Homeಕರ್ನಾಟಕಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

ಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

- Advertisement -
- Advertisement -

ಸಚಿವ ಜೆ.ಸಿ.ಮಾಧುಸ್ವಾಮಿ ಬಳಿಯಿದ್ದ ಬಲಿಷ್ಠ ಖಾತೆಗೆ ಕತ್ತರಿ ಬಿದ್ದಿದೆ. ರೈತರು ಮತ್ತು ಅಧಿಕಾರಿಗಳ ವಿರುದ್ಧ ಬೈಯ್ದು ವಿವಾದ ಮೇಲೆಳೆದುಕೊಂಡಿದ್ದ ಅವರ ಖಾತೆ ಬದಲಾವಣೆಯಾಗಿದೆ. “ರ್ಯಾಸ್ಕಲ್, ನಿನ್ನ ಹೆಂಡ್ತಿ ಸೀರೆ ಒಗೆಯೋಕೆ ಯಾವ್ ಸೋಪ್ ಬಳಸ್ತೀಯ, ಯಾವ ಬೋಸುಡಿಕೆ ಮಗ ನನ್ನ ಕೇಳಿದ್ದೀರಾ” ಎಂಬ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿ, ಸರ್ಕಾರಕ್ಕೆ ಮುಜುಗರ ತಂದೊಡ್ಡಿದ್ದ ಮಾಧುಸ್ವಾಮಿಯವರ ಈ ನಡವಳಿಕೆಗೆ, ಅಧಿಕಾರಿ ವರ್ಗ ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಸ್ಪಂದಿಸಿದಂತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಂಸದೀಯ ವ್ಯವಹಾರ ಸಚಿವರು ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಬೇಕೆಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕೋಲಾರ ಮತ್ತು ತುಮಕೂರು ನಗರದಲ್ಲಿ ಮಾಧುಸ್ವಾಮಿ ಅವರು ರೈತ ಮಹಿಳೆ, ರೈತ ಮುಖಂಡರು ಹಾಗೂ ಅಧಿಕಾರಿಯೊಬ್ಬರನ್ನು ಬೈಯ್ಯುವ ಮೂಲಕ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು. ಮಾಧ್ಯಮಗಳಲ್ಲಿ ಅವರ ಹೇಳಿಕೆಗಳು ಪ್ರಸಾರಗೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ತೀವ್ರ ಮುಜುಗರ ಎದುರಿಸಬೇಕಾಗಿ ಬಂತು. ಆ ಮುಜುಗರದಿಂದ ಯಾರೂ ಸಮರ್ಥಿಸಿಕೊಳ್ಳಲಾರದಂತಹ ಪರಿಸ್ಥಿತಿಯೂ ನಿರ್ಮಾಣವಾಯಿತು. ಹಾಗಾಗಿ ಮಾಧುಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡುವ ಮಾತುಗಳು ಹರಿದಾಡಿದವು. ಕೊನೆಗೂ ಸಂಪುಟ ವಿಸ್ತರಣೆ/ಪುನರ್ ರಚನೆಯೆಂಬ ಗಜಪ್ರಸವ ಆಗಿದೆ. ಮಾಧುಸ್ವಾಮಿ ಬಳಿ ಇದ್ದ ಕಾನೂನು ಸಚಿವ ಖಾತೆಯನ್ನು ಹಿಂಪಡೆಯಲಾಗಿದೆ. ಜೊತೆಗೆ ಮಾಧುಸ್ವಾಮಿಯವರನ್ನು ಯಡಿಯೂರಪ್ಪನವರ ಆಪ್ತ ವಲಯದಿಂದ ದೂರ ಇಟ್ಟು ಹಿಂಬಡ್ತಿ ನೀಡಲಾಗಿದೆ ಎನ್ನಲಾಗಿದೆ.

ಆರ್.ಎಸ್.ಎಸ್ ಹಿನ್ನೆಲೆ ಇಲ್ಲದ ಜೆ.ಸಿ. ಮಾಧುಸ್ವಾಮಿ ಯಡಿಯೂರಪ್ಪನವರ ಜಾತಿ ಕಾರಣಕ್ಕಾಗಿ ಜೆಡಿಯು ತೊರೆದು ಕೆಜೆಪಿ ಸೇರಿದರು. ಕೆಜೆಪಿ ಬಿಜೆಪಿ ಜೊತೆ ವಿಲೀನಗೊಂಡ ಮೇಲೆ ಅವರೂ ಬಿಜೆಪಿ ಸೇರಿದರು. ಬಿ.ಎಸ್.ಯಡಿಯೂರಪ್ಪ ಆಪ್ತ ವಲಯದಲ್ಲಿ ಕಾಣಿಸಿಕೊಂಡರು. ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾದ ವೇಳೆ ಹಲವು ಬಿಜೆಪಿ ನಾಯಕರ ವಿರೋಧದ ನಡುವೆಯೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸ್ಥಾನವೂ ದೊರೆಯಿತು. ಸದನದಲ್ಲಿ ಸರ್ಕಾರವನ್ನು ಬಲವಾಗಿ ಸಮರ್ಥಿಸಿ ಕೊಂಡರು. ಮೂಲ ಬಿಜೆಪಿ ಸಚಿವರು ಸರ್ಕಾರದ ಬೆಂಬಲಕ್ಕೆ ಬರಲೇ ಇಲ್ಲ. ನಂತರ ಸಚಿವ ಮಾಧುಸ್ವಾಮಿಯ ಸಾರ್ವಜನಿಕ ನಡವಳಿಕೆಗಳು ಟೀಕೆಗೆ ಗುರಿಯಾದವು. ಇದನ್ನೇ ಮೂಲ ಬಿಜೆಪಿಗರೂ ಕಾಯುತ್ತಿದ್ದರು. ಈಗ ಅವರ ಖಾತೆಯನ್ನು ಕಿತ್ತುಕೊಳ್ಳಲಾಗಿದೆ. ಇದು ಮೂಲ ಬಿಜೆಪಿಗರಿಗೆ ಖುಷಿಯನ್ನೇ ತಂದಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

ತನ್ನ ಬಳಿಯಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಕಿತ್ತುಕೊಂಡು ವೈದ್ಯಕೀಯ, ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ನೀಡಿರುವುದಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ ಬದಲಾವಣೆ ಸುಳಿವು ದೊರೆಯುತ್ತಿದ್ದಂತೆಯೇ ತುಮಕೂರು ಜಿಲ್ಲೆಗೆ ಆಗಮಿಸಿ ಮುಖ್ಯಮಂತ್ರಿಗಳಿಂದ ಅಂತರವನ್ನು ಕಾಯ್ದುಕೊಂಡಿದ್ದಾರೆ. ಜನವರಿ 21ರಂದು ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮವಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ ಸಚಿವ ಜೆ.ಸಿ.ಮಾಧುಸ್ವಾಮಿ ಸಿದ್ದಗಂಗಾ ಮಠಕ್ಕೆ ಬರಲೇ ಇಲ್ಲ. ಈ ಮೂಲಕ ಯಡಿಯೂರಪ್ಪ ಅವರಿಂದ ಅಂತರ ಕಾಯ್ದುಕೊಂಡರು. ಸಿಎಂಗೆ ಎಚ್ಚರಿಕೆ ಸಂದೇಶ ರವಾನಿಸುವ ಕೆಲಸ ಮಾಡಿದರು.

ಅಷ್ಟೇ ಅಲ್ಲ, ತುಮಕೂರಿನ ವಸಂತನರಸಾಪುರದಲ್ಲಿ ನಡೆದ ಉದ್ಯೋಗ ಭವನ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾನು ನಿಮ್ಮೊಂದಿಗೆ ಇಲ್ಲ ಎಂಬ ಸಂದೇಶವನ್ನು ಯಡಿಯೂರಪ್ಪನವರಿಗೆ ರವಾನಿಸಿದರು. ಜಗದೀಶ್ ಶೆಟ್ಟರ್ ಜೊತೆಯಲ್ಲಿ ಕಾಣಿಸಿಕೊಂಡ ಮಾಧುಸ್ವಾಮಿ ಭಿನ್ನಮತಕ್ಕೆ ಮತ್ತಷ್ಟು ಬಲ ತುಂಬುವಂತಹ ಕೆಲಸ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಿದ್ದಗಂಗಾ ಮಠದಲ್ಲಿ ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಇದ್ದು ಅವರನ್ನು ಉಪಚರಿಸುವಂತಹ ಕೆಲಸ ಮಾಡಬೇಕಿತ್ತು. ಅದು ಆಗಲಿಲ್ಲ.

ಇದನ್ನೂ ಓದಿ: ನಾನೂ ಬಿಜೆಪಿಗೆ ಹೋಗಿದ್ದರೆ ಮೈಸೂರಿನ ಉಸ್ತುವಾರಿ ಸಚಿವನಾಗಿರುತ್ತಿದ್ದೆ: ಜಿ.ಟಿ ದೇವೇಗೌಡ

ಜಗದೀಶ್ ಶೆಟ್ಟರ್ ಭಾಗವಹಿಸಿದ್ದ ಸಮಾರಂಭದಲ್ಲಿ ಸಂಸದ ಜಿ.ಎಸ್.ಬಸವರಾಜು, ನಿವೃತ್ತ ಐಎಎಸ್ ಅಧಿಕಾರಿ ಡಾ.ಸೋಮಶೇಖರ್ ಪಾಲ್ಗೊಂಡಿದ್ದರು. ಸೋಮಶೇಖರ್ ಅವರನ್ನು ಮುಖ್ಯಮಂತ್ರಿಗಳು ಸಂಧಾನಕ್ಕೆ ಕಳಿಸಿದ್ದರೇ ಎಂಬುದು ಖಚಿತವಾಗಿಲ್ಲ. ಡಾ.ಸೋಮಶೇಖರ್ ಮುಖ್ಯಮಂತ್ರಿಗಳ ಆಪ್ತವಲಯದಲ್ಲಿ ಇರುವವರು. ಹಾಗಾಗಿ ಜೆ.ಸಿ.ಮಾಧುಸ್ವಾಮಿ ಜೊತೆ ಮಾತುಕತೆ ನಡೆಸಿದರೆ ಅಥವಾ ಮುಖ್ಯಮಂತ್ರಿ ನೀಡಿರುವ ಮಾಹಿತಿಯನ್ನು ಮಾಧುಸ್ವಾಮಿ ಅವರಿಗೆ ತಲುಪಿಸಿದರೇ ಎಂಬುದು ತಿಳಿದುಬಂದಿಲ್ಲ. ಆದರೆ ರಾಯಭಾರಿ ಕೆಲಸ ಮಾಡಿರುವುದಂತೂ ಗುಟ್ಟಾಗಿ ಉಳಿದಿಲ್ಲ.

ಮೂಲ ಬಿಜೆಪಿಗರಲ್ಲಿ ಸಂತಸದ ವಾತಾವರಣ ಸೃಷ್ಟಿಯಾಗಿದ್ದರೆ, ವಲಸೆ ಬಿಜೆಪಿಗರು/ಬೇರೆ ಪಕ್ಷಗಳಿಂದ ಕೇಸರಿ ಪಾಳಯ ಸೇರಿದವರು ಸಂಕಟದ ದಿನಗಳನ್ನು ಎದುರಿಸಬೇಕಾಗಿ ಬಂದಿದೆ. ಯಾವುದೇ ವಿವಾದಕ್ಕೆ ಈಡಾಗದೇ ಮುಖ್ಯಮಂತ್ರಿಗಳ ಜೊತೆ ಗುರುತಿಸಿಕೊಂಡಿರುವ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಅವರಿಗೆ ಪ್ರಬಲ ಖಾತೆ ನೀಡಿ ಆಪ್ತ ವಲಯಕ್ಕೆ ಫೆವಿಕಲ್ ಹಾಕಿದ್ದಾರೆ. ಮಾಧುಸ್ವಾಮಿ ಅವರನ್ನು ಆಪ್ತ ವಲಯದಿಂದ ದೂರ ತಳ್ಳುವ ಕೆಲಸ ಮಾಡಿದ್ದಾರೆ ಎಂಬ ಮಾತುಗಳು ತುಮಕೂರು ಜಿಲ್ಲೆಯಲ್ಲಿ ಕೇಳಿಬರುತ್ತಿವೆ.


ಇದನ್ನೂ ಓದಿ: ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...