿ ವರ್ಗ ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಸ್ಪಂದಿಸಿದಂತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಂಸದೀಯ ವ್ಯವಹಾರ ಸಚಿವರು ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಬೇಕೆಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕೋಲಾರ ಮತ್ತು ತುಮಕೂರು ನಗರದಲ್ಲಿ ಮಾಧುಸ್ವಾಮಿ ಅವರು ರೈತ ಮಹಿಳೆ, ರೈತ ಮುಖಂಡರು ಹಾಗೂ ಅಧಿಕಾರಿಯೊಬ್ಬರನ್ನು ಬೈಯ್ಯುವ ಮೂಲಕ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು. ಮಾಧ್ಯಮಗಳಲ್ಲಿ ಅವರ ಹೇಳಿಕೆಗಳು ಪ್ರಸಾರಗೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ತೀವ್ರ ಮುಜುಗರ ಎದುರಿಸಬೇಕಾಗಿ ಬಂತು. ಆ ಮುಜುಗರದಿಂದ ಯಾರೂ ಸಮರ್ಥಿಸಿಕೊಳ್ಳಲಾರದಂತಹ ಪರಿಸ್ಥಿತಿಯೂ ನಿರ್ಮಾಣವಾಯಿತು. ಹಾಗಾಗಿ ಮಾಧುಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡುವ ಮಾತುಗಳು ಹರಿದಾಡಿದವು. ಕೊನೆಗೂ ಸಂಪುಟ ವಿಸ್ತರಣೆ/ಪುನರ್ ರಚನೆಯೆಂಬ ಗಜಪ್ರಸವ ಆಗಿದೆ. ಮಾಧುಸ್ವಾಮಿ ಬಳಿ ಇದ್ದ ಕಾನೂನು ಸಚಿವ ಖಾತೆಯನ್ನು ಹಿಂಪಡೆಯಲಾಗಿದೆ. ಜೊತೆಗೆ ಮಾಧುಸ್ವಾಮಿಯವರನ್ನು ಯಡಿಯೂರಪ್ಪನವರ ಆಪ್ತ ವಲಯದಿಂದ ದೂರ ಇಟ್ಟು ಹಿಂಬಡ್ತಿ ನೀಡಲಾಗಿದೆ ಎನ್ನಲಾಗಿದೆ.

ಆರ್.ಎಸ್.ಎಸ್ ಹಿನ್ನೆಲೆ ಇಲ್ಲದ ಜೆ.ಸಿ. ಮಾಧುಸ್ವಾಮಿ ಯಡಿಯೂರಪ್ಪನವರ ಜಾತಿ ಕಾರಣಕ್ಕಾಗಿ ಜೆಡಿಯು ತೊರೆದು ಕೆಜೆಪಿ ಸೇರಿದರು. ಕೆಜೆಪಿ ಬಿಜೆಪಿ ಜೊತೆ ವಿಲೀನಗೊಂಡ ಮೇಲೆ ಅವರೂ ಬಿಜೆಪಿ ಸೇರಿದರು. ಬಿ.ಎಸ್.ಯಡಿಯೂರಪ್ಪ ಆಪ್ತ ವಲಯದಲ್ಲಿ ಕಾಣಿಸಿಕೊಂಡರು. ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾದ ವೇಳೆ ಹಲವು ಬಿಜೆಪಿ ನಾಯಕರ ವಿರೋಧದ ನಡುವೆಯೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸ್ಥಾನವೂ ದೊರೆಯಿತು. ಸದನದಲ್ಲಿ ಸರ್ಕಾರವನ್ನು ಬಲವಾಗಿ ಸಮರ್ಥಿಸಿ ಕೊಂಡರು. ಮೂಲ ಬಿಜೆಪಿ ಸಚಿವರು ಸರ್ಕಾರದ ಬೆಂಬಲಕ್ಕೆ ಬರಲೇ ಇಲ್ಲ. ನಂತರ ಸಚಿವ ಮಾಧುಸ್ವಾಮಿಯ ಸಾರ್ವಜನಿಕ ನಡವಳಿಕೆಗಳು ಟೀಕೆಗೆ ಗುರಿಯಾದವು. ಇದನ್ನೇ ಮೂಲ ಬಿಜೆಪಿಗರೂ ಕಾಯುತ್ತಿದ್ದರು. ಈಗ ಅವರ ಖಾತೆಯನ್ನು ಕಿತ್ತುಕೊಳ್ಳಲಾಗಿದೆ. ಇದು ಮೂಲ ಬಿಜೆಪಿಗರಿಗೆ ಖುಷಿಯನ್ನೇ ತಂದಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

ತನ್ನ ಬಳಿಯಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಕಿತ್ತುಕೊಂಡು ವೈದ್ಯಕೀಯ, ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ನೀಡಿರುವುದಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ ಬದಲಾವಣೆ ಸುಳಿವು ದೊರೆಯುತ್ತಿದ್ದಂತೆಯೇ ತುಮಕೂರು ಜಿಲ್ಲೆಗೆ ಆಗಮಿಸಿ ಮುಖ್ಯಮಂತ್ರಿಗಳಿಂದ ಅಂತರವನ್ನು ಕಾಯ್ದುಕೊಂಡಿದ್ದಾರೆ. ಜನವರಿ 21ರಂದು ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮವಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ ಸಚಿವ ಜೆ.ಸಿ.ಮಾಧುಸ್ವಾಮಿ ಸಿದ್ದಗಂಗಾ ಮಠಕ್ಕೆ ಬರಲೇ ಇಲ್ಲ. ಈ ಮೂಲಕ ಯಡಿಯೂರಪ್ಪ ಅವರಿಂದ ಅಂತರ ಕಾಯ್ದುಕೊಂಡರು. ಸಿಎಂಗೆ ಎಚ್ಚರಿಕೆ ಸಂದೇಶ ರವಾನಿಸುವ ಕೆಲಸ ಮಾಡಿದರು.

ಅಷ್ಟೇ ಅಲ್ಲ, ತುಮಕೂರಿನ ವಸಂತನರಸಾಪುರದಲ್ಲಿ ನಡೆದ ಉದ್ಯೋಗ ಭವನ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾನು ನಿಮ್ಮೊಂದಿಗೆ ಇಲ್ಲ ಎಂಬ ಸಂದೇಶವನ್ನು ಯಡಿಯೂರಪ್ಪನವರಿಗೆ ರವಾನಿಸಿದರು. ಜಗದೀಶ್ ಶೆಟ್ಟರ್ ಜೊತೆಯಲ್ಲಿ ಕಾಣಿಸಿಕೊಂಡ ಮಾಧುಸ್ವಾಮಿ ಭಿನ್ನಮತಕ್ಕೆ ಮತ್ತಷ್ಟು ಬಲ ತುಂಬುವಂತಹ ಕೆಲಸ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಿದ್ದಗಂಗಾ ಮಠದಲ್ಲಿ ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಇದ್ದು ಅವರನ್ನು ಉಪಚರಿಸುವಂತಹ ಕೆಲಸ ಮಾಡಬೇಕಿತ್ತು. ಅದು ಆಗಲಿಲ್ಲ.

ಇದನ್ನೂ ಓದಿ: ನಾನೂ ಬಿಜೆಪಿಗೆ ಹೋಗಿದ್ದರೆ ಮೈಸೂರಿನ ಉಸ್ತುವಾರಿ ಸಚಿವನಾಗಿರುತ್ತಿದ್ದೆ: ಜಿ.ಟಿ ದೇವೇಗೌಡ

ಜಗದೀಶ್ ಶೆಟ್ಟರ್ ಭಾಗವಹಿಸಿದ್ದ ಸಮಾರಂಭದಲ್ಲಿ ಸಂಸದ ಜಿ.ಎಸ್.ಬಸವರಾಜು, ನಿವೃತ್ತ ಐಎಎಸ್ ಅಧಿಕಾರಿ ಡಾ.ಸೋಮಶೇಖರ್ ಪಾಲ್ಗೊಂಡಿದ್ದರು. ಸೋಮಶೇಖರ್ ಅವರನ್ನು ಮುಖ್ಯಮಂತ್ರಿಗಳು ಸಂಧಾನಕ್ಕೆ ಕಳಿಸಿದ್ದರೇ ಎಂಬುದು ಖಚಿತವಾಗಿಲ್ಲ. ಡಾ.ಸೋಮಶೇಖರ್ ಮುಖ್ಯಮಂತ್ರಿಗಳ ಆಪ್ತವಲಯದಲ್ಲಿ ಇರುವವರು. ಹಾಗಾಗಿ ಜೆ.ಸಿ.ಮಾಧುಸ್ವಾಮಿ ಜೊತೆ ಮಾತುಕತೆ ನಡೆಸಿದರೆ ಅಥವಾ ಮುಖ್ಯಮಂತ್ರಿ ನೀಡಿರುವ ಮಾಹಿತಿಯನ್ನು ಮಾಧುಸ್ವಾಮಿ ಅವರಿಗೆ ತಲುಪಿಸಿದರೇ ಎಂಬುದು ತಿಳಿದುಬಂದಿಲ್ಲ. ಆದರೆ ರಾಯಭಾರಿ ಕೆಲಸ ಮಾಡಿರುವುದಂತೂ ಗುಟ್ಟಾಗಿ ಉಳಿದಿಲ್ಲ.

ಮೂಲ ಬಿಜೆಪಿಗರಲ್ಲಿ ಸಂತಸದ ವಾತಾವರಣ ಸೃಷ್ಟಿಯಾಗಿದ್ದರೆ, ವಲಸೆ ಬಿಜೆಪಿಗರು/ಬೇರೆ ಪಕ್ಷಗಳಿಂದ ಕೇಸರಿ ಪಾಳಯ ಸೇರಿದವರು ಸಂಕಟದ ದಿನಗಳನ್ನು ಎದುರಿಸಬೇಕಾಗಿ ಬಂದಿದೆ. ಯಾವುದೇ ವಿವಾದಕ್ಕೆ ಈಡಾಗದೇ ಮುಖ್ಯಮಂತ್ರಿಗಳ ಜೊತೆ ಗುರುತಿಸಿಕೊಂಡಿರುವ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಅವರಿಗೆ ಪ್ರಬಲ ಖಾತೆ ನೀಡಿ ಆಪ್ತ ವಲಯಕ್ಕೆ ಫೆವಿಕಲ್ ಹಾಕಿದ್ದಾರೆ. ಮಾಧುಸ್ವಾಮಿ ಅವರನ್ನು ಆಪ್ತ ವಲಯದಿಂದ ದೂರ ತಳ್ಳುವ ಕೆಲಸ ಮಾಡಿದ್ದಾರೆ ಎಂಬ ಮಾತುಗಳು ತುಮಕೂರು ಜಿಲ್ಲೆಯಲ್ಲಿ ಕೇಳಿಬರುತ್ತಿವೆ.


ಇದನ್ನೂ ಓದಿ: ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...