Homeಕರ್ನಾಟಕಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

ಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

- Advertisement -
- Advertisement -

ಸಚಿವ ಜೆ.ಸಿ.ಮಾಧುಸ್ವಾಮಿ ಬಳಿಯಿದ್ದ ಬಲಿಷ್ಠ ಖಾತೆಗೆ ಕತ್ತರಿ ಬಿದ್ದಿದೆ. ರೈತರು ಮತ್ತು ಅಧಿಕಾರಿಗಳ ವಿರುದ್ಧ ಬೈಯ್ದು ವಿವಾದ ಮೇಲೆಳೆದುಕೊಂಡಿದ್ದ ಅವರ ಖಾತೆ ಬದಲಾವಣೆಯಾಗಿದೆ. “ರ್ಯಾಸ್ಕಲ್, ನಿನ್ನ ಹೆಂಡ್ತಿ ಸೀರೆ ಒಗೆಯೋಕೆ ಯಾವ್ ಸೋಪ್ ಬಳಸ್ತೀಯ, ಯಾವ ಬೋಸುಡಿಕೆ ಮಗ ನನ್ನ ಕೇಳಿದ್ದೀರಾ” ಎಂಬ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿ, ಸರ್ಕಾರಕ್ಕೆ ಮುಜುಗರ ತಂದೊಡ್ಡಿದ್ದ ಮಾಧುಸ್ವಾಮಿಯವರ ಈ ನಡವಳಿಕೆಗೆ, ಅಧಿಕಾರಿ ವರ್ಗ ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಸ್ಪಂದಿಸಿದಂತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಂಸದೀಯ ವ್ಯವಹಾರ ಸಚಿವರು ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಬೇಕೆಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕೋಲಾರ ಮತ್ತು ತುಮಕೂರು ನಗರದಲ್ಲಿ ಮಾಧುಸ್ವಾಮಿ ಅವರು ರೈತ ಮಹಿಳೆ, ರೈತ ಮುಖಂಡರು ಹಾಗೂ ಅಧಿಕಾರಿಯೊಬ್ಬರನ್ನು ಬೈಯ್ಯುವ ಮೂಲಕ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು. ಮಾಧ್ಯಮಗಳಲ್ಲಿ ಅವರ ಹೇಳಿಕೆಗಳು ಪ್ರಸಾರಗೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ತೀವ್ರ ಮುಜುಗರ ಎದುರಿಸಬೇಕಾಗಿ ಬಂತು. ಆ ಮುಜುಗರದಿಂದ ಯಾರೂ ಸಮರ್ಥಿಸಿಕೊಳ್ಳಲಾರದಂತಹ ಪರಿಸ್ಥಿತಿಯೂ ನಿರ್ಮಾಣವಾಯಿತು. ಹಾಗಾಗಿ ಮಾಧುಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡುವ ಮಾತುಗಳು ಹರಿದಾಡಿದವು. ಕೊನೆಗೂ ಸಂಪುಟ ವಿಸ್ತರಣೆ/ಪುನರ್ ರಚನೆಯೆಂಬ ಗಜಪ್ರಸವ ಆಗಿದೆ. ಮಾಧುಸ್ವಾಮಿ ಬಳಿ ಇದ್ದ ಕಾನೂನು ಸಚಿವ ಖಾತೆಯನ್ನು ಹಿಂಪಡೆಯಲಾಗಿದೆ. ಜೊತೆಗೆ ಮಾಧುಸ್ವಾಮಿಯವರನ್ನು ಯಡಿಯೂರಪ್ಪನವರ ಆಪ್ತ ವಲಯದಿಂದ ದೂರ ಇಟ್ಟು ಹಿಂಬಡ್ತಿ ನೀಡಲಾಗಿದೆ ಎನ್ನಲಾಗಿದೆ.

ಆರ್.ಎಸ್.ಎಸ್ ಹಿನ್ನೆಲೆ ಇಲ್ಲದ ಜೆ.ಸಿ. ಮಾಧುಸ್ವಾಮಿ ಯಡಿಯೂರಪ್ಪನವರ ಜಾತಿ ಕಾರಣಕ್ಕಾಗಿ ಜೆಡಿಯು ತೊರೆದು ಕೆಜೆಪಿ ಸೇರಿದರು. ಕೆಜೆಪಿ ಬಿಜೆಪಿ ಜೊತೆ ವಿಲೀನಗೊಂಡ ಮೇಲೆ ಅವರೂ ಬಿಜೆಪಿ ಸೇರಿದರು. ಬಿ.ಎಸ್.ಯಡಿಯೂರಪ್ಪ ಆಪ್ತ ವಲಯದಲ್ಲಿ ಕಾಣಿಸಿಕೊಂಡರು. ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾದ ವೇಳೆ ಹಲವು ಬಿಜೆಪಿ ನಾಯಕರ ವಿರೋಧದ ನಡುವೆಯೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸ್ಥಾನವೂ ದೊರೆಯಿತು. ಸದನದಲ್ಲಿ ಸರ್ಕಾರವನ್ನು ಬಲವಾಗಿ ಸಮರ್ಥಿಸಿ ಕೊಂಡರು. ಮೂಲ ಬಿಜೆಪಿ ಸಚಿವರು ಸರ್ಕಾರದ ಬೆಂಬಲಕ್ಕೆ ಬರಲೇ ಇಲ್ಲ. ನಂತರ ಸಚಿವ ಮಾಧುಸ್ವಾಮಿಯ ಸಾರ್ವಜನಿಕ ನಡವಳಿಕೆಗಳು ಟೀಕೆಗೆ ಗುರಿಯಾದವು. ಇದನ್ನೇ ಮೂಲ ಬಿಜೆಪಿಗರೂ ಕಾಯುತ್ತಿದ್ದರು. ಈಗ ಅವರ ಖಾತೆಯನ್ನು ಕಿತ್ತುಕೊಳ್ಳಲಾಗಿದೆ. ಇದು ಮೂಲ ಬಿಜೆಪಿಗರಿಗೆ ಖುಷಿಯನ್ನೇ ತಂದಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

ತನ್ನ ಬಳಿಯಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಕಿತ್ತುಕೊಂಡು ವೈದ್ಯಕೀಯ, ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ನೀಡಿರುವುದಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ ಬದಲಾವಣೆ ಸುಳಿವು ದೊರೆಯುತ್ತಿದ್ದಂತೆಯೇ ತುಮಕೂರು ಜಿಲ್ಲೆಗೆ ಆಗಮಿಸಿ ಮುಖ್ಯಮಂತ್ರಿಗಳಿಂದ ಅಂತರವನ್ನು ಕಾಯ್ದುಕೊಂಡಿದ್ದಾರೆ. ಜನವರಿ 21ರಂದು ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮವಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ ಸಚಿವ ಜೆ.ಸಿ.ಮಾಧುಸ್ವಾಮಿ ಸಿದ್ದಗಂಗಾ ಮಠಕ್ಕೆ ಬರಲೇ ಇಲ್ಲ. ಈ ಮೂಲಕ ಯಡಿಯೂರಪ್ಪ ಅವರಿಂದ ಅಂತರ ಕಾಯ್ದುಕೊಂಡರು. ಸಿಎಂಗೆ ಎಚ್ಚರಿಕೆ ಸಂದೇಶ ರವಾನಿಸುವ ಕೆಲಸ ಮಾಡಿದರು.

ಅಷ್ಟೇ ಅಲ್ಲ, ತುಮಕೂರಿನ ವಸಂತನರಸಾಪುರದಲ್ಲಿ ನಡೆದ ಉದ್ಯೋಗ ಭವನ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾನು ನಿಮ್ಮೊಂದಿಗೆ ಇಲ್ಲ ಎಂಬ ಸಂದೇಶವನ್ನು ಯಡಿಯೂರಪ್ಪನವರಿಗೆ ರವಾನಿಸಿದರು. ಜಗದೀಶ್ ಶೆಟ್ಟರ್ ಜೊತೆಯಲ್ಲಿ ಕಾಣಿಸಿಕೊಂಡ ಮಾಧುಸ್ವಾಮಿ ಭಿನ್ನಮತಕ್ಕೆ ಮತ್ತಷ್ಟು ಬಲ ತುಂಬುವಂತಹ ಕೆಲಸ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಿದ್ದಗಂಗಾ ಮಠದಲ್ಲಿ ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಇದ್ದು ಅವರನ್ನು ಉಪಚರಿಸುವಂತಹ ಕೆಲಸ ಮಾಡಬೇಕಿತ್ತು. ಅದು ಆಗಲಿಲ್ಲ.

ಇದನ್ನೂ ಓದಿ: ನಾನೂ ಬಿಜೆಪಿಗೆ ಹೋಗಿದ್ದರೆ ಮೈಸೂರಿನ ಉಸ್ತುವಾರಿ ಸಚಿವನಾಗಿರುತ್ತಿದ್ದೆ: ಜಿ.ಟಿ ದೇವೇಗೌಡ

ಜಗದೀಶ್ ಶೆಟ್ಟರ್ ಭಾಗವಹಿಸಿದ್ದ ಸಮಾರಂಭದಲ್ಲಿ ಸಂಸದ ಜಿ.ಎಸ್.ಬಸವರಾಜು, ನಿವೃತ್ತ ಐಎಎಸ್ ಅಧಿಕಾರಿ ಡಾ.ಸೋಮಶೇಖರ್ ಪಾಲ್ಗೊಂಡಿದ್ದರು. ಸೋಮಶೇಖರ್ ಅವರನ್ನು ಮುಖ್ಯಮಂತ್ರಿಗಳು ಸಂಧಾನಕ್ಕೆ ಕಳಿಸಿದ್ದರೇ ಎಂಬುದು ಖಚಿತವಾಗಿಲ್ಲ. ಡಾ.ಸೋಮಶೇಖರ್ ಮುಖ್ಯಮಂತ್ರಿಗಳ ಆಪ್ತವಲಯದಲ್ಲಿ ಇರುವವರು. ಹಾಗಾಗಿ ಜೆ.ಸಿ.ಮಾಧುಸ್ವಾಮಿ ಜೊತೆ ಮಾತುಕತೆ ನಡೆಸಿದರೆ ಅಥವಾ ಮುಖ್ಯಮಂತ್ರಿ ನೀಡಿರುವ ಮಾಹಿತಿಯನ್ನು ಮಾಧುಸ್ವಾಮಿ ಅವರಿಗೆ ತಲುಪಿಸಿದರೇ ಎಂಬುದು ತಿಳಿದುಬಂದಿಲ್ಲ. ಆದರೆ ರಾಯಭಾರಿ ಕೆಲಸ ಮಾಡಿರುವುದಂತೂ ಗುಟ್ಟಾಗಿ ಉಳಿದಿಲ್ಲ.

ಮೂಲ ಬಿಜೆಪಿಗರಲ್ಲಿ ಸಂತಸದ ವಾತಾವರಣ ಸೃಷ್ಟಿಯಾಗಿದ್ದರೆ, ವಲಸೆ ಬಿಜೆಪಿಗರು/ಬೇರೆ ಪಕ್ಷಗಳಿಂದ ಕೇಸರಿ ಪಾಳಯ ಸೇರಿದವರು ಸಂಕಟದ ದಿನಗಳನ್ನು ಎದುರಿಸಬೇಕಾಗಿ ಬಂದಿದೆ. ಯಾವುದೇ ವಿವಾದಕ್ಕೆ ಈಡಾಗದೇ ಮುಖ್ಯಮಂತ್ರಿಗಳ ಜೊತೆ ಗುರುತಿಸಿಕೊಂಡಿರುವ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಅವರಿಗೆ ಪ್ರಬಲ ಖಾತೆ ನೀಡಿ ಆಪ್ತ ವಲಯಕ್ಕೆ ಫೆವಿಕಲ್ ಹಾಕಿದ್ದಾರೆ. ಮಾಧುಸ್ವಾಮಿ ಅವರನ್ನು ಆಪ್ತ ವಲಯದಿಂದ ದೂರ ತಳ್ಳುವ ಕೆಲಸ ಮಾಡಿದ್ದಾರೆ ಎಂಬ ಮಾತುಗಳು ತುಮಕೂರು ಜಿಲ್ಲೆಯಲ್ಲಿ ಕೇಳಿಬರುತ್ತಿವೆ.


ಇದನ್ನೂ ಓದಿ: ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...