Homeಕರ್ನಾಟಕಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

ಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

- Advertisement -
- Advertisement -

ಸಚಿವ ಜೆ.ಸಿ.ಮಾಧುಸ್ವಾಮಿ ಬಳಿಯಿದ್ದ ಬಲಿಷ್ಠ ಖಾತೆಗೆ ಕತ್ತರಿ ಬಿದ್ದಿದೆ. ರೈತರು ಮತ್ತು ಅಧಿಕಾರಿಗಳ ವಿರುದ್ಧ ಬೈಯ್ದು ವಿವಾದ ಮೇಲೆಳೆದುಕೊಂಡಿದ್ದ ಅವರ ಖಾತೆ ಬದಲಾವಣೆಯಾಗಿದೆ. “ರ್ಯಾಸ್ಕಲ್, ನಿನ್ನ ಹೆಂಡ್ತಿ ಸೀರೆ ಒಗೆಯೋಕೆ ಯಾವ್ ಸೋಪ್ ಬಳಸ್ತೀಯ, ಯಾವ ಬೋಸುಡಿಕೆ ಮಗ ನನ್ನ ಕೇಳಿದ್ದೀರಾ” ಎಂಬ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿ, ಸರ್ಕಾರಕ್ಕೆ ಮುಜುಗರ ತಂದೊಡ್ಡಿದ್ದ ಮಾಧುಸ್ವಾಮಿಯವರ ಈ ನಡವಳಿಕೆಗೆ, ಅಧಿಕಾರಿ ವರ್ಗ ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಸ್ಪಂದಿಸಿದಂತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಂಸದೀಯ ವ್ಯವಹಾರ ಸಚಿವರು ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಬೇಕೆಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕೋಲಾರ ಮತ್ತು ತುಮಕೂರು ನಗರದಲ್ಲಿ ಮಾಧುಸ್ವಾಮಿ ಅವರು ರೈತ ಮಹಿಳೆ, ರೈತ ಮುಖಂಡರು ಹಾಗೂ ಅಧಿಕಾರಿಯೊಬ್ಬರನ್ನು ಬೈಯ್ಯುವ ಮೂಲಕ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು. ಮಾಧ್ಯಮಗಳಲ್ಲಿ ಅವರ ಹೇಳಿಕೆಗಳು ಪ್ರಸಾರಗೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ತೀವ್ರ ಮುಜುಗರ ಎದುರಿಸಬೇಕಾಗಿ ಬಂತು. ಆ ಮುಜುಗರದಿಂದ ಯಾರೂ ಸಮರ್ಥಿಸಿಕೊಳ್ಳಲಾರದಂತಹ ಪರಿಸ್ಥಿತಿಯೂ ನಿರ್ಮಾಣವಾಯಿತು. ಹಾಗಾಗಿ ಮಾಧುಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡುವ ಮಾತುಗಳು ಹರಿದಾಡಿದವು. ಕೊನೆಗೂ ಸಂಪುಟ ವಿಸ್ತರಣೆ/ಪುನರ್ ರಚನೆಯೆಂಬ ಗಜಪ್ರಸವ ಆಗಿದೆ. ಮಾಧುಸ್ವಾಮಿ ಬಳಿ ಇದ್ದ ಕಾನೂನು ಸಚಿವ ಖಾತೆಯನ್ನು ಹಿಂಪಡೆಯಲಾಗಿದೆ. ಜೊತೆಗೆ ಮಾಧುಸ್ವಾಮಿಯವರನ್ನು ಯಡಿಯೂರಪ್ಪನವರ ಆಪ್ತ ವಲಯದಿಂದ ದೂರ ಇಟ್ಟು ಹಿಂಬಡ್ತಿ ನೀಡಲಾಗಿದೆ ಎನ್ನಲಾಗಿದೆ.

ಆರ್.ಎಸ್.ಎಸ್ ಹಿನ್ನೆಲೆ ಇಲ್ಲದ ಜೆ.ಸಿ. ಮಾಧುಸ್ವಾಮಿ ಯಡಿಯೂರಪ್ಪನವರ ಜಾತಿ ಕಾರಣಕ್ಕಾಗಿ ಜೆಡಿಯು ತೊರೆದು ಕೆಜೆಪಿ ಸೇರಿದರು. ಕೆಜೆಪಿ ಬಿಜೆಪಿ ಜೊತೆ ವಿಲೀನಗೊಂಡ ಮೇಲೆ ಅವರೂ ಬಿಜೆಪಿ ಸೇರಿದರು. ಬಿ.ಎಸ್.ಯಡಿಯೂರಪ್ಪ ಆಪ್ತ ವಲಯದಲ್ಲಿ ಕಾಣಿಸಿಕೊಂಡರು. ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾದ ವೇಳೆ ಹಲವು ಬಿಜೆಪಿ ನಾಯಕರ ವಿರೋಧದ ನಡುವೆಯೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸ್ಥಾನವೂ ದೊರೆಯಿತು. ಸದನದಲ್ಲಿ ಸರ್ಕಾರವನ್ನು ಬಲವಾಗಿ ಸಮರ್ಥಿಸಿ ಕೊಂಡರು. ಮೂಲ ಬಿಜೆಪಿ ಸಚಿವರು ಸರ್ಕಾರದ ಬೆಂಬಲಕ್ಕೆ ಬರಲೇ ಇಲ್ಲ. ನಂತರ ಸಚಿವ ಮಾಧುಸ್ವಾಮಿಯ ಸಾರ್ವಜನಿಕ ನಡವಳಿಕೆಗಳು ಟೀಕೆಗೆ ಗುರಿಯಾದವು. ಇದನ್ನೇ ಮೂಲ ಬಿಜೆಪಿಗರೂ ಕಾಯುತ್ತಿದ್ದರು. ಈಗ ಅವರ ಖಾತೆಯನ್ನು ಕಿತ್ತುಕೊಳ್ಳಲಾಗಿದೆ. ಇದು ಮೂಲ ಬಿಜೆಪಿಗರಿಗೆ ಖುಷಿಯನ್ನೇ ತಂದಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

ತನ್ನ ಬಳಿಯಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಕಿತ್ತುಕೊಂಡು ವೈದ್ಯಕೀಯ, ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ನೀಡಿರುವುದಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ ಬದಲಾವಣೆ ಸುಳಿವು ದೊರೆಯುತ್ತಿದ್ದಂತೆಯೇ ತುಮಕೂರು ಜಿಲ್ಲೆಗೆ ಆಗಮಿಸಿ ಮುಖ್ಯಮಂತ್ರಿಗಳಿಂದ ಅಂತರವನ್ನು ಕಾಯ್ದುಕೊಂಡಿದ್ದಾರೆ. ಜನವರಿ 21ರಂದು ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮವಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ ಸಚಿವ ಜೆ.ಸಿ.ಮಾಧುಸ್ವಾಮಿ ಸಿದ್ದಗಂಗಾ ಮಠಕ್ಕೆ ಬರಲೇ ಇಲ್ಲ. ಈ ಮೂಲಕ ಯಡಿಯೂರಪ್ಪ ಅವರಿಂದ ಅಂತರ ಕಾಯ್ದುಕೊಂಡರು. ಸಿಎಂಗೆ ಎಚ್ಚರಿಕೆ ಸಂದೇಶ ರವಾನಿಸುವ ಕೆಲಸ ಮಾಡಿದರು.

ಅಷ್ಟೇ ಅಲ್ಲ, ತುಮಕೂರಿನ ವಸಂತನರಸಾಪುರದಲ್ಲಿ ನಡೆದ ಉದ್ಯೋಗ ಭವನ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾನು ನಿಮ್ಮೊಂದಿಗೆ ಇಲ್ಲ ಎಂಬ ಸಂದೇಶವನ್ನು ಯಡಿಯೂರಪ್ಪನವರಿಗೆ ರವಾನಿಸಿದರು. ಜಗದೀಶ್ ಶೆಟ್ಟರ್ ಜೊತೆಯಲ್ಲಿ ಕಾಣಿಸಿಕೊಂಡ ಮಾಧುಸ್ವಾಮಿ ಭಿನ್ನಮತಕ್ಕೆ ಮತ್ತಷ್ಟು ಬಲ ತುಂಬುವಂತಹ ಕೆಲಸ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಿದ್ದಗಂಗಾ ಮಠದಲ್ಲಿ ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಇದ್ದು ಅವರನ್ನು ಉಪಚರಿಸುವಂತಹ ಕೆಲಸ ಮಾಡಬೇಕಿತ್ತು. ಅದು ಆಗಲಿಲ್ಲ.

ಇದನ್ನೂ ಓದಿ: ನಾನೂ ಬಿಜೆಪಿಗೆ ಹೋಗಿದ್ದರೆ ಮೈಸೂರಿನ ಉಸ್ತುವಾರಿ ಸಚಿವನಾಗಿರುತ್ತಿದ್ದೆ: ಜಿ.ಟಿ ದೇವೇಗೌಡ

ಜಗದೀಶ್ ಶೆಟ್ಟರ್ ಭಾಗವಹಿಸಿದ್ದ ಸಮಾರಂಭದಲ್ಲಿ ಸಂಸದ ಜಿ.ಎಸ್.ಬಸವರಾಜು, ನಿವೃತ್ತ ಐಎಎಸ್ ಅಧಿಕಾರಿ ಡಾ.ಸೋಮಶೇಖರ್ ಪಾಲ್ಗೊಂಡಿದ್ದರು. ಸೋಮಶೇಖರ್ ಅವರನ್ನು ಮುಖ್ಯಮಂತ್ರಿಗಳು ಸಂಧಾನಕ್ಕೆ ಕಳಿಸಿದ್ದರೇ ಎಂಬುದು ಖಚಿತವಾಗಿಲ್ಲ. ಡಾ.ಸೋಮಶೇಖರ್ ಮುಖ್ಯಮಂತ್ರಿಗಳ ಆಪ್ತವಲಯದಲ್ಲಿ ಇರುವವರು. ಹಾಗಾಗಿ ಜೆ.ಸಿ.ಮಾಧುಸ್ವಾಮಿ ಜೊತೆ ಮಾತುಕತೆ ನಡೆಸಿದರೆ ಅಥವಾ ಮುಖ್ಯಮಂತ್ರಿ ನೀಡಿರುವ ಮಾಹಿತಿಯನ್ನು ಮಾಧುಸ್ವಾಮಿ ಅವರಿಗೆ ತಲುಪಿಸಿದರೇ ಎಂಬುದು ತಿಳಿದುಬಂದಿಲ್ಲ. ಆದರೆ ರಾಯಭಾರಿ ಕೆಲಸ ಮಾಡಿರುವುದಂತೂ ಗುಟ್ಟಾಗಿ ಉಳಿದಿಲ್ಲ.

ಮೂಲ ಬಿಜೆಪಿಗರಲ್ಲಿ ಸಂತಸದ ವಾತಾವರಣ ಸೃಷ್ಟಿಯಾಗಿದ್ದರೆ, ವಲಸೆ ಬಿಜೆಪಿಗರು/ಬೇರೆ ಪಕ್ಷಗಳಿಂದ ಕೇಸರಿ ಪಾಳಯ ಸೇರಿದವರು ಸಂಕಟದ ದಿನಗಳನ್ನು ಎದುರಿಸಬೇಕಾಗಿ ಬಂದಿದೆ. ಯಾವುದೇ ವಿವಾದಕ್ಕೆ ಈಡಾಗದೇ ಮುಖ್ಯಮಂತ್ರಿಗಳ ಜೊತೆ ಗುರುತಿಸಿಕೊಂಡಿರುವ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಅವರಿಗೆ ಪ್ರಬಲ ಖಾತೆ ನೀಡಿ ಆಪ್ತ ವಲಯಕ್ಕೆ ಫೆವಿಕಲ್ ಹಾಕಿದ್ದಾರೆ. ಮಾಧುಸ್ವಾಮಿ ಅವರನ್ನು ಆಪ್ತ ವಲಯದಿಂದ ದೂರ ತಳ್ಳುವ ಕೆಲಸ ಮಾಡಿದ್ದಾರೆ ಎಂಬ ಮಾತುಗಳು ತುಮಕೂರು ಜಿಲ್ಲೆಯಲ್ಲಿ ಕೇಳಿಬರುತ್ತಿವೆ.


ಇದನ್ನೂ ಓದಿ: ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...